ಮುಂಬೈ: ಮುಂಬರುವ ಪ್ಯಾನ್-ಇಂಡಿಯಾ ಚಿತ್ರ ‘ಸ್ವಯಂಭು’ ಭರ್ಜರಿ ಸೆಟ್ಗಳ ಮೂಲಕ ಸಿನಿರಂಗದಲ್ಲಿ ಚರ್ಚೆಗೆ ಕಾರಣವಾಗಿದೆ. ಚಿತ್ರದ ನಿರ್ದೇಶಕ ಭರತ್ ಕೃಷ್ಣಮಾಚಾರಿ, ಒಳಾಂಗಣ ಚಿತ್ರೀಕರಣಕ್ಕಾಗಿ ನಿರ್ಮಿಸಲಾದ ಎರಡು ಬೃಹತ್ ಸೇತುವೆಗಳ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಚಿತ್ರದ ನಿರ್ಮಾಣದಲ್ಲಿ ಮೂರು ವಿಭಿನ್ನ ಲೋಕಗಳನ್ನು ಸೃಷ್ಟಿಸಲಾಗಿದೆ ಎಂದು ನಿರ್ದೇಶಕರು ಹೇಳಿದ್ದಾರೆ. ಹೈದರಾಬಾದ್ನ ಜನವಾಡದಲ್ಲಿ ಸುಮಾರು 6ರಿಂದ 8 ಎಕರೆ ಪ್ರದೇಶದಲ್ಲಿ ಪೂರ್ಣ ಪ್ರಮಾಣದ ಹಳ್ಳಿಯ ಸೆಟ್ ನಿರ್ಮಿಸಲಾಗಿದ್ದು, ಇದಕ್ಕೆ ಸುಮಾರು 40ರಿಂದ 45 ದಿನಗಳ ಕಾಲ ಹಿಡಿದಿದೆ. ನೈಜತೆ ಮತ್ತು ವಿವರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇನ್ನೊಂದು ಲೋಕವನ್ನು ನಾಯಕಿಯ ಕಥಾಹಂದರಕ್ಕೆ ತಕ್ಕಂತೆ ವಿನ್ಯಾಸಗೊಳಿಸಲಾಗಿದ್ದು, ಮೊದಲ ಸೆಟ್ನಿಂದಲೇ ರೂಪುಗೊಂಡಿದ್ದರೂ, ಸಂಪೂರ್ಣವಾಗಿ ವಿಭಿನ್ನ ಗುರುತನ್ನು ನೀಡಲಾಗಿದೆ. ಚಿತ್ರದ ಕ್ಲೈಮ್ಯಾಕ್ಸ್ ಭಾಗವೇ ಅತ್ಯಂತ ವೈಭವಶಾಲಿಯಾಗಿದ್ದು, ಅನ್ನಪೂರ್ಣ ಸ್ಟುಡಿಯೋದಲ್ಲಿ ಸುಮಾರು 70ರಿಂದ 80 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಇಲ್ಲಿ…
Category: ಪ್ರಮುಖ ಸುದ್ದಿ
‘ಕೆಡಿ: ದಿ ಡೆವಿಲ್’: ಟ್ರೇಲರ್ ಎಡವಟ್ಟು ಬಗ್ಗೆ ಚಿತ್ರತಂಡ ವಿಷಾದ
ಚೆನ್ನೈ: ನಿರ್ದೇಶಕ ಪ್ರೇಮ್ ಅವರ ಬಹುನಿರೀಕ್ಷಿತ ಚಿತ್ರ ಕೆಡಿ: ದಿ ಡೆವಿಲ್ ಟ್ರೇಲರ್ಗೆ ಸಂಬಂಧಿಸಿದಂತೆ ನಿರ್ಮಾಪಕರು ವಿಷಾದ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಟ್ರೇಲರ್ನಲ್ಲಿ ಪ್ರಮಾಣೀಕರಿಸದ ಕೆಲವು ದೃಶ್ಯಗಳು ಆಕಸ್ಮಿಕವಾಗಿ ಸೇರಿರುವುದನ್ನು ಗಮನಿಸಿದ ಹಿನ್ನೆಲೆಯಲ್ಲಿ, ಟ್ರೇಲರ್ ಅನ್ನು ಯೂಟ್ಯೂಬ್ನಿಂದ ತೆಗೆದುಹಾಕಲಾಗಿದೆ. ಚಿತ್ರವನ್ನು ನಿರ್ಮಿಸಿರುವ KVN Productions ಸಂಸ್ಥೆ ಸಾಮಾಜಿಕ ಮಾಧ್ಯಮದ ಮೂಲಕ ಪ್ರಕಟಣೆ ನೀಡಿ, “ಪ್ರಮಾಣೀಕರಣ ಪ್ರಕ್ರಿಯೆಯಲ್ಲಿ ಕೆಲವು ದೃಶ್ಯಗಳು ಅಜಾಗರೂಕತೆಯಿಂದ ಒಳಗೊಂಡಿವೆ. ಈ ಕಾರಣದಿಂದ ಟ್ರೇಲರ್ ಅನ್ನು ತೆಗೆದುಹಾಕಲಾಗಿದೆ. ಶೀಘ್ರದಲ್ಲೇ ಮಾರ್ಗಸೂಚಿಗಳಿಗೆ ಅನುಗುಣವಾದ ಪರಿಷ್ಕೃತ ಆವೃತ್ತಿಯನ್ನು ಅಪ್ಲೋಡ್ ಮಾಡಲಾಗುತ್ತದೆ” ಎಂದು ತಿಳಿಸಿದೆ. ಈ ತಪ್ಪಿಗೆ ವಿಷಾದ ವ್ಯಕ್ತಪಡಿಸಿರುವ ನಿರ್ಮಾಪಕರು, ಎಲ್ಲಾ ಪ್ರಮಾಣೀಕರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. ಕೆಡಿ: ದಿ ಡೆವಿಲ್ ಚಿತ್ರವು ಈಗಾಗಲೇ ದೇಶಾದ್ಯಂತ ಸಾಕಷ್ಟು ಕುತೂಹಲ ಮೂಡಿಸಿದೆ. ಚಿತ್ರದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಜೊತೆಗೆ ಶಿಲ್ಪಾ ಶೆಟ್ಟಿ,…
ಕೇಂದ್ರ ಸರ್ಕಾರಿ ಸ್ವಾಮ್ಯದ ಕೋಲ್ ಇಂಡಿಯಾ ಲಿಮಿಟೆಡ್ನ ಅಂಗಸಂಸ್ಥೆ NCL ನಲ್ಲಿ ಉದ್ಯೋಗಾವಕಾಶ
ಕೇಂದ್ರ ಸರ್ಕಾರಿ ಸ್ವಾಮ್ಯದ Coal India Limited ಸಂಸ್ಥೆಯ ಅಂಗಸಂಸ್ಥೆಯಾದ Northern Coalfields Limited (NCL) 2026ನೇ ಸಾಲಿನ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಪ್ಯಾರಾಮೆಡಿಕಲ್, ಓವರ್ಸೀರ್ ಹಾಗೂ HEMM ಆಪರೇಟರ್ ಹುದ್ದೆಗಳು ಸೇರಿ ಒಟ್ಟು 577 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರಿ ವಲಯದಲ್ಲಿ ಸ್ಥಿರ ಉದ್ಯೋಗವನ್ನು ಬಯಸುವವರಿಗೆ ಇದು ಉತ್ತಮ ಅವಕಾಶವಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇದೆ. ಈ ನೇಮಕಾತಿಯಲ್ಲಿ ಹೆಚ್ಚಿನದಾಗಿ 472 ಹುದ್ದೆಗಳು HEMM ಆಪರೇಟರ್ ವಿಭಾಗಕ್ಕೆ ಸೇರಿವೆ. ಡಂಪರ್, ಡೋಜರ್, ಗ್ರೇಡರ್ ಸೇರಿದಂತೆ ಭಾರಿ ಯಂತ್ರೋಪಕರಣಗಳನ್ನು ಚಾಲನೆ ಮಾಡುವ ಈ ಹುದ್ದೆಗೆ ಕನಿಷ್ಠ 10ನೇ ತರಗತಿ ಪಾಸಾಗಿದ್ದು, ಮಾನ್ಯತೆ ಪಡೆದ ಭಾರಿ ವಾಹನ ಚಾಲನಾ ಪರವಾನಗಿ (HMV) ಹೊಂದಿರಬೇಕು. ಜೊತೆಗೆ 75 ಪ್ಯಾರಾಮೆಡಿಕಲ್ ಸಿಬ್ಬಂದಿ (ದಾದಿಯರು, ಔಷಧಿಕಾರರು) ಹಾಗೂ 30 ಓವರ್ಸೀರ್ (ಸಿವಿಲ್)…
Bharat Petroleum Corporation Limited (BPCL)ನಲ್ಲಿ ಉದ್ಯೋಗಾವಕಾಶ
