ಗ್ಯಾಸ್ ಗೀಜರ್ ನಿಂದ ಅನಿಲ ಸೋರಿಕೆ; ನವ ವಿವಾಹಿತೆ ದಾರುಣ ಸಾವು

ಬೆಂಗಳೂರು: ಗ್ಯಾಸ್ ಗೀಜರ್ ನಿಂದ ಅನಿಲ ಸೋರಿಕೆಯಾಗಿ ಸ್ನಾನಕ್ಕೆ ತೆರಳಿದ್ದ ನವ ವಿವಾಹಿತೆ ಉಸಿರುಗಟ್ಟಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದೆ. ಹಾಸನ ಮೂಲದ 24 ವರ್ಷದ ಭೂಮಿಕಾ ಎಂಬವರು ಗ್ಯಾಸ್ ಗೀಜರ್‌ನಿಂದ ಕಾರ್ಬನ್ ಮಾನಾಕ್ಸೈಡ್ ಅನಿಲ ಸೋರಿಕೆಯಿಂದ ಉಂಟಾದ ವಿಷಕಾರಿ ವಾತಾವರಣ ದಿಂದ ಉಸಿರುಗಟ್ಟಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ ಎನ್ನಲಾಗಿದೆ. ಮನೆಯಲ್ಲಿ ಬೇರಾರೂ ಇಲ್ಲದ ವೇಳೆ ಘಟನೆ ಸಂಭವಿಸಿದೆ. ಪತಿ ಕೃಷ್ಣಮೂರ್ತಿ ಪೀಣ್ಯಾದ ಪ್ರತಿಷ್ಠಿತ ಕಂಪನಿಯಲ್ಲಿ ಸೆಕೆಂಡ್ ಶಿಫ್ಟ್ ಕೆಲಸ ಮುಗಿಸಿ ಮನೆಗೆ ವಾಪಾಸಾದ ವೇಳೆ ಬಾಗಿಲು ತೆರೆದಿಲ್ಲ. ಸ್ನಾನದ ಕೋಣೆಯ ಕಿಟಕಿಯಿಂದ ಇಣುಕಿ ನೋಡಿದಾಗ ಕೆಳಗೆ ಬಿದ್ದಿರುವುದು ಕಂಡುಬಂದಿದೆ. ಬಾಗಿಲು ಮುರಿದು ನೋಡಿದಾಗ ಆಕೆ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ‌ ನೆಲಮಂಗಲ ಸುತ್ತಮುತ್ತ ಕಳೆದೆರಡು ವರ್ಷಗಳಲ್ಲಿ 10 ರಿಂದ 12 ಮಂದಿ ಇದೇ ರೀತಿ ಜೀವತೆತ್ತಿದ್ದಾರೆ ಎನ್ನಲಾಗುತ್ತಿದೆ. ಘಟನೆ ಸುದ್ದಿ ತಿಳಿದು…

ಖಾಲಿ ಹುದ್ದೆಗಳ ಭರ್ತಿಗಾಗಿ ಹೋರಾಡುತ್ತಿದ್ದವರ ಬಂಧನ; ಯತ್ನಾಳ್ ಆಕ್ರೋಶ

ಬೆಂಗಳೂರು: ಖಾಲಿ ಇರುವ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಧಾರವಾಡದಲ್ಲಿ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಪರೀಕ್ಷಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವುದು ಖಂಡನೀಯ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸರ್ಕಾರದ ನಡೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, ‘ಕುರ್ಚಿ ಕುಸ್ತಿ’ ಯಲ್ಲಿ ಸ್ತಬ್ದವಾಗಿರುವ ಆಡಳಿತದಿಂದ ನೇಮಕಾತಿಗಳು ಆಗದೆ ಪರೀಕ್ಷಾರ್ಥಿಗಳ ಶ್ರಮ ಫಲ ನೀಡದೆ ಇದ್ದರೆ ಇನ್ನೊಂದು ಕಡೆ ವಯೋಮಿತಿ ಮೀರುವ ಆತಂಕದಲ್ಲಿದ್ದಾರೆ. ಸರ್ಕಾರದಿಂದ ಪರೀಕ್ಷಾರ್ಥಿಗಳಿಗೆ ಯಾವುದೇ ಸ್ಪಷ್ಟ ಭರವಸೆ ಇಲ್ಲದೆ ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ಜರ್ಜರಿತರಾಗಿದ್ದಾರೆ ಎಂದಿದ್ದಾರೆ. ಖಾಲಿ ಇರುವ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಧಾರವಾಡದಲ್ಲಿ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಪರೀಕ್ಷಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವುದು ಖಂಡನೀಯ. 'ಕುರ್ಚಿ ಕುಸ್ತಿ' ಯಲ್ಲಿ ಸ್ತಬ್ದವಾಗಿರುವ ಆಡಳಿತದಿಂದ ನೇಮಕಾತಿಗಳು ಆಗದೆ ಪರೀಕ್ಷಾರ್ಥಿಗಳ ಶ್ರಮ ಫಲ ನೀಡದೆ ಇದ್ದರೆ ಇನ್ನೊಂದು ಕಡೆ ವಯೋಮಿತಿ ಮೀರುವ… pic.twitter.com/4cGjlRPC1n — Basanagouda R Patil (Yatnal) (@BasanagoudaBJP)…

