ಲಕ್ನೋ ವಿರುದ್ಧವೂ ಸೋಲು: ಆದರೂ ಪಟ್ಟಿಯಲ್ಲಿ 3 ನೇ ಸ್ಥಾನ ಉಳಿಸಿಕೊಂಡ RCB

ಲಕ್ನೋ: ಐಪಿಎಲ್ 2026ರ 50ನೇ ಲೀಗ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 9 ರನ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಎಕಾನಾ ಕ್ರೀಡಾಂಗಣದಲ್ಲಿ ಮಳೆ ವ್ಯತ್ಯಯದ ಕಾರಣ ಪಂದ್ಯವನ್ನು ತಲಾ 19 ಓವರ್‌ಗಳಿಗೆ ನಿಗದಿಪಡಿಸಲಾಗಿತ್ತು. ಆ ಹಿನ್ನೆಲೆಯಲ್ಲಿ ಲಕ್ನೋ ಮೊದಲು ಬ್ಯಾಟಿಂಗ್ ಮಾಡಿ 3 ವಿಕೆಟ್ ನಷ್ಟಕ್ಕೆ 209 ರನ್ ಬೃಹತ್ ಮೊತ್ತ ಕಟ್ಟಿತು. ಇದಕ್ಕೆ ಪ್ರತಿಕ್ರಿಯಿಸಿದ ಆರ್‌ಸಿಬಿ 203 ರನ್‌ಗಳಷ್ಟೇ ಸಾದ್ಯಮಾಡಿ ಸೋಲು ಕಂಡಿತು. ಲಕ್ನೋ ಪರ ಮಿಚೆಲ್ ಮಾರ್ಶ್ ಅಬ್ಬರದ ಶತಕ ಬಾರಿಸಿದರು. ಕೇವಲ 56 ಎಸೆತಗಳಲ್ಲಿ 9 ಬೌಂಡರಿ ಹಾಗೂ 9 ಸಿಕ್ಸ್‌ಗಳ ನೆರವಿನಿಂದ 111 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ನಿಕೋಲಸ್ ಪೂರನ್ 38 ರನ್ ಬೆಂಬಲ ನೀಡಿದರು. ಕೊನೆಯ ಓವರಿಗಿಂತಲೂ ಮುಂದೆ ಒತ್ತಡವನ್ನು ಹೆಚ್ಚಿಸಿದ ಲಕ್ನೋ ಬ್ಯಾಟ್ಸ್‌ಮನ್‌ಗಳ ಪರಿಣಾಮವಾಗಿ ಎಲ್ಎಸ್ಜಿಯ ಮೊತ್ತ 200ರ…

ಕಿತ್ತೂರಿನಲ್ಲಿ ನೂತನ ಬಸ್ ಘಟಕ; ಚೆನ್ನಮ್ಮನ ನಾಡಿನ ಜನತೆಗೆ ವಾಯುವ್ಯ ಸಾರಿಗೆಯಿಂದ ಮತ್ತಷ್ಟು ಸೌಲಭ್ಯ

