ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿವಾದ ಭುಗಿಲೆದ್ದಿದ್ದು, ಅಸಮಾಧಾನಗೊಂಡಿರುವ ಸಚಿವ ರಾಮಲಿಂಗಾರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ತಮಗೆ ನಿರೀಕ್ಷಿತ ಖಾತೆ ನೀಡದಿರುವುದರಿಂದ ತೀವ್ರ ಅಸಮಾಧಾನಗೊಂಡಿದ್ದ ರಾಮಲಿಂಗಾರೆಡ್ಡಿ, ಶುಕ್ರವಾರ ತುರ್ತು ಸುದ್ದಿಗೋಷ್ಠಿ ನಡೆಸಿ ತಮ್ಮ ನಿರ್ಧಾರವನ್ನು ಬಹಿರಂಗಪಡಿಸಿದರು. “ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಿಲ್ಲ” ಎಂದು ಹೇಳಿದ ಅವರು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು. #WATCH | Bengaluru | Ramalinga Reddy resigns as Karnataka Minister, says, “I am still in the Congress party; I have not resigned from the party. I have been in the Congress party for the past 53 years. I have handled several responsibilities within the party.I have served…
Category: ಪ್ರಮುಖ ಸುದ್ದಿ
ಮೋದಿ ಮೇಲೆ ಅನಗತ್ಯ ಒತ್ತಡ ಹೇರಬೇಡಿ’; ಅಮೆರಿಕಕ್ಕೆ ಪುಟಿನ್ ಎಚ್ಚರಿಕೆ
ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಯಾವುದೇ ದೇಶ ಒತ್ತಡ ಹೇರುವುದು ಅಂತರರಾಷ್ಟ್ರೀಯ ಹಾಗೂ ದ್ವಿಪಕ್ಷೀಯ ಸಂಬಂಧಗಳಿಗೆ ಹಾನಿಕಾರಕ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ಸೇಂಟ್ ಪೀಟರ್ಸ್ಬರ್ಗ್ನಲ್ಲಿ ನಡೆದ ಅಂತರರಾಷ್ಟ್ರೀಯ ಸುದ್ದಿ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಂವಾದದಲ್ಲಿ ಮಾತನಾಡಿದ ಪುಟಿನ್, ಭಾರತ-ಅಮೆರಿಕ ಸಹಕಾರದಿಂದ ರಷ್ಯಾ-ಭಾರತ ಸಂಬಂಧಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಭಾರತವು 1.5 ಶತಕೋಟಿ ಜನಸಂಖ್ಯೆ ಹೊಂದಿರುವ ದೊಡ್ಡ ರಾಷ್ಟ್ರ. ತನ್ನ ಹಿತಾಸಕ್ತಿಗಳಿಗೆ ಅನುಗುಣವಾಗಿ ಯಾವ ದೇಶಗಳೊಂದಿಗೆ ಬೇಕಾದರೂ ಆರ್ಥಿಕ ಹಾಗೂ ರಾಜತಾಂತ್ರಿಕ ಸಂಬಂಧಗಳನ್ನು ಬೆಳೆಸುವುದು ಸಹಜ ಎಂದು ಅವರು ಹೇಳಿದರು. ರಷ್ಯಾದೊಂದಿಗೆ ಭಾರತದ ಸಹಕಾರದ ವಿಷಯದಲ್ಲಿ ಅಮೆರಿಕ ಒತ್ತಡ ಹೇರುವ ಪ್ರಯತ್ನ ಮಾಡುತ್ತಿದೆ ಎಂಬ ವರದಿಗಳ ಕುರಿತು ಪ್ರತಿಕ್ರಿಯಿಸಿದ ಪುಟಿನ್, ವಿಶ್ವದ ಅತಿ ಹೆಚ್ಚು ಜನಸಂಖ್ಯೆಯ ದೇಶದ ಪ್ರಧಾನಿಯ ಮೇಲೆ ಒತ್ತಡ ಹೇರುವುದು ಅಂತರರಾಷ್ಟ್ರೀಯ ಸಂಬಂಧಗಳಿಗೆ ಒಳ್ಳೆಯದಲ್ಲ. ಆ ಒತ್ತಡ…
‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್
ಹೈದರಾಬಾದ್: ಟಾಲಿವುಡ್ ಸ್ಟಾರ್ ರಾಮ್ ಚರಣ್ ನಟನೆಯ ಬಹುನಿರೀಕ್ಷಿತ ‘ಪೆದ್ದಿ’ ಸಿನಿಮಾ ಬಿಡುಗಡೆಯಾದ ಮೊದಲ ದಿನವೇ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಆರಂಭ ಕಂಡಿದ್ದು, ವಿಶ್ವದಾದ್ಯಂತ ₹112.49 ಕೋಟಿ ಗ್ರಾಸ್ ಕಲೆಕ್ಷನ್ ಮಾಡುವ ಮೂಲಕ ದಾಖಲೆ ಬರೆದಿದೆ. ಮಾಸ್ ಎಂಟರ್ಟೈನರ್ ಆಗಿ ತೆರೆಕಂಡಿರುವ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹೈದರಾಬಾದ್, ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಮುಂಜಾನೆ ವಿಶೇಷ ಪ್ರದರ್ಶನಗಳನ್ನು ಆಯೋಜಿಸಲಾಗಿತ್ತು. ಬಿಡುಗಡೆಯ ಮೊದಲ ದಿನವೇ 12,412ಕ್ಕೂ ಹೆಚ್ಚು ಪ್ರದರ್ಶನಗಳು ನಡೆದಿರುವುದು ಚಿತ್ರದ ಮೇಲಿನ ನಿರೀಕ್ಷೆಯನ್ನು ತೋರಿಸಿದೆ. ಭಾರತದಲ್ಲಿ ಸಿನಿಮಾ ಮೊದಲ ದಿನ ₹69.50 ಕೋಟಿ ನೆಟ್ ಕಲೆಕ್ಷನ್ ಮಾಡಿದ್ದು, ₹82.49 ಕೋಟಿ ಗ್ರಾಸ್ ಆದಾಯ ಗಳಿಸಿದೆ. ವಿದೇಶಿ ಮಾರುಕಟ್ಟೆಗಳಲ್ಲಿ ಕೂಡ ಉತ್ತಮ ಪ್ರದರ್ಶನ ಕಂಡಿರುವ ಚಿತ್ರವು ₹30 ಕೋಟಿ ಗ್ರಾಸ್ ಕಲೆಕ್ಷನ್ ದಾಖಲಿಸಿದೆ. ‘ಆರ್ಆರ್ಆರ್’ ಬಳಿಕ ರಾಮ್ ಚರಣ್ ಅಭಿನಯದ ‘ಆಚಾರ್ಯ’ ಮತ್ತು ‘ಗೇಮ್…
ನಟಿ ರವೀನಾ ಟಂಡನ್ ತಾಯಿಯ ಮನೆಯಲ್ಲಿ ದುಬಾರಿ ಚಿನ್ನಾಭರಣ ಕಳ್ಳತನ: ಮಹಿಳೆಯ ಬಂಧನ
ಮುಂಬೈ: ಬಾಲಿವುಡ್ ನಟಿ ರವೀನಾ ಟಂಡನ್ ಅವರ ತಾಯಿಯ ಮನೆಯಲ್ಲಿ ನಡೆದ ಸುಮಾರು ₹25 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ. ಬಂಧಿತೆಯನ್ನು ರಾಶಿ ಚಾಬ್ರಿಯಾ ಎಂದು ಗುರುತಿಸಲಾಗಿದ್ದು, ಆಕೆ ನಟಿಯ 86 ವರ್ಷದ ತಾಯಿಯ ಆರೈಕೆಗಾಗಿ ನೇಮಕಗೊಂಡಿದ್ದಳು. ಅಡುಗೆ ಕೆಲಸ ಸೇರಿದಂತೆ ದೈನಂದಿನ ಆರೈಕೆ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದ ವೇಳೆ ಮನೆಯ ಲಾಕರ್ನಲ್ಲಿದ್ದ ಚಿನ್ನಾಭರಣ ಹಾಗೂ ಎರಡು ಮೊಬೈಲ್ ಫೋನ್ಗಳನ್ನು ಕಳವು ಮಾಡಿರುವ ಆರೋಪ ಎದುರಿಸುತ್ತಿದ್ದಾಳೆ. ಕಳ್ಳತನದ ಬಗ್ಗೆ ದೂರು ದಾಖಲಾಗುತ್ತಿದ್ದಂತೆ ತನಿಖೆ ಆರಂಭಿಸಿದ ಪೊಲೀಸರು, ಸಾಕ್ಷ್ಯಾಧಾರಗಳ ಆಧಾರದ ಮೇಲೆ ರಾಶಿ ಚಾಬ್ರಿಯಾಳನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಕಳವು ಪ್ರಕರಣದಲ್ಲಿ ಆಕೆಯ ಪಾತ್ರ ಬೆಳಕಿಗೆ ಬಂದಿರುವುದಾಗಿ ತಿಳಿದುಬಂದಿದೆ. ಪೊಲೀಸರ ಪ್ರಕಾರ, ಬಂಧಿತೆಯಿಂದ ಸುಮಾರು 15 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಉಳಿದ ಚಿನ್ನಾಭರಣ ಹಾಗೂ ಇತರೆ ವಸ್ತುಗಳ ಪತ್ತೆಗೆ ತನಿಖೆ ಮುಂದುವರಿದಿದೆ.…
‘ವೇವ್ಸ್ ಒಟಿಟಿ’ಗೆ 1 ಕೋಟಿ ಬಳಕೆದಾರರು; ಪ್ರಸಾರ ಭಾರತಿಯ ಡಿಜಿಟಲ್ ವೇದಿಕೆಯ ಯಶೋಗಾಥೆ
ನವದೆಹಲಿ (ANU): ಪ್ರಸಾರ ಭಾರತಿಯ ಡಿಜಿಟಲ್ ಸ್ಟ್ರೀಮಿಂಗ್ ವೇದಿಕೆ ವೇವ್ಸ್ ಒಟಿಟಿ ಒಂದು ಕೋಟಿ ನೋಂದಾಯಿತ ಬಳಕೆದಾರರ ಸಂಖ್ಯೆಯನ್ನು ದಾಟುವ ಮೂಲಕ ಮಹತ್ವದ ಸಾಧನೆ ಮಾಡಿದೆ. 2024ರ ನವೆಂಬರ್ನಲ್ಲಿ ಆರಂಭಗೊಂಡ ಈ ವೇದಿಕೆ ಅಲ್ಪಾವಧಿಯಲ್ಲೇ ದೇಶದ ಸಾರ್ವಜನಿಕ ಸೇವಾ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ತನ್ನದೇ ಆದ ಸ್ಥಾನವನ್ನು ನಿರ್ಮಿಸಿಕೊಂಡಿದೆ. ಪ್ರಸ್ತುತ ವೇವ್ಸ್ ಒಟಿಟಿಯಲ್ಲಿ ಮನರಂಜನೆ, ಸುದ್ದಿ, ಶಿಕ್ಷಣ, ಸಂಸ್ಕೃತಿ, ಆಧ್ಯಾತ್ಮಿಕತೆ ಹಾಗೂ ಸಾರ್ವಜನಿಕ ಸೇವೆ ಸೇರಿದಂತೆ ವಿವಿಧ ವಿಭಾಗಗಳ 24 ಸಾವಿರಕ್ಕೂ ಅಧಿಕ ವಿಷಯ ಶೀರ್ಷಿಕೆಗಳು ಮತ್ತು 15 ಸಾವಿರ ಗಂಟೆಗಳಿಗಿಂತ ಹೆಚ್ಚು ಕಾರ್ಯಕ್ರಮಗಳು ಲಭ್ಯವಿವೆ. ಜೊತೆಗೆ 140ಕ್ಕೂ ಹೆಚ್ಚು ನೇರ ಪ್ರಸಾರದ ದೂರದರ್ಶನ ವಾಹಿನಿಗಳು ಹಾಗೂ 200ಕ್ಕೂ ಅಧಿಕ ರೇಡಿಯೋ ಸೇವೆಗಳನ್ನೂ ಈ ವೇದಿಕೆ ಒದಗಿಸುತ್ತಿದೆ. ಮೊಬೈಲ್, ವೆಬ್ ಹಾಗೂ ಸಂಪರ್ಕಿತ ಟಿವಿ ಸಾಧನಗಳ ಮೂಲಕ ಲಭ್ಯವಿರುವ ವೇವ್ಸ್ ಒಟಿಟಿ ಈಗ 130ಕ್ಕೂ ಹೆಚ್ಚು ದೇಶಗಳ…
ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು
ಮುಂಬೈ: ‘ಭಾಬಿಜಿ ಘರ್ ಪರ್ ಹೈ!’ ಖ್ಯಾತಿಯ ನಟಿ ಶಿಲ್ಪಾ ಶಿಂಧೆ, 2016ರಲ್ಲಿ ನಿರ್ಮಾಪಕರ ವಿರುದ್ಧ ಮಾಡಿದ್ದ ಲೈಂಗಿಕ ಕಿರುಕುಳದ ಆರೋಪ ಸುಳ್ಳಾಗಿತ್ತು ಎಂದು ಇತ್ತೀಚೆಗೆ ಒಪ್ಪಿಕೊಂಡಿದ್ದಾರೆ ಎಂಬ ಬೆಳವಣಿಗೆ ಹೊಸ ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ ಶಿಲ್ಪಾ, ಪಾಡ್ಕಾಸ್ಟ್ನ ಒಂದು ಭಾಗವನ್ನು ಮಾತ್ರ ನೋಡಿ ತಮ್ಮನ್ನು ಟೀಕಿಸಲಾಗುತ್ತಿದೆ ಎಂದು ಹೇಳಿದ್ದಾರೆ. “ಸಂಪೂರ್ಣ ಸಂದರ್ಶನವನ್ನು ನೋಡದೇ ತೀರ್ಪು ನೀಡುವುದು ಸರಿಯಲ್ಲ,” ಎಂದು ಅವರು ಹೇಳಿದ್ದಾರೆ. ಆ ಸಮಯದಲ್ಲಿ ತೀವ್ರ ಮಾನಸಿಕ ಒತ್ತಡದಲ್ಲಿದ್ದೆ ಎಂದು ಹೇಳಿದ ಶಿಲ್ಪಾ, “ಆ ಸುಳ್ಳಿನೊಂದಿಗೆ ಬದುಕಲು ಸಾಧ್ಯವಾಗಲಿಲ್ಲ. ಒಂದು ದಿನ ಸತ್ಯ ಹೇಳಲೇಬೇಕಿತ್ತು,” ಎಂದು ತಿಳಿಸಿದ್ದಾರೆ. ತಮ್ಮ ಆರೋಪದಿಂದ ನಿರ್ಮಾಪಕರಿಗೆ ಉಂಟಾದ ನೋವಿನ ಬಗ್ಗೆ ವಿಷಾದ ವ್ಯಕ್ತಪಡಿಸಿ, “ಕ್ಷಮಿಸಿ ಎಂಬ ಪದ ಸಾಕಾಗುವುದಿಲ್ಲ, ಆದರೆ ಆ ಸಂದರ್ಭದ ನನ್ನ ಪರಿಸ್ಥಿತಿ ಅವರಿಗೆ ತಿಳಿದಿದೆ,” ಎಂದಿದ್ದಾರೆ. ಇದರ ನಡುವೆ, ಸಾಮಾಜಿಕ ಜಾಲತಾಣ ಬಳಕೆದಾರರು…
ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ
ಚೆನ್ನೈ: ಸೂಪರ್ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ‘ತಲೈವರ್ 173’ ಚಿತ್ರದ ನಿರ್ದೇಶಕರ ಕುರಿತು ಹೊಸ ಚರ್ಚೆ ಆರಂಭವಾಗಿದೆ. ನಟ ಕಮಲ್ ಹಾಸನ್ ಅವರ ನಿರ್ಮಾಣ ಸಂಸ್ಥೆ ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್ (ಆರ್ಕೆಎಫ್ಐ) ನಿರ್ದೇಶಕ ಅಶ್ವಥ್ ಮಾರಿಮುತ್ತು ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಬಳಿಕ, ಈ ಚಿತ್ರವನ್ನು ಅವರೇ ನಿರ್ದೇಶಿಸಲಿದ್ದಾರೆ ಎಂಬ ವದಂತಿಗಳು ಸಿನಿ ವಲಯದಲ್ಲಿ ಹರಿದಾಡುತ್ತಿವೆ. ಆರ್ಕೆಎಫ್ಐ ತನ್ನ ಸಾಮಾಜಿಕ ಜಾಲತಾಣದಲ್ಲಿ ವಿಶೇಷ ವಿಡಿಯೊ ಹಂಚಿಕೊಂಡು ಅಶ್ವಥ್ ಮಾರಿಮುತ್ತು ಅವರಿಗೆ ಶುಭಾಶಯ ಕೋರಿತ್ತು. ಈ ವಿಡಿಯೊದಲ್ಲಿನ ಕೆಲವು ಸೂಚನೆಗಳು ಅಭಿಮಾನಿಗಳಲ್ಲಿ ಹೊಸ ಕುತೂಹಲ ಮೂಡಿಸಿದ್ದು, ‘ತಲೈವರ್ 173’ ಚಿತ್ರದ ನಿರ್ದೇಶಕ ಅಶ್ವಥ್ ಅವರೇ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ. ಈ ಚಿತ್ರವನ್ನು ಮೊದಲು ನಿರ್ದೇಶಕ ಸುಂದರ್ ಸಿ ನಿರ್ದೇಶಿಸಬೇಕಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಅವರು ಯೋಜನೆಯಿಂದ ಹಿಂದೆ ಸರಿದಿದ್ದರು. ಬಳಿಕ ನಿರ್ದೇಶಕ ಸಿಬಿ ಚಕ್ರವರ್ತಿ ಹೆಸರು ಕೇಳಿಬಂದಿದ್ದರೂ,…