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು; 2024ರಲ್ಲಿ 31,934, ಈ ವರ್ಷ 6,561

ಬೆಂಗಳೂರು: ಡೆಂಗ್ಯೂ ಪ್ರಕರಣಗಳು 2024ನೇ ಸಾಲಿನಲ್ಲಿ 31,934 ಕಂಡು ಬಂದಿದ್ದರೆ 2025ರ ಪ್ರಸಕ್ತ ಸಾಲಿನಲ್ಲಿ ಈ ಪ್ರಮಾಣ 6,561 ಕ್ಕೆ ಇಳಿದಿದ್ದು, ಶೇಕಡವಾರು 81% ಕಡಿಮೆಯಾಗಿದೆ. ಅಲ್ಲದೆ, ಸಾವು ಸಂಭವಿಸಿಲ್ಲ. ಇದು ನಿಜಕ್ಕೂ ಪರಿಣಾಮಕಾರಿ ಫಲಿತಾಂಶವಾಗಿದೆ ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇದೇ ಮಾದರಿಯಲ್ಲಿ, ಕಂಡುಬರುತ್ತಿದ್ದ ಚಿಕನ್ ಗುನ್ಯಾ ಜ್ವರದ ಪ್ರಮಾಣವೂ ಶೇ.59ಕ್ಕೆ ಇಳಿಕೆಯಾಗಿದೆ. ರಾಜ್ಯದಲ್ಲಿ 2024ರ ಸಾಲಿನಲ್ಲಿ 2,348 ಪ್ರಕರಣಗಳು ಕಂಡುಬಂದಿದ್ದರೆ 2025ರ ನವೆಂಬರ್ ಕೊನೆವಾರದ ತನಕ 974 ಸಕ್ರಿಯ ಪ್ರಕರಣಗಳು ದಾಖಲಾಗಿವೆ ಎಂದವರು ಮಾಹಿತಿ ಹಂಚಿಕೊಂಡಿದ್ದಾರೆ. 2024ರಲ್ಲಾದ ಡೆಂಗ್ಯೂ ಪ್ರಕರಣಗಳ ಹೆಚ್ಚಳವನ್ನು ಗಂಭಿರವಾಗಿ ಪರಿಗಣಿಸಿ ಸಾಂಕ್ರಾಮಿಕ ರೋಗಗಳ ಪಟ್ಟಿಗೆ ಡೆಂಗ್ಯೂವನ್ನು ಸೇರಿಸಲಾಯಿತು. ನಿಯಂತ್ರಣಕ್ಕಾಗಿ ನಿರಂತರವಾಗಿ ಅರಿವು ಕಾರ್ಯಕ್ರಮ, ಸ್ವಚ್ಚತೆ, ಉಚಿತ ಔಷಧ ಚಿಕಿತ್ಸೆಗಳ ಜತೆಗೆ ಅದರ ನಿಯಮಾವಳಿ ಪ್ರಕಾರ ಲಾರ್ವಾ ನಿಯಂತ್ರಣ ಕ್ರಮಗಳನ್ನು ಅನುಸರಿಸದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ₹2000 ತನಕ ದಂಡ…

ಮುಜರಾಯಿ ಅಧಿಕಾರಿಗಳ ಕಣ್ಣಿಗೆ ಕಾಣದ ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯ?

