ಬೆಂಗಳೂರು: ಸಚಿವ ಬಸವರಾಜ ರಾಯರೆಡ್ಡಿ ಅವರ ಧಾರ್ಮಿಕ ಹೇಳಿಕೆಯನ್ನು ಖಂಡಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೂಡಲೇ ಮಧ್ಯಪ್ರವೇಶಿಸಿ ಸಚಿವರಿಂದ ಸಾರ್ವಜನಿಕ ಕ್ಷಮೆಯಾಚನೆ ಮಾಡಿಸಬೇಕು. ಇಲ್ಲವಾದಲ್ಲಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅಶೋಕ್, “ಸಿಎಂ ಡಿಕೆಶಿ ಅವರ 6ನೇ ಗ್ಯಾರಂಟಿ- ಹಿಂದೂಗಳಿಗೆ ‘ಸುನ್ನತ್ ಗ್ಯಾರಂಟಿ’!” ಎಂದು ವ್ಯಂಗ್ಯವಾಡಿದ್ದಾರೆ. ಸಚಿವ ಬಸವರಾಜ ರಾಯರೆಡ್ಡಿ ಅವರು “ಇಸ್ಲಾಂ ಧರ್ಮವೇ ಶ್ರೇಷ್ಠ, ನಾನು ಮಠಕ್ಕೆ ಹೋಗುವುದಿಲ್ಲ” ಎಂದು ಹೇಳಿರುವುದು ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಅಶೋಕ್ ಆರೋಪಿಸಿದ್ದಾರೆ. “ಧರ್ಮದ ವಿಚಾರದಲ್ಲಿ ಪ್ರತಿಯೊಬ್ಬರಿಗೂ ಅವರದೇ ಆದ ವೈಯಕ್ತಿಕ ನಂಬಿಕೆ ಇರಬಹುದು. ಆದರೆ ಜವಾಬ್ದಾರಿಯುತ ಸಚಿವ ಸ್ಥಾನದಲ್ಲಿರುವ ವ್ಯಕ್ತಿಯೊಬ್ಬರು ಕೋಟ್ಯಂತರ ಜನರ ಆರಾಧನೆ, ಮಠ-ಮಾನ್ಯಗಳು ಮತ್ತು ಸನಾತನ ಪರಂಪರೆಯ…
Category: ಪ್ರಮುಖ ಸುದ್ದಿ
ಸಾವಳಗಸಂಗದಲ್ಲಿ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
ವಿಜಯಪುರ : ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಸಾವಳಗಸಂಗದಲ್ಲಿ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಹೆಸರಿನಲ್ಲಿ ನಿರ್ಮಿಸಲಾಗಿರುವ ವೃಕ್ಷೋದ್ಯಾನವನ್ನು ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಲೋಕಾರ್ಪಣೆ ಮಾಡಿದರು. ಶ್ರೀ ಬಸಲಿಂಗ ಸ್ವಾಮೀಜಿ ಹಾಗೂ ಶ್ರೀ ಸಿದ್ದಲಿಂಗ ದೇವರು ತಾಳಿಕೋಟಿ ಅವರ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ರಾಮಲಿಂಗಾ ರೆಡ್ಡಿ, ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ‘ಪ್ರಕೃತಿಯಲ್ಲಿಯೇ ದೇವರನ್ನು ಕಾಣಬೇಕು’ ಎಂಬ ಸಂದೇಶ ಇಂದಿನ ಸಂದರ್ಭದಲ್ಲಿ ಅತ್ಯಂತ ಮಹತ್ವದ್ದಾಗಿದೆ. ಮರ-ಗಿಡಗಳನ್ನು ಬೆಳೆಸುವುದು ಕೇವಲ ಪರಿಸರ ಸಂರಕ್ಷಣೆಯಲ್ಲ; ಮುಂದಿನ ಪೀಳಿಗೆಯ ಬದುಕನ್ನು ಸುರಕ್ಷಿತಗೊಳಿಸುವ ಕಾರ್ಯವೂ ಆಗಿದೆ ಎಂದರು. ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಆಶಯದಂತೆ ಸಾವಳಗಸಂಗದ ಬರಡು ಗುಡ್ಡವನ್ನು ಹಸಿರು ಪ್ರದೇಶವನ್ನಾಗಿ ರೂಪಿಸುವ ಸಂಕಲ್ಪವನ್ನು ಶಾಸಕ ಯಶವಂತರಾಯಗೌಡ ಪಾಟೀಲರು ಕೈಗೊಂಡಿರುವುದು ಶ್ಲಾಘನೀಯ. ಅವರ ಜನಪರ ಕಾರ್ಯಗಳು ಸಜ್ಜನರಿಗೆ ಅಧಿಕಾರ ದೊರೆತರೆ ಸಮಾಜಕ್ಕೆ ಒಳಿತಾಗುತ್ತದೆ ಎಂಬುದಕ್ಕೆ ಸಾಕ್ಷಿಯಾಗಿವೆ…
ಅಲ್-ಹಿಂದ್ ಐಸಿಸ್ ಸಂಚು ಪ್ರಕರಣ: ಸೈಯದ್ ಫಸಿಯುರ್ ರೆಹಮಾನ್ಗೆ 7 ವರ್ಷ ಜೈಲು
ಬೆಂಗಳೂರು: ಅಲ್-ಹಿಂದ್ ಐಸಿಸ್ ಭಯೋತ್ಪಾದಕ ಸಂಚು ಪ್ರಕರಣದಲ್ಲಿ ಆರೋಪಿ ಸೈಯದ್ ಫಸಿಯುರ್ ರೆಹಮಾನ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವಿಶೇಷ ನ್ಯಾಯಾಲಯ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಜೊತೆಗೆ ₹48 ಸಾವಿರ ದಂಡವನ್ನೂ ವಿಧಿಸಿ ತೀರ್ಪು ನೀಡಿದೆ. ನಿಷೇಧಿತ ಐಸಿಸ್ ಸಂಘಟನೆಯ ಸಂಚಿನಲ್ಲಿ ಭಾಗಿಯಾಗಿದ್ದ ಆರೋಪ ರೆಹಮಾನ್ ವಿರುದ್ಧ ಸಾಬೀತಾಗಿದೆ ಎಂದು ಎನ್ಐಎ ತಿಳಿಸಿದೆ. ಅಲ್-ಹಿಂದ್ ಸದಸ್ಯರಿಗೆ ಕಾಡಿನಲ್ಲಿ ತರಬೇತಿ ಶಿಬಿರ ನಡೆಸಲು ಅಗತ್ಯವಿದ್ದ ಟೆಂಟ್ಗಳು ಹಾಗೂ ಚಾಕುಗಳನ್ನು ಡೆಕಾಥ್ಲಾನ್ ಶೋರೂಮ್ನಿಂದ ಖರೀದಿಸಲು ರೆಹಮಾನ್ ನೆರವಾಗಿದ್ದ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಸಂಚಿಗೆ ಸಂಬಂಧಿಸಿದ ಸಭೆಗಳಲ್ಲೂ ಅವರು ಭಾಗಿಯಾಗಿದ್ದರು ಎನ್ನಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಮೆಹಬೂಬ್ ಪಾಷಾ, ಬೆಂಗಳೂರಿನ ಗುರುಪ್ಪನಪಾಳ್ಯದಲ್ಲಿರುವ ನಿವಾಸದಲ್ಲಿ ಹಲವು ಸಭೆಗಳನ್ನು ನಡೆಸಿದ್ದ. ಈ ಸಭೆಗಳಲ್ಲಿ ಕೋಮುಗಲಭೆ ಸೃಷ್ಟಿಸುವುದು, ನಿರ್ದಿಷ್ಟ ವ್ಯಕ್ತಿಗಳ ಹತ್ಯೆ ನಡೆಸುವುದು ಹಾಗೂ ಐಸಿಸ್ನ ಸಿದ್ಧಾಂತವನ್ನು ಮುಂದುವರಿಸುವ ಕುರಿತು ಚರ್ಚೆ…
ಕಾರವಾರ ಕಡಲಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ; 24 ಮೀನುಗಾರರ ರಕ್ಷಣೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಕರಾವಳಿಯ ಅಂಜದೀವ್ ದ್ವೀಪದ ಸಮೀಪ ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ವೊಂದು ಮುಳುಗಿದ ಘಟನೆ ನಡೆದಿದೆ. ಬೋಟ್ನಲ್ಲಿದ್ದ 24 ಮಂದಿ ಮೀನುಗಾರರನ್ನು