“ಗೃಹ ಸಚಿವ ಖರ್ಗೆ ಸದ್ಯ ಇರಾನ್–ಅಮೆರಿಕ ಯುದ್ಧದಲ್ಲಿ ಬ್ಯುಸಿ’; ಕಲಬುರಗಿ ಜೈಲು ಕೈದಿಗಳ ಪರಾರಿ ಬಗ್ಗೆ ವಿಜಯೇಂದ್ರ ಟೀಕೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಶಿಕ್ಷಿತ ಕೈದಿಗಳು ಪರಾರಿಯಾದ ಘಟನೆಗೆ ಸಂಬಂಧಿಸಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಗೃಹ ಸಚಿವರ ತವರಲ್ಲೇ ಇಂತಹ ಘಟನೆಗಳು ಮರುಕಳಿಸುತ್ತಿರುವುದು ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಬಿಜೆಪಿ ಟೀಕಿಸಿದೆ. ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, “ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸದ್ಯ ಇರಾನ್–ಅಮೆರಿಕ ಯುದ್ಧದಲ್ಲಿ ವ್ಯಸ್ತರಾಗಿದ್ದಾರೆ. ಅದನ್ನು ಮುಗಿಸಿ ಇಲ್ಲಿಗೆ ಬರುತ್ತಾರೆ” ಎಂದು ವ್ಯಂಗ್ಯವಾಡಿದರು. ಇತ್ತೀಚೆಗೆ ಜುಲೈ 3ರಂದು ಅಫಜಲಪುರ ಪೊಲೀಸ್ ಠಾಣೆಯಿಂದ ಪೋಕ್ಸೋ ಪ್ರಕರಣದ ಆರೋಪಿ ಕೈಕೋಳವನ್ನು ಬಿಚ್ಚಿಕೊಂಡು ಪರಾರಿಯಾಗಿದ್ದ ಘಟನೆ ನಡೆದಿತ್ತು. ಅದರ ಬೆನ್ನಲ್ಲೇ ಇದೀಗ ಕೇಂದ್ರ ಕಾರಾಗೃಹದಿಂದಲೇ ಮೂವರು ಶಿಕ್ಷಿತ ಕೈದಿಗಳು ತಪ್ಪಿಸಿಕೊಂಡಿರುವುದು ಕಲಬುರಗಿ ಜಿಲ್ಲೆಯ ಭದ್ರತಾ ವ್ಯವಸ್ಥೆ ಕುರಿತು ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ.

ಶಸ್ತ್ರಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿರುವ ಪವನ್ ಕಲ್ಯಾಣ್; ಪತ್ನಿ ಮಾಹಿತಿ

ಹೈದರಾಬಾದ್: ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಭುಜದ ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರ ಪತ್ನಿ ಅನ್ನಾ ಲೆಜ್ನೇವಾ ತಿಳಿಸಿದ್ದಾರೆ. ಎರಡೂ ಭುಜಗಳಲ್ಲಿ ತೀವ್ರ ರೋಟೇಟರ್ ಕಫ್ ಗಾಯ ಉಂಟಾಗಿದ್ದ ಹಿನ್ನೆಲೆಯಲ್ಲಿ ವೈದ್ಯರು ಸುಮಾರು ಮೂರೂವರೆ ಗಂಟೆಗಳ ಕಾಲ ಅವರ ಬಲ ಭುಜಕ್ಕೆ ಶಸ್ತ್ರಚಿಕಿತ್ಸೆ ನಡೆಸಿದ್ದರು. ಆಸ್ಪತ್ರೆಯಲ್ಲಿ ಪವನ್ ಕಲ್ಯಾಣ್ ಅವರನ್ನು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಭೇಟಿ ಮಾಡಿದ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಅನ್ನಾ, “ಪವನ್ ಅವರು ತಮ್ಮ ನೋವನ್ನು ಎಂದಿಗೂ ತೋರಿಸಿಕೊಳ್ಳುವುದಿಲ್ಲ. ಜೀವನದ ಹೊರೆ ಅವರ ದೈಹಿಕ ನೋವಿಗಿಂತಲೂ ದೊಡ್ಡದಾಗಿರುತ್ತದೆ. ಅವರು ಅಪರೂಪಕ್ಕೆ ಮಾತ್ರ ನೋವಿನ ಬಗ್ಗೆ ಮಾತನಾಡುತ್ತಾರೆ, ಅದು ಸಹ ನೋವು ಅತಿಯಾಗಿ ಹೆಚ್ಚಾದಾಗ ಮಾತ್ರ,” ಎಂದು ಬರೆದುಕೊಂಡಿದ್ದಾರೆ. “ಸದ್ಯ ಅವರಿಗೆ ಉತ್ತಮ ಆರೈಕೆ ನೀಡುವುದು ನನ್ನ…

ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳ ಪರಾರಿ; ಗೃಹ ಸಚಿವರ ತಾವರಲ್ಲೇ ಅವಾಂತರ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಶಿಕ್ಷಿತ ಕೈದಿಗಳು ಗೋಡೆ ಹಾರಿ ಪರಾರಿಯಾಗಿರುವ ಘಟನೆ ನಡೆದಿದೆ. ಜೈಲಿನ ಬ್ಯಾರಕ್‌ನ ಕಂಬಿಗಳನ್ನು ಕತ್ತರಿಸಿ, ಟವೆಲ್ ಹಾಗೂ ಹಾಸಿಗೆಗಳನ್ನು ಬಳಸಿ ಕಾಂಪೌಂಡ್ ಗೋಡೆ ಏರಿ ತಪ್ಪಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪರಾರಿಯಾದ ಕೈದಿಗಳನ್ನು ಮಸ್ತಾನ್, ಸಂತೋಷ್ ಮತ್ತು ಸಾಗರ್ ಎಂದು ಗುರುತಿಸಲಾಗಿದೆ. ಬೀದರ್ ಜಿಲ್ಲೆಯ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಇವರು ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು. ಮಂಗಳವಾರ ಮುಂಜಾನೆ ಸುಮಾರು 3 ಗಂಟೆ ವೇಳೆಗೆ 15ರಿಂದ 20 ಅಡಿ ಎತ್ತರದ ಜೈಲು ಗೋಡೆ ಹಾರಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಕಲಬುರಗಿ ನಗರ ಪೊಲೀಸ್ ಆಯುಕ್ತರು ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೈಲಿನ ಭದ್ರತಾ ವ್ಯವಸ್ಥೆ, ಬ್ಯಾರಕ್‌ಗಳು ಹಾಗೂ ಕಾಂಪೌಂಡ್ ಗೋಡೆಯ ಪರಿಶೀಲನೆ ನಡೆಸಿರುವ ಅಧಿಕಾರಿಗಳು,…

ಹತ್ತಾರು ಬಡ ಕುಟುಂಬಗಳಿಗೆ ಮನೆ ಭಾಗ್ಯ.. ಇದೀಗ ಸರ್ಕಾರಿ ಶಾಲೆಗೆ ಡಿಜಿಟಲ್ ಸ್ಪರ್ಶ.. ಬಿಜೂರು ಶಾಲೆಗೆ ಸುಸಜ್ಜಿತ ಕಂಪ್ಯೂಟರ್ ಲ್ಯಾಬ್ ಕೊಡುಗೆ ನೀಡಿದ ಗೋವಿಂದ ಬಾಬು ಪೂಜಾರಿ