ದೇಶದ ಪ್ರಮುಖ ತೈಲ ಸಂಸ್ಥೆಯಾದ Bharat Petroleum Corporation Limited (BPCL) ದೇಶಾದ್ಯಂತ ಖಾಲಿ ಇರುವ 250 ಜೂನಿಯರ್ ಎಕ್ಸಿಕ್ಯೂಟಿವ್ ಹಾಗೂ ಇತರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ: ಜೂನಿಯರ್ ಎಕ್ಸಿಕ್ಯೂಟಿವ್ (ಎಂಜಿನಿಯರಿಂಗ್) – 175 ಅಸೋಸಿಯೇಟ್ ಎಕ್ಸಿಕ್ಯೂಟಿವ್ (ಕ್ವಾಲಿಟಿ ಅಶ್ಯೂರೆನ್ಸ್) – 30 ಜೂನಿಯರ್ ಎಕ್ಸಿಕ್ಯೂಟಿವ್ (ಅಕೌಂಟ್ಸ್) – 25 ಜೂನಿಯರ್ ಎಕ್ಸಿಕ್ಯೂಟಿವ್ (ವೇಸೈಡ್ ಸೌಕರ್ಯಗಳು) – 10 ಕಾರ್ಯದರ್ಶಿ (Secretary) – 08 ಅಸೋಸಿಯೇಟ್ ಎಕ್ಸಿಕ್ಯೂಟಿವ್ (ಅಧಿಕೃತ ಭಾಷೆ) – 02 ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಡಿಪ್ಲೊಮಾ, ಬಿ.ಇ/ಬಿ.ಟೆಕ್ (ಎಂಜಿನಿಯರಿಂಗ್ ವಿಭಾಗಗಳಿಗೆ), ಸಿಎ/ಸಿಎಮ್ಎ (ಅಕೌಂಟ್ಸ್ ವಿಭಾಗಕ್ಕೆ) ಅಥವಾ ಎಂ.ಎ/ಎಂ.ಎಸ್ಸಿ (ಇತರ ವಿಭಾಗಗಳಿಗೆ) ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಸಂಬಂಧಿತ ಕ್ಷೇತ್ರದಲ್ಲಿ ಅನುಭವವೂ ಅಗತ್ಯವಾಗಿದೆ. ಏಪ್ರಿಲ್ 1, 2026ರಂತೆ ಅಭ್ಯರ್ಥಿಗಳ ವಯಸ್ಸು…
ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ
ಚೆನ್ನೈ: ಮಲಯಾಳಂ ಸಿನಿರಂಗದ ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ ಹರಿದುಬರುತ್ತಿದೆ. ಜನಪ್ರಿಯ ನಿರ್ಮಾಣ ಸಂಸ್ಥೆ Pen Studios, ಈ ಚಿತ್ರಕ್ಕಾಗಿ ₹100 ಕೋಟಿ ಹೂಡಿಕೆ ಮಾಡುವುದಾಗಿ ಘೋಷಿಸಿದೆ. ನಿರ್ದೇಶಕ ಜೀತು ಜೋಸೆಫ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದಲ್ಲಿ ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ನಾಯಕನಾಗಿ ನಟಿಸುತ್ತಿದ್ದಾರೆ. ಚಿತ್ರವನ್ನು ನಿರ್ಮಿಸುತ್ತಿರುವ Aashirvad Cinemas ಸಂಸ್ಥೆಯಲ್ಲಿ, Panorama Studios ಮೂಲಕ ಈ ಹೂಡಿಕೆ ಮಾಡಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಣೆ ನೀಡಿರುವ Pen Studios, “ಭಾರತದ ಅತ್ಯಂತ ಪ್ರತಿಷ್ಠಿತ ಥ್ರಿಲ್ಲರ್ಗಳಲ್ಲಿ ಒಂದಾದ ‘ದೃಶ್ಯಂ 3’ಗೆ ₹100 ಕೋಟಿ ಹೂಡಿಕೆ” ಎಂದು ತಿಳಿಸಿದೆ. ಜೊತೆಗೆ, ಚಿತ್ರದ ಹೊಸ ಬಿಡುಗಡೆ ದಿನಾಂಕವನ್ನು ಮೇ 21 ಎಂದು ಘೋಷಿಸಿದೆ. ಮುಂಬರುವ ಚಿತ್ರವು ಮೊದಲು ಏಪ್ರಿಲ್ 2ರಂದು ಬಿಡುಗಡೆಯಾಗಬೇಕಾಗಿದ್ದರೂ, ಪರಿಸ್ಥಿತಿಗಳ ಹಿನ್ನೆಲೆ ಬಿಡುಗಡೆ ಮುಂದೂಡಲಾಗಿದೆ. ಈಗ ಮೇ 21ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ‘ದೃಶ್ಯಂ’…
