ಕಮ್ಮಾಜೆಯಲ್ಲಿ ವನಮಹೋತ್ಸವ: ಪರಿಸರ ಸಂರಕ್ಷಣೆಗೆ ಸಸಿ ನೆಡುವ ಸಂಕಲ್ಪ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಮ್ಮಾಜೆ ಸಮೀಪದ ವಿವೇಕ ಭವನದಲ್ಲಿ ನಾಗಶ್ರೀ ಮಿತ್ರ ವೃಂದ ಚಾರಿಟೆಬಲ್ ಟ್ರಸ್ಟ್ ಹಾಗೂ ನಾಗಶ್ರೀ ಮಾತೃ ವೃಂದದ ಸಂಯುಕ್ತ ಆಶ್ರಯದಲ್ಲಿ ಭಾನುವಾರ ವನಮಹೋತ್ಸವ–2026 ಕಾರ್ಯಕ್ರಮ ನಡೆಯಿತು. ಪರಿಸರ ಸಂರಕ್ಷಣೆ ಮತ್ತು ಅರಣ್ಯಗಳ ಮಹತ್ವದ ಕುರಿತು ಯುವಪೀಳಿಗೆಯಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು. ಸ್ಪರ್ಧಾತ್ಮಕ ಜಗತ್ತಿನಲ್ಲಿ ಕಾಡುಗಳ ಮಹತ್ವವನ್ನು ಯುವ ಪೀಳಿಗೆಗೆ ತಿಳಿಸಿಕೊಡುವುದು ಅಗತ್ಯವಾಗಿದೆ. ಕಾಡಿನ ವಿನಾಶದಿಂದ ಉಂಟಾಗುವ ತೊಂದರೆಗಳನ್ನು ಪ್ರಸ್ತುತ ಜಗತ್ತಿನಲ್ಲಿ ಕಾಣಬಹುದು. ಮುಂದಿನ ದಿನಗಳಲ್ಲಿ ಆಕ್ಸಿಜನ್ ಸಿಲಿಂಡರ್ ಅನ್ನು ಹಿಡಿದುಕೊಂಡು ಓಡಾಡುವ ಪರಿಸ್ಥಿತಿ ಬಂದೊದಗುತ್ತದೆ. ಇಂತಹ ಪರಿಸ್ಥಿತಿ ಬರಬಾರದೆಂದರೆ ಸಸಿಗಳನ್ನು ನೆಡುವುದು ಅಗತ್ಯವಾಗುತ್ತದೆ. ನಮ್ಮ ಮನೆಯಂಗಳದಲ್ಲಿ ನೆಡಲು ಸಾಧ್ಯವಿಲ್ಲದಿದ್ದರೆ ಕಾಡು ಪ್ರದೇಶದಲ್ಲಿ ಆದರೂ ನೆಡಬೇಕು ಇದರಿಂದ ಎಲ್ಲರಿಗೂ ಒಳಿತಾಗುತ್ತದೆ ಎಂಬ ಆಶಯದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇಡೀ ಗ್ರಾಮದ ಜನತೆ…

