ನವದೆಹಲಿ: ದೇಶದ ಜೀವವೈವಿಧ್ಯ ಸಂರಕ್ಷಣೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಜೀವವೈವಿಧ್ಯ ಪ್ರಾಧಿಕಾರ (NBA) ಅಳಿವಿನಂಚಿನಲ್ಲಿರುವ ಹಾಗೂ ಅಪಾಯದಲ್ಲಿರುವ ಪ್ರಭೇದಗಳ ಗುರುತಿಸುವಿಕೆ ಮತ್ತು ಸಂರಕ್ಷಣೆಗಾಗಿ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ (SOP) ಬಿಡುಗಡೆ ಮಾಡಿದೆ. ಜೈವಿಕ ವೈವಿಧ್ಯತೆ ಕಾಯ್ದೆ-2002ರ ಅಡಿಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವೈಜ್ಞಾನಿಕ ಆಧಾರದ ಮೇಲೆ ಅಪಾಯದಲ್ಲಿರುವ ಪ್ರಭೇದಗಳನ್ನು ಗುರುತಿಸಿ ಅಧಿಸೂಚನೆ ಹೊರಡಿಸಲು ಈ ಮಾರ್ಗಸೂಚಿ ನೆರವಾಗಲಿದೆ. ಹೊಸ SOP ಮೂಲಕ ಅಳಿವಿನ ಅಪಾಯ ಎದುರಿಸುತ್ತಿರುವ ಪ್ರಾಣಿ ಮತ್ತು ಸಸ್ಯ ಪ್ರಭೇದಗಳನ್ನು ಗುರುತಿಸಲು ಏಕರೂಪ, ಪಾರದರ್ಶಕ ಹಾಗೂ ವಿಜ್ಞಾನಾಧಾರಿತ ವ್ಯವಸ್ಥೆ ರೂಪಿಸುವ ಗುರಿ ಹೊಂದಲಾಗಿದೆ. ಜೊತೆಗೆ, ಅವುಗಳ ಸಂರಕ್ಷಣೆಗಾಗಿ ಅಗತ್ಯ ಕ್ರಮಗಳನ್ನು ಶಿಫಾರಸು ಮಾಡಲು ಸಹ ಇದು ನೆರವಾಗಲಿದೆ. ಭಾರತವು ವಿಶ್ವದ ಜೀವವೈವಿಧ್ಯ ಸಮೃದ್ಧ ರಾಷ್ಟ್ರಗಳಲ್ಲಿ ಒಂದಾಗಿದ್ದರೂ, ಆವಾಸಸ್ಥಾನ ನಷ್ಟ, ಅತಿಯಾದ ಶೋಷಣೆ, ಮಾಲಿನ್ಯ, ಆಕ್ರಮಣಕಾರಿ ಪ್ರಭೇದಗಳು ಹಾಗೂ ಹವಾಮಾನ ಬದಲಾವಣೆಯಿಂದ ಜೀವವೈವಿಧ್ಯಕ್ಕೆ ಗಂಭೀರ…
Category: ಪ್ರಮುಖ ಸುದ್ದಿ
‘ಅಯೋಗ್ಯ 2’ ಯಶೋಗಾಥೆಗೆ ‘ಮುದ್ದು ಮುದ್ದು ಪುಟ್ಟಲಕ್ಷ್ಮಿ’ ಮುನ್ನುಡಿ!
