ನವದೆಹಲಿ: ಕತಾರ್ನಲ್ಲಿ ವಾಸಿಸುವ ಭಾರತೀಯರಿಗೆ ಅನುಕೂಲವಾಗುವಂತೆ ಕತಾರ್ ಪೋಸ್ಟ್ ಔಟ್ಲೆಟ್ಗಳ ಮೂಲಕ UPI ಆಧಾರಿತ ಡಿಜಿಟಲ್ ರವಾನೆ ಸೇವೆ ಆರಂಭಿಸಲಾಗಿದೆ. ಇದರ ಮೂಲಕ ಕತಾರ್ನಿಂದ ಭಾರತದಲ್ಲಿರುವ UPI ಸಕ್ರಿಯ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಕಳುಹಿಸಬಹುದು. ಭಾರತದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ 15ರಿಂದ ‘PosTransfer’ ಸೇವೆ ಕತಾರ್ನಲ್ಲಿ ಕಾರ್ಯಾರಂಭಿಸಿದೆ. ಕತಾರ್ ಪೋಸ್ಟ್, ಇಂಡಿಯಾ ಪೋಸ್ಟ್, ಯುನಿವರ್ಸಲ್ ಪೋಸ್ಟಲ್ ಯೂನಿಯನ್ನ ಇಂಟರ್ಕನೆಕ್ಷನ್ ಪ್ಲಾಟ್ಫಾರ್ಮ್ (UPU-IP) ಮತ್ತು NPCI ಇಂಟರ್ನ್ಯಾಷನಲ್ ಪೇಮೆಂಟ್ಸ್ ಲಿಮಿಟೆಡ್ (NIPL) ಸಹಯೋಗದಲ್ಲಿ ಈ ಸೇವೆ ಅಭಿವೃದ್ಧಿಪಡಿಸಲಾಗಿದೆ. ಗ್ರಾಹಕರು ಕತಾರ್ ಪೋಸ್ಟ್ ಔಟ್ಲೆಟ್ನಲ್ಲಿ ಫಲಾನುಭವಿಯ UPI ಐಡಿ ಹಾಗೂ ಅಗತ್ಯ ಗುರುತಿನ ವಿವರಗಳನ್ನು ನೀಡಿ ಹಣ ವರ್ಗಾವಣೆ ಮಾಡಬಹುದು. ಫಲಾನುಭವಿಯು ತಮ್ಮ UPI ಆ್ಯಪ್ನಲ್ಲಿ ವಿದೇಶಿ ಒಳಮುಖ ರವಾನೆ ಸ್ವೀಕರಿಸುವ ಸೌಲಭ್ಯವನ್ನು ಸಕ್ರಿಯಗೊಳಿಸಿರಬೇಕು. ಸೌಲಭ್ಯ ಸಕ್ರಿಯವಾಗಿದ್ದರೆ, ಹಣವು ಫಲಾನುಭವಿಯ UPI-ಸಕ್ರಿಯ ಬ್ಯಾಂಕ್ ಖಾತೆಗೆ ತಕ್ಷಣ ಜಮೆಯಾಗಲಿದೆ.…
Category: ಪ್ರಮುಖ ಸುದ್ದಿ
MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್ಗೆ ಭಾರತೀಯ ಸೇನಾ ತುಕಡಿ
ನವದೆಹಲಿ: 15ನೇ ಭಾರತ–ಥೈಲ್ಯಾಂಡ್ ಜಂಟಿ ಸೇನಾ ಕವಾಯತು MAITREE-XV (2026) ನಲ್ಲಿ ಭಾಗವಹಿಸಲು ಭಾರತೀಯ ಸೇನಾ ತುಕಡಿ ಸೋಮವಾರ ಥೈಲ್ಯಾಂಡ್ಗೆ ತೆರಳಿದೆ. ಆಗಸ್ಟ್ 18ರಿಂದ 31ರವರೆಗೆ ಥೈಲ್ಯಾಂಡ್ನ ಸೂರತ್ ಥಾನಿಯಲ್ಲಿರುವ ವಿಭಾವಡಿ ರಂಗಸಿತ್ ಶಿಬಿರದಲ್ಲಿ ಸೇನಾ ಕಸರತ್ತು ನಡೆಯಲಿದೆ. 2025ರ ಸೆಪ್ಟೆಂಬರ್ನಲ್ಲಿ ಮೇಘಾಲಯದ ಉಮ್ರೊಯ್ನಲ್ಲಿ ಹಿಂದಿನ ಆವೃತ್ತಿಯ ವ್ಯಾಯಾಮ ನಡೆದಿತ್ತು. ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಗೆ ಒತ್ತು ಭಾರತ ಮತ್ತು ಥೈಲ್ಯಾಂಡ್ ಸೇನೆಗಳು ತಲಾ 85 ಸಿಬ್ಬಂದಿಯನ್ನು ನಿಯೋಜಿಸಲಿವೆ. ಭಾರತೀಯ ತುಕಡಿಯಲ್ಲಿ ಮುಖ್ಯವಾಗಿ 9 ಗೂರ್ಖಾ ರೈಫಲ್ಸ್ ಸಿಬ್ಬಂದಿ ಇದ್ದರೆ, ಥಾಯ್ ತುಕಡಿಯಲ್ಲಿ 5ನೇ ಡಿವಿಷನ್ನ 25ನೇ ಪದಾತಿ ದಳದ 3ನೇ ಬೆಟಾಲಿಯನ್ ಸಿಬ್ಬಂದಿ ಭಾಗವಹಿಸಲಿದ್ದಾರೆ. ಕಂಪನಿ ಮಟ್ಟದಲ್ಲಿ ನಡೆಯುವ ಈ ಜಂಟಿ ವ್ಯಾಯಾಮದಲ್ಲಿ ಅರಣ್ಯ ಮತ್ತು ಅರೆ-ನಗರ ಪ್ರದೇಶಗಳಲ್ಲಿ ಜಂಟಿ ಕಾರ್ಯಾಚರಣೆ, ದಂಗೆ ನಿಗ್ರಹ ಹಾಗೂ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಿಗೆ ತರಬೇತಿ ನೀಡಲಾಗುತ್ತದೆ. ಕ್ಷೇತ್ರ ತರಬೇತಿ, ಯುದ್ಧ…
‘ಪ್ರಜಾಪ್ರಭುತ್ವವನ್ನು ಕಲಿಯಿರಿ, ಮುನ್ನಡೆಸಿ’: ಸಿಇಸಿ ಜ್ಞಾನೇಶ್ ಕುಮಾರ್
ಪಾಟ್ನಾ: ಚುನಾವಣಾ ಸಾಕ್ಷರತೆ ಹೆಚ್ಚಿಸುವ ಮೂಲಕ ಚುನಾವಣಾ ಪ್ರಕ್ರಿಯೆಯಲ್ಲಿ ನಂಬಿಕೆ ಬೆಳೆಸಲು ಹಾಗೂ ಯುವಜನರ ಮಾಹಿತಿಯುಕ್ತ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಶಿಕ್ಷಣ ಸಂಸ್ಥೆಗಳು ಹೆಚ್ಚಿನ ಪಾತ್ರ ವಹಿಸಬೇಕು ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಕರೆ ನೀಡಿದ್ದಾರೆ. ಪಾಟ್ನಾದಲ್ಲಿ ಸೋಮವಾರ ನಡೆದ ‘ಚುನಾವಣಾ ಸಾಕ್ಷರತಾ ಕ್ಲಬ್ಗಳು ಮತ್ತು ಇಸಿಐನೆಟ್’ ಕುರಿತ ಸಮ್ಮೇಳನದಲ್ಲಿ ಮಾತನಾಡಿದ ಅವರು, ಶಾಲೆ, ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವರ್ಷಪೂರ್ತಿ ಚುನಾವಣಾ ಜಾಗೃತಿ ಮೂಡಿಸುವ ‘ಚುನಾವಣಾ ಸಾಕ್ಷರತಾ ಕ್ಲಬ್ (ELC 2.0)’ ಉಪಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ಹಾಗೂ ಯುವ ಮತದಾರರು ಭಾರತದ ಚುನಾವಣಾ ವ್ಯವಸ್ಥೆ, ಪ್ರಜಾಪ್ರಭುತ್ವದ ಮೌಲ್ಯಗಳು, ಮತದಾರರ ನೋಂದಣಿ, ಮತದಾನ ಮತ್ತು ಮತ ಎಣಿಕೆ ಪ್ರಕ್ರಿಯೆ ಸೇರಿದಂತೆ ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ತಿಳಿದುಕೊಳ್ಳಬೇಕು ಎಂದು ಕುಮಾರ್ ಹೇಳಿದರು. ಕಾರ್ಯಕ್ರಮದಲ್ಲಿ ಹೊಸ ELC ಲೋಗೋ ಮತ್ತು ‘ಪ್ರಜಾಪ್ರಭುತ್ವವನ್ನು ಕಲಿಯಿರಿ. ಪ್ರಜಾಪ್ರಭುತ್ವವನ್ನು ಮುನ್ನಡೆಸಿ.’ ಎಂಬ…
ಪರಿಶಿಷ್ಟ ಪಂಗಡಗಳ ಯೋಜನೆ ಅನುಷ್ಠಾನ ವಿಳಂಬ ಬೇಡ; ಅಧಿಕಾರಿಗಳಿಗೆ ರಘುಮೂರ್ತಿ ತಾಕೀತು
ಬೆಂಗಳೂರು: ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಟಿ. ರಘುಮೂರ್ತಿ ಅವರು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಇಲಾಖೆಯ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸೋಮವಾರ ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನ ಸಭೆ ನಡೆಸಿದ ಅವರು,ಇಲಾಖೆಯ ಕಾರ್ಯವೈಖರಿ ಹಾಗೂ ವಿವಿಧ ಯೋಜನೆಗಳ ಅನುಷ್ಠಾನದ ಸ್ಥಿತಿಗತಿ ಕುರಿತು ಸಚಿವರು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡರು. ಸಭೆಯಲ್ಲಿ ಮಾತನಾಡಿದ ಸಚಿವ ರಘುಮೂರ್ತಿ ಅವರು, ಇಲಾಖೆಯಲ್ಲಿ ಈಗಾಗಲೇ ಕೈಗೊಂಡಿರುವ ಎಲ್ಲ ಯೋಜನೆಗಳ ಅನುಷ್ಠಾನದ ಸಮಗ್ರ ವರದಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಯಾವ ಯೋಜನೆಗಳು ಯಾವ ಹಂತದಲ್ಲಿದೆ? ಬಾಕಿ ಇರುವ ಕಾಮಗಾರಿಗಳು ಯಾವುವು ಹಾಗೂ ಅವುಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಕ್ರಮಗಳೇನು ಎಂಬುದರ ಕುರಿತು ಸ್ಪಷ್ಟ ಮಾಹಿತಿ ನೀಡಬೇಕು ಎಂದು ನಿರ್ದೇಶನ…
ವಾಲ್ಮೀಕಿ ನಿಗಮ ಹಗರಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಪಾತ್ರ: ಸಿ.ಟಿ. ರವಿ ಆರೋಪ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಅದರ ಹೈಕಮಾಂಡ್ ಪಾತ್ರವಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿಗಮದ ₹89.62 ಕೋಟಿ ಹಣ ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾಗಿರುವುದನ್ನು ಸರ್ಕಾರವೇ ಉತ್ತರದಲ್ಲಿ ಒಪ್ಪಿಕೊಂಡಿದೆ ಎಂದರು. ಪ್ರಕರಣದಲ್ಲಿ ಅಂದಿನ ವ್ಯವಸ್ಥಾಪಕ ನಿರ್ದೇಶಕ ಸೇರಿದಂತೆ 14 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಎಸ್ಐಟಿ ತನಿಖೆಯಲ್ಲಿ ಹಣ ದುರುಪಯೋಗವಾಗಿರುವುದು ಸಾಬೀತಾಗಿದೆ ಎಂದು ಹೇಳಿದರು. ಹಗರಣದ ಹಣವನ್ನು ತೆಲಂಗಾಣ ಚುನಾವಣೆ, ಕಲಬುರಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯನ ಚುನಾವಣೆ ಹಾಗೂ ಬಳ್ಳಾರಿ ಲೋಕಸಭಾ ಚುನಾವಣೆಗೆ ಬಳಸಲಾಗಿದೆ. ಅಲ್ಲದೆ, ಬ್ರಾಂಡಿ ಅಂಗಡಿ, ಜ್ಯುವೆಲ್ಲರಿ ಅಂಗಡಿ ಮತ್ತು ಕಾರು ಶೋರೂಂಗಳಿಗೂ ಹಣ ಹೋಗಿದೆ ಎಂದು ಸಿ.ಟಿ. ರವಿ ಆರೋಪಿಸಿದರು. “ರಾತ್ರಿ ಕಳ್ಳನನ್ನು ಹಿಡಿದು, ಹಗಲು ಮತ್ತೆ ಸಚಿವರನ್ನಾಗಿ ಮಾಡಿದರೆ ಕಾಂಗ್ರೆಸ್ ಪಕ್ಷ ಮತ್ತು…