ಉಡುಪಿ: ಬರಡು ಭೂಮಿಗೆ ಕುಡಿಯುವ ನೀರು ಹರಿಸಿ ಆಧುನಿಕ ಭಗೀರಥ ಎಂದು ಕರೆಸಿಕೊಂಡಿರುವ ಉದ್ಯಮಿ, ಹೆಸರಾಂತ ಸಮಾಜ ಸೇವಕ ಡಾ.ಗೋವಿಂದ ಬಾಬು ಪೂಜಾರಿ, ಕರ್ನಾಟಕದ ಹಲವೆಡೆ 50ಕ್ಕೂ ಹೆಚ್ಚು ಕುಟುಂಬಗಳಿಗೆ ಮನೆಗಳನ್ನು ಉಚಿತವಾಗಿ ನಿರ್ಮಿಸಿ ಕೊಟ್ಟು ಆಧುನಿಕ ಕರ್ಣ ಎನಿಸಿಕೊಂಡಿದ್ದಾರೆ. ಇದೀಗ ಕರಾವಳಿಯ ಉಡುಪಿ ಸಮೀಪದ ಬಿಜೂರಿನ ಸರ್ಕಾರಿ ಶಾಲೆಯನ್ನು ಐಟಿ ಕಂಪನಿಗೂ ಸಾಟಿಯಿಲ್ಲದ ರೀತಿ ಡಿಜಿಟಲ್ ವ್ಯವಸ್ಥೆಯೊಂದಿಗೆ ಅಭಿವೃದ್ಧಿಪಡಿಸಿ ದೇಶದ ಗಮನಸೆಳೆದಿದ್ದಾರೆ. ಖಾಸಗಿ ಶಾಲೆಗಳ ಸೌಲಭ್ಯ ಸರ್ಕಾರಿ ಶಾಲೆಗಳಲ್ಲಿ ಸಿಗಲ್ಲ ಎಂಬ ಅಭಿಪ್ರಾಯ ಹಲವರದ್ದು. ಆದರೆ, ದುಬಾರಿ ಶುಲ್ಕ ನೀಡಿ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವ ಸಾಮರ್ಥ್ಯ ಬಹುತೇಕ ಜನರಿಗೆ ಇಲ್ಲ. ಇಂತಹ ಸಂದರ್ಭದಲ್ಲಿ ತನ್ನೂರಿನ ಮಕ್ಕಳಿಗಾಗಿ ಬೈಂದೂರು ಸಮೀಪದ ಬಿಜೂರಿನ ಸರ್ಕಾರಿ ಶಾಲೆಯನ್ನೇ ದತ್ತು ಪಡೆದಿರುವ ChefTalk ಕಂಪನಿಯ ಮಾಲೀಕ ಡಾ.ಗೋವಿಂದ ಬಾಬು ಪೂಜಾರಿ ಎಲ್ಲರಿಗೂ, ಆ ಶಾಲೆಯನ್ನು ಯಾವ ಕಾರ್ಪೊರೇಟ್ ಶಾಲೆಗೂ…

ಮಲೆನಾಡಿನಲ್ಲಿ ಮಳೆ ಹಿನ್ನಡೆ; ಲಿಂಗನಮಕ್ಕಿ, ಭದ್ರಾ ಜಲಾಶಯಗಳ ಒಳಹರಿವು ಕುಸಿತ

ಶಿವಮೊಗ್ಗ: ಕಳೆದ ವಾರ ಧಾರಾಕಾರ ಮಳೆಗೆ ಸಾಕ್ಷಿಯಾಗಿದ್ದ ಮಲೆನಾಡಿನಲ್ಲಿ ಕಳೆದ ಮೂರು-ನಾಲ್ಕು ದಿನಗಳಿಂದ ಮುಂಗಾರು ದುರ್ಬಲಗೊಂಡಿದ್ದು, ಮಳೆಯ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಬಿಸಿಲಿನ ವಾತಾವರಣ ಹೆಚ್ಚಿರುವುದರಿಂದ ರೈತರು ಆತಂಕಕ್ಕೀಡಾಗಿದ್ದಾರೆ. ಮಳೆ ಕೊರತೆಯಿಂದ ಪ್ರಮುಖ ಜಲಾಶಯಗಳ ಒಳಹರಿವು ಕುಸಿದಿದ್ದು, ಭತ್ತದ ನಾಟಿ ಕಾರ್ಯವೂ ಇನ್ನೂ ಆರಂಭವಾಗಿಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಅಕ್ಕಿ ಉತ್ಪಾದನೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಜುಲೈ 13ರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಪಶ್ಚಿಮಘಟ್ಟ ಪ್ರದೇಶಗಳಾದ ಯಡೂರು (10 ಮಿ.ಮೀ.), ಚಕ್ರಾ (10 ಮಿ.ಮೀ.), ಮಾಸ್ತಿಕಟ್ಟೆ (8 ಮಿ.ಮೀ.), ಮಾಣಿ (7 ಮಿ.ಮೀ.), ಸಾವೇಹಕ್ಲು (6 ಮಿ.ಮೀ.) ಹಾಗೂ ಹುಲಿಕಲ್ (5 ಮಿ.ಮೀ.)ಗಳಲ್ಲಿ ಮಾತ್ರ ತುಸು ಮಳೆಯಾಗಿದೆ. ಶಿವಮೊಗ್ಗ, ಸೊರಬ ಸೇರಿದಂತೆ ಬಹುತೇಕ ಭಾಗಗಳಲ್ಲಿ ಮಳೆ ಅತಿ ಕಡಿಮೆಯಾಗಿದೆ. ಜಲಾಶಯಗಳ ಮಾಹಿತಿಯಂತೆ, ಲಿಂಗನಮಕ್ಕಿ ಜಲಾಶಯಕ್ಕೆ 4,999 ಕ್ಯೂಸೆಕ್ ಒಳಹರಿವು…

ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

ಬೆಂಗಳೂರು: ರಾಜ್ಯದ ಮುಜರಾಯಿ ವ್ಯಾಪ್ತಿಯ ದೇವಾಲಯಗಳಲ್ಲಿ ದೇಣಿಗೆಗಳ ಭದ್ರತೆ, ಪಾರದರ್ಶಕತೆ ಮತ್ತು ಹೊಣೆಗಾರಿಕೆ ಹೆಚ್ಚಿಸಲು ಕರ್ನಾಟಕ ಸರ್ಕಾರ ಹೊಸ ಪ್ರಮಾಣಿತ ಕಾರ್ಯಾಚರಣಾ ವಿಧಾನ (SOP) ಜಾರಿಗೊಳಿಸಿದೆ. ಹೊಸ ನಿಯಮದಂತೆ, ಎಲ್ಲಾ ದೇವಾಲಯಗಳಲ್ಲಿ ಹುಂಡಿಗಳನ್ನು ನಾಲ್ಕೂ ದಿಕ್ಕಿನಿಂದ ಆವರಿಸುವಂತೆ ಸಿಸಿಟಿವಿ ಅಥವಾ ವೆಬ್ ಕ್ಯಾಮೆರಾ ಅಳವಡಿಕೆ ಕಡ್ಡಾಯವಾಗಿದ್ದು, ದೃಶ್ಯಗಳನ್ನು ಕೇಂದ್ರ ಸರ್ವರ್‌ನಲ್ಲಿ ಸಂಗ್ರಹಿಸಲಾಗುತ್ತದೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಮುಜರಾಯಿ ಇಲಾಖೆ ಮತ್ತು ಪೊಲೀಸರಿಂದ ನಿರಂತರ ಮೇಲ್ವಿಚಾರಣೆ ನಡೆಸಲಾಗುತ್ತದೆ. ಭಕ್ತರ ಅನುಕೂಲಕ್ಕಾಗಿ QR ಕೋಡ್ ಮೂಲಕ ಡಿಜಿಟಲ್ ದೇಣಿಗೆ ವ್ಯವಸ್ಥೆ ಜಾರಿಗೆ ತರಲಾಗಿದ್ದು, ಅದನ್ನು ದೇವಾಲಯದ ಲೆಕ್ಕಪತ್ರ ವ್ಯವಸ್ಥೆಗೆ ಸಂಪರ್ಕಿಸಲಾಗುತ್ತದೆ. QR ಕೋಡ್‌ನಲ್ಲಿ ಬ್ಯಾಂಕ್ ಹಾಗೂ IFSC ವಿವರಗಳನ್ನು ಪ್ರದರ್ಶಿಸಬೇಕು. ಹುಂಡಿ ಎಣಿಕೆಗೆ ಕಂದಾಯ ಇಲಾಖೆಯ ಅಧಿಕಾರಿಗಳ ಹಾಜರಾತಿ ಕಡ್ಡಾಯವಾಗಿದ್ದು, ದೊಡ್ಡ ದೇವಾಲಯಗಳಲ್ಲಿ ವಾರಕ್ಕೊಮ್ಮೆ ಹಾಗೂ ಇತರ ದೇವಾಲಯಗಳಲ್ಲಿ ಎರಡು ವಾರಕ್ಕೊಮ್ಮೆ ಎಣಿಕೆ ನಡೆಸಬೇಕು. ಎಣಿಕೆ ವೇಳೆ ದೊರೆಯುವ…

IISCO ಉಕ್ಕು ಸ್ಥಾವರ ವಿಸ್ತರಣೆ ಪರಿಶೀಲಿಸಿದ ಎಚ್.ಡಿ. ಕುಮಾರಸ್ವಾಮಿ

ಬರ್ನ್‌ಪುರ (ಪಶ್ಚಿಮ ಬಂಗಾಳ): ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಬರ್ನ್‌ಪುರದ IISCO ಉಕ್ಕು ಸ್ಥಾವರದಲ್ಲಿ (ISP) 84,000 ಘನ ಮೀಟರ್ ಸಾಮರ್ಥ್ಯದ ಹೊಸ ಆರ್‌ಸಿಸಿ (RCC) ನೀರಿನ ಜಲಾಶಯವನ್ನು ಉದ್ಘಾಟಿಸಿದರು. COB-10 ಯೋಜನೆಯ ನೀರಿನ ಅಗತ್ಯ ಪೂರೈಸುವುದರ ಜೊತೆಗೆ, 4.08 ಮಿಲಿಯನ್ ಟನ್ ಉತ್ಪಾದನಾ ಸಾಮರ್ಥ್ಯ (MTPA) ವಿಸ್ತರಣೆಗೆ ಬೆಂಬಲ ನೀಡುವ ಉದ್ದೇಶದಿಂದ ಈ ಜಲಾಶಯ ನಿರ್ಮಿಸಲಾಗಿದೆ. ಕ್ಲೋಸ್ಡ್-ಲೂಪ್ ವ್ಯವಸ್ಥೆಯ ಮೂಲಕ ನೀರಿನ ಸಂರಕ್ಷಣೆಯನ್ನೂ ಇದು ಉತ್ತೇಜಿಸಲಿದೆ. ಭೇಟಿಯ ವೇಳೆ ಕುಮಾರಸ್ವಾಮಿ COB-12 ಕೋಕ್ ಓವನ್ ಬ್ಯಾಟರಿ, ಬ್ಲಾಸ್ಟ್ ಫರ್ನೇಸ್, ಸುಸ್ಥಿರತಾ ಯೋಜನೆಗಳು ಹಾಗೂ ಸ್ಥಾವರದ ವಿಸ್ತರಣಾ ಕಾಮಗಾರಿಗಳನ್ನು ಪರಿಶೀಲಿಸಿದರು. ಆತ್ಮನಿರ್ಭರ ಭಾರತ ಗುರಿ ಸಾಧನೆಗೆ ಆಧುನಿಕ ಹಾಗೂ ಪರಿಸರ ಸ್ನೇಹಿ ಉಕ್ಕು ಸ್ಥಾವರಗಳಲ್ಲಿ ಹೂಡಿಕೆ ಅಗತ್ಯವೆಂದು ಅವರು ಹೇಳಿದರು. 2025-26ನೇ ಹಣಕಾಸು ವರ್ಷದಲ್ಲಿ IISCO 2.9 ಮಿಲಿಯನ್ ಟನ್…

‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ

ಹೈದರಾಬಾದ್: ನಟಿ ಸಮಂತಾ ರುತ್ ಪ್ರಭು ಅಭಿನಯದ ‘ಮಾ ಇಂಟಿ ಬಂಗಾರಂ’ ಸಿನಿಮಾ ವಿಶ್ವಾದ್ಯಂತ 100 ಕೋಟಿ ರೂಪಾಯಿ ಗಳಿಕೆ ಮಾಡಿ ಬಾಕ್ಸ್ ಆಫೀಸ್‌ನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದೆ. ಬಿ.ವಿ. ನಂದಿನಿ ರೆಡ್ಡಿ ನಿರ್ದೇಶಿಸಿರುವ ಈ ತೆಲುಗು ಆ್ಯಕ್ಷನ್–ಕಾಮಿಡಿ ಚಿತ್ರದಲ್ಲಿ ಗುಲ್ಶನ್ ದೇವಯ್ಯ ಹಾಗೂ ದಿಗಂತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸಮಂತಾ, ರಾಜ್ ನಿಡಿಮೋರು ಮತ್ತು ಹಿಮಾಂಕ್ ರೆಡ್ಡಿ ಚಿತ್ರವನ್ನು ನಿರ್ಮಿಸಿದ್ದಾರೆ. 100 ಕೋಟಿ ಗಳಿಕೆಯ ಸಂಭ್ರಮವನ್ನು ಸಮಂತಾ ತಮ್ಮ ಮನೆಯಲ್ಲಿ ಆಚರಿಸಿದ್ದು, ಅದರ ವಿಡಿಯೊವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೊದಲ್ಲಿ ರಾಜ್ ನಿಡಿಮೋರು ಚಿತ್ರದ ಗಳಿಕೆ ಕುರಿತು ತಿಳಿಸುತ್ತಿದ್ದಂತೆ ಸಮಂತಾ ಸಂತಸ ವ್ಯಕ್ತಪಡಿಸಿ, ಪ್ರೇಕ್ಷಕರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಚಿತ್ರದ ಯಶಸ್ಸಿನ ಕುರಿತು ಪ್ರತಿಕ್ರಿಯಿಸಿರುವ ಸಮಂತಾ, ಬಿಡುಗಡೆಗೂ ಮುನ್ನ ಮಹಿಳಾ ಪ್ರಧಾನ ಸಿನಿಮಾಗಳ ಬಗ್ಗೆ ಚಿತ್ರಮಂದಿರ ಮಾಲೀಕರು ಸೇರಿದಂತೆ ಹಲವರಿಗೆ ಅನುಮಾನವಿತ್ತು ಎಂದು ಹೇಳಿದ್ದಾರೆ.…

