ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯಲ್ಲಿ ಸರಕು ಸಾಗಣೆ ಹಡಗಿನ ಮೇಲೆ ನಡೆದ ಡ್ರೋನ್ ದಾಳಿಗೆ ಪ್ರತಿಯಾಗಿ ಅಮೆರಿಕ ಇರಾನ್ನ ಕ್ಷಿಪಣಿ ಮತ್ತು ಡ್ರೋನ್ ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ. ಕಳೆದ ವಾರ ಕದನ ವಿರಾಮ ಹಾಗೂ ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ತೆರೆಯುವ ಕುರಿತು ಉಭಯ ದೇಶಗಳ ನಡುವೆ ಮಧ್ಯಂತರ ಒಪ್ಪಂದವಾಗಿದ್ದರೂ, ಈ ಘಟನೆ ಮತ್ತೆ ಉದ್ವಿಗ್ನತೆ ಹೆಚ್ಚಿಸಿದೆ. ಸರಕು ಹಡಗಿನ ಮೇಲಿನ ಡ್ರೋನ್ ದಾಳಿ ಕದನ ವಿರಾಮದ ಸ್ಪಷ್ಟ ಉಲ್ಲಂಘನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಪಿಸಿದ್ದಾರೆ. ಇದರ ಬೆನ್ನಲ್ಲೇ ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಇರಾನ್ನ ಕ್ಷಿಪಣಿ ಉಡಾವಣಾ ಕೇಂದ್ರಗಳು, ಡ್ರೋನ್ ತಾಣಗಳು ಹಾಗೂ ಕರಾವಳಿ ರಾಡಾರ್ ವ್ಯವಸ್ಥೆಗಳ ಮೇಲೆ ನಿಖರ ವಾಯುದಾಳಿ ನಡೆಸಿರುವುದಾಗಿ ತಿಳಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಇರಾನ್ ಸಂಸತ್ತಿನ ರಾಷ್ಟ್ರೀಯ ಭದ್ರತಾ ಸಮಿತಿಯ ಅಧ್ಯಕ್ಷ ಇಬ್ರಾಹಿಂ ಅಜೀಜಿ, ಹಾರ್ಮುಜ್ ಜಲಸಂಧಿಯ ನಿಯಂತ್ರಣ ಇರಾನ್ನಲ್ಲಿದ್ದು,…
Category: ಪ್ರಮುಖ ಸುದ್ದಿ
ಎಐ ತಂತ್ರಜ್ಞಾನಗಳ ಕಳ್ಳತನ ಸಂಚು ಬೇಡ; ಚೀನಾಕ್ಕೆ ಅಮೆರಿಕ ಎಚ್ಚರಿಕೆ
ವಾಷಿಂಗ್ಟನ್: ಆರ್ಥಿಕ ಬೇಹುಗಾರಿಕೆ, ಸೈಬರ್ ದಾಳಿಗಳು ಮತ್ತು ವಾಣಿಜ್ಯ ಹೂಡಿಕೆಗಳ ಮೂಲಕ ಅಮೆರಿಕದ ಕೃತಕ ಬುದ್ಧಿಮತ್ತೆ (AI) ಹಾಗೂ ಇತರೆ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಸ್ವಾಧೀನಪಡಿಸಿಕೊಳ್ಳಲು ಚೀನಾ ಪ್ರಯತ್ನಿಸುತ್ತಿದೆ ಎಂದು ಅಮೆರಿಕದ ಶಾಸಕರು ಎಚ್ಚರಿಕೆ ನೀಡಿದ್ದಾರೆ. ಚೀನಾದ ಕಮ್ಯುನಿಸ್ಟ್ ಪಕ್ಷದ ಕುರಿತ ಹೌಸ್ ಸೆಲೆಕ್ಟ್ ಕಮಿಟಿ ವಿಚಾರಣೆಯಲ್ಲಿ ಮಾತನಾಡಿದ ರಕ್ಷಣಾ ಗುಪ್ತಚರ ಸಂಸ್ಥೆಯ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ಡೇವಿಡ್ ಶೆಡ್, ಅಮೆರಿಕದ ತಾಂತ್ರಿಕ ಮತ್ತು ವಾಣಿಜ್ಯ ರಹಸ್ಯಗಳನ್ನು ಪಡೆಯಲು ಬೀಜಿಂಗ್ ವ್ಯಾಪಕ ಜಾಲವನ್ನು ನಿರ್ಮಿಸಿದೆ ಎಂದು ಆರೋಪಿಸಿದರು. ಸೈಬರ್ ಬೇಹುಗಾರಿಕೆ, ಶೈಕ್ಷಣಿಕ ಸಹಯೋಗ, ಮಾನವ ಗುಪ್ತಚರ ಜಾಲ ಮತ್ತು ವಾಣಿಜ್ಯ ಹೂಡಿಕೆಗಳ ಮೂಲಕ ಚೀನಾ ತನ್ನ ತಾಂತ್ರಿಕ ಹಾಗೂ ಮಿಲಿಟರಿ ಸಾಮರ್ಥ್ಯವನ್ನು ವಿಸ್ತರಿಸುತ್ತಿದೆ ಎಂದು ಅವರು ಹೇಳಿದರು. ಕೃತಕ ಬುದ್ಧಿಮತ್ತೆ, ದೂರಸಂಪರ್ಕ, ಜೈವಿಕ ತಂತ್ರಜ್ಞಾನ, ಕ್ವಾಂಟಮ್ ಕಂಪ್ಯೂಟಿಂಗ್ ಮತ್ತು ಸುಧಾರಿತ ಶಸ್ತ್ರಾಸ್ತ್ರ ವ್ಯವಸ್ಥೆಗಳ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಗಳು ಪ್ರಮುಖ…
ರಾಜ್ಯದ ಆರೋಗ್ಯ ಇಲಾಖೆ ಐಸಿಯುನಲ್ಲಿದೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ
ಬೆಂಗಳೂರು: ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ರಾಜ್ಯದ ಖಜಾನೆಯನ್ನು ಖಾಲಿ ಮಾಡಿ, ಆರೋಗ್ಯ ಇಲಾಖೆಯನ್ನು ಸಂಕಷ್ಟದ ಪರಿಸ್ಥಿತಿಗೆ ತಳ್ಳಿರುವುದೇ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯ ಆರೋಗ್ಯ ಇಲಾಖೆಯಲ್ಲಿ 35,196 ಹುದ್ದೆಗಳು ಖಾಲಿ ಇದ್ದು, ತಕ್ಷಣವೇ ಅವುಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಜೊತೆಗೆ ‘ನಮ್ಮ ಕ್ಲಿನಿಕ್’ ಸಿಬ್ಬಂದಿಗೆ ಬಾಕಿ ಇರುವ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಸರ್ಕಾರ ಬದಲಾಗಿದ್ದರೂ, ಆರೋಗ್ಯ ಇಲಾಖೆಯ ಪರಿಸ್ಥಿತಿ ಮಾತ್ರ ಬದಲಾಗಿಲ್ಲ ಎಂದು ಆರೋಪಿಸಿರುವ ಅಶೋಕ್, “ಮುಖ್ಯಮಂತ್ರಿಗಳು ಬದಲಾದರು, ಆರೋಗ್ಯ ಸಚಿವರು ಬದಲಾದರು. ಆದರೆ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ, ಅಸಮರ್ಥತೆ ಮತ್ತು ಜನವಿರೋಧಿ ಆಡಳಿತ ಮಾತ್ರ ಬದಲಾಗಿಲ್ಲ. ಇಂದು ಆರೋಗ್ಯ ಇಲಾಖೆಯೇ ಐಸಿಯುನಲ್ಲಿರುವಂತಾಗಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ಸರ್ಕಾರಿ…
ಭಾರತ–ಯುಕೆ ವ್ಯಾಪಾರ ಒಪ್ಪಂದ: ಉದ್ಯಮಗಳಿಗೆ ನೆರವಾಗಲು ದೇಶಾದ್ಯಂತ 1,000 ಸಲಹೆಗಾರರ ನಿಯೋಜನೆಗೆ ಕೇಂದ್ರ ನಿರ್ಧಾರ
ಲಂಡನ್: ಭಾರತ–ಯುನೈಟೆಡ್ ಕಿಂಗ್ಡಮ್ (ಯುಕೆ) ನಡುವಿನ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ (CETA) ಜುಲೈ 15ರಿಂದ ಜಾರಿಗೆ ಬರಲಿದ್ದು, ಇದರ ಲಾಭವನ್ನು ಉದ್ಯಮಗಳು ಪರಿಣಾಮಕಾರಿಯಾಗಿ ಪಡೆದುಕೊಳ್ಳಲು ದೇಶಾದ್ಯಂತ 1,000 ಸಲಹಾ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಘೋಷಿಸಿದ್ದಾರೆ. ಲಂಡನ್ನಲ್ಲಿ ನಡೆದ 10ನೇ ವಾರ್ಷಿಕ ಯುಕೆ–ಭಾರತ ವಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಫ್ತುದಾರರು ಮತ್ತು ಉದ್ಯಮಿಗಳಿಗೆ ಅಗತ್ಯ ಮಾಹಿತಿ ಹಾಗೂ ಮಾರ್ಗದರ್ಶನ ನೀಡಲು ಸರ್ಕಾರ ತನ್ನ ವ್ಯಾಪಾರ ಪೋರ್ಟಲ್ನ್ನೂ ನವೀಕರಿಸಲಿದೆ ಎಂದು ತಿಳಿಸಿದರು. ಸಿಇಟಿಎ ಒಪ್ಪಂದವನ್ನು ಭಾರತದ ಅತ್ಯಂತ ಸಮಗ್ರ ಮುಕ್ತ ವ್ಯಾಪಾರ ಒಪ್ಪಂದವೆಂದು ಬಣ್ಣಿಸಿದ ಗೋಯಲ್, ಇದರಿಂದ ಭಾರತ–ಯುಕೆ ನಡುವಿನ ದ್ವಿಪಕ್ಷೀಯ ವ್ಯಾಪಾರವು ವರ್ಷಕ್ಕೆ 25.5 ಬಿಲಿಯನ್ ಪೌಂಡ್ಗಳಷ್ಟು ಹೆಚ್ಚುವ ನಿರೀಕ್ಷೆಯಿದೆ ಎಂದು ಹೇಳಿದರು. ಭಾರತ–ಯುಕೆ ಸಂಬಂಧಗಳು ಕೇವಲ ವ್ಯಾಪಾರಕ್ಕೆ ಸೀಮಿತವಾಗದೆ, ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (AI),…
ಅಳಿವಿನಂಚಿನ ಪ್ರಭೇದಗಳ ಸಂರಕ್ಷಣೆಗೆ ಹೊಸ SOP ಬಿಡುಗಡೆ: ರಾಷ್ಟ್ರೀಯ ಜೀವವೈವಿಧ್ಯ ಪ್ರಾಧಿಕಾರ ಕ್ರಮ
ನವದೆಹಲಿ: ದೇಶದ ಜೀವವೈವಿಧ್ಯ ಸಂರಕ್ಷಣೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಜೀವವೈವಿಧ್ಯ ಪ್ರಾಧಿಕಾರ (NBA) ಅಳಿವಿನಂಚಿನಲ್ಲಿರುವ ಹಾಗೂ ಅಪಾಯದಲ್ಲಿರುವ ಪ್ರಭೇದಗಳ ಗುರುತಿಸುವಿಕೆ ಮತ್ತು ಸಂರಕ್ಷಣೆಗಾಗಿ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ (SOP) ಬಿಡುಗಡೆ ಮಾಡಿದೆ. ಜೈವಿಕ ವೈವಿಧ್ಯತೆ ಕಾಯ್ದೆ-2002ರ ಅಡಿಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವೈಜ್ಞಾನಿಕ ಆಧಾರದ ಮೇಲೆ ಅಪಾಯದಲ್ಲಿರುವ ಪ್ರಭೇದಗಳನ್ನು ಗುರುತಿಸಿ ಅಧಿಸೂಚನೆ ಹೊರಡಿಸಲು ಈ ಮಾರ್ಗಸೂಚಿ ನೆರವಾಗಲಿದೆ. ಹೊಸ SOP ಮೂಲಕ ಅಳಿವಿನ ಅಪಾಯ ಎದುರಿಸುತ್ತಿರುವ ಪ್ರಾಣಿ ಮತ್ತು ಸಸ್ಯ ಪ್ರಭೇದಗಳನ್ನು ಗುರುತಿಸಲು ಏಕರೂಪ, ಪಾರದರ್ಶಕ ಹಾಗೂ ವಿಜ್ಞಾನಾಧಾರಿತ ವ್ಯವಸ್ಥೆ ರೂಪಿಸುವ ಗುರಿ ಹೊಂದಲಾಗಿದೆ. ಜೊತೆಗೆ, ಅವುಗಳ ಸಂರಕ್ಷಣೆಗಾಗಿ ಅಗತ್ಯ ಕ್ರಮಗಳನ್ನು ಶಿಫಾರಸು ಮಾಡಲು ಸಹ ಇದು ನೆರವಾಗಲಿದೆ. ಭಾರತವು ವಿಶ್ವದ ಜೀವವೈವಿಧ್ಯ ಸಮೃದ್ಧ ರಾಷ್ಟ್ರಗಳಲ್ಲಿ ಒಂದಾಗಿದ್ದರೂ, ಆವಾಸಸ್ಥಾನ ನಷ್ಟ, ಅತಿಯಾದ ಶೋಷಣೆ, ಮಾಲಿನ್ಯ, ಆಕ್ರಮಣಕಾರಿ ಪ್ರಭೇದಗಳು ಹಾಗೂ ಹವಾಮಾನ ಬದಲಾವಣೆಯಿಂದ ಜೀವವೈವಿಧ್ಯಕ್ಕೆ ಗಂಭೀರ…
‘ಅಯೋಗ್ಯ 2’ ಯಶೋಗಾಥೆಗೆ ‘ಮುದ್ದು ಮುದ್ದು ಪುಟ್ಟಲಕ್ಷ್ಮಿ’ ಮುನ್ನುಡಿ!
