ಬೆಂಗಳೂರು: ಹೊರ ವರ್ತುಲ ರಸ್ತೆ (ORR) ಸಮಗ್ರ ಅಭಿವೃದ್ಧಿ ಯೋಜನೆಯ ಅಂತಿಮ ವಿನ್ಯಾಸ ರೂಪಿಸುವ ಮುನ್ನ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಬೃಹತ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸಚಿವರು ಲೌರಿ ಜಂಕ್ಷನ್ನಿಂದ ಸಿಲ್ಕ್ ಬೋರ್ಡ್ ಜಂಕ್ಷನ್ ಹಾಗೂ ಅಲ್ಲಿಂದ ಇಬ್ಲೂರು ಜಂಕ್ಷನ್ವರೆಗೆ ಸ್ಥಳ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಯೋಜನೆಯ ಪ್ರಗತಿಯನ್ನು ಪರಿಶೀಲಿಸಿದರು. ಸಿಲ್ಕ್ ಬೋರ್ಡ್ ಜಂಕ್ಷನ್ನಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗಿನ 17.1 ಕಿಲೋಮೀಟರ್ ಉದ್ದದ ಕಾರಿಡಾರ್ ಅನ್ನು ವಿಶ್ವದರ್ಜೆಯ ನಗರ ರಸ್ತೆಯಾಗಿ ಅಭಿವೃದ್ಧಿಪಡಿಸುವುದು ಯೋಜನೆಯ ಉದ್ದೇಶವಾಗಿದೆ. ಪರಿಶೀಲನೆ ವೇಳೆ ಸಚಿವರು ಪಾದಚಾರಿ ಮಾರ್ಗಗಳ ಅತಿಕ್ರಮಣ ತೆರವುಗೊಳಿಸಿ ಸುರಕ್ಷತೆ ಹೆಚ್ಚಿಸುವುದು, ಹಾನಿಗೊಳಗಾದ ಸೇವಾ ರಸ್ತೆಗಳು ಮತ್ತು ಗುಂಡಿಗಳನ್ನು ತಕ್ಷಣ ದುರಸ್ತಿಪಡಿಸುವುದು, ಬಸ್ ಬೇ, ಪಾದಚಾರಿ ಮಾರ್ಗ, ಚರಂಡಿ, ಮೀಡಿಯನ್ ಹಾಗೂ ಸೇವಾ ರಸ್ತೆಗಳಿಗೆ ಏಕರೂಪದ ವಿನ್ಯಾಸ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ, ಅಪಾಯಕಾರಿಯಾಗಿರುವ ಬೆಸ್ಕಾಂ…
Category: ಪ್ರಮುಖ ಸುದ್ದಿ
ಸೆಪ್ಟೆಂಬರ್ 9ರಂದು ಆಪಲ್ ಐಫೋನ್ ಅಲ್ಟ್ರಾ ಮಾರುಕಟ್ಟೆಗೆ? ಮಹತ್ವದ ಸಂಗತಿಗಳು ಸೋರಿಕೆ
ನವದೆಹಲಿ: ಆಪಲ್ನ ಮೊದಲ ಮಡಚಬಹುದಾದ (Foldable) ಐಫೋನ್ಗಾಗಿ ತಂತ್ರಜ್ಞಾನ ಪ್ರಿಯರು ಹಲವು ವರ್ಷಗಳಿಂದ ಕಾಯುತ್ತಿದ್ದು, ಇದೀಗ ಅದು ಶೀಘ್ರದಲ್ಲೇ ಅನಾವರಣಗೊಳ್ಳುವ ಸಾಧ್ಯತೆ ಇದೆ. ಕಂಪನಿಯು ಇನ್ನೂ ಅಧಿಕೃತ ಘೋಷಣೆ ಮಾಡದಿದ್ದರೂ, ಇತ್ತೀಚಿನ ಸೋರಿಕೆಗಳ ಪ್ರಕಾರ ‘ಐಫೋನ್ ಅಲ್ಟ್ರಾ’ ಅನ್ನು ಐಫೋನ್ 18 ಪ್ರೊ ಸರಣಿಯೊಂದಿಗೆ ಸೆಪ್ಟೆಂಬರ್ 9ರಂದು ಪರಿಚಯಿಸುವ ಸಾಧ್ಯತೆ ಇದೆ. ವರದಿಗಳ ಪ್ರಕಾರ, ಐಫೋನ್ ಅಲ್ಟ್ರಾ 7.8 ಇಂಚಿನ ಒಳಭಾಗದ ಮಡಚಬಹುದಾದ OLED ಡಿಸ್ಪ್ಲೇ ಹಾಗೂ 5.5 ಇಂಚಿನ ಹೊರ ಡಿಸ್ಪ್ಲೇ ಹೊಂದಿರಲಿದೆ. ಹೊಸ A20 ಪ್ರೊ ಚಿಪ್ಸೆಟ್, 12GB LPDDR5X RAM ಮತ್ತು ಆಪಲ್ ಅಭಿವೃದ್ಧಿಪಡಿಸಿರುವ C2 ಮೋಡೆಮ್ ಇದರಲ್ಲಿ ಇರಬಹುದು ಎನ್ನಲಾಗಿದೆ. ಬ್ಯಾಟರಿ ಸಾಮರ್ಥ್ಯ 5,400mAh ರಿಂದ 5,800mAh ನಡುವಿರಬಹುದು ಎಂದು ವದಂತಿಗಳಿವೆ. ಕ್ಯಾಮೆರಾ ವಿಭಾಗದಲ್ಲಿ ಎರಡು 48 ಮೆಗಾಪಿಕ್ಸೆಲ್ ಹಿಂಬದಿ ಕ್ಯಾಮೆರಾಗಳು ಹಾಗೂ ಒಳ ಮತ್ತು ಹೊರ ಡಿಸ್ಪ್ಲೇಗಳಿಗೆ ಪ್ರತ್ಯೇಕ ಸೆಲ್ಫಿ…