‘ಪರಮಾಣು ಅಸ್ತ್ರಕ್ಕೆ ಅವಕಾಶ ಇಲ್ಲ’; ಇರಾನ್ಗೆ ಟ್ರಂಪ್ ಖಡಕ್ ಎಚ್ಚರಿಕೆ:
ವಾಷಿಂಗ್ಟನ್: ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಇರಾನ್ ಜೊತೆ ಮಾತುಕತೆಗಳು ಮುಂದುವರಿದಿದ್ದರೂ, ಅಂತಿಮ ಒಪ್ಪಂದವು ಟೆಹ್ರಾನ್ಗೆ ಪರಮಾಣು ಅಸ್ತ್ರ ಅಭಿವೃದ್ಧಿಪಡಿಸುವ ದಾರಿಯನ್ನು ಸಂಪೂರ್ಣವಾಗಿ ಮುಚ್ಚಬೇಕು ಎಂದು ಅವರು ಒತ್ತಿ ಹೇಳಿದ್ದಾರೆ. ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, “ನಾವು ಒಂದಲ್ಲ ಒಂದು ರೀತಿಯಲ್ಲಿ ಗೆಲ್ಲುತ್ತೇವೆ. ಅದು ರಾಜತಾಂತ್ರಿಕ ಒಪ್ಪಂದದ ಮೂಲಕವಾಗಿರಬಹುದು ಅಥವಾ ಮಿಲಿಟರಿ ಕ್ರಮದ ಮೂಲಕವಾಗಿರಬಹುದು,” ಎಂದು ಹೇಳಿದರು. “ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ಬಹುತೇಕ ಎಲ್ಲರೂ ಒಪ್ಪಿದ್ದಾರೆ,” ಎಂದು ಟ್ರಂಪ್ ಹೇಳಿದ್ದಾರೆ. ಜೊತೆಗೆ, ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಸಂಪೂರ್ಣವಾಗಿ ತೆರೆಯಲಿದೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದರು. ಒಬಾಮಾ ಆಡಳಿತದ ಅವಧಿಯಲ್ಲಿ ಮಾಡಿಕೊಂಡಿದ್ದ ಪರಮಾಣು ಒಪ್ಪಂದವನ್ನು ಟೀಕಿಸಿದ ಟ್ರಂಪ್, “ಅದು ಇರಾನ್ಗೆ ಪರಮಾಣು ಅಸ್ತ್ರದ ದಾರಿಯನ್ನು ತೆರೆದಿತ್ತು. ನಾನು ಅದನ್ನು ರದ್ದುಗೊಳಿಸಿದ್ದೆ.…
ರೌಡಿಸಂಗೆ ಡಿಕೆಶಿ ಬ್ರೇಕ್: ಪ್ರತಿ ತಾಲೂಕಿನಲ್ಲಿ ವಿಶೇಷ ಪೊಲೀಸ್ ಸ್ಕ್ವಾಡ್
ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಲಪಡಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರೌಡಿಸಂ ವಿರುದ್ಧ ಸಮರ ಸಾರಿದ್ದು, ಪ್ರತಿ ತಾಲೂಕಿನಲ್ಲಿ ವಿಶೇಷ ಪೊಲೀಸ್ ಸ್ಕ್ವಾಡ್ಗಳನ್ನು ರಚಿಸಲು ಆದೇಶಿಸಿದ್ದಾರೆ. ವಿಧಾನಸೌಧದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ, ರೌಡಿಗಳ ಚಟುವಟಿಕೆಗಳ ಮೇಲೆ ನಿಗಾ ಇಡಲು ಹಾಗೂ ಅಪರಾಧ ಚಟುವಟಿಕೆಗಳನ್ನು ತಡೆಗಟ್ಟಲು ವಿಶೇಷ ತಂಡಗಳನ್ನು ಸ್ಥಾಪಿಸುವಂತೆ ಸೂಚನೆ ನೀಡಿದ್ದಾರೆ. ನೂತನ ಸ್ಕ್ವಾಡ್ ಹೇಗಿರಲಿದೆ? ಪ್ರತಿ ತಾಲೂಕಿನಲ್ಲಿ ವಿಶೇಷ ಪೊಲೀಸ್ ಸ್ಕ್ವಾಡ್ ರಚನೆ ಪ್ರತಿ ತಂಡದಲ್ಲಿ 10 ರಿಂದ 15 ಪೊಲೀಸ್ ಕಾನ್ಸ್ಟೇಬಲ್ಗಳು ಹಳೆಯ ರೌಡಿಗಳ ಚಟುವಟಿಕೆಗಳ ಮೇಲೆ ನಿರಂತರ ನಿಗಾ ಅಪರಾಧ ಜಗತ್ತಿಗೆ ಹೊಸದಾಗಿ ಪ್ರವೇಶಿಸುವ ಯುವಕರ ಗುರುತಿಸುವಿಕೆ ರೌಡಿಗಳನ್ನು ಪತ್ತೆಹಚ್ಚಿ ಕಾನೂನಿನ ಚೌಕಟ್ಟಿಗೆ ತರುವುದು ಡ್ರಗ್ಸ್, ಗಾಂಜಾ, ಜೂಜಾಟ, ಮಟ್ಕಾ ಹಾಗೂ ಅಕ್ರಮ ಚಟುವಟಿಕೆಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಯಾವುದೇ ಕ್ರಿಮಿನಲ್ ಚಟುವಟಿಕೆಗೆ ಅವಕಾಶ ನೀಡದಂತೆ ಮೇಲ್ವಿಚಾರಣೆ…
‘ವಂದೇ ಮಾತರಂ’ ವಿವಾದ: ಕಾಂಗ್ರೆಸ್ ಕೌನ್ಸಿಲರ್ಗೆ ನಿರೀಕ್ಷಣಾ ಜಾಮೀನು ನೀಡಲು ಕೋರ್ಟ್ ನಕಾರ
ಇಂದೋರ್: ಇಂದೋರ್ ಮಹಾನಗರ ಪಾಲಿಕೆ ಸಭೆಯಲ್ಲಿ ‘ವಂದೇ ಮಾತರಂ’ ಹಾಡಲು ನಿರಾಕರಿಸಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಕೌನ್ಸಿಲರ್ ಫೌಜಿಯಾ ಶೇಖ್ ಅಲೀಮ್ ಅವರಿಗೆ ನ್ಯಾಯಾಲಯ ಹಿನ್ನಡೆ ನೀಡಿದೆ. ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಇಂದೋರ್ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ರೂಪೇಶ್ ನಾಯಕ್ ಅವರು ಪ್ರಕರಣದ ದಾಖಲೆಗಳು, ಸಾಕ್ಷ್ಯಗಳು ಹಾಗೂ ಎರಡೂ ಕಡೆಯ ವಾದಗಳನ್ನು ಪರಿಶೀಲಿಸಿ ಅರ್ಜಿಯನ್ನು ವಜಾಗೊಳಿಸಿದರು. ವಿವಿಧ ಸಮುದಾಯಗಳ ನಡುವೆ ದ್ವೇಷ ಪ್ರಚೋದಿಸುವ ಆರೋಪಕ್ಕೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 196(1) ಅಡಿಯಲ್ಲಿ ಪ್ರಾಥಮಿಕವಾಗಿ ಪ್ರಕರಣ ದಾಖಲಾಗಿರುವುದನ್ನು ನ್ಯಾಯಾಲಯ ಉಲ್ಲೇಖಿಸಿದೆ. ಅರ್ಜಿಯಲ್ಲಿ ಫೌಜಿಯಾ ಅಲೀಮ್ ಆರೋಪಗಳನ್ನು ತಳ್ಳಿ ಹಾಕಿದ್ದು, ತಾವು ‘ವಂದೇ ಮಾತರಂ’ ಹಾಡಲು ನಿರಾಕರಿಸಿಲ್ಲ ಹಾಗೂ ರಾಜಕೀಯ ಕಾರಣಗಳಿಂದ ತಮ್ಮನ್ನು ಸಿಲುಕಿಸಲಾಗಿದೆ ಎಂದು ವಾದಿಸಿದ್ದರು. ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿರುವುದಾಗಿಯೂ ತಿಳಿಸಿದ್ದರು. ಜಾಮೀನು ನೀಡಿದರೆ ಸಾಕ್ಷಿಗಳ…