ಬೆಳಗಾವಿ: ಚನ್ನಮ್ಮನ ಕಿತ್ತೂರಿನಲ್ಲಿ ನೂತನ ಬಸ್ ಘಟಕವನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ (Sri Ramalinga Reddy) ಅವರಿಂದ ಉದ್ಘಾಟಿಸಲಾಯಿತು. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿ ನಿರ್ಮಿಸಲಾದ ಈ ಬಸ್ ಘಟಕ, ಬಸ್ ನಿಲ್ದಾಣ ಮತ್ತು ಹೊಸ ಬಸ್ಸುಗಳ ಸೇರ್ಪಡೆ ಮೂಲಕ ಸಮಗ್ರ ಸಾರಿಗೆ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆ ಇಟ್ಟಿದೆ. 5.27 ಕೋಟಿ ರುಪಾಯಿ ವೆಚ್ಚದಲ್ಲಿ 4 ಎಕರೆ ವಿಸ್ತೀರ್ಣದಲ್ಲಿ ನಿರ್ಮಿತವಾದ ಈ ಘಟಕದಲ್ಲಿ ಪ್ರಸ್ತುತ 15 ವಾಹನಗಳು ಕಾರ್ಯಾಚರಣೆಯಲ್ಲಿದ್ದು, 15 ವೇಗದೂತ ಅನುಸೂಚಿಗಳು ಸಂಚಲನಗೊಳ್ಳುತ್ತಿವೆ. ಘಟಕದ ವ್ಯಾಪ್ತಿಯಲ್ಲೇ ಒಂದು ಬಸ್ ನಿಲ್ದಾಣವನ್ನೂ ಕೂಡ ನಿರ್ಮಿಸಲಾಗಿದೆ. ಇದೇ ವೇಳೆ, ಹುಬ್ಬಳ್ಳಿ ಕೇಂದ್ರ ಬಸ್ ನಿಲ್ದಾಣವನ್ನು ಡಲ್ಟ್ ಅನುದಾನದೊಂದಿಗೆ ರೂ. 23.48 ಕೋಟಿಗೆ ಮೇಲ್ದರ್ಜೆಗೇರಿಸಲಾಗಿದ್ದು, ಬಾಗಲಕೋಟೆ ನವನಗರದಲ್ಲಿ ರೂ. 6.56 ಕೋಟಿ ವೆಚ್ಚದಲ್ಲಿ 5 ಎಕರೆ ಪ್ರದೇಶದಲ್ಲಿ ನೂತನ ಬಸ್ ಘಟಕ ನಿರ್ಮಿಸಲಾಗಿದೆ.…

ವಿಕಲಚೇತನರಿಗೆ ಸಮಗ್ರ ಉದ್ಯೋಗ, ಕೌಶಲ್ಯ ವೇದಿಕೆ ಕಲ್ಪಿಸುವ “ಆದಿದ್ವಾರ” ಅಪ್ಲಿಕೇಶನ್ ಬಿಡುಗಡೆ

ಬೆಂಗಳೂರು: ವಿಕಲಚೇತನರಿಗೆ ಉದ್ಯೋಗ ಅವಕಾಶ ಮತ್ತು ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಲು ಅವಕಾಶ ಒದಗಿಸುವ “ಆದಿದ್ವಾರ” ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಾಗಿದೆ. ಅಸಿಸ್ಟೆಕ್ ಫೌಂಡೇಶನ್ (ಎಟಿಎಫ್) ಸಹಯೋಗದೊಂದಿಗೆ ವಿಕಾಸಸೌಧದಲ್ಲಿ ನಡೆದ ಸಮಾರಂಭದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಅವರು ಅಪ್ಲಿಕೇಷನ್‌ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಸಚಿವರು, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಅಂಗವಿಕಲರಿಗೆ (ಪಿಡಬ್ಲ್ಯೂಡಿಗಳು) ವಿಶೇಷ ಉದ್ಯೋಗ ಮೇಳವನ್ನು ಆಗಸ್ಟ್ 2026 ರಲ್ಲಿ ನಡೆಸಲಾಗುವುದು ಎಂದು ಘೋಷಿಸಿದರು. “ವಿಕಲಚೇತನರು ಯಾರಿಗೂ ಕಡಿಮೆ ಇಲ್ಲ. ಅವರಿಗೆ ವಿಶೇಷ ಪ್ರತಿಭೆ ಇರುತ್ತದೆ. ಕಾರ್ಪೊರೇಟ್‌ ಸಂಸ್ಥೆಗಳು ನೇಮಕಾತಿಯ ಸಮಯದಲ್ಲಿ ಅವರಿಗೆ ಸಮಾನ ಅವಕಾಶ ಮತ್ತು ಚಿಕಿತ್ಸೆಯನ್ನು ನೀಡಬೇಕು” ಎಂದು ಡಾ. ಪಾಟೀಲ್ ಹೇಳಿದರು. ಆದಿದ್ವಾರ ವೇದಿಕೆಯು ಉದ್ಯೋಗಾವಕಾಶಗಳು, ಇಂಟರ್ನ್‌ಶಿಪ್‌ಗಳು, ಕೌಶಲ್ಯ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳಿಗೆ ವೇದಿಕೆ ಕಲ್ಪಿಸುತ್ತದೆ. ಉದ್ಯೋಗದಾತರು ಸಮಗ್ರ…