ದಾವಣಗೆರೆ: ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮದ ಹೊರವಲಯದಲ್ಲಿ ಮಲ್ಪೆ ಟು ಮೊಳಕಾಲ್ಮೂರು ರಾಜ್ಯ ಹೆದ್ದಾರಿಯವ ಜಗಳೂರು ಮಾರ್ಗದ ಹಾಗೂ ಕೆರೆಯ ಪಕ್ಕದ ತಿರುವಿನಲ್ಲಿರುವ ವಿಘ್ನೇಶ್ವರನ ಮುಚ್ಚು ದೇಗುಲವಿದ್ದು ಇದು ಬಹಳ ಅಪರೂಪದ ದೇವಗುಲವಾಗಿದೆ ಇದು ದ್ವಾರ ರಹಿತ ದೇಗುಲ. ಸಾಮಾನ್ಯವಾಗಿ ಎಲ್ಲಾ ದೇವಾಲಯಗಳಿಗೆ ಬಾಗಿಲು ಇರುವುದು ಸಾಮಾನ್ಯ ಆದರೆ ಈ ದೇವಾಲಯಕ್ಕೆ ಬಾಗಿಲು ಇಲ್ಲದಿರುವುದೇ ವಿಶೇಷ. ದೇಗುಲದ ಗರ್ಭಗುಡಿಯಲ್ಲಿ ಎರಡು ಈಶ್ವರನ ಪಾಣಿ ಪೀಠಗಳಿದ್ದು ಒಂದು ಪಾಣಿ ಪೀಠದಲ್ಲಿ ಈಶ್ವರನ ಲಿಂಗ ಮತ್ತೊಂದು ಪಾಣಿ ಪೀಠದಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೊಂಡಿದೆ. ಈ ದೇವಾಲಯವು ಚಿತ್ರದುರ್ಗ ಪಾಳೆಗಾರರ ಕಾಲದ ದಳವಾಯಿ ಮುದ್ದಣ್ಣನ ಕಾಲದಲ್ಲಿ ನಿರ್ಮಾಣಗೊಂಡಿದೆ ಎನ್ನಲಾಗುತ್ತಿದೆ. ಕೊಣಚಗಲ್ ಗುಡ್ಡದ ಕೆಳಗೆ ಮುಚ್ಚು ದೇಗುಲವಿದ್ದು ಇವರ ಕಾಲದಲ್ಲಿಯೇ ತಾಲೂಕಿನಲ್ಲಿ ಎರಡು ಮೂರು ಮುಚ್ಚು ದೇವಾಲಯಗಳು ನಿರ್ಮಾಣವಾಗಿವೆ. ಈ ಅನನ್ಯ ದೇಗುಲವು ಅಳಿವಿನಂಚಿನಲ್ಲಿದೆ. ಸಂಪೂರ್ಣ ನಾಶವಾಗುವ ಮುನ್ನ, ಪಾಳೇಗಾರರ ಕಾಲದ ಈ…

ಜಗಳೂರು: ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ; ಮುಕ್ತಿ ಬಾವುಟ 1.12 ಲಕ್ಷ ರೂಪಾಯಿಗೆ ಹಾರಜು

ಜಗಳೂರು : ಕಾರ್ತಿಕ ಮಾಸದ ಅಂಗವಾಗಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿದೆ. ಜಗಳೂರು ತಾಲೂಕಿನ‌ ಗಡಿ ಗ್ರಾಮ ಖಾನಾಮಡುಗಿನ ದಾಸೋಹ ಮಠದ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ಪ್ರತಿವರ್ಷದಂತೆ ಕಾರ್ತಿಕ ಮಾಸದಲ್ಲಿ ನಡೆಯುವ ರಥೋತ್ಸವವು ಭಾನುವಾರ ಜರುಗಿತು. ಸ್ವಾಮಿಯ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪನೆ ಮಾಡಿ ಪೂಜಾ ವಿಧಿ ವಿಧಾನಗಳನ್ನು ಪೂರೈಸಿದ ನಂತರ ಸಾವಿರಾರು ಭಕ್ತರು ತೇರಿನ ಗಾಲಿಗೆ ಕಾಯಿ ಹೊಡೆದು ಪೂಜೆ ಮಾಡಿ ಭಕ್ತಿ ಸಮರ್ಪಿಸಿದರು. ನಂತರ ರಥವನ್ನು ಎಳೆದು ಕೈಂಕರ್ಯ ನೆರವೇರಿಸಲಾಯಿತು. ಹಿರಿಯೂರು ತಾಲೂಕಿನ ಮೇಟಿ ಕುರ್ಕಿ ತಿಪ್ಪೇಸ್ವಾಮಿ ಎಂಬುವವರು ಸ್ವಾಮಿಯ ಮುಕ್ತಿ ಬಾವುಟವನ್ನು ಒಂದು ಲಕ್ಷದ ಹತ್ತು ಸಾವಿರದ ಹನ್ನೇರೆಡು ರೂಪಾಯಿಗಳಿಗೆ ಹಾರಜಿನಲ್ಲಿ ಪಡೆದುಕೊಂಡರು. ದಾಸೋಹ ಮಠದ ಐರ್ಮಡಿ ಶಿವರ್ಯರ ಮಾರ್ಗದರ್ಶನದಲ್ಲಿ ಜಾತ್ರಾ ವೈಭವದ ವಿಧಿವಿಧಾನಗಳು ನೆರವೇರಿದವು.