‘ಅಯೋಗ್ಯ 2’ ಆಗಸ್ಟ್ 7ರಂದು ತೆರೆಗೆ ಬರಲು ಸಜ್ಜಾಗಿದೆ. ಭಾರೀ ನಿರೀಕ್ಷೆಹುಟ್ಟಿಸಿರುವ ಈ ಚಿತ್ರದ ಹಾಡು ಸಾಮಾಜಿಕ ಜಾಲತಾಣದಲ್ಲಿ ಸಕತ್ ಲೈಕ್ಸ್ ಗಿಟ್ಟಿಸಿಕೊಂಡಿದೆ. ಈ ಚಿತ್ರದಲ್ಲಿ ನೀನಾಸಂ ಸತೀಶ್ ಹಾಗೂ ರಚಿತಾ ರಾಮ್ ನಟಿಸಿದ್ದಾರೆ. ‘ಅಯೋಗ್ಯ’ ಸಿನಿಮಾ ಭರ್ಜರಿ ಯಶಸ್ಸು ಕಂಡಿತ್ತು. ‘ಅಯೋಗ್ಯ 2’ ಕೂಡಾ ಯಶೋಗಾಥೆ ಬರೆಯಲಿದೆ ಎಂದು ಚಿತ್ರ ವಿಸ್ವಾಸದಲ್ಲಿದೆ. ಇತ್ತೀಚೆಗೆ ಬಿಡುಗಡೆಯಾಗಿರುವ ಚಿತ್ರದ ‘ಮುದ್ದು ಮುದ್ದು ಪುಟ್ಟಲಕ್ಷ್ಮಿ’ ವಿಡಿಯೋ ಸಾಂಗ್ ನೋಡಿದ ಪ್ರೇಕ್ಷಕರು ಫಿದಾ ಆಗಿದ್ದಾರೆ. ಈ ಸಿನಿಮಾವನ್ನು ಮಹೇಶ್ ಅವರು ನಿರ್ದೇಶಿಸಿದ್ದಾರೆ
‘ಜನ ನಾಯಗನ್’ ನಿರ್ಮಾಪಕ ಕೆ. ವೆಂಕಟ್ ನಾರಾಯಣ್ಗೆ ಸಂಪುಟ ದರ್ಜೆ ಸ್ಥಾನಮಾನ
ಚೆನ್ನೈ: ನಟ ಜೋಸೆಫ್ ವಿಜಯ್ ಅಭಿನಯದ ‘ಜನ ನಾಯಗನ್’ ಚಿತ್ರದ ನಿರ್ಮಾಪಕ ಕೆ. ವೆಂಕಟ್ ನಾರಾಯಣ್ ಅವರನ್ನು ತಮಿಳುನಾಡು ಸರ್ಕಾರ ನವದೆಹಲಿಯ ವಿಶೇಷ ಪ್ರತಿನಿಧಿಯಾಗಿ ನೇಮಕ ಮಾಡಿದೆ. ಈ ಹುದ್ದೆಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿದೆ. ವಿಜಯ್ ಅವರ ಕೊನೆಯ ಚಿತ್ರ ಎನ್ನಲಾಗುತ್ತಿರುವ ‘ಜನ ನಾಯಗನ್’ ಇನ್ನೂ ಬಿಡುಗಡೆಯಾಗಿಲ್ಲ. ಚಿತ್ರಕ್ಕೆ ಬಂಡವಾಳ ಹೂಡಿರುವ ವೆಂಕಟ್ ನಾರಾಯಣ್ ಅವರಿಗೆ ನಷ್ಟದ ಪರಿಸ್ಥಿತಿ ಎದುರಾಗಿದೆ ಎಂಬ ಚರ್ಚೆಯ ನಡುವೆಯೇ ಈ ನೇಮಕ ನಡೆದಿದೆ. ಈ ಬೆಳವಣಿಗೆಗೆ ಸಂಬಂಧಿಸಿ ತಮಿಳು ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದ್ದು, ನೇಮಕಕ್ಕೂ ಸಿನಿಮಾಗೂ ಸಂಬಂಧವಿಲ್ಲ ಎಂದು ತಮಿಳಗ ವೆಟ್ರಿ ಕಳಗಂ ನಾಯಕರು ಸ್ಪಷ್ಟನೆ ನೀಡಿದ್ದಾರೆ. ವಿಜಯ್ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಲು ತೆರಳಿದ್ದ ಸಂದರ್ಭದಲ್ಲೂ ವೆಂಕಟ್ ನಾರಾಯಣ್ ಜೊತೆಗಿದ್ದರು. ಅವರ ಆಡಳಿತಾತ್ಮಕ ಅನುಭವ ಮತ್ತು ನಂಬಿಕೆಯ ಆಧಾರದ ಮೇಲೆ ಈ ಜವಾಬ್ದಾರಿ ನೀಡಲಾಗಿದೆ ಎಂದು…
‘Jana Nayagan’ producer K. Venkat Narayan appointed Tamil Nadu’s special representative in Delhi
Chennai: The Tamil Nadu government has appointed K. Venkat Narayan, producer of actor Vijay’s upcoming film Jana Nayagan, as the state’s special representative in New Delhi. The appointment carries cabinet-level status, according to reports. The move has triggered political discussions in Tamil