ಫುಟ್ಪಾತ್ ಒತ್ತುವರಿ ತೆರವು ಬೆನ್ನಲ್ಲೇ ಸಚಿವರ ರಾತ್ರಿ ನಗರ ಪರ್ಯಟನೆ; ರಸ್ತೆ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಗೆ ಕ್ಲಾಸ್
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಗುರುವಾರ ತಡರಾತ್ರಿ ಅಧಿಕಾರಿಗಳೊಂದಿಗೆ ನಗರದ ಔಟರ್ ರಿಂಗ್ ರೋಡ್ (ORR) ಪ್ರದೇಶದಲ್ಲಿ ಪರಿಶೀಲನೆ ನಡೆಸಿ, ರಸ್ತೆ ಹಾಗೂ ಫುಟ್ಪಾತ್ ಅವ್ಯವಸ್ಥೆ ಕುರಿತು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಸಿಲ್ಕ್ ಬೋರ್ಡ್ ಜಂಕ್ಷನ್ನಿಂದ ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ರಸ್ತೆ ವ್ಯವಸ್ಥೆಯನ್ನು ಪರಿಶೀಲಿಸಿದ ಸಚಿವರು, ದೊಡ್ಡಾನೆಕ್ಕುಂದಿ ಜಂಕ್ಷನ್ನಲ್ಲಿ ಹೊಸದಾಗಿ ಡಾಂಬರು ಹಾಕಿದ್ದ ರಸ್ತೆಯನ್ನೇ ಮತ್ತೆ ಅಗೆದಿರುವುದನ್ನು ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸಾರ್ವಜನಿಕರ ಹಣವನ್ನು ವ್ಯರ್ಥ ಮಾಡದಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಈ ವೇಳೆ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಸಮರ್ಥಿಸಿಕೊಂಡ ಸಚಿವರು, ನಗರದಲ್ಲಿ ಫುಟ್ಪಾತ್ಗಳ ಮೇಲಿನ ಅತಿಕ್ರಮಣದಿಂದ ಪಾದಚಾರಿಗಳು ರಸ್ತೆಯಲ್ಲೇ ನಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಹೇಳಿದರು. “ವ್ಯಾಪಾರ ಮಾಡಬೇಡಿ ಎಂದು ನಾವು ಹೇಳುತ್ತಿಲ್ಲ. ಆದರೆ ಮುಖ್ಯ ರಸ್ತೆಗಳ ಫುಟ್ಪಾತ್ಗಳನ್ನು ಅತಿಕ್ರಮಿಸಿ ಸಾರ್ವಜನಿಕರಿಗೆ ತೊಂದರೆ ಕೊಡಬಾರದು. ಪಾದಚಾರಿಗಳಿಗೆ ಸುರಕ್ಷಿತವಾಗಿ…
ಮೂರು ರಾಜ್ಯಗಳಲ್ಲಿ ಉಪಚುನಾವಣೆ; ಜುಲೈ 30ರಂದು ಮತದಾನ