ಒಳ ಮೀಸಲಾತಿ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ
ಬೆಂಗಳೂರು: ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಎಡ, ಬಲ ಹಾಗೂ ಇತರೇ ಸಮುದಾಯಗಳಿಗೆ 5.25, 5.25 ಮತ್ತು 4.5 ಮೀಸಲಾತಿ ಕಲ್ಪಿಸಲು ಸರ್ವಾನುಮತದಿಂದ ಒಪ್ಪಿಗೆ ನೀಡಿದೆ. ಒಳಮೀಸಲಾತಿಗೆ ಸಂಬಂಧಿಸಿದಂತೆ ಇಂದು ನಡೆದ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಮೀಸಲಾತಿಯನ್ನು ಶೇ.50ಕ್ಕೆ ಮಿತಿಗೊಳಿಸುವ ಹೈಕೋರ್ಟ್ ತೀರ್ಪಿನ ಪ್ರಕಾರ ಪರಿಶಿಷ್ಟ ಜಾತಿಯೊಳಗೆ ಒಳ ಮೀಸಲಾತಿಯನ್ನು ಮರು ನಿಗದಿಪಡಿಸಿ ಪರಿಶಿಷ್ಟ ಜಾತಿಗೆ 15% ಹಾಗೂ ಪರಿಶಿಷ್ಟ ವರ್ಗಗಳಿಗೆ ಶೇ3 ರಷ್ಟು ಮೀಸಲಾತಿ ನೀಡಲಾಗಿದೆ. ಒಳಮೀಸಲಾತಿಗೆ ರಚಿಸಲಾಗಿದ್ದ ಕಾಯ್ದೆಗೆ ಅನುಗುಣವಾಗಿ 17% ಮೀಸಲಾತಿಗೆ 6%, 6% ಹಾಗೂ 5% ಇದ್ದರೆ, ಈಗಿನ 15% ಮೀಸಲಾತಿಗೆ 5.3%, 5.3% ಹಾಗೂ 4.4% ಮೀಸಲಾತಿಯನ್ನು ನಿಗದಿ ಮಾಡಿ ವರದಿ ನೀಡಲಾಗಿದ್ದು, ಅಂತಿಮವಾಗಿ ಸಚಿವ ಸಂಪುಟ ಸಭೆಯು…
ಶೀಘ್ರದಲ್ಲೇ ಪಶ್ಚಿಮ ಬೆಂಗಳೂರಿನಲ್ಲಿ ಜಯದೇವ 100 ಹಾಸಿಗೆ ಕಾರ್ಡಿಯಾಕ್ ಹಬ್ ಘಟಕ
ಬೆಂಗಳೂರು: ಎಲ್ಲರಿಗೂ ಕೈಗೆಟಕುವ ದರದಲ್ಲಿ ಹೃದಯ ಆರೋಗ್ಯ ಸೇವೆಯನ್ನು ನೀಡಲು ಹಾಗೂ ಆಡಳಿತ ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಲಾಗಿದೆ. ಜಯದೇವ ಹೃದಯರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (ಎಸ್ಜೆಐಸಿಎಸ್ ಮತ್ತು ಆರ್) ಶುಕ್ರವಾರ ಪಶ್ಚಿಮ ಬೆಂಗಳೂರಿನ ಗೋವಿಂದರಾಜನಗರದಲ್ಲಿ 100 ಹಾಸಿಗೆಗಳ ಜಯದೇವ ಘಟಕವನ್ನು ಸ್ಥಾಪಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ. ಇದರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ನಲ್ಲಿ ಮಾಡಿದ ಪ್ರಮುಖ ಭರವಸೆಯನ್ನು ಈಡೇರಿಸಿದಂತಾಗಿದೆ. ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಬಿ. ದಿನೇಶ್ ಮತ್ತು ಜಿಬಿಎ ಮುಖ್ಯ ಆಯುಕ್ತ ಎನ್. ಮಹೇಶ್ವರ ರಾವ್, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್, ಗೋವಿಂದರಾಜನಗರ ಶಾಸಕ ಪ್ರಿಯಾ ಕೃಷ್ಣ, ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೋಶಿನ್, ಪಶ್ಚಿಮ ಮಹಾನಗರ…
ರಾಜ್ಯದ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವವಾದದ್ದು: ಎನ್.ಚಲುವರಾಯಸ್ವಾಮಿ
ಬೆಂಗಳೂರು: ರಾಜ್ಯದ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಅಗ್ರಿ-ಟೆಕ್ ಸಮಿಟ್-2026ರಲ್ಲಿ ಮಾತನಾಡಿದ ಅವರು, ಕೃಷಿ ಕ್ಷೇತ್ರವು ರಾಜ್ಯದ ಒಟ್ಟು ಆದಾಯದಲ್ಲಿ ಸುಮಾರು 17% ಕೊಡುಗೆ ನೀಡುವುದರ ಜೊತೆಗೆ, ಶೇಕಡಾ 58ರಷ್ಟು ಜನರಿಗೆ ಉದ್ಯೋಗವನ್ನು ಒದಗಿಸುತ್ತಿದೆ ಎಂದು ತಿಳಿಸಿದರು. 2025-26ನೇ ಸಾಲಿನಲ್ಲಿ ದೇಶದ ಆಹಾರ ಉತ್ಪಾದನೆ 355 ದಶಲಕ್ಷ ಟನ್ ತಲುಪುವ ನಿರೀಕ್ಷೆಯಿದ್ದು, ಕರ್ನಾಟಕದಲ್ಲಿಯೂ 155-160 ದಶಲಕ್ಷ ಟನ್ ಮಟ್ಟದಲ್ಲಿ ಉತ್ಪಾದನೆ ಸಾಧನೆಯಾಗಿದೆ ಎಂದು ಅವರು ಹೇಳಿದರು. ಸರ್ಕಾರದ ಯೋಜನೆಗಳು, ಕೃಷಿ ವಿಜ್ಞಾನಿಗಳ ಸಂಶೋಧನೆ ಹಾಗೂ ರೈತರ ಪರಿಶ್ರಮದಿಂದ ಕೃಷಿ ಕ್ಷೇತ್ರದಲ್ಲಿ ಗಮನಾರ್ಹ ಪ್ರಗತಿ ಕಂಡುಬಂದಿದೆ. ತೋಟಗಾರಿಕೆ ಉತ್ಪಾದನೆ ಹಾಗೂ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಒತ್ತು ನೀಡಲಾಗಿದ್ದು, ಸಂಸ್ಕರಣೆ, ಪ್ಯಾಕೇಜಿಂಗ್, ಬ್ರಾಂಡಿಂಗ್ ಮತ್ತು ಮಾರುಕಟ್ಟೆ ಸಂಪರ್ಕವನ್ನು ಬಲಪಡಿಸುವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು…
ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ
ಬೆಂಗಳೂರು: ನಗರದ ಟೌನ್ ಹಾಲ್ನಲ್ಲಿ ಅಖಿಲ ಭಾರತ ವೀರಶೈವ–ಲಿಂಗಾಯಿತ ಮಹಾಸಭಾ (ರಿ) ರಾಷ್ಟ್ರೀಯ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ ಸಮಾರಂಭ ಭಾನುವಾರ ವೈಭವವಾಗಿ ನಡೆಯಿತು. ಪಟ್ಟದ ಶ್ರೀ ಡಾ. ಮಲಯಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು, ಡಾ. ಶ್ರೀ ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮಿಗಳು, ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಹಾಸಭಾ ಅಧ್ಯಕ್ಷರೂ ಆಗಿರುವ ಸಚಿವ ಈಶ್ವರ ಬಿ. ಖಂಡ್ರೆ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಶರಣ ಪ್ರಕಾಶ ಪಾಟೀಲ್ ಸೇರಿದಂತೆ ಹಲವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಹಾನಗಲ್ ಕುಮಾರಸ್ವಾಮಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪದಗ್ರಹಣಕ್ಕೆ ಚಾಲನೆ ನೀಡಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಮಲಯಶಾಂತಮುನಿ ದೇಶಿಕೇಂದ್ರ ಸ್ವಾಮೀಜಿ, ಸಮಾಜ ನಿರ್ಮಾಣದಲ್ಲಿ ಮಹಿಳೆಯರು ಮತ್ತು ಯುವಕರ ಪಾತ್ರ ಮಹತ್ವದ್ದಾಗಿದೆ ಎಂದರು. ಪ್ರತೀ ಮನೆಯಲ್ಲಿ ಒಬ್ಬ ಸಮಾಜಸೇವಕ ಇದ್ದರೆ ಸಮಾಜದ ಅಭಿವೃದ್ಧಿ…
ಆಸ್ತಿ ಅತಿಕ್ರಮಣ ಯತ್ನ? FIR ದಾಖಲಿಸದ ಪೊಲೀಸರ ವಿರುದ್ಧ ವೃದ್ಧನ ದೂರು
ಬೆಂಗಳೂರು: ವಯೋವೃದ್ಧನಿಗೆ ಸೇರಿದ್ದೆನ್ನಲಾದ ಆಸ್ತಿಯನ್ನು ಖಾಸಗಿ ಸಂಸ್ಥೆಗಳ ಗೂಂಡಾಗಳು ಅತಿಕ್ರಮಿಸಲು ಯತ್ನಿಸಿದ್ದು ಈ ಬಗ್ಗೆ ಪ್ರಕರಣ ದಾಖಲಿಸಲು ಯಲಹಂಕ ಠಾಣೆ ಪೊಲೀಸರು ನಿರಾಕರಿಸಿದ್ದಾರೆ ಎನ್ನಲಾಗಿದೆ. ಇದರಿಂದ ನೊಂದ ವೃದ್ಧ FIR ದಾಖಲಿಸಲು ನಿರ್ದೇಶನ ಕೋರಿ ಬೆಂಗಳೂರು ಪೊಲೀಸ್ ಕಮೀಷನರ್’ಗೆ ದೂರು ಸಲ್ಲಿಸಿದ್ದಾರೆ. ಬೆಂಗಳೂರಿನ ಆಡುಗೋಡಿ ನಿವಾಸಿ 70 ವರ್ಷ ಪ್ರಾಯದ ಅಬ್ದುಲ್ ಸತ್ತಾರ್, ಎಂಬವರು ತಮಗೆ ಸೇರಿದ್ದೆನ್ನಲಾದ ಯಲಹಂಕದ ಸರ್ವೇ ನಂಬರ್ 29/3ರ 7 ಗುಂಟೆ ನಿವೇಶನವನ್ನು ಕೆಲವು ವ್ಯಕ್ತಿಗಳು ಅತಿಕ್ರಮಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ. ಆದರೂ ಏಪ್ರಿಲ್ 8 ರಂದು ಮಧ್ಯಾಹ್ನ 25 ಕ್ಕೂ ಹೆಚ್ಚು ಮಂದಿ ಸದರಿ ಸ್ಥಳಕ್ಕೆ ಬಂದು ‘ತಾವು Mac Charles Hob Projects Pvt Ltd ಮತ್ತು Embassy ಕಂಪನಿ ಕಡೆಯವರು ಈ ನಿವೇಶನಕ್ಕೆ ತೆರಳಿ ಈ ಸ್ವತ್ತನ್ನು ತಮಗೆ ಬಿಟ್ಟುಕೊಟ್ಟು ಸ್ಥಳದಿಂದ ತೆರಳಬೇಕು’…
