ಬೆಂಗಳೂರು: ಸಿಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಕಚ್ಚಾಟದಿಂದಾಗಿ ಆಡಳಿತ ಯಂತ್ರ ನಿಷ್ಕ್ರಿಯವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಲೇವಡಿ ಮಾಡಿದ್ದಾರೆ. ಶಾಸಕರ ಕಚೇರಿ ಮುಂಭಾಗ ಆಯೋಜಿಸಿದ್ದ ” ವಂದೇ ಮಾತರಂ ಸಂಭ್ರಮಾಚರಣೆ” ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೂಡಲೇ ಕಾಂಗ್ರೆಸ್ ಹೈಕಮಾಂಡ್ ಯಾರು ಮುಖ್ಯಮಂತ್ರಿ ಎಂದು ಸ್ಪಷ್ಟವಾಗಿ ತಿಳಿಸಲಿ ಎಂದು ಆಗ್ರಹಿಸಿದರು. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಡುವೆ ಕಾದಾಟ ನಡೆಯುತ್ತಿರುವುದರಿಂದ ಸರ್ಕಾರ ಸತ್ತುಹೋಗಿದೆ. ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಪದವಿಯಲ್ಲಿ ಕೂರಿಸಬೇಕು ಎಂದು ಅವರ ಪರ ಶಾಸಕರು ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟ ಅಂತಿಮ ಹಂತಕ್ಕೆ ಬಂದಿದೆ. ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ತೀರ್ಮಾನ ನೀಡಿಲ್ಲವೆಂದರೆ ಸರ್ಕಾರ ನಡೆಯುವುದಿಲ್ಲ. ಅಧಿಕಾರಿಗಳು ಕೆಲಸ ಮಾಡುವುದಿಲ್ಲ. ಆಡಳಿತಯಂತ್ರ ಕೋಮಾದಲ್ಲಿದೆ ಎಂದರು. ಸಾರ್ವಜನಿಕರು, ರೈತ ಸಮುದಾಯ, ವಿದ್ಯಾರ್ಥಿಗಳು ಎದುರಿಸುತ್ತಿರುವ ಹತ್ತಾರು ಸಮಸ್ಯೆಗಳನ್ನು ಬಗೆಹರಿಸಬೇಕೆಂಬ ಕಾಳಜಿ ಕಾಂಗ್ರೆಸ್ ಹೈಕಮಾಂಡ್ಗೆ ಇಲ್ಲ…
Category: ರಾಜ್ಯ
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಮುಂದುವರಿಕೆ
ಬೆಂಗಳೂರು: ಜನತಾ ದಳ (ಎಸ್) ಪಕ್ಷದ ರಾಷ್ಟ್ರೀಯ ನೇತೃತ್ವದಲ್ಲಿ ಬದಲಾವಣೆ ಇಲ್ಲ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ರಾಷ್ಟ್ರೀಯ ಅಧ್ಯಕ್ಷರಾಗಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಘಟಕದ ಅಧ್ಯಕ್ಷರಾಗಿ ಒಮ್ಮತದಿಂದ ಮರು ಆಯ್ಕೆಗೊಂಡಿದ್ದಾರೆ. ಜೆಪಿ ಭವನದಲ್ಲಿ ಶುಕ್ರವಾರ ನಡೆದ ಜೆಡಿಎಸ್ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ಹಾಗೂ ಕರ್ನಾಟಕದಲ್ಲೂ ಸಂಘಟನೆ ವಿಸ್ತರಣೆ ಅಗತ್ಯವಾಗಿರುವ ಈ ಸಂದರ್ಭದಲ್ಲಿ, ದೇವೇಗೌಡ–ಕುಮಾರಸ್ವಾಮಿ ನೇತೃತ್ವ ಮುಂದುವರಿಯಬೇಕೆಂಬ ಅಭಿಪ್ರಾಯ ಪ್ರತಿನಿಧಿಗಳ ನಡುವೆ ನಿರ್ಮಾಣವಾಯಿತು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ. ಸಭೆಯಲ್ಲಿ ವಿವಿಧ ರಾಜ್ಯಗಳ ಜೆಡಿಎಸ್ ಪ್ರತಿನಿಧಿಗಳು, ರಾಜ್ಯದ ಶಾಸಕರು, ಎಂಎಲ್ಸಿಗಳು, ಜಿಲ್ಲಾಧ್ಯಕ್ಷರು ಸೇರಿದಂತೆ ಅನೇಕ ಪ್ರಮುಖರು ಭಾಗವಹಿಸಿದ್ದರು.
