ನಟ ದರ್ಶನ್ ಜನ್ಮದಿನದ ಸಂಭ್ರಮದ ನಡುವೆಯೇ ಅವರ ಹೊಸ ಸಿನಿಮಾ ‘ದಿ ಡೆವಿಲ್’ ಟೀಸರ್ ರಿಲೀಸ್ ಆಗಿದೆ. ಮಿಲನ ಪ್ರಕಾಶ್ ಅವರು ನಿರ್ದೇಶನ ಮಾಡುತ್ತಿರುವ ಈ ಸಿನಿಮಾದ ಟೀಸರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ‘ಕಾಟೇರ’ ಸಿನಿಮಾದ ಬಿಗ್ ಸಕ್ಸಸ್ ನಂತರ ದರ್ಶನ್ ಶುರು ಮಾಡಿದ ಸಿನಿಮಾ ‘ದಿ ಡೆವಿಲ್’ ಭಾರೀ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಆದರೆ, ದರ್ಶನ್ ಅವರು ಕೊಲೆ ಪ್ರಕರಣದಲ್ಲಿ ಆರೋಪಿ ಆಗಿ ಜೈಲು ಸೇರಿದ್ದರು. ಹಾಗಾಗಿ ಹಲವು ತಿಂಗಳ ಕಾಲ ‘ದಿ ಡೆವಿಲ್’ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದಿತ್ತು. ಇದೀಗ ಟೀಸರ್ ಬಿಡುಗಡೆಯಾಗಿದ್ದು ಅಭಿಮಾನಿಗಳು ಖುಷಿಪಟ್ಟಿದ್ದಾರೆ.
Category: ರಾಜ್ಯ
‘ಸಿದ್ದರಾಮಯ್ಯ ನಮ್ಮ ನಾಯಕರು, ಅವರ ಹೆಸರು ದುರ್ಬಳಕೆ ಬೇಡಿ’ ಎಂದ ಶಿವಕುಮಾರ್
ಬೆಂಗಳೂರು: ‘ಸಿದ್ದರಾಮಯ್ಯ ನಮ್ಮ ಪಕ್ಷದ ನಾಯಕರು. ಅದರಲ್ಲಿ ಯಾವುದೇ ಪ್ರಶ್ನೆ ಇಲ್ಲ. ದಿನಬೆಳಗಾದರೆ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಪಕ್ಷಕ್ಕೆ ಅನಿವಾರ್ಯ ಎಂಬ ಹೇಳಿಕೆ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಅವರು ಎಲ್ಲಾ ಚುನಾವಣೆಗೂ ಬೇಕು. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯ್ತಿ, ವಿಧಾನ ಸಭೆ, ಸಂಸತ್ ಚುನಾವಣೆ ಎಲ್ಲದಕ್ಕೂ ಬೇಕು. ಅವರನ್ನು ಪಕ್ಷ ಎರಡು ಬಾರಿ ಸಿಎಂ ಮಾಡಿದೆ. ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಸಿಎಂ ಆಗಿ ಉತ್ತಮ ಕೆಲಸ ಮಾಡುತ್ತಿದ್ದು, ಅವರ ಹೆಸರು ಮಾಧ್ಯಮಗಳಿಗೆ ಆಹಾರವಾಗುವಂತೆ ಗೊಂದಲದ ಹೇಳಿಕೆ ಬೇಡ ಎಂದು ಡಿಕೆಶಿ ಹೇಳಿದರು. ಪಕ್ಷದಲ್ಲಿ ಗೊಂದಲದ ಹೇಳಿಕೆ ಯಾಕೆ ಎಂದು ಕೇಳಿದಾಗ, “ಯಾವುದೇ ಗೊಂದಲ ಇಲ್ಲ. ಕಾಂಗ್ರೆಸ್ ಪಕ್ಷ…
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆಶಿ ಕರೆ