ನವದೆಹಲಿ: ಬಿಹಾರ, ಮಧ್ಯಪ್ರದೇಶ ಹಾಗೂ ಗುಜರಾತ್ನ ತಲಾ ಒಂದು ವಿಧಾನಸಭಾ ಕ್ಷೇತ್ರಕ್ಕೆ ಭಾರತೀಯ ಚುನಾವಣಾ ಆಯೋಗ (ಇಸಿಐ) ಉಪಚುನಾವಣೆ ಘೋಷಿಸಿದೆ. ಜುಲೈ 30ರಂದು ಮತದಾನ ನಡೆಯಲಿದ್ದು, ಆಗಸ್ಟ್ 3ರಂದು ಮತ ಎಣಿಕೆ ನಡೆಯಲಿದೆ. ಆಗಸ್ಟ್ 4ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಬಿಹಾರದ ಬಂಕಿಪುರ, ಮಧ್ಯಪ್ರದೇಶದ ದಾಟಿಯಾ ಹಾಗೂ ಗುಜರಾತ್ನ ಮಂಜಲ್ಪುರ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಬಂಕಿಪುರ ಕ್ಷೇತ್ರವು ನಿತಿನ್ ನಬಿನ್ ಅವರ ರಾಜೀನಾಮೆಯಿಂದ, ದಾಟಿಯಾ ಕ್ಷೇತ್ರವು ರಾಜೇಂದ್ರ ಭಾರ್ತಿ ಅವರ ಅನರ್ಹತೆಯಿಂದ ಹಾಗೂ ಮಂಜಲ್ಪುರ ಕ್ಷೇತ್ರವು ಯೋಗೇಶ್ಭಾಯ್ ಪಟೇಲ್ ಅವರ ನಿಧನದಿಂದ ತೆರವಾಗಿವೆ. ಚುನಾವಣಾ ವೇಳಾಪಟ್ಟಿಯ ಪ್ರಕಾರ, ಜುಲೈ 6ರಂದು ಅಧಿಸೂಚನೆ ಪ್ರಕಟವಾಗಲಿದೆ. ಜುಲೈ 13ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದು, ಜುಲೈ 14ರಂದು ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಜುಲೈ 16 ಕೊನೆಯ ದಿನವಾಗಿದೆ. ಎಲ್ಲಾ ಮತಗಟ್ಟೆಗಳಲ್ಲಿ ಇವಿಎಂ ಹಾಗೂ ವಿವಿಪ್ಯಾಟ್ ಯಂತ್ರಗಳನ್ನು ಬಳಸಲಾಗುವುದು ಎಂದು ಚುನಾವಣಾ…
ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ-2026ಕ್ಕೆ ಅರ್ಜಿ ಆಹ್ವಾನ
ನವದೆಹಲಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ (PMRBP)-2026ಕ್ಕೆ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. 5 ರಿಂದ 18 ವರ್ಷದೊಳಗಿನ ಮಕ್ಕಳು ಕ್ರೀಡೆ, ಸಾಮಾಜಿಕ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ, ಕಲೆ ಮತ್ತು ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ್ದರೆ ಅಥವಾ ಪ್ರತಿಕೂಲ ಸಂದರ್ಭಗಳಲ್ಲಿ ಅಪರೂಪದ ಧೈರ್ಯ ಪ್ರದರ್ಶಿಸಿದ್ದರೆ ಈ ಪ್ರತಿಷ್ಠಿತ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ರಾಷ್ಟ್ರೀಯ ಪ್ರಶಸ್ತಿ ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಯಾವುದೇ ನಾಗರಿಕ, ಶಾಲೆ, ಶಿಕ್ಷಣ ಸಂಸ್ಥೆ ಅಥವಾ ಸಂಘಟನೆಗಳು ಅರ್ಹ ಮಕ್ಕಳನ್ನು ನಾಮನಿರ್ದೇಶನ ಮಾಡಬಹುದಾಗಿದ್ದು, ಮಕ್ಕಳು ಸ್ವಯಂ ನಾಮನಿರ್ದೇಶನದ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿಯೊಂದಿಗೆ ವೈಯಕ್ತಿಕ ವಿವರಗಳು, ಇತ್ತೀಚಿನ ಭಾವಚಿತ್ರ, ಅಗತ್ಯ ದಾಖಲೆಗಳು ಹಾಗೂ ಅಭ್ಯರ್ಥಿಯ ಸಾಧನೆ ಮತ್ತು ಅದರ ಪರಿಣಾಮವನ್ನು ವಿವರಿಸುವ…