Nadu, as it comes at a time when speculation is growing over the financial prospects of Jana Nayagan, which is yet to hit theatres. However, leaders of Tamilaga Vettri Kazhagam have clarified that the appointment is unrelated to the film. Venkat Narayan, who has invested in the project,…
ಮುತ್ತತ್ತಿ ದುರಂತ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ಕಾವೇರಿ ನದಿಯಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸಚಿವರ ಸೂಚನೆ
ಬೆಂಗಳೂರು: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಒಂದೇ ಕುಟುಂಬದ ಐವರು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನೆಗೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮಂಡ್ಯ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ. ಈ ಸಂಬಂಧ ಮಂಡ್ಯ ಜಿಲ್ಲಾಧಿಕಾರಿಗೆ ಸೂಚನೆ ನೀಡಿರುವ ಸಚಿವರು, ಕಾವೇರಿ ನದಿಯಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ‘ಸೇಫ್ ಜೋನ್’ ಬ್ಯಾರಿಕೇಡ್ಗಳನ್ನು ಅಳವಡಿಸಬೇಕು ಎಂದು ತಿಳಿಸಿದ್ದಾರೆ. ಜೊತೆಗೆ ಅಪಾಯಕಾರಿ ಪ್ರದೇಶಗಳಲ್ಲಿ ಜಾಗೃತಿ ಫಲಕಗಳನ್ನು ಅಳವಡಿಸಿ, ಪ್ರವಾಸಿಗರಿಗೆ ಮಾರ್ಗದರ್ಶನ ನೀಡಲು ಗೈಡ್ಗಳನ್ನು ನಿಯೋಜಿಸುವಂತೆ ಸೂಚಿಸಿದ್ದಾರೆ. ನದಿಯಲ್ಲಿ ನಿಗದಿತ ಸುರಕ್ಷಿತ ಸ್ಥಳಗಳನ್ನು ಹೊರತುಪಡಿಸಿ ಬೇರೆಡೆ ಈಜುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಮುತ್ತತ್ತಿಯಲ್ಲಿ ಇತ್ತೀಚೆಗೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಈ ಘಟನೆ ರಾಜ್ಯಾದ್ಯಂತ ಆಘಾತ ಮೂಡಿಸಿದ್ದು, ಪ್ರವಾಸಿ…
ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತ; ಮೂವರು ಸಾವು, ಆರು ಮಂದಿಗೆ ಗಾಯ
ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಶನಿವಾರ ಮುಂಜಾನೆ ಈ ಘಟನೆ ನಡೆದಿದ್ದು, ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದ ನಿವಾಸಿಗಳು ಓಮಿನಿ ವಾಹನದಲ್ಲಿ ಮಂತ್ರಾಲಯಕ್ಕೆ ತೆರಳುತ್ತಿದ್ದರು. ಈ ವೇಳೆ ಪಕ್ಕದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನ ನಿಯಂತ್ರಣ ತಪ್ಪಿ ಓಮಿನಿ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಓಮಿನಿ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ರಮೇಶ್ ಬಳ್ಳಾರಿ (45), ಕೆಂಚಮ್ಮ ಬಾಳೆಕಾಯಿ (35) ಹಾಗೂ ಅಮೃತಾ (25) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಆರು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಾದಕ ದ್ರವ್ಯ ವಿರುದ್ಧ ಬೀದಿಗಿಳಿದ ಸಿಎಂ ದಳಪತಿ ವಿಜಯ್ : ಚೆನ್ನೈನಲ್ಲಿ 6 ಕಿ.ಮೀ ‘ಸ್ಟಾರ್ಟ್ ರನ್
ಚೆನ್ನೈ: ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ ಚೆನ್ನೈನಲ್ಲಿ ಆಯೋಜಿಸಿದ್ದ ‘ಸ್ಟಾರ್ಟ್ ರನ್, ಸ್ಟಾಪ್ ಡ್ರಗ್ಸ್’ ಮ್ಯಾರಥಾನ್ನಲ್ಲಿ ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ Thalapathy Vijay ಅವರು ಭಾಗವಹಿಸಿ ಸಾರ್ವಜನಿಕರ ಗಮನ ಸೆಳೆದರು. ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ನಡೆದ ಈ ಓಟದಲ್ಲಿ ಸಿಎಂ ವಿಜಯ್ ಅವರು ಬರೋಬ್ಬರಿ 6 ಕಿಲೋಮೀಟರ್ ಓಡಿ ಮಾದರಿಯಾದರು. ಸಾಮಾನ್ಯವಾಗಿ ಇಂತಹ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿಗಳು ಕೇವಲ ಚಾಲನೆ ನೀಡಿ ನಿರ್ಗಮಿಸುವುದು ರೂಢಿ. ಆದರೆ ಯಾವುದೇ ರಾಜಕೀಯ ಹಮ್ಮು-ಬಿಮ್ಮು ಇಲ್ಲದೆ, ಸಾಮಾನ್ಯ ನಾಗರಿಕನಂತೆ ಜನರೊಂದಿಗೆ ಹೆಜ್ಜೆ ಹಾಕಿದ ದಳಪತಿ ವಿಜಯ್ ಅವರ ನಡೆ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಮ್ಯಾರಥಾನ್ ವೇಳೆ ಸಿಎಂ ವಿಜಯ್ ಅವರನ್ನು ಕಂಡ ಯುವಕ-ಯುವತಿಯರು ಸೆಲ್ಫೀಗಾಗಿ ಮುಗಿಬಿದ್ದ ದೃಶ್ಯಗಳು ಗಮನಸೆಳೆದವು. ಎಲ್ಲರೊಂದಿಗೆ ಹೆಜ್ಜೆಗೂಡಿ, ನಂತರ ಸಾರ್ವಜನಿಕರ ಜೊತೆ ಜೊತೆಯಾಗಿಯೇ 6 ಕಿಲೋಮೀಟರ್ ದೂರವನ್ನು ಓಡಿ…
2024ರಿಂದ 21 ಬಾರಿ ಕೈಕೊಟ್ಟ ನಮ್ಮ ಮೆಟ್ರೋ; ಬಿಎಂಆರ್ಸಿಎಲ್ಗೆ ತೇಜಸ್ವಿ ಸೂರ್ಯ ತರಾಟೆ
ಬೆಂಗಳೂರು: ನಗರದ ಸಾರ್ವಜನಿಕ ಸಾರಿಗೆಯ ಪ್ರಮುಖ ಆಧಾರವಾಗಿರುವ ನಮ್ಮ ಮೆಟ್ರೋ ಮತ್ತೊಮ್ಮೆ ತಾಂತ್ರಿಕ ದೋಷದಿಂದಾಗಿ ಪ್ರಯಾಣಿಕರ ಆಕ್ರೋಶಕ್ಕೆ ಗುರಿಯಾಗಿದೆ. ಕಳೆದ ಮೂರು ವರ್ಷಗಳಲ್ಲಿ ಸರಣಿ ಅಡಚಣೆಗಳು ವರದಿಯಾಗಿದ್ದು, 2024ರಿಂದ 2026ರ ಜೂನ್ 26ರವರೆಗೆ ಒಟ್ಟು 21 ಬಾರಿ ತಾಂತ್ರಿಕ ಸಮಸ್ಯೆಗಳು ಉಂಟಾಗಿವೆ ಎಂಬ ಮಾಹಿತಿ ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ಆಡಳಿತ ಮಂಡಳಿಯು ಸಾರ್ವಜನಿಕರಿಗೆ ಉತ್ತರ ನೀಡಬೇಕಾಗಿದೆ ಎಂದು ಆಗ್ರಹಿಸಿದ್ದಾರೆ. ಮೆಟ್ರೋದಲ್ಲಿ ಮರುಮರು ಸಂಭವಿಸುತ್ತಿರುವ ತಾಂತ್ರಿಕ ವೈಫಲ್ಯಗಳನ್ನು ಗಂಭೀರವಾಗಿ ಪರಿಗಣಿಸಿರುವ ತೇಜಸ್ವಿ ಸೂರ್ಯ, ರೈಲ್ವೆ ಸುರಕ್ಷತಾ ಆಯುಕ್ತರಿಗೆ (ದಕ್ಷಿಣ ವಲಯ) ಹಾಗೂ ರಾಜ್ಯದ ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಪತ್ರ ಬರೆದಿದ್ದಾರೆ. “ಬಿಎಂಆರ್ಸಿಎಲ್ ದೇಶದಲ್ಲೇ ಅತ್ಯಧಿಕ ಮೆಟ್ರೋ ಪ್ರಯಾಣ ದರಗಳನ್ನು…
