ಬೆಂಗಳೂರು: ರಾಜ್ಯದಲ್ಲಿರುವುದು 80% ಸರ್ಕಾರ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದಲ್ಲಿ ಮಾತನಾಡಿದ ಅವರು, ಗುತ್ತಿಗೆದಾರರು ಮೂರು ಬಾರಿ ಸುದ್ದಿಗೋಷ್ಠಿ ನಡೆಸಿ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಬಿಜೆಪಿ ಸರ್ಕಾರವಿದ್ದರೂ 40 ಪರ್ಸೆಂಟ್ ಎಂದು ಆರೋಪ ಮಾಡಲಾಗಿತ್ತು. ಮಧ್ಯವರ್ತಿಗಳ ಹಾವಳಿ, ಹಿಂದಿನ ಸರ್ಕಾರಕ್ಕಿಂತ ದುಪ್ಪಟ್ಟು ಕಮಿಶನ್, 80 ಪರ್ಸೆಂಟ್ ಕಮಿಶನ್ ಹೀಗೆ ಮೊದಲಾದ ಆರೋಪಗಳನ್ನು ಮಾಡಿದ್ದಾರೆ. ಅವರು ಮಾಡಿರುವ ಆರೋಪ ರಾಹುಲ್ ಗಾಂಧಿಯ ತನಕ ಹೋಗಿದೆ. ಆಂಧ್ರದವರಿಗೆ ಟೆಂಡರ್ ನೀಡಲಾಗಿದೆ, ಹಳೆ ಬಿಲ್ಗಳಿಗೆ ಹೆಚ್ಚಿನ ಕಮಿಶನ್ ಪಡೆಯಲಾಗುತ್ತಿದೆ, 37,370 ಕೋಟಿ ರೂ. ಬಾಕಿ ಇದೆ ಎಂದಿದ್ದರೂ ಸರ್ಕಾರ ಕ್ರಮ ವಹಿಸಿಲ್ಲ, ಮುಷ್ಕರ ಮಾಡದೇ ಬೇರೆ ದಾರಿಯಿಲ್ಲ ಎಂದು ಗುತ್ತಿಗೆದಾರರ ಸಂಘ ತಿಳಿಸಿದೆ. ನಗರಾಭಿವೃದ್ಧಿ ಇಲಾಖೆ ಸಚಿವರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಂಘ ಪತ್ರ ಬರೆದಿದೆ. ಇಷ್ಟೆಲ್ಲ ಆಪಾದನೆಗಳು ಬಂದರೂ ಗುತ್ತಿಗೆದಾರರ…
Category: ರಾಜ್ಯ
ಜಾಗೃತಿ ಶಿಕ್ಷಣವೇ ಮಕ್ಕಳಿಗೆ ಪೂರಕ; ‘ಸೋಶಿಯಲ್ ಮೀಡಿಯಾ’ ಬಗ್ಗೆ ಶಾಲಾ ಮಟ್ಟದಲ್ಲಿ ಪಠ್ಯಕ್ರಮಕ್ಕೆ ಕಾಂಗ್ರೆಸ್ ಕಾನೂನು ಘಟಕ ಸಲಹೆ
ಮಂಗಳೂರು: ಮಕ್ಕಳ ವಿಚಾರದಲ್ಲಿ ಸಾಮಾಜಿಕ ಮಾಧ್ಯಗಳಿಗೆ ಅಂಕುಶ ಹಾಕುವ ಕುರಿತು ಚರ್ಚೆಗಳು ನಡೆದಿರುವಾಗಲೇ, ರಾಜ್ಯದಲ್ಲೀಗ ಸಾಮಾಜಿಕ ಮಾಧ್ಯಮಗಳ ಬಗ್ಗೆ ಜಾಗೃತಿ ಶಿಕ್ಷಣ ಅಗತ್ಯದ ಬಗ್ಗೆ ಅಭಿಪ್ರಾಯಾಗಲು ಕೇಳಿಬಂದಿವೆ. ಇನ್ನೊಂದೆಡೆ, ಸಾಮಾಜಿಕ ಮಾಧ್ಯಮ ಕುರಿತ ಜಾಗೃತಿಗೆ ಪೂರಕವಾಗಿ ಶೈಕ್ಷಣಿಕ ಪಠ್ಯಕ್ರಮ ರೂಪಿಸಬೇಕೆಂದು ಆಡಳಿತ ಪಕ್ಷ ಕಾಂಗ್ರೆಸ್ ಒತ್ತಾಯಿಸಿದೆ. ಈ ಸಂಬಂಧ ಸರ್ಕಾರಕ್ಕೆ ಕಾಂಗ್ರೆಸ್ ಕಾನೂನು ಘಟಕದಿಂದ ಪ್ರಸ್ತಾವನೆಯೊಂದು ಸಲ್ಲಿಕೆಯಾಗುವ ಮೂಲಕ ಸೋಶಿಯಲ್ ಮೀಡಿಯಾ ಕುರಿತ ಬೆಳವಣಿಗೆಗಳಿಗೆ ನಿರ್ಣಾಯಕ ತಿರುವು ಸಿಕ್ಕಿದೆ. ಮಾಜಿ ಸರ್ಕಾರಿ ವಕೀಲರೂ ಆದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಮನೋರಾಜ್ ರಾಜೀವ್ ಅವರು ಸೋಮವಾರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಸಿ.ಕೆ.ಶಿವಕುಮಾರ್, ಗೃಹಸಚಿವ ಪರಮೇಶ್ವರ್, ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪ್ರಸ್ತಾವನೆ ಸಲ್ಲಿಸಿ, ಕಾನೂನು ರೂಪಿಸುವುದಷ್ಟೇ ಅಲ್ಲ, ವಿದ್ಯಾರ್ಥಿ ಬದುಕಿನಲ್ಲೇ ಸಾಮಾಜಿಕ ಮಾಧ್ಯಮ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ…
‘ಆರ್ಥಿಕ ಸುಧಾರಣೆಗಿತ ಸಾಮಾಜಿಕ ಸುಧಾರಣೆ ಆದ್ಯತೆಯಾಗಲಿ’; ಅರುಣ್ ಶ್ಯಾಮ್
ಬೆಂಗಳೂರು: ಪ್ರಭು ಶ್ರೀರಾಮನ ಆದರ್ಶ, ಶ್ರೀಕೃಷ್ಣನ ಉಪದೇಶ, ಅಣ್ಣಾ ಬಸವಣ್ಣರ ವಚನಗಳನ್ನು ಜನರು ಅಳವಡಿಸಿ ಅನುಸರಿಸಿದರೆ, ನಮಾಜದಲ್ಲಿ ಕಾನೂನು, ನ್ಯಾಯಾಲಯ ಸೇರಿದಂತೆ ನ್ಯಾಯಾಂಗ ವ್ಯವಸ್ಥೆಯೇ ಅವಶ್ಯಕತೆ ಇಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಾಜಿ ಹೆಚ್ಚುವರಿ ಅಡ್ವೋಕೇಟ್ ಜನರಲ್ ಅರುಣ್ ಶ್ಯಾಮ್ ಪ್ರತಿಪಾದಿಸಿದ್ದಾರೆ. ಅನ್ನದಾನ, ಅಕ್ಷರದಾನದೊಂದಿಗೆ ನ್ಯಾಯದಾನಕ್ಕೂ ಹೆಸರಾದ ಸಿರಿಗೆರೆ ಮಠದ ಪರಮಪೂಜ್ಯ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಆಯೋಜಿಸಿದ ತರಳಬಾಳು ಹುಣ್ಣಿಮೆ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು. ಜನಪರ ಆಡಳಿತ ಹಾಗೂ ಜನಸ್ನೇಹಿ ಸಮಾಜಕ್ಕೆ ರಾಮ ರಾಜ್ಯವನ್ನು ನಾವು ಉದಾಹರಿಸುತ್ತೇವೆ. ಯಾಕೆಂದರೆ, ಶ್ರೀರಾಮಾನ ಆಶಯವು ಸಮಾಜದ ಹಿತಕ್ಕಾಗಿ ಇತ್ತು. ಶ್ರೀಕೃಷ್ಣನ ಉಪದೇಶ, ಅಣ್ಣ ಬಸವಣ್ಣರ ವಚನಗಳು ಕೂಡಾ ಶಾಂತಿ ಸಹಬಾಳ್ವೆ, ಸಾಮಾಜಿಕ ಹಿತಾಸಕ್ತಿಯ ಸೂತ್ರ ಎಂಬಂತಿದೆ. ಈ ಸೂತ್ರವನ್ನು ಅನುಸರಿಸಿದರೆ ಸಮಾಜದಲ್ಲಿ ವಿವಾದಗಳೇ ಇರಲ್ಲ ಎಂದು ಅರುಣ್ ಶ್ಯಾಮ್ ಪ್ರತಿಪಾದಿಸಿದರು. ಹಿರಿಯ ವಕೀಲರೂ ಆದ ಅರುಣ್ ಶ್ಯಾಮ್ ಅವರು,…
ಅಭಿವೃದ್ಧಿ ಹೊಂದಿದ ಭಾರತಕ್ಕೆ ನಮ್ಮ ಬಜೆಟ್ ನೀಲನಕ್ಷೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2026–27ರ ಕೇಂದ್ರ ಬಜೆಟ್ ಪ್ರಧಾನಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ ಕನಸನ್ನು ಸಾಕಾರಗೊಳಿಸುವ ಸ್ಪಷ್ಟ ನೀಲನಕ್ಷೆಯಾಗಿದೆ ಎಂದು ಕೇಂದ್ರ ಆಹಾರ, ಸಾರ್ವಜನಿಕ ವಿತರಣೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಈ ಬಜೆಟ್ ಏಳು ಪ್ರಮುಖ ವಲಯಗಳಲ್ಲಿ ಉತ್ಪಾದನಾ ಸಾಮರ್ಥ್ಯವನ್ನು ಬಲಪಡಿಸುವ ಉದ್ದೇಶ ಹೊಂದಿರುವ ಬೆಳವಣಿಗೆ ಕೇಂದ್ರೀತ ದಾಖಲೆ ಎಂದು ಅವರು ಅಭಿಪ್ರಾಯಪಟ್ಟರು. ಬಯೋಫಾರ್ಮಾ ವಲಯಕ್ಕೆ ರೂ.10,000 ಕೋಟಿ ಹಂಚಿಕೆ ಮಾಡಿರುವುದು ಆರೋಗ್ಯ ರಕ್ಷಣಾ ಕ್ಷೇತ್ರದಲ್ಲಿ ನಾವೀನ್ಯತೆ ಹಾಗೂ ಉತ್ಪಾದನೆಗೆ ಮಹತ್ವದ ಉತ್ತೇಜನ ನೀಡಲಿದೆ ಎಂದರು. ಭಾರತೀಯ ಸೆಮಿಕಂಡಕ್ಟರ್ ಮಿಷನ್ 2.0ರ ಉಡಾವಣೆ ಭಾರತವನ್ನು ಜಾಗತಿಕ ತಂತ್ರಜ್ಞಾನ ಶಕ್ತಿ ಕೇಂದ್ರವಾಗಿ ರೂಪಿಸುವ ದಿಟ್ಟ ಹೆಜ್ಜೆಯಾಗಿದೆ ಎಂದು ಜೋಶಿ ಹೇಳಿದರು. ದೇಶೀಯ ಉತ್ಪಾದನೆಗೆ ವೇಗ ನೀಡುವ ಉದ್ದೇಶದಿಂದ ಎಲೆಕ್ಟ್ರಾನಿಕ್ಸ್ ಘಟಕ ಉತ್ಪಾದನಾ ಯೋಜನೆಯಡಿಯಲ್ಲಿ ಹೂಡಿಕೆಯನ್ನು…
ಕೇಂದ್ರ ಬಜೆಟ್: ಕರ್ನಾಟಕಕ್ಕೂ ರೈಲ್ವೆ ಹೈಸ್ಪೀಡ್ ಕಾರಿಡಾರ್ ಘೋಷಣೆ