ಕಲ್ಲು ಕ್ವಾರಿ ದುರಂತ; ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು STS ಆಗ್ರಹ, ಕ್ಷಿಪ್ರ ತನಿಖೆಗೆ ಡಿಸಿಎಂ ಸೂಚನೆ
ಬೆಂಗಳೂರು: ರಾಮನಗರ ಜಿಲ್ಲೆಯ ಮಾದಪಟ್ಟಣ ಗ್ರಾಮದ ಸಮೀಪದ ಕಾವೇರಿ ಕ್ರಷರ್ನಲ್ಲಿ ಸಂಭವಿಸಿದ ಭೀಕರ ಕಲ್ಲು ಕ್ವಾರಿ ದುರಂತದಲ್ಲಿ ಬಿಹಾರ ಮೂಲದ ಏಳು ಕಾರ್ಮಿಕರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಐವರು ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಮೈಸೂರು ರಸ್ತೆಯ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆಯ ಬಳಿಕ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಕೈ, ಕಾಲು, ತಲೆ ಹಾಗೂ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿದ ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ. ಸೋಮಶೇಖರ್, “10 ಕಾರ್ಮಿಕರ ಪೈಕಿ 7 ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಈ ಹಿಂದೆಯೇ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧವೂ ಪ್ರಕರಣ ದಾಖಲಿಸಬೇಕು. ದುರಂತಕ್ಕೆ ಕಾರಣರಾದವರನ್ನು ಕೂಡಲೇ ಬಂಧಿಸಬೇಕು” ಎಂದು ಆಗ್ರಹಿಸಿದರು. ಇದೇ…
ಡಿವಿಎಸ್ ಆಡಿಯೋ ಲೀಕ್ ವಿವಾದ: ಸೂಕ್ಷ್ಮ ವಿಷಯ, ಖಚಿತ ಮಾಹಿತಿ ಇಲ್ಲದೆ ತರಾತುರಿಯಲ್ಲಿ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದ ವಿಜಯೇಂದ್ರ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರದ್ದು ಎನ್ನಲಾದ ಆಡಿಯೋ ಲೀಕ್ ಪ್ರಕರಣ ರಾಜ್ಯ ರಾಜಕೀಯದಲ್ಲಿ, ವಿಶೇಷವಾಗಿ ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿರುವ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಆಡಿಯೋ ತಮ್ಮದಲ್ಲ ಎಂದು ಡಿ.