ಸಕಾಲಿಕ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರಕ್ಷಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಳಂಬಾರ ಮೂಲದ ನೀಲಕಂಠ ಖಾರ್ವಿ ಅವರಿಗೆ ಸೇರಿದ ‘ಶ್ರೀ ಮಾತಾ’ ಹೆಸರಿನ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಅಪಾಯಕ್ಕೆ ಸಿಲುಕಿದ್ದು, ಬಳಿಕ ಸಂಪೂರ್ಣವಾಗಿ ಮುಳುಗಿದೆ ಎನ್ನಲಾಗಿದೆ. ಬೋಟ್ ಅಪಾಯದಲ್ಲಿರುವುದನ್ನು ಸಮೀಪದಲ್ಲಿ ಸಂಚರಿಸುತ್ತಿದ್ದ ಐದಾರು ಮೀನುಗಾರಿಕಾ ಬೋಟ್ಗಳಲ್ಲಿದ್ದ ಮೀನುಗಾರರು ಗಮನಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಬೋಟ್ನಲ್ಲಿದ್ದ ಎಲ್ಲ 24 ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ
ಮೈಸೂರು: ನಗರದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಕಿರಿಯ ಪೀಠಾಧಿಪತಿ ಶ್ರೀ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮಿಗಳ 23ನೇ ಚಾತುರ್ಮಾಸ್ಯ ವೈಭವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದೆ. ಕಾರ್ಯಕ್ರಮದ ಅಂಗವಾಗಿ ಶ್ರೀಗಳು ಗೋಪೂಜೆ ನೆರವೇರಿಸಿದರು. ಬಳಿಕ ಕಡಪ ಆಶ್ರಮದ ಭಜನಾ ತಂಡದಿಂದ ಭಜನಾ ಸೇವೆ ನಡೆಯಿತು. ಇದೇ ವೇಳೆ ಶ್ರೀಚಕ್ರ ಪೂಜೆಯನ್ನು ಶ್ರೀಗಳು ನೆರವೇರಿಸಿದರು. ನಂತರ ಮೈಸೂರಿನ ಸುತ್ತೂರು ಮಠದಲ್ಲಿ ನಡೆದ ಡಾ. ಶ್ರೀ ಶಿವರಾಜೇಂದ್ರ ಮಹಾಸ್ವಾಮೀಜಿಯವರ 111ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಶ್ರೀ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ, ಮಾಜಿ ಮುಖ್ಯಮಂತ್ರಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು. ಸಂಜೆ ಪೌಂಡರೀಕಾ ಮಂಟಪದಲ್ಲಿ ನಡೆದ ಧರ್ಮಸಭೆಯಲ್ಲಿ ಶ್ರೀಗಳು ವಿಷ್ಣುಪುರಾಣ ಕಥಾ ಮಾಲಿಕೆ ಕುರಿತು ಪ್ರವಚನ ನೀಡಿದರು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಪ್ರವಚನ ಆಲಿಸಿ ಭಕ್ತಿ…
ಶುದ್ಧೀಕರಣದ ಕುರಿತು ಹೇಳಿಕೆ; ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್
ನವದೆಹಲಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಉತ್ತರಾಖಂಡದ ಹಲ್ದ್ವಾನಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಶುದ್ಧೀಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗಳ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಅಮಿತ್ ಕುಮಾರ್ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು, ರಾಹುಲ್ ಗಾಂಧಿಯವರ ಹೇಳಿಕೆಗಳು ಪರಿಶಿಷ್ಟ ಜಾತಿ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ಅವರು ಆರೋಪಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ್ದ ಸ್ಥಳವನ್ನು ಬಿಜೆಪಿ ಸದಸ್ಯರು ಶುದ್ಧೀಕರಣ ಮಾಡಿದ್ದ ವಿಚಾರವನ್ನು ಖಂಡಿಸಿ ರಾಹುಲ್ ಗಾಂಧಿ ಮಾತನಾಡಿದ್ದರು. ಈ ಹೇಳಿಕೆಗಳೇ ಇದೀಗ ಕಾನೂನು ಕ್ರಮಕ್ಕೆ ಕಾರಣವಾಗಿವೆ ಎಂದು ತಿಳಿದುಬಂದಿದೆ. ದೂರುದಾರರ ಪ್ರಕಾರ, ಆಗಸ್ಟ್ 8ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ನ ‘ವಿಜಯ್ ಶಂಖನಾದ’ ರ್ಯಾಲಿ ನಡೆದಿತ್ತು. ರ್ಯಾಲಿ ಬಳಿಕ ಮೈದಾನದಲ್ಲಿ…
ಅರುಣಾಚಲದಲ್ಲಿ ಉಗ್ರರ ಶರಣಾಗತಿ ಹೆಚ್ಚಳ; ಆದರೂ, ಗಡಿಯಲ್ಲಿ ದಂಗೆ ನಿಯಂತ್ರಣಕ್ಕೆ ಮತ್ತಷ್ಟು ಕ್ರಮ ಅಗತ್ಯ
ಇಟಾನಗರ: ಅರುಣಾಚಲ ಪ್ರದೇಶದಲ್ಲಿ 2026ರಲ್ಲಿ ಉಗ್ರಗಾಮಿ ಸಂಘಟನೆಗಳ ಸದಸ್ಯರ ಶರಣಾಗತಿ ಗಣನೀಯವಾಗಿ ಹೆಚ್ಚಾಗಿದ್ದು, ತಿರಪ್–ಚಾಂಗ್ಲಾಂಗ್–ಲಾಂಗ್ಡಿಂಗ್ (TCL) ಪ್ರದೇಶದಲ್ಲಿ ಉಗ್ರ ಜಾಲಗಳ ಮೇಲೆ ಭದ್ರತಾ ಪಡೆಗಳ ಒತ್ತಡ ಹೆಚ್ಚುತ್ತಿರುವ ಸೂಚನೆ ನೀಡಿದೆ. ಆದರೆ ಭಾರತ–ಮ್ಯಾನ್ಮಾರ್ ಗಡಿಯಲ್ಲಿ ವಿರಳ ದಾಳಿಗಳು, ಸುಲಿಗೆ ಹಾಗೂ ಉಗ್ರಗಾಮಿ ಸಂಘಟನೆಗಳ ಸಕ್ರಿಯ ಉಪಸ್ಥಿತಿ ಇನ್ನೂ ಭದ್ರತಾ ಸವಾಲಾಗಿ ಉಳಿದಿದೆ. ಆಗಸ್ಟ್ 7ರಂದು ಲಾಂಗ್ಡಿಂಗ್ ಜಿಲ್ಲೆಯ ವಕ್ಕಾದಲ್ಲಿ ULFA-I ಸಂಘಟನೆಯ ನಾಲ್ವರು ಕಾರ್ಯಕರ್ತರು ಅಸ್ಸಾಂ ರೈಫಲ್ಸ್ ಮತ್ತು ಲಾಂಗ್ಡಿಂಗ್ ಪೊಲೀಸರ ಮುಂದೆ ಶರಣಾದರು. ಅಜಯ್ ಅಸೋಮ್, ಬಿಪ್ಲಬ್ ಅಸೋಮ್, ಮೋನಿ ಅಸೋಮ್ ಹಾಗೂ ಬೋಲಿನ್ ಅಸೋಮ್ ಶರಣಾದವರಾಗಿದ್ದು, ಅವರಿಂದ ನಾಲ್ಕು ಪಿಸ್ತೂಲ್ಗಳು ಮತ್ತು 17 ಸುತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದಕ್ಕೂ ಮುನ್ನ ಜುಲೈ 17ರಂದು ತಿರಪ್ನಲ್ಲಿ NSCN-R ಮತ್ತು ಜುಲೈ 11ರಂದು ಲಾಂಗ್ಡಿಂಗ್ನಲ್ಲಿ NSCN-K ಸಂಘಟನೆಯ ತಲಾ ಒಬ್ಬ ಕಾರ್ಯಕರ್ತ ಶರಣಾಗಿದ್ದರು. TCL ಪ್ರದೇಶದಲ್ಲಿ NSCN-K-NS,…