ನವದೆಹಲಿ: ಕೇಂದ್ರ ಬಜೆಟ್ದಲ್ಲಿ ಮೂಲಸೌಕರ್ಯ ವಿಕಸನಕ್ಕೆ ಒತ್ತು ನೀಡಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರೈಲ್ವೆ ವಲಯದಲ್ಲಿಯೂ ಮಹತ್ವದ ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. ದೇಶದ ಪ್ರಮುಖ ನಗರಗಳನ್ನು ಸಂಪರ್ಕಿಸುವ ಏಳು ಹೈಸ್ಪೀಡ್ ರೈಲ್ವೆ ಕಾರಿಡಾರ್ಗಳನ್ನು ಸ್ಥಾಪಿಸುವ ಪ್ರಸ್ತಾವನೆಯನ್ನು ಅವರು ಬಜೆಟ್ ಭಾಷಣದಲ್ಲಿ ಮಂಡಿಸಿದರು. ಚೆನ್ನೈ–ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ಆರ್ಥಿಕ ಮತ್ತು ವಾಣಿಜ್ಯ ಕೇಂದ್ರಗಳನ್ನು ಜೋಡಿಸುವ ಹೈಸ್ಪೀಡ್ ರೈಲು ಮಾರ್ಗಗಳು ಅಭಿವೃದ್ಧಿಯಾಗಲಿವೆ. ಮುಂಬೈ–ಪುಣೆ, ಪುಣೆ–ಹೈದರಾಬಾದ್, ಹೈದರಾಬಾದ್–ಚೆನ್ನೈ, ಬೆಂಗಳೂರು–ಹೈದರಾಬಾದ್, ಬೆಂಗಳೂರು–ಚೆನ್ನೈ, ದೆಹಲಿ–ವಾರಣಾಸಿ ಹಾಗೂ ವಾರಣಾಸಿ–ಸಿಲಿಗುರಿ ನಡುವೆ ಈ ವೇಗದ ರೈಲು ಕಾರಿಡಾರ್ಗಳನ್ನು ನಿರ್ಮಿಸಲಾಗುವುದು ಎಂದು ಸಚಿವೆ ವಿವರಿಸಿದರು. ಈ ಹೈಸ್ಪೀಡ್ ರೈಲ್ವೆ ಯೋಜನೆಗಳ ಮೂಲಕ ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡುವುದರ ಜೊತೆಗೆ, ಸರಕು ಮತ್ತು ಪ್ರಯಾಣಿಕರ ಸಂಚಾರಕ್ಕೆ ಹೊಸ ದಿಕ್ಕು ನೀಡುವ ಉದ್ದೇಶ ಸರ್ಕಾರದದ್ದಾಗಿದೆ. ಇದರ ಪರಿಣಾಮವಾಗಿ ವ್ಯಾಪಾರ, ಕೈಗಾರಿಕೆ ಹಾಗೂ ಸೇವಾ ವಲಯಗಳಲ್ಲಿ ಚಟುವಟಿಕೆಗಳು ವೇಗ…
ಬಹುಗ್ರಾಮ ಕುಡಿಯುವ ನೀರು ಯೋಜನೆಗಾಗಿ ಕಲಬುರಗಿ ಜಿಲ್ಲೆಗೆ ಹೆಚ್ಚಿನ ಅನುದಾನ
ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರತಿ ಹಳ್ಳಿಗೂ, ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಪೂರೈಕೆ ಮತ್ತು ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ ಗ್ಯಾರಂಟಿ ಸರ್ಕಾರವು