ಬ್ಯಾಂಕಾಕ್ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ; 27 ಮಂದಿ ಸಾವು,

ಬ್ಯಾಂಕಾಕ್: ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್‌ನ ಉತ್ತರ ಭಾಗದ ನಾ ಲಾಡ್‌ಪ್ರಾವೋ (Na Ladprao) ಪಬ್‌ನಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 27 ಮಂದಿ ಮೃತಪಟ್ಟಿದ್ದು, 63ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪಬ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಇಡೀ ಕಟ್ಟಡವನ್ನು ಆವರಿಸಿತು. ದಟ್ಟ ಹೊಗೆ ಮತ್ತು ಬೆಂಕಿಯ ಜ್ವಾಲೆಗಳ ನಡುವೆ ಸಿಲುಕಿದವರು ಆತಂಕದಿಂದ ಹೊರಬರಲು ಯತ್ನಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಥಾಯ್ಲೆಂಡ್ ಪ್ರಧಾನಿ ಅನುತಿನ್ ಚಾರ್ನ್ವಿರಾಕುಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಲವರ ಮೃತದೇಹಗಳು ಪಬ್‌ನ ಹಿಂಭಾಗದ ಶೌಚಾಲಯಗಳ ಬಳಿ ಪತ್ತೆಯಾಗಿವೆ ಎಂದು ತಿಳಿಸಿದ್ದಾರೆ. ಬೆಂಕಿಗೆ ನಿಖರ ಕಾರಣ ತಿಳಿಯಲು ತನಿಖೆ ಆರಂಭಿಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಂಗೀತಗಾರರೊಬ್ಬರ ಪ್ರಕಾರ, ವೇದಿಕೆ ಸಮೀಪದ ವಿದ್ಯುತ್ ಸರ್ಕ್ಯೂಟ್ ಬ್ರೇಕರ್‌ನಿಂದ ಮೊದಲು ಹೊಗೆ ಕಾಣಿಸಿಕೊಂಡು, ಬಳಿಕ ವಿದ್ಯುತ್ ಸಂಪರ್ಕ ಕಡಿತಗೊಂಡು ಭಾರೀ ಸ್ಫೋಟ…

ರಾಜ್ಯದ ಕೆಲವೆಡೆ ಬಿರುಗಾಳಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ತುಸು ದುರ್ಬಲವಾಗಿದ್ದರೂ, ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಕೆಲವೆಡೆ ಬಿರುಗಾಳಿಯ ವಾತಾವರಣ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆ ಇರುವುದರಿಂದ ಮೀನುಗಾರರು ಹಾಗೂ ಸಮುದ್ರ ತೀರ ಪ್ರದೇಶದ ನಿವಾಸಿಗಳು ಎಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗಲಿದ್ದು, ಈ ಭಾಗಗಳಲ್ಲೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲೂ ಗಾಳಿ-ಮಳೆಯ ವಾತಾವರಣ…