ತಮಿಳುನಾಡಿನಲ್ಲಿ ಟಿವಿಕೆ ಸರ್ಕಾರ ರಚನೆ ಹಕ್ಕು ತಡೆಯುವ ರಾಜ್ಯಪಾಲರ ನಡೆ ಸರಿಯಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು: ವಿಜಯ್ ಅವರಿಗೆ ಸರ್ಕಾರ ರಚನೆ ಮಾಡಿ ಬಹುಮತ ಸಾಬೀತುಪಡಿಸುವುದನ್ನು ತಡೆಯಲು ತಮಿಳುನಾಡಿನ ಗೌರವಾನ್ವಿತ ರಾಜ್ಯಪಾಲರಿಗೆ ಯಾವುದೇ ರೀತಿಯ ಅಧಿಕಾರವಿಲ್ಲ. ರಾಜ್ಯಪಾಲರ ನಡೆ ಸರಿಯಲ್ಲ ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿರುವ ಶಿವಕುಮಾರ್, ಟಿವಿಕೆ ಪಕ್ಷಕ್ಕೆ ತಮಿಳುನಾಡು ರಾಜ್ಯಪಾಲರು ಬಹುಮತ ಸಾಬೀತಿಗೆ ಅವಕಾಶ ನೀಡದೇ ಇರುವ ಬಗ್ಗೆ ಕೇಳಿದಾಗ, “ರಾಜ್ಯಪಾಲರು ಸರ್ಕಾರ ರಚನೆಗೆ ಅವಕಾಶ ನೀಡಬೇಕು. ಕರ್ನಾಟಕದಲ್ಲಿ ಯಡಿಯೂರಪ್ಪ ಅವರಿಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ಹೆಚ್ಚು ಸ್ಥಾನ ಗಳಿಸಿದ ಪಕ್ಷಗಳಿಗೆ ಸರ್ಕಾರ ರಚಿಸಲು ಈ ಹಿಂದೆಯೂ ಅನುಮತಿ ನೀಡಲಾಗಿತ್ತು.‌ ರಾಷ್ಟ್ರಪತಿಗಳಾಗಿದ್ದ ನಾರಾಯಣನ್, ಅಬ್ದುಲ್ ಕಲಾಂ ಅವರೂ ಈ ರೀತಿ ಮಾಡಿದ್ದರು. ವಾಜಪೇಯಿ ಅವರಿಗೂ ಸಹ ಇದೇ ರೀತಿ ಸರ್ಕಾರ ರಚಿಸಲು ಅನುಮತಿ ನೀಡಿ ಸದನದಲ್ಲಿ ಬಹುಮತ ಸಾಬೀತಿಗೆ ಅವಕಾಶ ನೀಡಲಾಗಿತ್ತು. ಆದರೆ ಈಗ ಟಿವಿಕೆಗೆ ಅವಕಾಶ ನೀಡದಿರುವುದು ತಪ್ಪು” ಎಂದರು. “ಮೊದಲು ಬಹುಮತ ಸಾಬೀತಿಗೆ…

ಮತ್ತೆ ಶಾಸಕರಾಗಿ ಡಿ.ಎನ್. ಜೀವರಾಜ್ ಪಯಣ ಶುರು

ಬೆಂಗಳೂರು: ಅಂಚೆ ಮತಗಳ ಮರುಎಣಿಕೆಯಲ್ಲಿ ರೋಚಕ ಗೆಲುವು ಸಾಧಿಸಿದ್ದ ಬಿಜೆಪಿ ನಾಯಕ ಡಿ.ಎನ್. ಜೀವರಾಜ್ (D. N. Jeevaraj) ಅವರು ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬುಧವಾರ ಮಧ್ಯಾಹ್ನ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಭಾಧ್ಯಕ್ಷ ಯು.ಟಿ. ಖಾದರ್ (U.T. Khader) ಅವರು ಪ್ರಮಾಣ ವಚನ ಬೋಧಿಸಿದರು. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R. Ashoka) ಹಾಗೂ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಉಪಸ್ಥಿತರಿದ್ದರು.