ಈಗಾಗಲೇ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಬಹುಗ್ರಾಮ ಕುಡಿಯುವ ನೀರು ಯೋಜನೆಗಾಗಿ ಜಿಲ್ಲೆಗೆ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕಲಬುರಗಿ ಜಿಲ್ಲೆಯ ತಾಲೂಕುಗಳಲ್ಲಿ ₹1,051.5 ಕೋಟಿ ಅಂದಾಜು ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ಯೋಜನೆ ಕಾಮಗಾರಿಗಳನ್ನು ನಡೆಸಲಾಗುತ್ತಿದೆ ಎಂದಿದ್ದಾರೆ. ಕಲಬುರಗಿಯ ಪ್ರತಿ ತಾಲೂಕಿನಲ್ಲಿ ಶುದ್ಧ ಕುಡಿಯುವ ನೀರು ಯೋಜನೆಗಳಿಗೆ ಅನುದಾನ ಮತ್ತು ಕಾಮಗಾರಿಗಳ ಪ್ರಗತಿ ವಿವರ: ₹16 ಕೋಟಿ ವೆಚ್ಚದಲ್ಲಿ ಅಫಜಲಪುರ ತಾಲ್ಲೂಕಿನಲ್ಲಿ ಹಸರಗುಂಡಗಿ ಹಾಗೂ ಇತರೆ 6 ಗ್ರಾಮಗಳು ಮತ್ತು ಮಾರ್ಗ ಮಧ್ಯದ 5 ಗ್ರಾಮಗಳಲ್ಲಿ ಕಾಮಗಾರಿ ಪ್ರಗತಿಯ ಹಂತದಲ್ಲಿವೆ. ₹12 ಕೋಟಿ…
ಜನವರಿಯಲ್ಲಿ ಜಿಎಸ್ಟಿ ಸಂಗ್ರಹ ₹1.93 ಲಕ್ಷ ಕೋಟಿ; ಶೇ.6.2 ಏರಿಕೆ
ನವದೆಹಲಿ: ಜನವರಿ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹವು ಕಳೆದ ವರ್ಷದ ಇದೇ ಅವಧಿಯೊಂದಿಗೆ ಹೋಲಿಸಿದರೆ ಶೇ.6.2ರಷ್ಟು ಹೆಚ್ಚಳಗೊಂಡು ₹1,93,384 ಕೋಟಿ ದಾಖಲಿಸಿದೆ ಎಂದು ಅಧಿಕೃತ ಅಂಕಿಅಂಶಗಳು ಭಾನುವಾರ ಪ್ರಕಟಿಸಿವೆ. ಕಳೆದ ವರ್ಷ ಜನವರಿಯಲ್ಲಿ ಒಟ್ಟು ಜಿಎಸ್ಟಿ ಸಂಗ್ರಹ ₹1,82,094 ಕೋಟಿ ಆಗಿತ್ತು. ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್–ಜನವರಿ ಅವಧಿಯಲ್ಲಿ ಒಟ್ಟು ಜಿಎಸ್ಟಿ ಸಂಗ್ರಹ ₹18,43,423 ಕೋಟಿಗೆ ತಲುಪಿದ್ದು, ವರ್ಷದಿಂದ ವರ್ಷಕ್ಕೆ ಶೇ.8.3ರಷ್ಟು ಬಲವಾದ ವೃದ್ಧಿಯನ್ನು ತೋರಿಸಿದೆ. ಜನವರಿಯಲ್ಲಿ ನಿವ್ವಳ ಜಿಎಸ್ಟಿ ಆದಾಯ ₹1,70,719 ಕೋಟಿ ಆಗಿದ್ದು, ಇದು ಕಳೆದ ವರ್ಷದ ಇದೇ ತಿಂಗಳಿಗಿಂತ ಶೇ.7.6ರಷ್ಟು ಹೆಚ್ಚಾಗಿದೆ. ಏಪ್ರಿಲ್ನಿಂದ ಜನವರಿವರೆಗೆ ನಿವ್ವಳ ಜಿಎಸ್ಟಿ ಆದಾಯ ₹15,95,752 ಕೋಟಿಗೆ ಏರಿಕೆಯಾಗಿದ್ದು, ಶೇ.6.8ರಷ್ಟು ವೃದ್ಧಿ ಕಂಡಿದೆ. ದೇಶೀಯ ಜಿಎಸ್ಟಿ ಸಂಗ್ರಹವು ಶೇ.4.8ರಷ್ಟು ಹೆಚ್ಚಳಗೊಂಡು ₹1,41,132 ಕೋಟಿಗೆ ತಲುಪಿದೆ. ಆಮದು ಆಧಾರಿತ ಜಿಎಸ್ಟಿ ಸಂಗ್ರಹವು ಶೇ.10.1ರಷ್ಟು ಏರಿಕೆಯೊಂದಿಗೆ ₹52,253…
ಕಾರಾಗೃಹ ‘ಸೆಂಟ್ರಲ್ ಕಮಾಂಡ್ ಸೆಂಟರ್’ ಉದ್ಘಾಟನೆ
ಬೆಂಗಳೂರು: ಬೆಂಗಳೂರಿನ ಗಾಂಧಿನಗರದಲ್ಲಿರುವ ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಪ್ರಧಾನ ಕಚೇರಿಯಲ್ಲಿ ನೂತನವಾಗಿ ಸ್ಥಾಪಿಸಲಾದ ಕಾರಾಗೃಹ ‘ಸೆಂಟ್ರಲ್ ಕಮಾಂಡ್ ಸೆಂಟರ್’ ಉದ್ಘಾಟನೆಗೊಂಡಿದೆ. ಈ ವೇಳೆ ರಾಜ್ಯದ ಎಲ್ಲ ಕಾರಾಗೃಹಗಳಲ್ಲಿ ಕೈದಿಗಳ ಸುಧಾರಣೆಗೆ ನಡೆಯುತ್ತಿರುವ ಕಾರ್ಯ ಚಟುವಟಿಕೆಗಳ ಕುರಿತ ಕೈಪಿಡಿಯನ್ನು ಬಿಡುಗಡೆ ಮಾದಲಾಯಿತು. ರಾಜ್ಯದ ಎಲ್ಲ ಪ್ರಮುಖ ಕಾರಾಗೃಹಗಳಲ್ಲಿ ಅಳವಡಿಸಲಾದ ಸಿಸಿಟಿವಿ ಕಣ್ಗಾವಲು ಮೂಲಕ ನಿಗಾವಹಿಸಲು ಅನುಕೂಲವಾಗಲಿದೆ. ಒಟ್ಟು 1076 ಕ್ಯಾಮೆರಾಗಳನ್ನು ಸೆಂಟ್ರಲ್ ಕಮಾಂಡ್ ಸೆಂಟರ್ಗೆ ಕನೆಕ್ಟ್ ಮಾಡಲಾಗಿದೆ. ಕಾರಾಗೃಹಗಳಿಗೆ ನಿಷೇಧಿತ ವಸ್ತುಗಳ ಸರಬರಾಜು, ಕಾನೂನು ಬಾಹಿರ ಚಟುವಟಿಕೆ ಹಾಗೂ ಸಿಬ್ಬಂದಿಗಳ ಕಾರ್ಯವನ್ನು ಕಮಾಂಡ್ ಸೆಂಟರ್ ಮೂಲಕ ದಿನದ 24 ಗಂಟೆಯು ನಿಗಾವಹಿಸಲಿದ್ದಾರೆ. ಮುಂದಿನ ದಿನಗಳಲ್ಲಿ ತಾಲ್ಲೂಕು ಜೈಲುಗಳಲ್ಲಿನ ಕ್ಯಾಮೆರಾಗಳನ್ನು ಕಮಾಂಡ್ ಸೆಂಟರ್ಗೆ ಕನೆಕ್ಟ್ ಮಾಡಲಾಗುವುದು. ಕಮಾಂಡ್ ಸೆಂಟರ್ ಸುಧಾರಣೆ ಕ್ರಮವಾಗಿದ್ದು, ತಂತ್ರಜ್ಞಾನವನ್ನು ಅಳವಡಿಸಿಕೊಂಡು ಮತ್ತಷ್ಟು ಬದಲಾವಣೆಗಳನ್ನು ತರಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್…
ಚಿತ್ರರಂಗಕ್ಕೆ ಕಾಲಿಟ್ಟು ಮೂರು ದಶಕಗಳು… ಕಿಚ್ಚನ ಭಾವುಕ ಮಾತುಗಳು..
ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು ಮೂರು ದಶಕಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಟ ಕಿಚ್ಚ ಸುದೀಪ್, ಮುಂದಿನ ದಿನಗಳಲ್ಲಿ ಇನ್ನಷ್ಟು ಶ್ರಮಪಟ್ಟು ಕೆಲಸ ಮಾಡುವುದಾಗಿ ಹೇಳಿದ್ದಾರೆ. ಈ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳು, ನಿರ್ದೇಶಕರು, ಬರಹಗಾರರು, ನಿರ್ಮಾಪಕರು ಹಾಗೂ ಕನ್ನಡ ಚಲನಚಿತ್ರೋದ್ಯಮದ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿರುವ ಅವರು, ತಮ್ಮ ದೀರ್ಘ ಸಿನಿ ಪ್ರಯಾಣಕ್ಕೆ ಎಲ್ಲರ ಸಹಕಾರ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. “ಮೂರು ದಶಕಗಳ ನಂತರವೂ ಈ ಚಿತ್ರಜಗತ್ತಿನಲ್ಲಿ ನಿಂತಿರುವುದು ಅನಂತ ಕೃತಜ್ಞತೆಯ ವಿಷಯ. ಕನಸುಗಳು, ಅನುಮಾನಗಳು ಮತ್ತು ನಿರೀಕ್ಷೆಗಳೊಂದಿಗೆ ಬಂದ ಒಬ್ಬ ಹುಡುಗನಿಗೆ ಇದು ನಾನು ಊಹಿಸಿದ್ದಕ್ಕಿಂತಲೂ ದೊಡ್ಡ ಅನುಭವವಾಗಿದೆ. ಇದಕ್ಕೆ ಕಾರಣರಾದವರು ಎಲ್ಲರೂ ನೀವು” ಎಂದು ಸುದೀಪ್ ಹೇಳಿದ್ದಾರೆ. ಅಭಿಮಾನಿಗಳನ್ನು ತಮ್ಮ ಶಕ್ತಿ ಮತ್ತು ಪ್ರೇರಣೆಯಾಗಿ ಉಲ್ಲೇಖಿಸಿರುವ ಅವರು, ನಿರ್ದೇಶಕರು ಮತ್ತು ಬರಹಗಾರರು ತಮ್ಮ ಮೇಲೆ ನಂಬಿಕೆ ಇಟ್ಟು ಹೊಸ ಸವಾಲುಗಳಿಗೆ ಪ್ರೇರೇಪಿಸಿದುದಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ನಿರ್ಮಾಪಕರ ಧೈರ್ಯ…
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಗೆ ವಿಶೇಷ ದಳ ರಚನೆ
ಬೆಂಗಳೂರು: ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ಸತ್ಯಾಸತ್ಯತೆ ಪತ್ತೆಹಚ್ಚಲು ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿ ಆದೇಶಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ನಿರ್ದೇಶನದ ಮೇರೆಗೆ, ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ಅವರ ನೇತೃತ್ವದಲ್ಲಿ ಎಸ್ಐಟಿ ಕಾರ್ಯನಿರ್ವಹಿಸಲಿದೆ. ತನಿಖಾ ತಂಡದಲ್ಲಿ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್, ಹಲಸೂರು ಗೇಟ್ ಉಪ ಪೊಲೀಸ್ ಆಯುಕ್ತ ಸುಧೀರ್, ಸಿಸಿಆರ್ಬಿ ಉಪ ಪೊಲೀಸ್ ಆಯುಕ್ತ ರಾಮಚಂದ್ರ ಹಾಗೂ ಅಶೋಕನಗರ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ರವಿ ಸೇರಿದ್ದಾರೆ. ಐಟಿ ದಾಳಿ ಹಿನ್ನೆಲೆಯಲ್ಲಿ ಉಂಟಾದ ಒತ್ತಡವೇ ಆತ್ಮಹತ್ಯೆಗೆ ಕಾರಣ ಎಂಬ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಆ ಅಂಶವನ್ನೂ ಒಳಗೊಂಡಂತೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಮೊಬೈಲ್ ಫೋನ್ ಪರಿಶೀಲನೆ, ಹಣಕಾಸು ವ್ಯವಹಾರಗಳ ಪರಿಶೋಧನೆ…