ವಿ. ಸದಾನಂದಗೌಡ ಅವರೇ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು. “ವೈರಲ್ ಆಗಿರುವ ಆಡಿಯೋ ಅಸಲಿಯೇ ಅಥವಾ ನಕಲಿಯೇ ಎಂಬುದು ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ. ಈ ಬಗ್ಗೆ ಸದಾನಂದಗೌಡ ಅವರೇ ಅದು ತಮ್ಮ ಧ್ವನಿಯಲ್ಲ ಎಂದು ಹೇಳಿದ್ದಾರೆ” ಎಂದು ವಿಜಯೇಂದ್ರ ತಿಳಿಸಿದರು. ಪಕ್ಷದ ಹಿರಿಯ ನಾಯಕರ ಹೆಸರಿನೊಂದಿಗೆ ಸಂಬಂಧಿಸಿದ ಇಂತಹ ಸೂಕ್ಷ್ಮ ವಿಷಯದಲ್ಲಿ ಯಾವುದೇ ತನಿಖೆ ಅಥವಾ ಖಚಿತ ಮಾಹಿತಿ ಇಲ್ಲದೆ ತರಾತುರಿಯಲ್ಲಿ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದು ಅವರು ಹೇಳಿದರು. ಇದೇ ವೇಳೆ, ವಿಧಾನ ಪರಿಷತ್ ಚುನಾವಣೆಯಲ್ಲಿ…
ಕ್ವಾರಿ ದುರಂತಗಳು ಮರುಕಳಿಸುತ್ತಿದ್ದರೂ ಯಾರ ಮೇಲೂ ಕ್ರಮವಿಲ್ಲ: ಹೆಚ್ಡಿಕೆ ಬೇಸರ
ಬೆಂಗಳೂರು: ರಾಜ್ಯದಲ್ಲಿ ಪದೇಪದೇ ಕ್ವಾರಿ ದುರಂತಗಳು ಸಂಭವಿಸುತ್ತಿದ್ದರೂ, ತಪ್ಪಿತಸ್ಥರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಿರುವುದು ಅತ್ಯಂತ ಬೇಸರದ ಸಂಗತಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಸಮೀಪದ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ಏಳು ಕಾರ್ಮಿಕರು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ X ನಲ್ಲಿ ಪ್ರತಿಕ್ರಿಯಿಸಿರುವ ಅವರು, ಕ್ವಾರಿಗಳಲ್ಲಿ ಕಟ್ಟುನಿಟ್ಟಿನ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಜಾರಿಗೆ ತರಬೇಕು. ಸಂಬಂಧಿತ ಇಲಾಖೆಗಳು ನಿರಂತರ ನಿಗಾ ವಹಿಸಿ ನಿಯಮಗಳ ಅನುಷ್ಠಾನವನ್ನು ಖಚಿತಪಡಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. “ರಾಜ್ಯದಲ್ಲಿ ಪದೇಪದೇ ಕ್ವಾರಿ ದುರಂತಗಳು ನಡೆಯುತ್ತಿದ್ದರೂ ಯಾರ ಮೇಲೂ ಕ್ರಮ ಆಗಿಲ್ಲ. ಇದೇ ಕಾರಣಕ್ಕೆ ಇಂತಹ ಘಟನೆಗಳು ಮರುಕಳಿಸುತ್ತಿವೆ. ಕ್ವಾರಿ ಮಾಲೀಕರು ಕೂಡ ಅಗತ್ಯ ಮುನ್ನೆಚ್ಚರಿಕೆ ವಹಿಸಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು” ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ರಾಜ್ಯ…
ರಾಮನಗರದಲ್ಲಿ ಕಲ್ಲು ಕ್ವಾರಿ ದುರಂತ: ಬಂಡೆ ಕುಸಿದು 7 ಕಾರ್ಮಿಕರ ಸಾವು, ಐವರಿಗೆ ಗಾಯ
ರಾಮನಗರ: ರಾಜಧಾನಿ ಬೆಂಗಳೂರು ಹೊರವಲಯದ ಕಲ್ಲು ಕ್ವಾರಿಯಲ್ಲಿ ಬೃಹತ್ ಬಂಡೆ ಕುಸಿದು ಏಳು ಕೂಲಿ ಕಾರ್ಮಿಕರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ರಾಮನಗರ ಜಿಲ್ಲೆಯ ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಸಮೀಪದ ಕಾವೇರಿ ಕ್ರಷರ್ನಲ್ಲಿ ಸಂಭವಿಸಿದೆ. ಮಂಗಳವಾರ ಮುಂಜಾನೆ ಸುಮಾರು 5 ಗಂಟೆ ವೇಳೆಗೆ ಈ ದುರ್ಘಟನೆ ನಡೆದಿದ್ದು, ಸುಮಾರು 40 ಅಡಿ ಎತ್ತರದಿಂದ ಬೃಹತ್ ಬಂಡೆ ಕುಸಿದು ಕೆಳಭಾಗದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಿದ್ದ ಪರಿಣಾಮ ಭಾರೀ ಅನಾಹುತ ಸಂಭವಿಸಿದೆ. ಹಿಟಾಚಿ ಯಂತ್ರದ ಮೂಲಕ ಕಲ್ಲು ತೆಗೆಯುವ ಕಾಮಗಾರಿ ನಡೆಯುತ್ತಿದ್ದ ವೇಳೆ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಕ್ವಾರಿಯಲ್ಲಿ ಬಿಹಾರ ಮೂಲದ 10ರಿಂದ 15 ಕಾರ್ಮಿಕರು ಹಾಗೂ 2ರಿಂದ 3 ಸ್ಥಳೀಯ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಗಾಯಗೊಂಡ ಐವರು ಕಾರ್ಮಿಕರನ್ನು ತಕ್ಷಣವೇ ರಾಮನಗರದ ಆರ್.ಆರ್. ಆಸ್ಪತ್ರೆಗೆ ದಾಖಲಿಸಿ…
‘ಗೃಹಜ್ಯೋತಿ ಕರೆಂಟಿಗೂ ಜಾತಿ ಪ್ರಮಾಣಕ್ಕೂ ಏನು ಸಂಬಂಧ?’; ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಟೀಕಾಸ್ತ್ರ
ಬೆಂಗಳೂರು: ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆಗೆ ರಾಜ್ಯ ಸರ್ಕಾರ ಮುಂದಾಗಿರುವ ಬೆನ್ನಲ್ಲೇ, ಪರಿಶೀಲನೆ ವೇಳೆ ಜಾತಿ ಪ್ರಮಾಣ ಪತ್ರ ಸೇರಿದಂತೆ ವಿವಿಧ ದಾಖಲೆಗಳನ್ನು ಕೇಳುತ್ತಿರುವ ಕ್ರಮವನ್ನು ವಿರೋಧ ಪಕ್ಷವಾದ ಜೆಡಿಎಸ್ ತೀವ್ರವಾಗಿ ಟೀಕಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿರುವ ಜೆಡಿಎಸ್, ಉಚಿತ ವಿದ್ಯುತ್ ಯೋಜನೆಗೆ ಜಾತಿ ಪ್ರಮಾಣ ಪತ್ರ ಹಾಗೂ ಪ್ಯಾನ್ ಕಾರ್ಡ್ ಕೇಳುವುದರ ಹಿಂದಿನ ಉದ್ದೇಶವೇನು ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ. “ಯಾವುದೇ ಷರತ್ತುಗಳಿಲ್ಲದೆ ಎಲ್ಲರಿಗೂ ಉಚಿತ ವಿದ್ಯುತ್ ನೀಡುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಈಗ ಮನೆ-ಮನೆ ಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳನ್ನು ಯೋಜನೆಯಿಂದ ಹೊರಗಿಡಲು ಪ್ರಯತ್ನಿಸುತ್ತಿದೆ” ಎಂದು ಜೆಡಿಎಸ್ ಆರೋಪಿಸಿದೆ. ಇದಲ್ಲದೆ, “ಉಚಿತ ವಿದ್ಯುತ್ ಪಡೆಯಲು ಪ್ಯಾನ್ ಕಾರ್ಡ್ ಯಾಕೆ ಬೇಕು? ವಿದ್ಯುತ್ ಸಂಪರ್ಕಕ್ಕೂ ಜಾತಿ ಪ್ರಮಾಣ ಪತ್ರಕ್ಕೂ ಏನು ಸಂಬಂಧ? ಕರ್ನಾಟಕದ ನಿವಾಸಿ ಎಂಬುದನ್ನು ದೃಢೀಕರಿಸಲು ಆಧಾರ್…