ಶೃಂಗೇರಿ ವಿಧಾನಸಭಾ ಕ್ಷೇತ್ರದ ಫಲಿತಾಂಶದ ಪ್ರತಿಧ್ವನಿ; ಕಾಂಗ್ರೆಸ್’ನಿಂದ ಕಾನೂನು ಸಮರ ಘೋಷಣೆ

ಮೈಸೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಫಲಿತಾಂಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆಯಲ್ಲಿ ಬಿಜೆಪಿ ಕ್ರಿಮಿನಲ್ ಪಿತೂರಿಯಲ್ಲಿ ತೊಡಗಿದೆ ಎಂದು ಆರೋಪಿಸಿದರು. ರಾಜೇಗೌಡ ಅವರ ಪರವಾಗಿ ಬಿದ್ದಿದ್ದ 255 ಸಿಂಧು ಮತಗಳನ್ನು ಅಮಾನ್ಯಗೊಳಿಸಲಾಗಿದೆ. ಮತ ಎಣಿಕೆಯ ಸಮಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಬಿಜೆಪಿ ಸದಸ್ಯರು ತಮ್ಮ ಸಿಬ್ಬಂದಿಯ ಮೂಲಕ ಮತಪತ್ರಗಳನ್ನು ತಿರುಚಿರುವುದು ಕ್ರಿಮಿನಲ್ ಪಿತೂರಿಯ ಭಾಗವಾಗಿದೆ. ಆದ್ದರಿಂದ ಶೃಂಗೇರಿ ಕ್ಷೇತ್ರದ ಫಲಿತಾಂಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದು ಹೇಳಿದರು. ಇದೇ ವೇಳೆ ರೈಲ್ವೆ ಇಲಾಖೆಯ ನೇಮಕಾತಿ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ನಡೆಸುವ ಪರೀಕ್ಷೆಗಳಲ್ಲಿ ಕನ್ನಡಿಗರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದರು. ರೈಲ್ವೆ ಇಲಾಖೆಯ ಹುದ್ದೆಗಳಿಗೆ ಕನ್ನಡಿಗರನ್ನು ಬದಿಗಿಡಲಾಗುತ್ತಿದ್ದು, ಇದು ಕನ್ನಡಿಗರ ಬಗ್ಗೆ ಕೇಂದ್ರ ಸರ್ಕಾರದ ನಿಲುವನ್ನು ತೋರಿಸುತ್ತದೆ ಎಂದು…

ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ

​ಕೋಲ್ಕತ್ತಾ: ರಾಜಕೀಯ ಅಖಾಡದಲ್ಲಿ ಪ್ರತಿಯೊಂದು ಸಣ್ಣ ನಡೆಯೂ ಒಂದು ದೊಡ್ಡ ಸಂದೇಶವನ್ನು ಸಾರುತ್ತದೆ. ಇತ್ತೀಚೆಗೆ ಪಶ್ಚಿಮ ಬಂಗಾಳದ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಬೀದಿ ಬದಿಯ ವ್ಯಾಪಾರಿಯಿಂದ ಬಂಗಾಳದ ಜನಪ್ರಿಯ ಲಘು ಆಹಾರ ‘ಝಲ್ ಮುರಿ’ (Jhalmuri) ಖರೀದಿಸಿ ಸವಿದ ಘಟನೆ ಕೇವಲ ಒಂದು ಸಾಮಾನ್ಯ ದೃಶ್ಯವಾಗಿರದೆ, ಆಳವಾದ ರಾಜಕೀಯ ಮತ್ತು ಸಾಂಸ್ಕೃತಿಕ ಅರ್ಥವನ್ನು ಒಳಗೊಂಡಿದೆ. ​ಝಲ್ ಮುರಿ: ಬಂಗಾಳದ ಸಾಮಾನ್ಯ ಜನರ ಸಂಕೇತ ​ಪಶ್ಚಿಮ ಬಂಗಾಳದ ಸಾರ್ವಜನಿಕ ಜೀವನದಲ್ಲಿ ಝಲ್ ಮುರಿ ಎಂಬುದು ಅವಿಭಾಜ್ಯ ಅಂಗ. ರೈಲ್ವೆ ನಿಲ್ದಾಣಗಳಿಂದ ಹಿಡಿದು ಕಾಲೇಜುಗಳವರೆಗೆ, ಮಾರುಕಟ್ಟೆಗಳಿಂದ ಹಿಡಿದು ರಾಜಕೀಯ ರ್ಯಾಲಿಗಳವರೆಗೆ ಇದು ಎಲ್ಲೆಡೆ ಕಂಡುಬರುತ್ತದೆ. ಬೀದಿಗಳಲ್ಲಿ ಮತ್ತು ಜನರ ನಡುವೆ ರಾಜಕೀಯ ರೂಪಗೊಳ್ಳುವ ಇಂತಹ ರಾಜ್ಯದಲ್ಲಿ, ಪ್ರಧಾನಿಯವರು ಈ ಆಹಾರದೊಂದಿಗೆ ಗುರುತಿಸಿಕೊಂಡಿರುವುದು ಸಾಮಾನ್ಯ ಜನರೊಂದಿಗೆ ತಮಗಿರುವ ನೇರ ಸಂಪರ್ಕವನ್ನು ಸಾಬೀತುಪಡಿಸುತ್ತದೆ. ​ಸರಳತೆ ಮತ್ತು ತಳಮಟ್ಟದ ನಾಯಕತ್ವ…