‘ಅಯೋಗ್ಯ 2’ ಆಗಸ್ಟ್ 7ರಂದು ತೆರೆಗೆ ಬರಲು ಸಜ್ಜಾಗಿದೆ. ಭಾರೀ ನಿರೀಕ್ಷೆಹುಟ್ಟಿಸಿರುವ ಈ ಚಿತ್ರದ ಹಾಡು ಸಾಮಾಜಿಕ ಜಾಲತಾಣದಲ್ಲಿ ಸಕತ್ ಲೈಕ್ಸ್ ಗಿಟ್ಟಿಸಿಕೊಂಡಿದೆ. ಈ ಚಿತ್ರದಲ್ಲಿ ನೀನಾಸಂ ಸತೀಶ್ ಹಾಗೂ ರಚಿತಾ ರಾಮ್ ನಟಿಸಿದ್ದಾರೆ. ‘ಅಯೋಗ್ಯ’ ಸಿನಿಮಾ ಭರ್ಜರಿ ಯಶಸ್ಸು ಕಂಡಿತ್ತು. ‘ಅಯೋಗ್ಯ 2’ ಕೂಡಾ ಯಶೋಗಾಥೆ ಬರೆಯಲಿದೆ ಎಂದು ಚಿತ್ರ ವಿಸ್ವಾಸದಲ್ಲಿದೆ. ಇತ್ತೀಚೆಗೆ ಬಿಡುಗಡೆಯಾಗಿರುವ ಚಿತ್ರದ ‘ಮುದ್ದು ಮುದ್ದು ಪುಟ್ಟಲಕ್ಷ್ಮಿ’ ವಿಡಿಯೋ ಸಾಂಗ್ ನೋಡಿದ ಪ್ರೇಕ್ಷಕರು ಫಿದಾ ಆಗಿದ್ದಾರೆ. ಈ ಸಿನಿಮಾವನ್ನು ಮಹೇಶ್ ಅವರು ನಿರ್ದೇಶಿಸಿದ್ದಾರೆ
‘ಜನ ನಾಯಗನ್’ ನಿರ್ಮಾಪಕ ಕೆ. ವೆಂಕಟ್ ನಾರಾಯಣ್ಗೆ ಸಂಪುಟ ದರ್ಜೆ ಸ್ಥಾನಮಾನ
ಚೆನ್ನೈ: ನಟ ಜೋಸೆಫ್ ವಿಜಯ್ ಅಭಿನಯದ ‘ಜನ ನಾಯಗನ್’ ಚಿತ್ರದ ನಿರ್ಮಾಪಕ ಕೆ. ವೆಂಕಟ್ ನಾರಾಯಣ್ ಅವರನ್ನು ತಮಿಳುನಾಡು ಸರ್ಕಾರ ನವದೆಹಲಿಯ ವಿಶೇಷ ಪ್ರತಿನಿಧಿಯಾಗಿ ನೇಮಕ ಮಾಡಿದೆ. ಈ ಹುದ್ದೆಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿದೆ. ವಿಜಯ್ ಅವರ ಕೊನೆಯ ಚಿತ್ರ ಎನ್ನಲಾಗುತ್ತಿರುವ ‘ಜನ ನಾಯಗನ್’ ಇನ್ನೂ ಬಿಡುಗಡೆಯಾಗಿಲ್ಲ. ಚಿತ್ರಕ್ಕೆ ಬಂಡವಾಳ ಹೂಡಿರುವ ವೆಂಕಟ್ ನಾರಾಯಣ್ ಅವರಿಗೆ ನಷ್ಟದ ಪರಿಸ್ಥಿತಿ ಎದುರಾಗಿದೆ ಎಂಬ ಚರ್ಚೆಯ ನಡುವೆಯೇ ಈ ನೇಮಕ ನಡೆದಿದೆ. ಈ ಬೆಳವಣಿಗೆಗೆ ಸಂಬಂಧಿಸಿ ತಮಿಳು ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದ್ದು, ನೇಮಕಕ್ಕೂ ಸಿನಿಮಾಗೂ ಸಂಬಂಧವಿಲ್ಲ ಎಂದು ತಮಿಳಗ ವೆಟ್ರಿ ಕಳಗಂ ನಾಯಕರು ಸ್ಪಷ್ಟನೆ ನೀಡಿದ್ದಾರೆ. ವಿಜಯ್ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಲು ತೆರಳಿದ್ದ ಸಂದರ್ಭದಲ್ಲೂ ವೆಂಕಟ್ ನಾರಾಯಣ್ ಜೊತೆಗಿದ್ದರು. ಅವರ ಆಡಳಿತಾತ್ಮಕ ಅನುಭವ ಮತ್ತು ನಂಬಿಕೆಯ ಆಧಾರದ ಮೇಲೆ ಈ ಜವಾಬ್ದಾರಿ ನೀಡಲಾಗಿದೆ ಎಂದು…
‘Jana Nayagan’ producer K. Venkat Narayan appointed Tamil Nadu’s special representative in Delhi
Chennai: The Tamil Nadu government has appointed K. Venkat Narayan, producer of actor Vijay’s upcoming film Jana Nayagan, as the state’s special representative in New Delhi. The appointment carries cabinet-level status, according to reports. The move has triggered political discussions in Tamil Nadu, as it comes at a time when speculation is growing over the financial prospects of Jana Nayagan, which is yet to hit theatres. However, leaders of Tamilaga Vettri Kazhagam have clarified that the appointment is unrelated to the film. Venkat Narayan, who has invested in the project,…