ಧಾರ್ಮಿಕ ಕಿರುಕುಳದಿಂದ ಭಾರತಕ್ಕೆ ಬಂದಿರುವ ಅರ್ಹ ನಿರಾಶ್ರಿತರಿಗೆ ಶೀಘ್ರವೇ ಪೌರತ್ವ; ಅಮಿತ್ ಶಾ

ಕೋಲ್ಕತ್ತಾ: ಪೌರತ್ವ ತಿದ್ದುಪಡಿ ಕಾಯ್ದೆ (CAA) ಅಡಿಯಲ್ಲಿ ಧಾರ್ಮಿಕ ಕಿರುಕುಳದಿಂದ ಭಾರತಕ್ಕೆ ಬಂದಿರುವ ಅರ್ಹ ನಿರಾಶ್ರಿತರಿಗೆ ಪೌರತ್ವ ನೀಡುವ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಭಾರತೀಯ ಜನಸಂಘದ ಸಂಸ್ಥಾಪಕ ಶ್ಯಾಮ ಪ್ರಸಾದ್ ಮುಖರ್ಜಿ ಅವರ 125ನೇ ಜನ್ಮ ದಿನಾಚರಣೆ ಅಂಗವಾಗಿ ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೆರೆಯ ದೇಶಗಳಲ್ಲಿ ಧಾರ್ಮಿಕ ಹಿಂಸೆ ಅನುಭವಿಸಿ ಭಾರತಕ್ಕೆ ಬಂದ ಹಿಂದೂ ಹಾಗೂ ಇತರ ಅಲ್ಪಸಂಖ್ಯಾತ ನಿರಾಶ್ರಿತರಿಗೆ ಸಿಎಎ ಮೂಲಕ ಪೌರತ್ವ ನೀಡಲಾಗುವುದು ಎಂದು ಭರವಸೆ ನೀಡಿದರು. 1950ರ ಲಿಯಾಕತ್–ನೆಹರು ಒಪ್ಪಂದವು ಪಾಕಿಸ್ತಾನ ಹಾಗೂ ಪೂರ್ವ ಪಾಕಿಸ್ತಾನದಲ್ಲಿದ್ದ (ಈಗಿನ ಬಾಂಗ್ಲಾದೇಶ) ಹಿಂದೂ ಅಲ್ಪಸಂಖ್ಯಾತರ ಹಿತಾಸಕ್ತಿಯನ್ನು ಸಮರ್ಪಕವಾಗಿ ರಕ್ಷಿಸಲು ವಿಫಲವಾಗಿದೆ ಎಂದು ಶ್ಯಾಮ ಪ್ರಸಾದ್ ಮುಖರ್ಜಿ ಅಂದೇ ಪ್ರತಿಪಾದಿಸಿದ್ದರು ಎಂದು ಶಾ ಹೇಳಿದರು. ಈ ಸಂದರ್ಭದಲ್ಲಿ ಪಶ್ಚಿಮ ಬಂಗಾಳ ಸರ್ಕಾರದ ಕಾರ್ಯವೈಖರಿಯನ್ನೂ ಶ್ಲಾಘಿಸಿದ…

ಕುಮಾರಸ್ವಾಮಿಯನ್ನು ಹರಕೆ ಕುರಿ ಮಾಡುತ್ತಿರುವ ಬಿಜೆಪಿ: ಬಿ.ಕೆ. ಹರಿಪ್ರಸಾದ್ ಟೀಕೆ

ಬೆಂಗಳೂರು: ಬಿಜೆಪಿ ನಾಯಕರು ಜೆಡಿಎಸ್ ನಾಯಕ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ದೇಶದ ವಿವಿಧ ರಾಜ್ಯಗಳಲ್ಲಿ ಮಿತ್ರಪಕ್ಷಗಳನ್ನು ದುರ್ಬಲಗೊಳಿಸಿರುವ ಬಿಜೆಪಿ, ಈಗ ಕರ್ನಾಟಕದಲ್ಲೂ ಅದೇ ರಾಜಕೀಯ ತಂತ್ರ ಅನುಸರಿಸುತ್ತಿದೆ. ಪ್ರಹ್ಲಾದ್ ಜೋಶಿ ಅವರು ಕುಮಾರಸ್ವಾಮಿ ಅವರನ್ನು ಹರಕೆ ಕುರಿಯಂತೆ ಬಳಸಿಕೊಳ್ಳುತ್ತಿದ್ದಾರೆ” ಎಂದು ಟೀಕಿಸಿದರು. ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳನ್ನು ತಳ್ಳಿಹಾಕಿದ ಹರಿಪ್ರಸಾದ್, ಚುನಾವಣಾ ಆಯೋಗದ ನಿಯಮಾನುಸಾರ ಸಮುದಾಯ ಭವನ, ಮಸೀದಿ, ದೇವಾಲಯ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಗಣತಿ ನಮೂನೆಗಳನ್ನು ಭರ್ತಿ ಮಾಡಬಹುದಾಗಿದೆ ಎಂದು ಸ್ಪಷ್ಟಪಡಿಸಿದರು. ಪ್ರಕ್ರಿಯೆಯಲ್ಲಿ ಲೋಪಗಳಿದ್ದರೆ ಅದನ್ನು ಚುನಾವಣಾ ಆಯೋಗವೇ ಪರಿಶೀಲಿಸಲಿದೆ ಎಂದರು. ರಾಜ್ಯದಲ್ಲಿ 50 ಲಕ್ಷ ಮತದಾರರನ್ನು ಮತಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿದೆ ಎಂಬ…