ಟಿವಿಕೆ ಸರ್ಕಾರ ರಚನೆಗೆ ಕಾಂಗ್ರೆಸ್ ಬೆಂಬಲ; ಅಂತಿಮ ತೀರ್ಮಾನ ರಾಜ್ಯ ಘಟಕಕ್ಕೆ

ಚೆನ್ನೈ: ನಟ-ರಾಜಕಾರಣಿ ವಿಜಯ್ (Vijay) ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK – Tamilaga Vetri Kazhagam) ಸರ್ಕಾರ ರಚನೆಗೆ ಕಾಂಗ್ರೆಸ್ ಬೆಂಬಲ ಕೋರಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಟಿವಿಕೆ ಮುಖ್ಯಸ್ಥ ವಿಜಯ್ ಸರ್ಕಾರ ರಚಿಸಲು ಅಗತ್ಯ ಸಂಖ್ಯಾಬಲಕ್ಕಾಗಿ ಕಾಂಗ್ರೆಸ್ ಅನ್ನು ಸಂಪರ್ಕಿಸಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ (K.C. Venugopal) ಪ್ರತಿಕ್ರಿಯಿಸಿ, ತಮಿಳುನಾಡಿನ ಜನಾದೇಶವು ಸಂವಿಧಾನವನ್ನು ಕಾಪಾಡುವ ಜಾತ್ಯತೀತ ಸರ್ಕಾರಕ್ಕೆ ಬೆಂಬಲ ನೀಡಲಿದೆ ಎಂದು ಹೇಳಿದ್ದಾರೆ. <blockquote class=”twitter-tweet” data-media-max-width=”560″><p lang=”en” dir=”ltr”><a href=”https://twitter.com/hashtag/WATCH?src=hash&amp;ref_src=twsrc%5Etfw”>#WATCH</a> | Delhi: Congress General Secretary (Organisation) K.C. Venugopal says, &quot;…TVK president Vijay has requested INC for support to form a Govt in Tamil Nadu. INC is clear that the mandate…