ಪಾಕ್ ಪರ ಬೇಹುಗಾರಿಕೆ ಆರೋಪ: ಉಡುಪಿಯಲ್ಲಿ ಇಬ್ಬರು ಬಂಧನ
ಉಡುಪಿ: ಭಾರತೀಯ ನೌಕಾಪಡೆಯ ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ಚೋರಿಸಿ ರವಾನಿಸಿದ್ದ ಆರೋಪದಲ್ಲಿ ಕೊಚ್ಚಿನ್ ಶಿಪ್ಯಾರ್ಡ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇಬ್ಬರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಕೊಚ್ಚಿನ್ ಶಿಪ್ಯಾರ್ಡ್ ಸಿಇಒ ಮಲ್ಪೆ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ಬಿಎನ್ಎಸ್ 152 ಹಾಗೂ ಅಧಿಕೃತ ರಹಸ್ಯ ಕಾಯ್ದೆ (ಒಎಸ್ಎ) 3 ಮತ್ತು 5ನೇ ಕಲಮಗಳಡಿ ಕೇಸ್ ದಾಖಲಾಗಿದೆ. ಬಂಧಿತರನ್ನು ಉತ್ತರ ಪ್ರದೇಶದ ಸುಲ್ತಾನ್ಪುರ ಮೂಲದ 20 ವರ್ಷದ ರೋಹಿತ್ ಮತ್ತು 37 ವರ್ಷದ ಸಾಂತ್ರಿ ಎಂದು ಗುರುತಿಸಲಾಗಿದೆ. ಸ್ಥಳೀಯ ನ್ಯಾಯಾಲಯ ಆರೋಪಿಗಳಿಗೆ ಡಿಸೆಂಬರ್ 3ರವರೆಗೆ ನ್ಯಾಯಾಂಗ ಬಂಧನವನ್ನೂ ವಿಧಿಸಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಎಸ್ಪಿ ಹರಿರಾಮ್ ಶಂಕರ್ “ರಾಷ್ಟ್ರೀಯ ಭದ್ರತೆಯ ಹಿತಾಸಕ್ತಿಗೆ ಸಂಬಂಧಿಸಿದ ಗಂಭೀರ ಪ್ರಕರಣವಾದ್ದರಿಂದ ತನಿಖೆಯನ್ನು ಮತ್ತಷ್ಟು ವಿಸ್ತರಿಸಲಾಗಿದೆ. ನವೆಂಬರ್ 22ರಂದು ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆಯಲಾಗುವುದು” ಎಂದರು. ಮಲ್ಪೆಯಲ್ಲಿದ್ದ ವಸತಿಗೃಹದ ಕೋಣೆಯಲ್ಲಿ ಸುಳಿವಿನ ಆಧಾರದ ಮೇಲೆ…
ರಾಜಕಾರಣಕ್ಕೆ ಸಚಿವ ಚೆಲುವರಾಯಸ್ವಾಮಿ ಪುತ್ರನ ಗ್ರಾಂಡ್ ಎಂಟ್ರಿ.. ಮಂಡ್ಯ ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆ
ಮಂಡ್ಯ: ಮಂಡ್ಯ ಡಿ.ಸಿ.ಸಿ ಬ್ಯಾಂಕ್ ಚುನಾವಣೆಯಲ್ಲಿ ಸಚಿನ್ ಚಲುವರಾಯಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಸಚಿನ್ ಸಿ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚಲುವರಾಜ್ ಅವರು ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಒಂದೊಂದೇ ನಾಮಪತ್ರ ಸಲ್ಲಿಕೆಯಾಗಿರುವುದರಿಂದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನ 5 ವರ್ಷದ ಅವಧಿ ಅಧ್ಯಕ್ಷರಾಗಿ ಸಚಿನ್ ಮತ್ತು ಉಪಾಧ್ಯಕ್ಷರಾಗಿ ಚೆಲುವರಾಜ್ ಆಯ್ಕೆಯಾಗಿದ್ದಾರೆ ಎಂದು ಉಪವಿಭಾಗಾಧಿಕಾರಿ ಶಿವಮೂರ್ತಿ ಪ್ರಕಟಿಸಿದ್ದಾರೆ.. ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಾತನಾಡಿದ ಸಚಿನ್ ಚಲುವರಾಯಸ್ವಾಮಿ, ತಮ್ಮ ಗೆಲುವಿಗೆ ಕಾರಣರಾದ ಪಕ್ಷದ ಎಲ್ಲಾ ಕಾರ್ಯಕರ್ತರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಹಾಗೂ ಜಿಲ್ಲೆಯ ಎಲ್ಲಾ ಶಾಸಕರಿಗೂ ಧನ್ಯವಾದ ಮುಖ್ಯ 12 ಜನ ನಿರ್ದೇಶಕರಿಗೂ ಧನ್ಯವಾದ ತಿಳಿಸಿದರು. ಶಂಕರೇಗೌಡರು ಹಾಗೂ ಚೌಡೇಗೌಡರು ಸ್ಥಾಪಿಸಿದ ಸಂಸ್ಥೆ ಡಿ.ಸಿ.ಸಿ ಬ್ಯಾಂಕ್ ಅಲ್ಲಿಂದಲೂ ಉತ್ತಮ ಕೆಲಸ ಮಾಡಿಕೊಂಡು ಬರುತ್ತಿದೆ. ಕಳೆದ ಎರಡೂವರೆ ವರ್ಷಗಳಿಂದ ಜೋಗಿಗೌಡರು…
‘ಕಾಂಗ್ರೆಸ್ನಲ್ಲಿ ನಾಯಕತ್ವ ಗೊಂದಲ ಇಲ್ಲ’; ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬಿಕ್ಕಟ್ಟು ಕುರಿತಾಗಿ ಕೇಳಿಬರುತ್ತಿರುವ ಊಹಾಪೋಹಗಳಿಗೆ ಗೃಹ ಸಚಿವ ಜಿ. ಪರಮೇಶ್ವರ್ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ‘ಕರ್ನಾಟಕ ಕಾಂಗ್ರೆಸ್ನಲ್ಲಿ ಯಾವುದೇ ಗೊಂದಲವೇ ಇಲ್ಲ. ಎಲ್ಲವೂ ಸುಗಮವಾಗಿದೆ’ ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಪಕ್ಷದೊಳಗೆ ಗೊಂದಲ ಇದ್ದಿದ್ದರೆ ಹೈಕಮಾಂಡ್ ಸೂಕ್ತ ಸಮಯದಲ್ಲಿ ಮಧ್ಯಪ್ರವೇಶಿಸುವುದು. ಅಗತ್ಯವಿಲ್ಲದ ಕಾರಣ ಇದುವರೆಗೆ ಹೈಕಮಾಂಡ್ ಮಧ್ಯಪ್ರವೇಶಿಸಿಲ್ಲ” ಎಂದರು. ಹಲವಾರು ಸಚಿವರು ಮತ್ತು ಶಾಸಕರು ದೆಹಲಿಗೆ ಭೇಟಿ ನೀಡಿ ನಡೆಸಿದ “ಭೋಜನ ಸಭೆ” ರಾಜಕೀಯ ಚರ್ಚೆಗೆ ಕಾರಣವಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಯಾರೇ ದೆಹಲಿಗೆ ಹೋದರೂ ತಮ್ಮ ವೈಯಕ್ತಿಕ ಅಥವಾ ಆಡಳಿತಾತ್ಮಕ ಕೆಲಸಗಳಿಗಾಗಿ ಹೋಗಿದ್ದಾರೆ. ರಾಜಕೀಯ ಕಾರಣವೇನೂ ಇಲ್ಲ ಎಂಬುದನ್ನು ಅವರು ಈಗಾಗಲೇ ವಿವರಿಸಿದ್ದಾರೆ” ಎಂದರು. ದೆಹಲಿಯಲ್ಲಿ ಶಾಸಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿರುವ ವರದಿಗಳಿಗೆ ಸ್ಪಷ್ಟನೆ ನೀಡಿದ ಪರಮೇಶ್ವರ್, “ದೆಹಲಿಗೆ ಹೋದಾಗ ಪಕ್ಷದ…
ಡಿಕೆಶಿಗೆ ಪಟ್ಟ ಕಟ್ಟಲು ಬೇಬಲಿಗರ ಕಸರತ್ತು; CLP ಸಭೆ ಕರೆಯಲು ಬೆಂಬಲಿಗರ ಆಗ್ರಹ
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಇದೀಗ ಹೈವೋಲ್ಟೇಜ್ ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ. ಒಂದೆಡೆ ಸಿಎಂ ಸಿದ್ದರಾಮಯ್ಯ ಆಪ್ತ ಶಾಸಕರು ಸಚಿವರು ಕಸರತ್ತಿನಲ್ಲಿ ತೊಡಗಿದರೆ, ಇನ್ನೊಂದೆಡೆ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಬಲಿಗರು ರಹಸ್ಯ ಸಭೆ ನಡೆಸಿ ಆಯಕತ್ವ ಬದಲಾವಣೆಗೆ ರಂಗ ಸಜ್ಜುಗೊಳಿಸುತ್ತಿದ್ದಾರೆ. ಸರ್ಕಾರ ರಚನೆಯಾದ ಆರಂಭದಲ್ಲಿ ಚರ್ಚೆಗೆ ಬಂದಂತೆಯೇ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಬೆಂಬಲಿಗ ಶಾಸಕರು ಪಕ್ಷದ ಹೈಕಮಾಂಡ್ ಮೇಲೆ ಒತ್ತಡ ಹೇರಲಾರಂಭಿಸಿದ್ದಾರೆ. ಬೆಂಗಳೂರಿನಲ್ಲಿ ಡಿಕೆಶಿ ಬೆಂಬಲಿಗರು ರಹಸ್ಯ ಸಭೆ ನಡೆಸಿದ ಸಂದರ್ಭದಲ್ಲಿ, ಇನ್ನೊಂದೆಡೆ ಕುತೂಹಲಕಾರಿ ಹೇಳಿಕೆ ನೀಡಿರುವ ಉಪಮುಖ್ಯಮಂತ್ರಿ ಮತ್ತು ಪಕ್ಷದ ರಾಜ್ಯ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಕಟ್ಟಾ ಬೆಂಬಲಿಗ ಶಾಸಕ ಎಚ್.