ಗ್ವಾಲಿಯರ್ನಲ್ಲಿ ಭೀಕರ ರಸ್ತೆ ಅಪಘಾತ: 8 ಮಂದಿ ಸಾವು, 25ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ
ಭೋಪಾಲ್: ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ-79ರಲ್ಲಿ ರಾತ್ರಿ ಸುಮಾರು 12 ಗಂಟೆಗೆ ಚಿಂಕಾ ಸಮೀಪ ಈ ಅಪಘಾತ ಸಂಭವಿಸಿದೆ. ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಲೋಡಿಂಗ್ ವಾಹನಕ್ಕೆ ಎದುರಿನಿಂದ ಬಂದ ಟ್ರಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಲೋಡಿಂಗ್ ವಾಹನ ಪಲ್ಟಿಯಾಗಿದ್ದು, ಅದರಲ್ಲಿದ್ದ ಹಲವು ಕಾರ್ಮಿಕರು ವಾಹನದೊಳಗೆ ಸಿಲುಕಿಕೊಂಡಿದ್ದರು. ಅಪಘಾತದ ಬಳಿಕ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು, ಸ್ಥಳೀಯರು ಹಾಗೂ ವಾಹನ ಸವಾರರು ಕೂಡಲೇ ರಕ್ಷಣಾ ಕಾರ್ಯಾಚರಣೆ ನಡೆಸಿ ವಾಹನದಲ್ಲಿ ಸಿಲುಕಿದ್ದವರನ್ನು ಹೊರತೆಗೆದಿದ್ದಾರೆ. ಗಾಯಾಳುಗಳನ್ನು ಗ್ವಾಲಿಯರ್ನ ಜಯ ಆರೋಗ್ಯ ಆಸ್ಪತ್ರೆಯ ಟ್ರಾಮಾ ಸೆಂಟರ್ ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಪೊಲೀಸರ ಪ್ರಕಾರ, ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಇನ್ನು ಕೆಲವರ ಆರೋಗ್ಯ ಸ್ಥಿರವಾಗಿದೆ. ಅಪಘಾತದಲ್ಲಿ ಮೃತಪಟ್ಟವರ ಪೈಕಿ ಕೆಲವರ…
Gwalior road accident: 8 killed, over 25 workers injured
Bhopal: At least eight people were killed and more than 25 workers injured in a horrific road accident in Gwalior, Madhya Pradesh, late Monday night. The accident occurred around 12 am near Chinka on National Highway-79, when a truck travelling in the opposite direction collided with a loading vehicle carrying workers. The impact caused the vehicle to overturn, leaving several workers trapped inside. Following the accident, police, local residents and other motorists rushed to the spot and launched a rescue operation. The trapped workers were pulled out and the injured…
ಬಿಜೆಪಿ ರಾಷ್ಟ್ರೀಯ ಘಟಕ ಪುನಾರಚನೆ: ಕರ್ನಾಟಕದ ಇಬ್ಬರಿಗೆ ಸ್ಥಾನ
ನವದೆಹಲಿ: ಬಿಜೆಪಿ ರಾಷ್ಟ್ರೀಯ ಘಟಕವನ್ನು ಪುನಾರಚನೆ ಮಾಡಲಾಗಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬೀನ್ ಅಧಿಕಾರ ವಹಿಸಿಕೊಂಡ ಸುಮಾರು ಆರು ತಿಂಗಳ ಬಳಿಕ ಮಹತ್ವದ ಬದಲಾವಣೆ ಮಾಡಲಾಗಿದೆ. ಹೊಸ ತಂಡದಲ್ಲಿ ಅನುಭವ ಮತ್ತು ಯುವ ನಾಯಕತ್ವಕ್ಕೆ ಆದ್ಯತೆ ನೀಡಲಾಗಿದ್ದು, ಮಹಿಳೆಯರಿಗೂ ಪ್ರಾತಿನಿಧ್ಯ ಕಲ್ಪಿಸಲಾಗಿದೆ. ಹೊಸ ತಂಡದಲ್ಲಿ 13 ರಾಷ್ಟ್ರೀಯ ಉಪಾಧ್ಯಕ್ಷರು, 8 ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ 16 ಮೋರ್ಚಾ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಬಿ.ಎಲ್. ಸಂತೋಷ್ ಅವರು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಹುದ್ದೆಯಲ್ಲಿ ಮುಂದುವರಿದಿದ್ದಾರೆ. ಶಿವಪ್ರಕಾಶ್ ಮತ್ತು ಸೌದನ್ ಸಿಂಗ್ ಅವರನ್ನು ರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿಗಳಾಗಿ ನೇಮಿಸಲಾಗಿದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿ ವಿನೋದ್ ತಾವ್ಡೆ, ಸುನಿಲ್ ಬನ್ಸಾಲ್, ಬಿಪ್ಲಬ್ ಕುಮಾರ್ ದೇವ್, ಸ್ಮೃತಿ ಇರಾನಿ, ಸತೀಶ್ ಪೂನಿಯಾ, ಗಜೇಂದ್ರ ಪಟೇಲ್, ಹರೀಶ್ ದ್ವಿವೇದಿ ಹಾಗೂ ಸಂಜಯ್ ಭಾಟಿಯಾ ನೇಮಕಗೊಂಡಿದ್ದಾರೆ. ವಸುಂಧರಾ ರಾಜೇ ಸಿಂಧಿಯಾ,…
ಎನ್ಟಿಎಯಲ್ಲಿ ಅಮೂಲಾಗ್ರ ಬದಲಾವಣೆ: 50ಕ್ಕೂ ಹೆಚ್ಚು ಸಿಬ್ಬಂದಿ ವಜಾ
ನವದೆಹಲಿ: ಯುಜಿಸಿ-ನೆಟ್ ಸೇರಿದಂತೆ ವಿವಿಧ ಪರೀಕ್ಷೆಗಳಲ್ಲಿನ ಅವ್ಯವಹಾರಗಳ ಹಿನ್ನೆಲೆಯಲ್ಲಿ ಟೀಕೆಗೆ ಗುರಿಯಾಗಿರುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಯಲ್ಲಿ ಸರ್ಕಾರ ಮಹತ್ವದ ಸುಧಾರಣಾ ಕ್ರಮಗಳಿಗೆ ಮುಂದಾಗಿದೆ. ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಅವರು ಸೋಮವಾರ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಎನ್ಟಿಎ ಮಹಾನಿರ್ದೇಶಕರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆ ಕುರಿತು ಚರ್ಚಿಸಿದರು. ಸಭೆಯಲ್ಲಿ ಎನ್ಟಿಎ ಕೈಗೊಂಡಿರುವ ಕ್ರಮಗಳ ಕುರಿತು ಸಚಿವರಿಗೆ ಮಾಹಿತಿ ನೀಡಲಾಯಿತು. 