ವೆನೆಜುವೆಲಾ ಭೂಕಂಪ ದುರಂತ: 3300 ದಾಟಿದ ಮೃತರ ಸಂಖ್ಯೆ

ಕ್ಯಾರಕಾಸ್: ವೆನೆಜುವೆಲಾದಲ್ಲಿ ಸಂಭವಿಸಿದ ಅವಳಿ ಭೂಕಂಪಗಳ ಸಾವಿನ ಸಂಖ್ಯೆ 3,342ಕ್ಕೆ ಏರಿಕೆಯಾಗಿದ್ದು, 16,740 ಮಂದಿ ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ಅಸೆಂಬ್ಲಿ ಅಧ್ಯಕ್ಷ ಜಾರ್ಜ್ ರೊಡ್ರಿಗಸ್ ತಿಳಿಸಿದ್ದಾರೆ. ಅಧಿಕೃತ ಮಾಹಿತಿಯ ಪ್ರಕಾರ, ಇದುವರೆಗೆ 6,462 ಮಂದಿಯನ್ನು ರಕ್ಷಿಸಲಾಗಿದ್ದು, 17,345 ಮಂದಿ ಸ್ಥಳಾಂತರಗೊಂಡಿದ್ದಾರೆ. ಪೀಡಿತರಿಗೆ ನೆರವು ನೀಡಲು 80 ತಾತ್ಕಾಲಿಕ ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ. ಜೂನ್ 24ರಂದು ಸಂಭವಿಸಿದ 7.2 ಮತ್ತು 7.5 ತೀವ್ರತೆಯ ಅವಳಿ ಭೂಕಂಪಗಳ ಬಳಿಕ ಇದುವರೆಗೆ 995 ನಂತರದ ಕಂಪನಗಳು ದಾಖಲಾಗಿವೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗೆ 29,567 ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಅವರಲ್ಲಿ 3,281 ಮಂದಿ ವಿದೇಶಿ ರಕ್ಷಣಾ ಸಿಬ್ಬಂದಿಯಾಗಿದ್ದಾರೆ. ಭೂಕಂಪ ದುರಂತದ ಹಿನ್ನೆಲೆಯಲ್ಲಿ ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದ್ದಾರೆ. ಸಂತ್ರಸ್ತರ ಕುಟುಂಬಗಳೊಂದಿಗೆ ಸರ್ಕಾರ ನಿಲ್ಲಲಿದೆ ಎಂದು ಅವರು ಹೇಳಿದ್ದಾರೆ. ಇನ್ನೂ ಹತ್ತಾರು ಸಾವಿರ ಮಂದಿ ನಾಪತ್ತೆಯಾಗಿರುವ…

ಭಾರತೀಯ ಸಂಘಟನೆಗಳ ಒಗ್ಗಟ್ಟು, ಪರಸ್ಪರ ಸಹಕಾರದಿಂದ ಸಾಂಸ್ಕೃತಿಕ ವೈವಿಧ್ಯತೆಯ ಪ್ರಚಾರ ಸಾಧ್ಯ: ಉಪ ರಾಯಭಾರಿ ಸಂದೀಪ್ ಕುಮಾರ್