ದೊಣೆಹಳ್ಳಿ ಶರಣಬಸವೇಶ್ವರ ದಾಸೋಹಮಠದಲ್ಲಿ ವೈಭವದ ವಚನ ಕಾರ್ತಿಕ ದೀಪೋತ್ಸವ

ದಾವಣಗೆರೆ:  ಜಗಳೂರು ತಾಲ್ಲೂಕಿನ ದೊಣೆಹಳ್ಳಿಯ ಶರಣಬಸವೇಶ್ವರ ದಾಸೋಹ ಮಠದಲ್ಲಿ ವೈಭವದ ವಚನ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ಜರುಗಿತು. ದೊಣೆಹಳ್ಳಿಯ ಶರಣಬಸವೇಶ್ವರ ದಾಸೋಹ ಮಠದಲ್ಲಿ ವೈಭವದ ವಚನ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ಜರುಗಿತು. ಬೆಂಗಳೂರಿನ ಸರ್ಪಭೂಷಣ ಶಿವಯೋಗಿ ಮಠದ ಪಟ್ಟಾಧ್ಯಕ್ಷರಾದ ಶ್ರೀ ಗುರು ಮಲ್ಲಿಕಾರ್ಜುನ ದೇವರು, ಚಿತ್ರದುರ್ಗ ಮುರುಘಾಮಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ಇದೇ ವೇಳೆ ಚಿತ್ರದುರ್ಗ ಬೃಹನ್ಮಠದ ಕಲಾವೃಂದದ ಮುಖ್ಯಸ್ಥ ಉಮೇಶ್ ಪತ್ತಾರ್ ಅವರ ತಂಡದಿಂದ ವಚನಸಂಗೀತ ಕಾರ್ಯಕ್ರಮ ನಡೆದವು.ಭಕ್ತಸಮೂಹಕ್ಕೆ ದಾಸೋಹ ನಡೆಸಲಾಯಿತು.ಅಪಾರಸಂಖ್ಯೆಯಲ್ಲಿ ಭಕ್ತಸಮೂಹ ದೀಪಗಳೊಂದಿಗೆ ಕಾರ್ತಿಕ ದೀಪೋತ್ಸವದೊಂದಿಗೆ ಶರಣಬಸವೇಶ್ವರ ದಾಸೋಹ ಮಠದ ಭಕ್ತಿಪರ್ವ ಮೆರೆದರು. ಧಾರ್ಮಿಕ ಸಮಾರಂಭದಲ್ಲಿ ಮಾತನಾಡಿದ ಬಿ.ದೇವೇಂದ್ರಪ್ಪ, ತ್ರಿವಿಧ ದಾಸೋಹದೊಂದಿಗೆ ಜಗತ್ತಿನಲ್ಲಿ ಅಮೂಲಾಗ್ರ ಬದಲಾವಣೆಗೆ ಪೂರಕವಾಗಿ ಸೇವೆಗೈಯುತ್ತಿರುವ ದೊಣೆಹಳ್ಳಿ ಶರಣಬಸವೇಶ್ವರ ದಾಸೋಹ ಮಠ ಉತ್ತುಂಗಕ್ಕೆ ಬೆಳೆಯಲಿ.ಕತ್ತಲೆಯಿಂದ ಬೆಳಕಿನಡೆಗೆ,ಅಜ್ಞಾನದಿಂದ ಜ್ಞಾನದೆಡೆಗೆ ಪ್ರತಿಯೊಬ್ಬರೂ ಸಾಗಬೇಕಿದೆ.ಧರ್ಮದ ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತಿದೆ.ಇಂದಿನ ವಚನಕಾರ್ತಿಕ…