50ಕ್ಕೂ ಹೆಚ್ಚು ಸಿಬ್ಬಂದಿಯನ್ನು ಎನ್ಟಿಎಯಿಂದ ತೆಗೆದುಹಾಕಲಾಗಿದೆ ಎಂದು ತಿಳಿಸಲಾಯಿತು. ಪರೀಕ್ಷಾ ವ್ಯವಸ್ಥೆಯನ್ನು ಬಲಪಡಿಸಲು ಮುಖ್ಯ ತಂತ್ರಜ್ಞಾನ ಅಧಿಕಾರಿ, ಮುಖ್ಯ ಹಣಕಾಸು ಅಧಿಕಾರಿ, ಮುಖ್ಯ ಮಾಹಿತಿ ಭದ್ರತಾ ಅಧಿಕಾರಿ (CISO), ಪರೀಕ್ಷಾ ಭದ್ರತೆ, ಸಂಶೋಧನೆ ಮತ್ತು ಸೈಕೋಮೆಟ್ರಿಕ್ಸ್ ಸೇರಿದಂತೆ 10 ಹೊಸ ವೃತ್ತಿಪರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಸೈಬರ್ ಭದ್ರತೆ, ಸೈಕೋಮೆಟ್ರಿಕ್ಸ್, ಪ್ರಶ್ನೆಪತ್ರಿಕೆ ವಿನ್ಯಾಸ ಸೇರಿದಂತೆ ವಿಶೇಷ…
ರೇಣುಕಾಸ್ವಾಮಿ ಪ್ರಕರಣ: ದರ್ಶನ್ಗೆ ಹಿನ್ನಡೆ; ಖುದ್ದು ಹಾಜರಿ ಅರ್ಜಿ ತಿರಸ್ಕಾರ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್ ಬದಲು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗಲು ಅವಕಾಶ ನೀಡುವಂತೆ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ 59ನೇ ಸಿಸಿಹೆಚ್ ಕೋರ್ಟ್ ವಜಾಗೊಳಿಸಿದೆ. ನ್ಯಾಯಾಧೀಶೆ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಆದೇಶ ಪ್ರಕಟಿಸಿ, ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕವೇ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿದ್ದಾರೆ. ದರ್ಶನ್ ಪರ ಹಿರಿಯ ವಕೀಲ ಹಷ್ಮತ್ ಪಾಷಾ ಅವರು ಖುದ್ದು ಹಾಜರಿಗೆ ಅವಕಾಶ ನೀಡುವಂತೆ ವಾದಿಸಿದ್ದರು. ಸಾಕ್ಷ್ಯ ವಿಚಾರಣೆ ವೇಳೆ ನ್ಯಾಯಾಲಯದ ಸೂಚನೆಗಳನ್ನು ನೇರವಾಗಿ ಪಡೆಯಲು ಅನುಕೂಲವಾಗಲಿದೆ. ಅಲ್ಲದೆ, ವಿಡಿಯೋ ಕಾನ್ಫರೆನ್ಸ್ ವೇಳೆ ವಕೀಲರೊಂದಿಗೆ ಸಮಾಲೋಚನೆ ನಡೆಸಲು ಸೂಕ್ತ ಹೆಡ್ಫೋನ್ ಹಾಗೂ ಸಂಪರ್ಕ ವ್ಯವಸ್ಥೆ ಇಲ್ಲ ಎಂದು ವಾದಿಸಿದ್ದರು. ಇದಕ್ಕೆ ಎಸ್ಪಿಪಿ ಪ್ರಸನ್ನ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳ ಹಾಜರಿಗೆ ಕಾನೂನಿನಲ್ಲಿ ಅವಕಾಶವಿದೆ. ದರ್ಶನ್ ಅವರನ್ನು ಖುದ್ದಾಗಿ ಕರೆತಂದರೆ ನ್ಯಾಯಾಲಯದ ಕಲಾಪಕ್ಕೆ…