ದೋಹಾ (ಕತಾರ್): ಕತಾರ್‌ನಲ್ಲಿರುವ ಭಾರತೀಯ ಸಮುದಾಯದ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಹಾಗೂ ಭಾರತದ ಸಮೃದ್ಧ ಸಾಂಸ್ಕೃತಿಕ ಪರಂಪರೆಯನ್ನು ವಿಸ್ತಾರವಾಗಿ ಪರಿಚಯಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ (KSQ) ನೂತನ ವ್ಯವಸ್ಥಾಪನಾ ಸಮಿತಿಯು ಭಾರತೀಯ ರಾಯಭಾರ ಕಚೇರಿಯ ಉಪ ರಾಯಭಾರಿ (Deputy Chief of Mission) ಸಂದೀಪ್ ಕುಮಾರ್ ಅವರನ್ನು ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿತು. ಸಂಘದ ಅಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು ಅವರ ನೇತೃತ್ವದಲ್ಲಿ ನಡೆದ ಈ ಭೇಟಿಯಲ್ಲಿ, 2026–28ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಪರಿಚಯಿಸಲಾಯಿತು. ಜೊತೆಗೆ, ಮುಂದಿನ ಎರಡು ವರ್ಷಗಳಲ್ಲಿ ಹಮ್ಮಿಕೊಳ್ಳಲಿರುವ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಮುದಾಯ ಸೇವಾ ಕಾರ್ಯಕ್ರಮಗಳ ರೂಪುರೇಷೆಯನ್ನು ಉಪ ರಾಯಭಾರಿಗಳ ಮುಂದೆ ಮಂಡಿಸಲಾಯಿತು. ಸಭೆಯಲ್ಲಿ ಮಾತನಾಡಿದ ಸಂದೀಪ್ ಕುಮಾರ್, ಕತಾರ್‌ನಲ್ಲಿರುವ ಭಾರತೀಯ ಸಮುದಾಯದ ಚಟುವಟಿಕೆಗಳನ್ನು ಶ್ಲಾಘಿಸಿ, ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಎಲ್ಲರನ್ನು ಒಳಗೊಂಡ ಒಗ್ಗಟ್ಟಿನ ಕಾರ್ಯಪದ್ಧತಿ ಅಗತ್ಯವೆಂದು ಹೇಳಿದರು. ದೊಡ್ಡ ಪ್ರಮಾಣದ…

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ; ಕರಾವಳಿ, ಮಲೆನಾಡಿಗೆ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಎಂಟು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಜೊತೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮುನ್ನೆಚ್ಚರಿಕಾ ಕ್ರಮವಾಗಿ ಈ ಮೂರು ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ. ಈ ಭಾಗಗಳಲ್ಲಿ ಬಲವಾದ…

ದಾಖಲೆ ಮತಗಳ ಅಂತರದಿಂದ ಕ್ರಿಸ್ಟನ್ ಮೆನೆಜಸ್ ಐಸಿವೈಎಂ ಮಂಗಳೂರು ಡಯಾಸಿಸ್ ಅಧ್ಯಕ್ಷರಾಗಿ ಆಯ್ಕೆ

ಮಂಗಳೂರು: ಭಾರತೀಯ ಕ್ಯಾಥೋಲಿಕ್ ಯುವ ಚಳವಳಿ (ICYM) ಮಂಗಳೂರು ಡಯಾಸಿಸ್‌ನ 2026–27ನೇ ಸಾಲಿನ ಅಧ್ಯಕ್ಷರಾಗಿ ಕ್ರಿಸ್ಟನ್ ಜೋಶುವಾ ಮೆನೆಜಸ್ ದಾಖಲೆ ಮತಗಳ ಅಂತರದಿಂದ ಆಯ್ಕೆಯಾಗಿದ್ದಾರೆ. ರೊಸಾರಿಯೊ ಕ್ಯಾಥೆಡ್ರಲ್ ಹಾಲ್‌ನಲ್ಲಿ ನಡೆದ 80ನೇ ಐಸಿವೈಎಂ ಸಾರ್ವತ್ರಿಕ ಚುನಾವಣೆಯಲ್ಲಿ ಕ್ರಿಸ್ಟನ್ 269 ಮತಗಳನ್ನು ಪಡೆದು ಅವಿತ್ ಪ್ರೆಮ್ಸನ್ ಲೋಬೊ (99 ಮತ) ಅವರನ್ನು ಸೋಲಿಸಿದರು. ಇದು ಐಸಿವೈಎಂ ಮಂಗಳೂರು ಡಯಾಸಿಸ್ ಚುನಾವಣೆಯ ಇತಿಹಾಸದಲ್ಲೇ ಅಭ್ಯರ್ಥಿಯೊಬ್ಬರು ಪಡೆದ ಅತ್ಯಧಿಕ ಮತಗಳಾಗಿದೆ. ಡೆರೆಬೈಲ್‌ನ ಎಡ್ವರ್ಡ್ ಮತ್ತು ಬೆನೆಡಿಕ್ಟಾ ಮೆನೆಜಸ್ ದಂಪತಿಯ ಪುತ್ರರಾದ ಕ್ರಿಸ್ಟನ್, ಶೈಕ್ಷಣಿಕ, ಧಾರ್ಮಿಕ ಹಾಗೂ ವಿದ್ಯಾರ್ಥಿ ಸಂಘಟನೆಗಳಲ್ಲಿ ಹಲವು ನಾಯಕತ್ವ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಕುಂಟಿಕಾನದ ಸೇಂಟ್ ಆನ್ಸ್ ಶಾಲೆಯ ವಿದ್ಯಾರ್ಥಿ ನಾಯಕನಾಗಿ ಆರಂಭವಾದ ಅವರ ನಾಯಕತ್ವದ ಪಯಣ, ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಮಂಡಳಿ ಅಧ್ಯಕ್ಷರ ಹುದ್ದೆಯವರೆಗೂ ವಿಸ್ತರಿಸಿದೆ. ಚರ್ಚ್ ಚಟುವಟಿಕೆಗಳಲ್ಲಿ ವೈಸಿಎಸ್ ಘಟಕದ ಅಧ್ಯಕ್ಷ, ಡೆರೆಬೈಲ್ ಐಸಿವೈಎಂ ಅಧ್ಯಕ್ಷ,…