ತಮಿಳುನಾಡಲ್ಲಿ ಸರ್ಕಾರ ರಚಿಸಲು ಟಿವಿಕೆ ಸಜ್ಜು; ವಿಜಯ್‌ಗೆ ಕಾಂಗ್ರೆಸ್ ಬೆಂಬಲದ ಸುಳಿವು

ಚೆನ್ನೈ: ನಟ-ರಾಜಕಾರಣಿ ವಿಜಯ್ (Vijay) ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK – Tamilaga Vetri Kazhagam) ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಸರ್ಕಾರ ರಚಿಸಲು ಸಕ್ರೀಯ ಪ್ರಯತ್ನ ಆರಂಭಿಸಿದೆ. 108 ಸ್ಥಾನಗಳನ್ನು ಗೆದ್ದಿರುವ ಟಿವಿಕೆ, ಬಹುಮತದ ಗಡಿಯಿಂದ ಸ್ವಲ್ಪ ದೂರದಲ್ಲಿದ್ದರೂ ಅಧಿಕಾರದ ಗದ್ದುಗೆ ಹಿಡಿಯುವತ್ತ ಹೆಜ್ಜೆ ಇಟ್ಟಿದೆ. ಚುನಾವಣೆಯಲ್ಲಿನ ಸಾಧನೆ ಆಧಾರವಾಗಿ ಟಿವಿಕೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ (Rajendra Vishwanath Arlekar) ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಅವಕಾಶ ನೀಡುವಂತೆ ಮನವಿ ಮಾಡಿದೆ. ಜೊತೆಗೆ ಸದನದಲ್ಲಿ ಬಹುಮತ ಸಾಬೀತುಪಡಿಸಲು ಎರಡು ವಾರಗಳ ಅವಧಿ ಕೋರಲಾಗಿದೆ. ಬಹುಮತದ ಕೊರತೆ ಎದುರಿಸುತ್ತಿರುವ ಟಿವಿಕೆ, ಇತರ ಪಕ್ಷಗಳ ಬೆಂಬಲಕ್ಕಾಗಿ ಚರ್ಚೆ ಆರಂಭಿಸಿದೆ. ಈ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಬೆಂಬಲ ಮಹತ್ವ ಪಡೆದುಕೊಂಡಿದೆ. ಟಿವಿಕೆ ಮುಖ್ಯಸ್ಥ ವಿಜಯ್ ಕಾಂಗ್ರೆಸ್ ಬೆಂಬಲ ಕೋರಿರುವುದಾಗಿ ಕಾಂಗ್ರೆಸ್ ನಾಯಕ ಕೆ.ಸಿ.…

ಚುನಾವಣೆಯಲ್ಲಿ ಆಡಳಿತ ಪಕ್ಷದ ಪರವಾಗಿ ಮತದಾರರ ಒಲವು ಇರುವುದು ಸಹಜ; ಬಿ.ವೈ. ವಿಜಯೇಂದ್ರ

ದಾವಣಗೆರೆ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶಗಳ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಪ್ರತಿಕ್ರಿಯೆ ನೀಡಿದ್ದಾರೆ. ಈ ಉಪಚುನಾವಣೆಗಳಲ್ಲಿ ಬಿಜೆಪಿ ನಿರೀಕ್ಷಿತ ಗೆಲುವು ಸಾಧಿಸಲು ಸಾಧ್ಯವಾಗಿಲ್ಲವೆಂದು ಅವರು ಒಪ್ಪಿಕೊಂಡಿದ್ದಾರೆ. ಚುನಾವಣೆಯಲ್ಲಿ ಆಡಳಿತ ಪಕ್ಷದ ಪರವಾಗಿ ಮತದಾರರ ಒಲವು ಇರುವುದು ಸಹಜವೆಂದು ಹೇಳಿದ ವಿಜಯೇಂದ್ರ, ಕಾಂಗ್ರೆಸ್ (Congress) ಅಭ್ಯರ್ಥಿಗಳಿಗೆ ಅನುಕಂಪವೂ ಜೊತೆಗೆ ಸರ್ಕಾರದ ವ್ಯವಸ್ಥೆಗಳು, ಮುಖ್ಯಮಂತ್ರಿಗಳು ಹಾಗೂ ಸಚಿವರ ವ್ಯಾಪಕ ಪ್ರಚಾರ ಫಲಿತಾಂಶದ ಮೇಲೆ ಪ್ರಭಾವ ಬೀರಿದೆ ಎಂದು ವಿಶ್ಲೇಷಿಸಿದರು. ಹಿಂದೆ ಬಿ.ಎಸ್. ಯಡಿಯೂರಪ್ಪ (B.S. Yediyurappa) ಮುಖ್ಯಮಂತ್ರಿಯಾಗಿದ್ದ ವೇಳೆ 17 ಉಪಚುನಾವಣೆಗಳಲ್ಲಿ 15 ಕ್ಷೇತ್ರಗಳನ್ನು ಬಿಜೆಪಿ ಗೆದ್ದ ಉದಾಹರಣೆಯನ್ನು ಉಲ್ಲೇಖಿಸಿದ ಅವರು, ಈ ಬಾರಿ ಕೂಡ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಉತ್ತಮ ವಾತಾವರಣ ಇತ್ತು ಎಂದು ಹೇಳಿದರು. ಬಿಜೆಪಿ ಅಭ್ಯರ್ಥಿ ಶ್ರೀನಿವಾಸದಾಸ್ ಕರಿಯಪ್ಪ (Srinivasadas Kariyappa)…