ಹಿರಿಯ ಹಾಸ್ಯ ನಟ ಎಂ.ಎಸ್.ಉಮೇಶ್ ವಿಧಿವಶ

ಬೆಂಗಳೂರು: ಹಿರಿಯ ಚಲನಚಿತ್ರ ನಟ ಎಂ.ಎಸ್.ಉಮೇಶ್ ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲ ಸಮಯದಿಂದ ಅನಾರೋಗ್ಯದಿಂದಾಗಿ ಬಳಲುತ್ತಿದ್ದರು. ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಿಗ್ಗೆ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೈಸೂರಿನಲ್ಲಿ 1945ರ ಏಪ್ರಿಲ್ 22ರಂದು ಜನಿಸಿದ್ದ ಉಮೇಶ್ ರಂಗಭೂಮಿ ಮತ್ತು ಚಲನಚಿತ್ರ ನಟರಾಗಿದ್ದರು. ಬಹುತೇಕ ಸಿನಿಮಾಗಳಲ್ಲಿ ಹಾಸ್ಯ ಪಾತ್ರಗಳಲ್ಲಿ ಮಿಂಚಿದ್ದರು. 350ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಉಮೇಶ್ ವಿಧಿವಶರಾಗಿದ್ದು, ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

ಬೆಳಗಾವಿ ಅಧಿವೇಶನ: ಈ ಬಾರಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ದೀರ್ಘ ಚರ್ಚೆಯಾಗಲಿ

ಬೆಂಗಳೂರು: ಈ ಬಾರಿಯ ಅಧಿವೇಶನವನ್ನು 8 ದಿನಗಳ ಬದಲು 20 ದಿನಗಳ ಕಾಲ ನಡೆಸಬೇಕು ಹಾಗೂ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಅಧಿವೇಶನ ಸಂಬಂಧ ನಡೆದ ಬಿಜೆಪಿ-ಜೆಡಿಎಸ್‌ ಸಮನ್ವಯ ಸಮಿತಿ ಸಭೆ ಬಳಿಕ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಅಶೋಕ್, ಬಿಜೆಪಿ ಮತ್ತು ಜೆಡಿಎಸ್‌ ಒಂದಾಗಿ ಕೆಲಸ ಮಾಡುತ್ತಿದ್ದೇವೆ. ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ, ಕಾಲ್ತುಳಿತ ಪ್ರಕರಣ ಸೇರಿದಂತೆ ಹಲವಾರು ಹೋರಾಟಗಳಲ್ಲಿ ಒಂದಾಗಿ ಕೆಲಸ ಮಾಡಿದ್ದೇವೆ. ವಿಧಾನಸಭೆ ಹಾಗೂ ವಿಧಾನಪರಿಷತ್‌ನಲ್ಲಿ ಎರಡೂ ಪಕ್ಷಗಳು ಕಿವಿ ಹಿಂಡುವ ಕೆಲಸ ಮಾಡಿವೆ. ಈಗ ಬೆಳಗಾವಿ ಅಧಿವೇಶನದಲ್ಲಿ ಯಾವೆಲ್ಲ ವಿಷಯಗಳನ್ನು ಪ್ರಸ್ತಾಪಿಸಬೇಕೆಂದು ಚರ್ಚಿಸಲಾಗಿದೆ. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಲಹೆಗಳನ್ನು ಪಡೆಯಲಾಗಿದೆ ಎಂದರು. ಈ ಬಾರಿಯ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಬಗ್ಗೆ…