ಮುಂಬೈನಲ್ಲಿ ಮಳೆಯ ಆರ್ಭಟ; ಕಟ್ಟಡ ಕುಸಿದು 6 ಸಾವು, ಜನಜೀವನ ಅಸ್ತವ್ಯಸ್ತ

ಮುಂಬೈ: ಧಾರಾಕಾರ ಮಳೆಯಿಂದ ಮಹಾರಾಷ್ಟ್ರದ ರಾಜಧಾನಿ ಮುಂಬೈ ತತ್ತರಿಸಿದೆ. ಭಾನುವಾರ ಮುಂಬೈನ ಹಲವು ಭಾಗಗಳಲ್ಲಿ 200 ರಿಂದ 300 ಮಿ.ಮೀ.ವರೆಗೆ ಮಳೆಯಾಗಿದೆ ಎಂದು ಅಂದಾಜಿಸಲಾಗಿದೆ. ಸೋಮವಾರವೂ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಿರಂತರ ಮಳೆ ಸಂದರ್ಭದಲ್ಲಿ ಮನ್ಖುರ್ಡ್ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಆರು ಮಂದಿ ಮೃತಪಟ್ಟಿದ್ದಾರೆ. ಓರ್ವ ಗಾಯಗೊಂಡಿದ್ದು, ಮತ್ತೊಬ್ಬರು ಅವಶೇಷಗಳಡಿ ಸಿಲುಕಿರುವ ಶಂಕೆ ಹಿನ್ನೆಲೆಯಲ್ಲಿ ಎನ್‌ಡಿಆರ್‌ಎಫ್‌, ಅಗ್ನಿಶಾಮಕ ದಳ, ಬಿಎಂಸಿ ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಭಾನುವಾರ ರಾತ್ರಿ ಮನ್ಖುರ್ಡ್‌ನ ಜನತಾ ನಗರದಲ್ಲಿ ಹನುಮಾನ್ ಮಂದಿರದ ಸಮೀಪ ಕಟ್ಟಡದ ಒಂದು ಭಾಗ ಏಕಾಏಕಿ ಕುಸಿದಿದೆ. ಅವಶೇಷಗಳಡಿಯಿಂದ ನಾಲ್ವರು ಮಹಿಳೆಯರು ಮತ್ತು ಇಬ್ಬರು ಪುರುಷರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಈ ನಡುವೆ, ಮಳೆಯ ಅಬ್ಬರದಿಂದ ನಗರದಲ್ಲಿ ರಸ್ತೆ ಜಲಾವೃತಗೊಂಡಿದ್ದು, ವಾಹನ ಸಂಚಾರ ಹಾಗೂ ಜನಜೀವನ…