ಸಿ. ಬಾಲಕೃಷ್ಣ, ಹೈಕಮಾಂಡ್ಗೆ ತಕ್ಷಣ ಮಧ್ಯಪ್ರವೇಶಿಸಿ ನಾಯಕತ್ವ ಬದಲಾವಣೆಯ ಒಟ್ಟಾರೆ ಬೆಳವಣಿಗೆ ಬಗ್ಗೆ ಶಾಸಕರಿಗೆ ಸ್ಪಷ್ಟನೆ ನೀಡಬೇಕೆಂದು ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಬಾಲಕೃಷ್ಣ, ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದರು. ‘ಕಾಂಗ್ರೆಸ್…
ಪೊಲೀಸ್’ಗೂ ದರೋಡೆಗೂ ನಂಟು? ಪೇದೆ ಸೇರಿ ಇಬ್ಬರ ವಶ
ಬೆಂಗಳೂರು: ರಾಜಧಾನಿಯಲ್ಲಿ ನಡೆದ 7.11 ಕೋಟಿ ರೂಪಾಯಿ ಹಗಲು ದರೋಡೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಗೋವಿಂದರಾಜನಗರ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ತನಿಖೆಗೆ ರಚಿಸಲಾದ ವಿಶೇಷ ತಂಡಗಳು ದರೋಡೆ ಕೃತ್ಯಕ್ಕೆ ಸಂಬಂಧಿಸಿದ ಸುಳಿವುಗಳನ್ನು ಪತ್ತೆಹಚ್ಚಿ ಶಂಕಿತರನ್ನು ವಶಕ್ಕೆ ಪಡೆದಿವೆ. ನವೆಂಬರ್ 20ರ ರಾತ್ರಿ ಕರ್ತವ್ಯ ಮುಗಿಸಿ ಮನೆಗೆ ಮರಳುತ್ತಿದ್ದ ಕಾನ್ಸ್ಟೆಬಲ್ನ್ನು ಬೆಳ್ಳಂಬೆಳಗ್ಗೆ ವಶಕ್ಕೆ ಪಡೆಯಲಾಗಿದೆ. ಮತ್ತೊಬ್ಬ ಆರೋಪಿಯು ಕೇರಳ ಮೂಲದವನು ಎನ್ನಲಾಗಿದೆ. ಆತ ಇತ್ತೀಚೆಗೆ CMS ಇನ್ಫೋ ಸಿಸ್ಟಮ್ಸ್ ಲಿಮಿಟೆಡ್ ಸಂಸ್ಥೆಗೆ ರಾಜೀನಾಮೆ ನೀಡಿರುವ ಮಾಜಿ ಉದ್ಯೋಗಿ ಎಂಬುದು ತಿಳಿದು ಬಂದಿದೆ. ದರೋಡೆಗೆ ಗುರಿಯಾದ ವಾಹನ ಇದೇ ಕಂಪನಿಗೆ ಸೇರಿದ್ದೇ ಎಂಬ ಬಗ್ಗೆ ತನಿಖೆ ಬಿರುಸುಗೊಂಡಿದೆ. ಮೂಲಗಳ ಪ್ರಕಾರ, ಬಂಧಿತ ಇಬ್ಬರೂ ಕಳೆದ ಆರು ತಿಂಗಳುಗಳಿಂದ ಪರಸ್ಪರ ಸಂಪರ್ಕದಲ್ಲಿದ್ದು, ದರೋಡೆ ಯೋಜನೆಯನ್ನು ಸೂಕ್ಷ್ಮವಾಗಿ ರೂಪಿಸಿದ್ದರು. ಘಟನೆಯ ಸುಮಾರು…
ಬೆದರಿಕೆ ಬ್ಲ್ಯಾಕ್ಮೇಲ್ ಆರೋಪ: ಐವರ ವಿರುದ್ಧ ಯಶ್ ಅವರ ತಾಯಿ ದೂರು