ಡಿಕೆಶಿ-ಸಿದ್ದರಾಮಯ್ಯ ಜಟಾಪಟಿ ವಿಚಾರ: ಕಾಂಗ್ರೆಸ್ ಹೈಕಮಾಂಡ್ ದುರ್ಬಲ ಎಂದ ಅಶೋಕ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಜಗಳ ಬಿಟ್ಟು ಬೇರೇನೂ ಆಗಿರಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಾಂಗ್ರೆಸ್ ಪಕ್ಷದ ಬೆಳವಣಿಗೆ ಬಗ್ಗೆ ಅಶೋಕ್ ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯಿಸಿದರು. ‘ಸಿಎಂ ಯಾರೆಂದು ಗೊತ್ತಾಗದೆ ಇಬ್ಬರೂ ನಾಯಕರ ನಡುವೆ ಕಾದಾಟ ಜೋರಾಗಿದೆ. ಸಿದ್ದರಾಮಯ್ಯ ಎಂದರೆ ಮಾತು ತಪ್ಪಿದವರು ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಇದರಿಂದಾಗಿ ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ. ಸರ್ಕಾರದಲ್ಲಿ ಎಲ್ಲರೂ ಕೆಲಸ ಮಾಡುವುದನ್ನು ಬಿಟ್ಟು ಸಿಎಂ ಯಾರೆಂದು ಚರ್ಚಿಸುತ್ತಿದ್ದಾರೆ’ ಎಂದು ವಿಶ್ಲೇಷಿಸಿದರು. ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಜಗಳ ಬಿಟ್ಟು ಬೇರೇನೂ ಆಗುವುದಿಲ್ಲ. ಅಧಿಕಾರ ಹಂಚಿಕೆ ಒಪ್ಪಂದದ ಕುರಿತು ಡಿ.ಕೆ.ಶಿವಕುಮಾರ್‌ ನೇರವಾಗಿ ಹೇಳಿದ್ದು, ಈ ಬಗ್ಗೆ ದುರ್ಬಲ ಹೈಕಮಾಂಡ್‌ ಪ್ರತಿಕ್ರಿಯೆ ನೀಡುತ್ತಿಲ್ಲ. ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ವಿದೇಶಕ್ಕೆ ಪಲಾಯನ ಮಾಡಿದ್ದಾರೆ ಎಂದರು.

ಬ್ರೇಕ್ ಫಾಸ್ಟ್ ಹೆಸರಲ್ಲಿ ಒಗ್ಗಟ್ಟು ಪ್ರದರ್ಶನ; ಒಟ್ಟಾಗಿ ಆಡಳಿತ ನಡೆಸುತ್ತೇವೆ ಎಂದ ಸಿದ್ದು-ಡಿಕೆಶಿ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿನ ನಾಯಕತ್ವ ಬಿಕ್ಕಟ್ಟು ಶಮನ ಕಾಣುವ ಲಕ್ಷಣಗಳು ಗೋಚರಿಸುತ್ತಿಲ್ಲ. ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಶನಿವಾರ ಬೆಳಿಗ್ಗೆ ಒಟ್ಟಾಗಿ ಉಪಹಾರ ಸೇವಿಸಿ ಗಮನಸೆಳೆದರು. ಉಪಹಾರ ಮೂಲಕ ಪಕ್ಷದಲ್ಲಿ ಒಗ್ಗಟ್ಟಿದೆ ಎಂದು ತೋರಿಸಲು ಹೈಕಮಾಡ್ ನಾಯಕರು ಹೇಳಿಕೊಟ್ಟ ಸೂತ್ರವನ್ನು ಸಿಎಂ ಡಿಸಿಎಂ ಪಾಲಿಸಿದ್ದಾರೆ. ಆದರೆ ಈ ಬೆಳವಣಿಗೆ ನಾಟಕೀಯ ರೀತಿಯಲ್ಲೇ ಇತ್ತೆ ವಿನಃ ಒಗ್ಗಟ್ಟು ಪ್ರದರ್ಶನದಂತೆ ಇರಲಿಲ್ಲ ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ. ಉಪಹಾರ ಬಳಿಕ ನಿರೀಕ್ಷೆಯಂತೆಯೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಒಂದಷ್ಟು ಮಾಹಿತಿ ಹಂಚಿಕೊಂಡರು. ನಮ್ಮೊಳಗೆ ಭಿನ್ನಾಭಿಪ್ರಾಯವೇ ಇಲ್ಲ, ಒಗ್ಗಾಟಾಗಿವೆ ಇದ್ದೇವೆ. ಸದ್ಯದ ಗೊಂದಲಗಳಿಗೆ ಪ್ರತಿಪಕ್ಷ ಹಾಗೂ ಮಾಧ್ಯಮಗಳು ಕಾರಣ ಎಂದರು. #WATCH | Karnataka Chief Minister Siddaramaiah and Deputy CM DK Shivakumar hold a joint…