ಮುತ್ತತ್ತಿ ದುರಂತ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ಕಾವೇರಿ ನದಿಯಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸಚಿವರ ಸೂಚನೆ
ಬೆಂಗಳೂರು: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಒಂದೇ ಕುಟುಂಬದ ಐವರು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನೆಗೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮಂಡ್ಯ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ. ಈ ಸಂಬಂಧ ಮಂಡ್ಯ ಜಿಲ್ಲಾಧಿಕಾರಿಗೆ ಸೂಚನೆ ನೀಡಿರುವ ಸಚಿವರು, ಕಾವೇರಿ ನದಿಯಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ‘ಸೇಫ್ ಜೋನ್’ ಬ್ಯಾರಿಕೇಡ್ಗಳನ್ನು ಅಳವಡಿಸಬೇಕು ಎಂದು ತಿಳಿಸಿದ್ದಾರೆ. ಜೊತೆಗೆ ಅಪಾಯಕಾರಿ ಪ್ರದೇಶಗಳಲ್ಲಿ ಜಾಗೃತಿ ಫಲಕಗಳನ್ನು ಅಳವಡಿಸಿ, ಪ್ರವಾಸಿಗರಿಗೆ ಮಾರ್ಗದರ್ಶನ ನೀಡಲು ಗೈಡ್ಗಳನ್ನು ನಿಯೋಜಿಸುವಂತೆ ಸೂಚಿಸಿದ್ದಾರೆ. ನದಿಯಲ್ಲಿ ನಿಗದಿತ ಸುರಕ್ಷಿತ ಸ್ಥಳಗಳನ್ನು ಹೊರತುಪಡಿಸಿ ಬೇರೆಡೆ ಈಜುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಮುತ್ತತ್ತಿಯಲ್ಲಿ ಇತ್ತೀಚೆಗೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಈ ಘಟನೆ ರಾಜ್ಯಾದ್ಯಂತ ಆಘಾತ ಮೂಡಿಸಿದ್ದು, ಪ್ರವಾಸಿ…
ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತ; ಮೂವರು ಸಾವು, ಆರು ಮಂದಿಗೆ ಗಾಯ
ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಶನಿವಾರ ಮುಂಜಾನೆ ಈ ಘಟನೆ ನಡೆದಿದ್ದು, ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದ ನಿವಾಸಿಗಳು ಓಮಿನಿ ವಾಹನದಲ್ಲಿ ಮಂತ್ರಾಲಯಕ್ಕೆ ತೆರಳುತ್ತಿದ್ದರು. ಈ ವೇಳೆ ಪಕ್ಕದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನ ನಿಯಂತ್ರಣ ತಪ್ಪಿ ಓಮಿನಿ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಓಮಿನಿ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ರಮೇಶ್ ಬಳ್ಳಾರಿ (45), ಕೆಂಚಮ್ಮ ಬಾಳೆಕಾಯಿ (35) ಹಾಗೂ ಅಮೃತಾ (25) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಆರು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.