ಬೆಂಗಳೂರು: ನಟ ಯಶ್ ಅವರ ತಾಯಿ ಮತ್ತು ಚಲನಚಿತ್ರ ನಿರ್ಮಾಪಕಿ ಪುಷ್ಪಾ ನೀಡಿದ ದೂರಿನ ಆಧಾರದ ಮೇಲೆ, ಮಹಿಳೆ ಸೇರಿ ಐವರು ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಪಿಆರ್ಒ ಹರೀಶ್ ಅರಸ್, ಮನು, ನಿತಿನ್, ಮಹೇಶ್ ಗುರು ಮತ್ತು ಸ್ವರ್ಣಲತಾ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಪುಷ್ಪಾ ನಿರ್ಮಿಸಿರುವ ‘ಕೊತ್ತಲವಾಡಿ’ ಚಿತ್ರದ ಪ್ರಚಾರಕ್ಕಾಗಿ ಆರೋಪಿಗಳು ಒಟ್ಟು 64 ಲಕ್ಷ ರೂ. ಪಡೆದಿದ್ದರೂ, ನಿರೀಕ್ಷಿತ ರೀತಿಯಲ್ಲಿ ಕೆಲಸ ಮಾಡದೆ, ಬದಲಿಗೆ ಬೆದರಿಕೆ ಮತ್ತು ಬ್ಲ್ಯಾಕ್ಮೇಲ್ಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಪುಷ್ಪಾ, “ಚಿತ್ರದ ಪ್ರಚಾರಕ್ಕಾಗಿ ಆರಂಭದಲ್ಲಿ 23 ಲಕ್ಷ ರೂ.ಗೆ ಒಪ್ಪಿಕೊಂಡಿದ್ದ ಹರೀಶ್ ಅರಸ್, ನಂತರ ಚಿತ್ರ ಚಿತ್ರೀಕರಣದ ಸಂದರ್ಭದಲ್ಲಿ ಹಲವು ಹಂತಗಳಲ್ಲಿ ಹಣ ಪಡೆದಿದ್ದರು. ಚಿತ್ರ ಬಿಡುಗಡೆ ಹಂತಕ್ಕೆ ಬಂದಾಗ, ಲೆಕ್ಕಪತ್ರಗಳನ್ನು ಕೇಳಿದ ನಿರ್ದೇಶಕರಿಗೆ ‘ಪ್ರಚಾರ ನಿಲ್ಲಿಸುತ್ತೇವೆ’ ಎಂದು ಬೆದರಿಕೆ…
ಹಗಲು ದರೋಡೆ ಪ್ರಕರಣ ಬೇಧಿಸಲು ಪ್ರಯತ್ನ; ಹೆಜ್ಜೆಗುರುತು ಬೆನ್ನತ್ತಿದ ಬೆಂಗಳೂರು ಪೊಲೀಸ್
ಬೆಂಗಳೂರು: ರಾಜಧಾನಿಯಲ್ಲಿ ಬುಧವಾರ ಮಧ್ಯಾಹ್ನ ನಡೆದ ಅತಿ ದೊಡ್ಡ ದರೋಡೆ ರಾಜ್ಯ ಪೊಲೀಸ್ ವ್ಯವಸ್ಥೆಗೆ ಸವಾಲಾಗಿದೆ. ಆದಾಯ ತೆರಿಗೆ ಅಧಿಕಾರಿಗಳಂತೆ ನಟಿಸಿದ ದುಷ್ಕರ್ಮಿಗಳ ಗುಂಪೊಂದು ಜಯನಗರದಲ್ಲಿ 7 ಕೋಟಿ ರೂಪಾಯಿ ದೋಚಿ ಪರಾರಿಯಾದ ಘಟನೆ ಬುಧವಾರ ನಡೆದಿದೆ. ಜೆ.ಪಿ.ನಗರದ ಬ್ಯಾಂಕ್ ಶಾಖೆಯಿಂದ ಎಟಿಎಂಗಳಿಗೆ ನಗದು ಸಾಗಿಸುತ್ತಿದ್ದ ವ್ಯಾನನ್ನು ಜಯನಗರ ಅಶೋಕ ಪಿಲ್ಲರ್ ಬಳಿ ತಡೆದು ದಾಖಲೆ ಪರಿಶೀಲನೆ ನೆಪದಲ್ಲಿ ಜಾಲಾಡಿದ್ದಾರೆ ಎನ್ನಲಾಗಿದೆ. ಭಾರತ ಸರ್ಕಾರದ ಸ್ಟಿಕ್ಕರ್ ಅಂಟಿಸಿದ್ದ ಕಾರಿನಲ್ಲಿ ಬಂದಿದ್ದ ಆರೋಪಿಗಳು ಸಿಬ್ಬಂದಿಯನ್ನು ಬೆದರಿಸಿ, ನಗದು ತುಂಬಿದ ಚೀಲಗಳೊಂದಿಗೆ ತಮ್ಮ ವಾಹನದಲ್ಲಿ ಕೂರಿಸಿಕೊಂಡು ಹೋಗಿದ್ದಾರೆ. ನಂತರ ಡೈರಿ ಸರ್ಕಲ್ ಬಳಿ ಸಿಬ್ಬಂದಿಯನ್ನು ಇಳಿಸಿ, ಸುಮಾರು 7 ಕೋಟಿ ರೂ.