ಮುಂಬೈ ಮಳೆ ಎಫೆಕ್ಟ್: ವಿಶ್ವವಿದ್ಯಾಲಯದ ಸೋಮವಾರದ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

ಮುಂಬೈ: ಧಾರಾಕಾರ ಮಳೆ ಮತ್ತು ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಭಾರೀ ಮಳೆ ಎಚ್ಚರಿಕೆಯ ಹಿನ್ನೆಲೆಯಲ್ಲಿ ಮುಂಬೈ ವಿಶ್ವವಿದ್ಯಾಲಯವು ಸೋಮವಾರ ನಿಗದಿಯಾಗಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿದೆ. ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿಯ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವಿಶ್ವವಿದ್ಯಾಲಯ ತಿಳಿಸಿದೆ. ನಿರಂತರ ಮಳೆ ಮತ್ತು ಹವಾಮಾನ ವೈಪರೀತ್ಯದಿಂದ ಸಂಚಾರ ಹಾಗೂ ಪರೀಕ್ಷೆಗಳ ಸುಗಮ ನಿರ್ವಹಣೆಗೆ ತೊಂದರೆ ಉಂಟಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದೂಡಲಾದ ಪರೀಕ್ಷೆಗಳ ಹೊಸ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು. ಪರಿಷ್ಕೃತ ವೇಳಾಪಟ್ಟಿಗಾಗಿ ವಿದ್ಯಾರ್ಥಿಗಳು ಮುಂಬೈ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ ಅನ್ನು ನಿಯಮಿತವಾಗಿ ಪರಿಶೀಲಿಸುವಂತೆ ಸೂಚಿಸಲಾಗಿದೆ. ಅಲ್ಲದೆ, ಪರಿಶೀಲಿಸದ ಮಾಹಿತಿಯನ್ನು ನಂಬದಂತೆ ವಿಶ್ವವಿದ್ಯಾಲಯ ಮನವಿ ಮಾಡಿದೆ.

ಮೊಬೈಲ್ ಟಾರ್ಚ್‌ ಬೆಳಕಿನಲ್ಲಿ KSRTC ಬಸ್ ಸಂಚಾರ; ಇದು ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ದುಸ್ಥಿತಿ ಎಂದ ಜೆಡಿಎಸ್

ಬೆಂಗಳೂರು: ಕಲಬುರಗಿಯಿಂದ ಚಿಂಚೋಳಿಗೆ ಸಂಚರಿಸುತ್ತಿದ್ದ ಕೆಕೆಆರ್‌ಟಿಸಿ (KKRTC) ಬಸ್‌ನಲ್ಲಿ ಹೆಡ್‌ಲೈಟ್ ಕಾರ್ಯನಿರ್ವಹಿಸದ ಹಿನ್ನೆಲೆಯಲ್ಲಿ ನಿರ್ವಾಹಕರ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಲಾಗಿದೆ ಎನ್ನಲಾದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಕುರಿತು ಜೆಡಿಎಸ್ ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವಿಡಿಯೊ ಹಂಚಿಕೊಂಡಿರುವ ಜೆಡಿಎಸ್, “ಇದು ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ದುಸ್ಥಿತಿ” ಎಂದು ಟೀಕಿಸಿದೆ. “ಪ್ರಯಾಣಿಕರು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿರುವುದು ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಬಗ್ಗೆ ಕಾಂಗ್ರೆಸ್ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ” ಎಂದು ಪಕ್ಷ ಆರೋಪಿಸಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಅನುದಾನದಲ್ಲಿ ಖರೀದಿಸಿದ ಹೊಸ ಬಸ್‌ಗಳನ್ನು ಬೇರೆ ಪ್ರದೇಶಗಳಿಗೆ ನಿಯೋಜಿಸಿ, ಗುಜರಿಗೆ ಸೇರಬೇಕಾದ ಹಳೆಯ ಬಸ್‌ಗಳನ್ನು ಚಿಂಚೋಳಿ ಭಾಗಕ್ಕೆ ಬಿಡಲಾಗಿದೆ…