‘ಎರಡು ಮುಖಗಳು, ಒಂದೇ ಸಂದೇಶವೇ?’; RSS ಬಗ್ಗೆ ಬಿ.ಕೆ. ಹರಿಪ್ರಸಾದ್ ಟೀಕಾಸ್ತ್ರ
ಬೆಂಗಳೂರು: ‘‘ಎರಡು ಮುಖಗಳು, ಒಂದೇ ಸಂದೇಶವೇ?’’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಆರ್ಎಸ್ಎಸ್ ನಾಯಕರನ್ನು ಪ್ರಶ್ನಿಸಿದ್ದಾರೆ. ನ್ಯೂಯಾರ್ಕ್ನಲ್ಲಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ವೈವಿಧ್ಯತೆಯನ್ನು ‘‘ನಮ್ಮ ಅಂತರಂಗದ ಏಕತೆಯ ಅಲಂಕಾರ’’ ಎಂದು ಬಣ್ಣಿಸಿ, ಅದನ್ನು ರಕ್ಷಿಸಬೇಕು ಎಂದು ಹೇಳಿರುವುದನ್ನು ಉಲ್ಲೇಖಿಸಿದ ಹರಿಪ್ರಸಾದ್, ವಿದೇಶದ ವೇದಿಕೆಯಲ್ಲಿ ಹೇಳುವ ಮಾತುಗಳು ಭಾರತದಲ್ಲಿಯೂ ಕಾರ್ಯರೂಪಕ್ಕೆ ಬರಬೇಕು ಎಂದು ಹೇಳಿದ್ದಾರೆ. ‘ನ್ಯೂಯಾರ್ಕ್ನಲ್ಲಿ ಏಕತೆ, ಭಾರತದಲ್ಲಿ ವಿಭಜನೆಯ ರಾಜಕೀಯ?’ ದಶಕಗಳಿಂದ ಆರ್ಎಸ್ಎಸ್ ಹಾಗೂ ಅದರೊಂದಿಗೆ ಸಂಬಂಧ ಹೊಂದಿರುವ ಸಂಘ ಪರಿವಾರದ ವಿವಿಧ ಸಂಘಟನೆಗಳು ಕೋಮು ಧ್ರುವೀಕರಣಕ್ಕೆ ಉತ್ತೇಜನ ನೀಡುತ್ತಿವೆ. ಇದರಿಂದ ಭಾರತದ ಬಹುತ್ವ ಮತ್ತು ವೈವಿಧ್ಯಮಯ ಸಾಮಾಜಿಕ ಸ್ವರೂಪ ದುರ್ಬಲಗೊಳ್ಳುತ್ತಿದೆ ಎಂದು ಹರಿಪ್ರಸಾದ್ ಆರೋಪಿಸಿದ್ದಾರೆ. ‘‘ವಿದೇಶದಲ್ಲಿ ವೈವಿಧ್ಯತೆಯನ್ನು ರಕ್ಷಿಸುವ ಬಗ್ಗೆ ಮಾತನಾಡುವಾಗ ಸಹಜವಾಗಿಯೇ ಪ್ರಶ್ನೆ ಮೂಡುತ್ತದೆ. ಇದೇ ತತ್ವವನ್ನು ಭಾರತದಲ್ಲಿ ಏಕೆ ಅನುಸರಿಸಬಾರದು? ನ್ಯೂಯಾರ್ಕ್ನಲ್ಲಿ…
ನೇಪಾಳದಲ್ಲಿ ಸಿಲುಕಿದ್ದ 54 ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ; ಡಿಕೆಶಿ
ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಹಠಾತ್ ಪ್ರವಾಹ ಮತ್ತು ಭೂಕುಸಿತದ ಹಿನ್ನೆಲೆಯಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣಾ ಕಾರ್ಯಾಚರಣೆಯ ಪ್ರಗತಿ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಹಿತಿ ಪಡೆದರು. ನವದೆಹಲಿಯ ಕರ್ನಾಟಕ ಭವನದಲ್ಲಿರುವ ನಿವಾಸಿ ಆಯುಕ್ತರಿಂದ ರಕ್ಷಣಾ ಕಾರ್ಯಾಚರಣೆಯ ಕುರಿತು ಸಮಗ್ರ ಮಾಹಿತಿ ಪಡೆದ ಅವರು, ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ರಾಜ್ಯ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ. ಈಗಾಗಲೇ 54 ಮಂದಿ ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ್ದಾರೆ ಎಂದು ಶಿವಕುಮಾರ್ ಮಾಹಿತಿ ನೀಡಿದ್ದಾರೆ. ‘ಕುಟುಂಬಸ್ಥರು ಆತಂಕಪಡಬೇಡಿ’ ನೇಪಾಳದಲ್ಲಿ ಸಿಲುಕಿರುವವರ ಕುಟುಂಬಸ್ಥರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಸರ್ಕಾರ ಸಂತ್ರಸ್ತರ ಕುಟುಂಬಗಳೊಂದಿಗೆ ನಿಂತಿದ್ದು, ಕನ್ನಡಿಗರ ಸುರಕ್ಷಿತ ವಾಪಸಾತಿಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಮುಂದುವರಿಸಲಿದೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ.
‘ಕೆಪಿಎಸ್ಸಿ ಅಕ್ರಮದ ಜಾತಕ ಜಾಲಾಡಿದರೆ ಕುಮಾರಸ್ವಾಮಿ ಕುಂಡಲಿಯೇ ಕಾಣುತ್ತದೆ’: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಕೆಪಿಎಸ್ಸಿ ನೇಮಕಾತಿ ಅಕ್ರಮದ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ಕೆಪಿಎಸ್ಸಿ ವಿಚಾರದಲ್ಲಿ ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳಿಗೆ ಕುಮಾರಸ್ವಾಮಿ ಅವರು ತಾರ್ಕಿಕ ಉತ್ತರ ನೀಡುವ ಬದಲು ಪತ್ರಿಕಾಗೋಷ್ಠಿ ನಡೆಸಿ ಪಲಾಯನ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ. 2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಯಲ್ಲಿ ವ್ಯಾಪಕ ಅಕ್ರಮ ನಡೆದಿರುವುದಾಗಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದರೂ, ಅಂದಿನ ಮುಖ್ಯಮಂತ್ರಿ ಅಭ್ಯರ್ಥಿಗಳನ್ನು ನೇಮಕ ಮಾಡುವಂತೆ ದೇವೇಗೌಡ ಮತ್ತು ಕುಮಾರಸ್ವಾಮಿ ಶಿಫಾರಸು ಪತ್ರ ನೀಡಿದ್ದರು ಎಂದು ಖರ್ಗೆ ಆರೋಪಿಸಿದ್ದಾರೆ. ‘‘ಅಕ್ರಮದ ಆರೋಪಗಳಿದ್ದ ಆಯ್ಕೆಗೆ ಶಿಫಾರಸು ಮಾಡುವ ಹಿಂದೆ ಕುಮಾರಸ್ವಾಮಿ ಅವರ ಹಿತಾಸಕ್ತಿ ಏನಿತ್ತು? ನ್ಯಾಯಾಲಯವೇ ಅಕ್ರಮವನ್ನು ಗುರುತಿಸಿದ್ದರೂ ಕ್ಲೀನ್ಚಿಟ್ ನೀಡಿ ಶಿಫಾರಸು ಮಾಡಿದ್ದೇಕೆ?’’ ಎಂದು ಪ್ರಶ್ನಿಸಿದ್ದಾರೆ.…