ಬೆಂಗಳೂರು: ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಹಿರಿಯ ನಾಯಕರು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಶಿವಕುಮಾರ್, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸಧ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ನಗರ ಪಾಲಿಕೆ ಚುನಾವಣೆಯನ್ನು ನಡೆಸಬೇಕಾಗಿದ್ದು ಗ್ರೇಟರ್ ಬೆಂಗಳೂರು ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ. ಯಾವುದೇ ಕ್ಷಣದಲ್ಲಿ ಈ ಚುನಾವಣೆಗಳು ಘೋಷಣೆಯಾಗಬಹುದು. ಇದಕ್ಕೆ ನಾವೆಲ್ಲರೂ ಸಿದ್ಧತೆ ಮಾಡಿಕೊಳ್ಳಬೇಕು ಎಂದರು. “ಈ ಚುನಾವಣೆಗಳ ಸಿದ್ಧತೆಗಾಗಿ ಕಾರ್ಯಾಧ್ಯಕ್ಷರ ನೇತೃತ್ವದಲ್ಲಿ ಉಪಾಧ್ಯಕ್ಷರುಗಳನ್ನು ಸೇರಿಸಿಕೊಂಡು ವಿಭಾಗವಾರು ಸಮಿತಿ ರಚಿಸಲಿದ್ದೇವೆ. ಈ ಸಮಿತಿ ಮಾರ್ಚ್ ಒಳಗಾಗಿ ರಾಜ್ಯ ಪ್ರವಾಸ ಮಾಡಿ ಎಲ್ಲಾ ಕಡೆ ಸಮನ್ವಯತೆ ಸಾಧಿಸಿ ತಯಾರಿ ಮಾಡಿಕೊಳ್ಳಬೇಕು. ಎಲ್ಲೆಲ್ಲಿ ನಾಯಕರ ಮಧ್ಯೆ ಹೊಂದಾಣಿಕೆ…
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿಗೆ ಸಚಿವರ ಮಾಸ್ಟರ್ ಪ್ಲಾನ್; ಆಯುಕ್ತರ ನೇತೃತ್ವದ ಸಮಿತಿ ರಚನೆ
ಬೆಂಗಳೂರು: ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಮುಜರಾಯಿ ಸಚಿವರು ರಾಮಲಿಂಗಾ ರೆಡ್ಡಿ ಮಹತ್ವದ ಕ್ರಮಕ್ಕೆ ಮುನ್ನುಡಿ ಬರೆದಿದ್ದಾರೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕಾಮಗಾರಿಯನ್ನು ಹಂತಹಂತವಾಗಿ ಅನುಷ್ಠಾನಗೊಳಿಸಿ, ಭಕ್ತಾಧಿಗಳಿಗೆ ಸಮಗ್ರ ಸೌಲಭ್ಯ ಒದಗಿಸುವ ಹಾಗೂ ಶ್ರೀ ಕ್ಷೇತ್ರವನ್ನು ಮತ್ತಷ್ಟು ಸಾರ್ವಜನಿಕ ಸ್ನೇಹಿ ಯಾಗಿಸಲು ಮಾಸ್ಟರ್ ಪ್ಲಾನ್ ರೂಪಿಸಲು ಸಭೆ ನಡೆಸಿದ ಸಚಿವರು, ಹೊಸದಾಗಿ ಸಮಿತಿ ರಚಿಸಿದ್ದಾರೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ಕಲಂ 77 ರನ್ವಯ 15 ಜನ ಅಧಿಕಾರಿ/ಅಧಿಕಾರೇತರ ಸದಸ್ಯರನ್ನು ಮತ್ತು ಹೆಚ್ಚುವರಿಯಾಗಿ 3 ಜನ ಸದಸ್ಯರುಗಳನ್ನು ಒಳಗೊಂಡಂತೆ ಮೇಲ್ವಿಚಾರಣಾ ಸಮಿತಿ ರಚಸಿ ಆದೇಶಿಸಲಾಗಿದೆ. 15.02.2025 ರಂದು ನಡೆದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಮಾಸ್ಟರ್ ಪ್ಲಾನ್ ಯೋಜನೆಯ ಮೇಲ್ವಿಚಾರಣೆ ಸಮಿತಿ ಸಭೆಯಲ್ಲಿ ಈ ಕೆಳಕಂಡ…
ಕಾಂಗ್ರೆಸ್ ಸರ್ಕಾರದಿಂದ ವಿಶ್ವವಿದ್ಯಾಲಯ ಮುಚ್ಚುವ ಭಾಗ್ಯ: ಬಿಜೆಪಿ ವ್ಯಂಗ್ಯ
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ರಾಜ್ಯಕ್ಕೆ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಭಾಗ್ಯ ನೀಡಿದ್ದಾರೆ. ಇದರಿಂದಾಗಿ ನಮ್ಮ ರಾಜ್ಯದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಕ್ಕದ ರಾಜ್ಯಕ್ಕೆ ವಲಸೆ ಹೋಗಬೇಕಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದ್ದಾರೆ. ವಿಧಾನಸೌಧದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ವಿಶ್ವವಿದ್ಯಾಲಯಗಳನ್ನು ಮುಚ್ಚಿಸುವ ಭಾಗ್ಯವನ್ನು ಕಾಂಗ್ರೆಸ್ ನೀಡಿದೆ. ಕಿಸಾನ್ ಸಮ್ಮಾನ್, ವಿದ್ಯಾನಿಧಿ ಸೇರಿದಂತೆ ಅನೇಕ ಯೋಜನೆಗಳನ್ನು ಮುಚ್ಚಿ ಹಾಕಲಾಗಿದೆ. ಈಗ ಮಾರಿ ಕಣ್ಣು ಹೋರಿ ಮೇಲೆ ಎಂಬಂತೆ, ಸಿಎಂ ಸಿದ್ದರಾಮಯ್ಯನವರ ಕಣ್ಣು ವಿಶ್ವವಿದ್ಯಾಲಯಗಳ ಮೇಲೆ ಬಿದ್ದಿದೆ. ಯುವಜನರು ಪದವೀಧರರಾಗುವುದನ್ನು ತಪ್ಪಿಸಲು ಈ ರೀತಿ ಮಾಡಲಾಗಿದೆ. ಯಾರೂ ಪದವೀಧರರಾಗದೇ ಇದ್ದಲ್ಲಿ ಯುವನಿಧಿ ಯೋಜನೆಯನ್ನು ನಿಲ್ಲಿಸಬಹುದು ಎಂಬುದು ಇವರ ಚಿಂತನೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬೇರೆ ರಾಜ್ಯ, ದೇಶಗಳ ವಿದ್ಯಾರ್ಥಿಗಳು ನಮ್ಮ ರಾಜ್ಯದ ವಿಶ್ವವಿದ್ಯಾಲಯಗಳಿಗೆ ಬರುತ್ತಿದ್ದಾರೆ. ಮಂಡ್ಯದ ವಿಶ್ವವಿದ್ಯಾಲಯವನ್ನು ಮುಚ್ಚಿ, ಅಮ್ಯೂಸ್ಮೆಂಟ್ ಪಾರ್ಕ್ ಹಾಗೂ ಜಲಕ್ರೀಡೆಗೆ ವ್ಯವಸ್ಥೆ…
ಉದಯಗಿರಿ ಗಲಭೆಯಲ್ಲಿ ಕಲ್ಲುತೂರಿದವರನ್ನು ಮಾತ್ರವಲ್ಲ, ಪ್ರಚೋದಿಸಿದವರನ್ನೂ ಬಂಧಿಸಿ; ಸಿಎಂ ತಾಕೀತು
ಮೈಸೂರು: ಉದಯಗಿರಿ ಗಲಭೆಯಲ್ಲಿ ಕಲ್ಲುತೂರಿದವರನ್ನು ಮಾತ್ರವಲ್ಲ, ಪ್ರಚೋದಿಸಿದವರನ್ನೂ ಬಂಧಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಪೊಲೀಸರಿಗೆ ತಾಕೀತು ಮಾಡಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಮ್, ಉದಯಗಿರಿ ಘಟನೆಗೆ ಸಂಬಂಧಪಟ್ಟಂತೆ ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಮೈಸೂರು ಪೊಲೀಸ್ ಆಯುಕ್ತರು ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಜೊತೆ ಚರ್ಚಿಸಿದ್ದಾಗಿ ತಿಳಿಸಿದ್ದಾರೆ. ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು. ಕಾನೂನು ಕೈಗೆತ್ತಿಕೊಂಡ ಪ್ರತಿಯೊಬ್ಬರನ್ನೂ ಪತ್ತೆಹಚ್ಚಿ ತಕ್ಕ ಶಿಕ್ಷೆಯಾಗುವಂತೆ ಕ್ರಮ ವಹಿಸಬೇಕು. ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿದವರು, ಅದಕ್ಕೆ ಪ್ರಚೋದನೆ ನೀಡಿದ ಎಲ್ಲರನ್ನೂ ಪತ್ತೆಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು, ಇದರ ಜೊತೆಗೆ ತಪ್ಪು ಮಾಡದವರಿಗೆ ಕೂಡ ತೊಂದರೆ ಆಗಬಾರದು ಎಂದವರು ಪ್ರತಿಪಾದಿಸಿದ್ದಾರೆ. ಮುಂದೆ ಇಂಥಾ ಘಟನೆಗಳು ಮರುಕಳಿಸದಂತೆ ಕಟ್ಟೆಚ್ಚರ ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನ ಮಾಡಿದ ಎಲ್ಲರನ್ನೂ ಕಾನೂನು…
AICCಉಸ್ತುವಾರಿಗಳ ಬದಲಾವಣೆ: ಬಿ.ಕೆ. ಹರಿಪ್ರಸಾದ್’ಗೆ ಮಹತ್ವದ ಹೊಣೆ
ನವದೆಹಲಿ: ಪ್ರದೇಶ ಕಾಂಗ್ರೆಸ್ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡುವ ಪ್ರಕ್ರಿಯೆ ಆರಂಭವಾಗಿದ್ದು, ಹಲವು ರಾಜ್ಯಗಳಿಗೆ ಹೊಸಬರನ್ನು ಎಐಸಿಸಿ ನೇಮಕ ಮಾಡಿದೆ. ಇದೇ ವೇಳೆ, ಪ್ರದೇಶ ಕಾಂಗ್ರೆಸ್ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಕರ್ನಾಟಕದ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಹರಿಯಾಣಕ್ಕೆ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ತಮಿಳುನಾಡು ಮತ್ತು ಪುದುಚೇರಿಗೆ ಗಿರಿ ಚೋಡಂಕರ್ ಅವರನ್ನು ಉಸ್ತುವಾರಿಯಾಗಿ ನೇಮಿಸಲಾಗಿದೆ. ಶುಕ್ರವಾರ ನಡೆದ ಪ್ರಮುಖ ಪುನರ್ರಚನೆಯಲ್ಲಿ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೊಸ ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿಗಳನ್ನು AICC ನೇಮಿಸಿದೆ. ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರನ್ನು ಪಂಜಾಬ್ಗೆ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇಮಕ ಮಾಡಿದ್ದಾರೆ. ಮಧ್ಯಪ್ರದೇಶಕ್ಕೆ ವರ್ಗಾವಣೆಗೊಂಡಿರುವ ಹರೀಶ್ ಚೌಧರಿ ಅವರ ಬದಲಿಗೆ ಬಘೇಲ್ ನೇಮಕಗೊಂಡಿದ್ದಾರೆ. ಕರ್ನಾಟಕದ ರಾಜ್ಯಸಭಾ ಸದಸ್ಯ ಸೈಯದ್ ನಾಸೀರ್ ಹುಸೇನ್ ಅವರನ್ನು ಜಮ್ಮು ಮತ್ತು ಕಾಶ್ಮೀರ…
ಸಾರ್ವಜನಿಕರ ಆಕ್ರೋಶಕ್ಕೆ ಬೆಚ್ಚಿದ BMRCL; ನಮ್ಮ ಮೆಟ್ರೋ ಪ್ರಯಾಣ ದರದಲ್ಲಿ ಇಳಿಕೆ