ಗಳಷ್ಟು ಹಣದೊಂದಿಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಕ್ಷಣ ಕ್ರಮ ಕೈಗೊಳ್ಳುವಂತೆ ಡಿಜಿ-ಐಜಿಪಿ ಸಲೀಂ ಅವರಿಗೆ ಸೂಚಿಸಿದ್ದಾರೆ. ಘಟನೆಯ ನಂತರಸರಣಿ ಸಭೆಗಳನ್ನು ನಡೆಸಿ,…
ಮಂಡ್ಯ ಕೃಷಿ ವಿಶ್ವವಿದ್ಯಾಲಯ ಕ್ಕೆ ಯು.ಜಿ.ಸಿ ಮಾನ್ಯತೆ
ಬೆಂಗಳೂರು: ನೂತನ ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ಇದೀಗ ಮತ್ತೊಂದು ಹಿರಿಮೆ ದೊರೆತಿದೆ.. ಮಂಡ್ಯ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯವರ ಕಾಳಜಿ ಹಾಗು ಶ್ರಮದ ಹಿನ್ನಲೆ ಮಂಡ್ಯ ಕೃಷಿ ವಿಶ್ವ ವಿದ್ಯಾನಿಲಯ ಪ್ರಾರಂಭವಾದ ಕೆಲವೇ ದಿನಗಳಲ್ಲಿ ಯು.ಜಿ.ಸಿ ಮಾನ್ಯತೆ ದೊರಕಿರುವುದು ಮತ್ತೋಂದು ಹಿರಿಮೆಗೆ ಸಾಕ್ಷಿಯಾಗಿದೆ. ಯು.ಜಿ.ಸಿ ಅಧಿನಿಯಮದ ಪ್ರಕಾರ, ರಾಷ್ಟ್ರದಲ್ಲಿ ಯು.ಜಿ.ಸಿ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳ ಪಟ್ಟಿಯಲ್ಲಿ ಕೃಷಿ ವಿಶ್ವವಿದ್ಯಾಲಯ ಮಂಡ್ಯವನ್ನು ಸಹ ಅಧಿಕೃತವಾಗಿ ಸೇರಿಸಿ ದಿನಾಂಕ 18:11:2025 ರಂದು ಯು.ಜಿ.ಸಿ ಯು ಅಧಿಸೂಚನೆ ಹೊರಡಿಸಿದೆ. ಈ ಅಧಿಸೂಚನೆಯಂತೆ ಇನ್ನೂ ಮುಂದೆ ವಿಶ್ವವಿದ್ಯಾಲಯ ನೀಡಲಿರುವ ಕೃಷಿ ಆಧಾರಿತ ಪದವಿಗಳಿಗೆ ಯು.ಜಿ.ಸಿ ಮಾನ್ಯತೆ ನೀಡಿದಂತಾಗುತ್ತದೆ. ಕೃಷಿ ವಿ.ವಿ ಮಂಡ್ಯವು ತನ್ನ ಎಲ್ಲಾ ಶೈಕ್ಷಣಿಕ, ಅಭಿವೃದ್ಧಿ, ಮಾನವ ಸಂಪನ್ಮೂಲ ಹಾಗೂ ಮೂಲಸೌಕರ್ಯಗಳ ನಿರ್ವಹಣೆಗೆ ಯು.ಜಿ.ಸಿಯ ಹಾಗೂ ICAR ನಿಯಮವಳಿ ಅನ್ವಯ ಹಾಗೂ ರಾಜ್ಯ ಸರ್ಕಾರದ ಅನುಮೋದನೆಯೊಂದಿಗೆ ತನ್ನ ಕಾರ್ಯವನ್ನು ನಿಭಾಯಿಸುವಂತಾಗುವುದು. ಮಂಡ್ಯ ಕೃಷಿ ವಿಶ್ವವಿದ್ಯಾಲಯ…