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರವನ್ನು ಮತ್ತೆ ಪರಿಷ್ಕರಿಸಲಾಗಿದೆ. ಸಾರ್ವಜನಿಕರ ಆಕ್ರೋಶಕ್ಕೆ ಮಣಿದಿರುವ ‘ನಮ್ಮ ಮೆಟ್ರೋ’ ಪ್ರಯಾಣ ದರವನ್ನು ಸ್ವಲ್ಪ ಮಟ್ಟಿಗೆ ಇಳಿಕೆ ಮಾಡಿದೆ. ಟಿಕೆಟ್ ದರ ಏರಿಕೆ ಬಗ್ಗೆ ಸಾರ್ವಜನಿಕ ವಲಯದಲ್ಲಿನ ಆಕ್ರೋಶ ಹಿನ್ನೆಲೆಯಲ್ಲಿ ದರ ಇಳಿಸುವಂತೆ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಂಡಿರುವ ಬಿಎಂಆರ್ಸಿಎಲ್, ಶೇ 90 ರಿಂದ 100 ರಷ್ಟು ದರ ಹೆಚ್ಚಳ ಮಾಡಿರುವ ನಿಲ್ದಾಣಗಳ ಮಧ್ಯೆ ತಲಾ 10 ರೂಪಾಯಿಗಳಷ್ಟು ಇಳಿಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಹೊಸ ದರ ಹೀಗಿದೆ: ಮೆಜೆಸ್ಟಿಕ್ನಿಂದ ವೈಟ್ಫಿಲ್ಡ್ಗೆ ಹಳೆಯ ದರ 90 ರೂ. ಹೊಸ ದರ 80 ರೂ. ಮೆಜೆಸ್ಟಿಕ್ನಿಂದ ಚಲ್ಲಘಟ್ಟಕ್ಕೆ ಹಳೆಯ 70 ರೂ. ಹೊಸ ದರ 60 ರೂ. ಮೆಜೆಸ್ಟಿಕ್ನಿಂದ ವಿಧಾನಸೌಧಕ್ಕೆ ಹಳೆಯ 20 ರೂ. ಹೊಸ ದರ 10 ರೂ. ಮೆಜೆಸ್ಟಿಕ್ನಿಂದ ಬೈಯಪ್ಪನಹಳ್ಳಿಗೆ ಹಳೆಯ 60…
ಭೀಮಾತೀರದ ಬಾಗಪ್ಪ ಹರಿಜನ ಕೊಲೆ ಪ್ರಕರಣ; ನಾಲ್ವರ ಸೆರೆ
ವಿಜಯಪುರ: ಭೀಮಾತೀರದ ಕುಖ್ಯಾತ ರೌಡಿ ಬಾಗಪ್ಪ ಹರಿಜನ ಕೊಲೆ ಪ್ರಕರಣ ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ವಿಜಯಪುರ ಗಾಂಧಿಚೌಕ ಠಾಣೆ ಪೊಲೀಸರು ಕೃತ್ಯ ನಡೆದ 24 ಗಂಟೆಗಳಲ್ಲಿ ಆರೋಪಿಗಳನ್ನು ಸೆರೆಹಿಡಿದಿದ್ದಾರೆ. ಭೀಮಾತೀರದ ಹಂತಕ ಖ್ಯಾತಿಯ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ರೌಡಿ ಬಾಗಪ್ಪ ಹರಿಜನನನ್ನ ಫೆಬ್ರವರಿ 11 ರಾತ್ರಿ 9:45ರ ಸುಮಾರಿಗೆ ವಿಜಯಪುರದ ಮದೀನಾ ನಗರದಲ್ಲಿ ಹಂತಕರು ಬರ್ಬರ ಕೊಲೆ ಮಾಡಿದ್ದರು. ಕೃತ್ಯವನ್ನು ಸವಾಲಾಗಿ ಸ್ವೀಕರಿಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬಾಗಪ್ಪ ಹರಿಜನ ಕೊಲೆ ಪ್ರಕರಣ ಸಂಬಂಧ ಪ್ರಕಾಶ ಅಲಿಯಾಸ್ ಪಿಂಟ್ಯಾ ಅಗರಖೇಡ್ ಸೇರಿ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕಾಶ್ ಅಲಿಯಾಸ್ ಪಿಂಟ್ಯಾ ಅಗರಖೇಡ್, ರಾಹುಲ್ ತಳಕೇರಿ, ಗದಿಗೆಪ್ಪ ಅಲಿಯಾಸ್ ಮನಿಕಂಠ ದನಕೊಪ್ಪ, ಸುದೀಪ್ ಕಾಂಬಳೆ ಎಂಬವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.
ಒಂದೆಡೆ KWIN City, ಗ್ಲೋಬಲ್ ಹಬ್ ಎಂದು ಬೊಬ್ಬಿಡುತ್ತಿರುವ ಸರ್ಕಾರ; ಮತ್ತೊಂದೆಡೆ ಯಮಕಿಂಕರರ ತಾಣದಂತಿರುವ ಆಸ್ಪತ್ರೆ!
ಬೆಂಗಳೂರು: KWIN City, ಲಕ್ಷಾಂತರ ಕೋಟಿ ಬಂಡವಾಳ ಹೂಡಿಕೆ, ಗ್ಲೋಬಲ್ ಹಬ್, ಪ್ರಗತಿಯಮರುಕಲ್ಪನೆ ಎಂದು ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ ಬೊಬ್ಬೆ ಹೊಡೆಯುತ್ತಿರುವ ಈ ಸಂದರ್ಭದಲ್ಲಿ, ನಮ್ಮ ಉತ್ತರ ಕರ್ನಾಟಕದ ಆಸ್ಪತ್ರೆಗಳ ದುಸ್ಥಿತಿ ಅನಾವರಣವಾಗಿದೆ. ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಅವರು ಈ ಕುರಿತಂತೆ ವೀಡಿಯೋವೊಂದನ್ನು ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಮಾಡಿದ್ದು, ಆಸ್ಪತ್ರೆಗಳ ಅವ್ಯವಸ್ಥೆಗೆ ಹೊಣೆಗಾರರಾಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಈಗಾಗಲೇ ನೂರಾರು ಬಾಣಂತಿಯರು ಇದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರೂ, ಇನ್ನೂ ಎಚ್ಚೆತ್ತಿಲ್ಲದಿರವುದು ನಮ್ಮ ಉತ್ತರ ಕರ್ನಾಟಕದೆಡೆಗಿನ ಈ ನಿರ್ಲಜ್ಜ ಕಾಂಗ್ರೆಸ್ ಸರ್ಕಾರದ ಅಸಡ್ಡೆಯನ್ನು ಈ ಘಟನೆ ಎತ್ತಿ ತೋರಿಸಿದೆ ಎಂದು ಅರವಿಂದ್ ಬೆಲ್ಲದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳ್ಳಾರಿಯ BMC&R ಆಸ್ಪತ್ರೆಯ ಎಮರ್ಜೆನ್ಸಿ ವಾರ್ಡಿನಲ್ಲಿ ವೈದ್ಯರು ಮೊಬೈಲ್ ಟಾರ್ಚ್ ಹಿಡಿದುಕೊಂಡು ಚಿಕಿತ್ಸೆ ನೀಡುವಂತಹ ಪರಿಸ್ಥಿತಿಯನ್ನು ಈ ಬೇಜವಾಬ್ದಾರಿ ಸರ್ಕಾರ ತಂದಿಟ್ಟಿದೆ. ಈ…