ಐಸ್ಲ್ಯಾಂಡ್ನಲ್ಲಿ ಭಾರತೀಯ ಮಾವಿನ ಹಣ್ಣುಗಳ ಕಮಾಲ್: ದಶೇರಿ, ಚೌಸಾ, ಲ್ಯಾಂಗ್ರಾ , ಕೇಸರ್ ಹಣ್ಣುಗಳೇ ಫಿದಾ
ರೇಕ್ಜಾವಿಕ್: ಭಾರತ ಮೊದಲ ಬಾರಿಗೆ ಐಸ್ಲ್ಯಾಂಡ್ನಲ್ಲಿ ತನ್ನ ಮಾವಿನ ಪರಂಪರೆಯ ಶ್ರೀಮಂತಿಕೆಯನ್ನು ಪ್ರದರ್ಶಿಸಿದೆ. Embassy of India in Reykjavik ಹಾಗೂ APEDA ಸಹಯೋಗದಲ್ಲಿ ಜೂನ್ 24 ಮತ್ತು 25ರಂದು Reykjavik ಮತ್ತು Akureyriಗಳಲ್ಲಿ ಭಾರತೀಯ ಮಾವಿನ ಪ್ರಚಾರ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮಗಳಲ್ಲಿ ದಶೇರಿ, ಚೌಸಾ, ಲ್ಯಾಂಗ್ರಾ ಮತ್ತು ಕೇಸರ್ ಸೇರಿದಂತೆ ಪ್ರೀಮಿಯಂ ಭಾರತೀಯ ಮಾವಿನ ಪ್ರಭೇದಗಳನ್ನು ಪ್ರದರ್ಶಿಸಲಾಗಿದ್ದು, ಐಸ್ಲ್ಯಾಂಡ್ನ ಆಮದುದಾರರು, ರಾಜತಾಂತ್ರಿಕರು ಹಾಗೂ ವ್ಯಾಪಾರ ವಲಯದಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಭಾರತೀಯ ರಾಯಭಾರಿ ಆರ್. ರವೀಂದ್ರ ಅವರು ಭಾರತೀಯ ಮಾವಿನ ವಿಶಿಷ್ಟ ಸುವಾಸನೆ ಹಾಗೂ ಉನ್ನತ ಗುಣಮಟ್ಟವನ್ನು ಉಲ್ಲೇಖಿಸಿ, ಐಸ್ಲ್ಯಾಂಡ್ ಮಾರುಕಟ್ಟೆಯಲ್ಲಿ ರಫ್ತು ವಿಸ್ತರಣೆಗೆ ಮಹತ್ವದ ಅವಕಾಶಗಳಿವೆ ಎಂದು ಹೇಳಿದರು. ಐಸ್ಲ್ಯಾಂಡ್ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವ್ಯಾಪಾರ ಒಪ್ಪಂದಗಳ ನಿರ್ದೇಶಕ ಸ್ವೀನ್ ಕೆ. ಐನಾರ್ಸನ್, ಭಾರತ–ಇಎಫ್ಟಿಎ ವ್ಯಾಪಾರ ಹಾಗೂ ಆರ್ಥಿಕ ಪಾಲುದಾರಿಕೆ ಒಪ್ಪಂದದಿಂದ ಭಾರತೀಯ…
ಡಿಕೆಶಿ ಜೊತೆ ಯಾವುದೇ ರಾಜಕೀಯ, ವ್ಯಾವಹಾರಿಕ ಸಂಬಂಧ ಇಲ್ಲ: ವಿಜಯೇಂದ್ರ ಸ್ಪಷ್ಟನೆ
ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ತಮಗೆ ಯಾವುದೇ ರಾಜಕೀಯ ಅಥವಾ ವ್ಯಾವಹಾರಿಕ ಸಂಬಂಧ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಪಕ್ಷದ ಹಿರಿಯ ನಾಯಕರ ಸಲಹೆಯಂತೆ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡುವ ನಿರ್ಧಾರದಿಂದ ಹಿಂದೆ ಸರಿದಿರುವುದಾಗಿ ತಿಳಿಸಿದ್ದಾರೆ. ಧರ್ಮಸ್ಥಳಕ್ಕೆ ಭೇಟಿ ನೀಡಿದ ವಿಜಯೇಂದ್ರ ಅವರು ವಿವಿಧ ಕೈಂಕರ್ಯಗಳಲ್ಲಿ ಭಾಗವಹಿಸಿದರು. ಈ ವೇಳೆ ಅವರೊಂದಿಗೆ ಒಬ್ಬ ಸಂಸದ, ಎಂಟು ಶಾಸಕರು ಹಾಗೂ ಇಬ್ಬರು ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದರು. ಬಳಿಕ ಧರ್ಮಸ್ಥಳ ಕ್ಷೇತ್ರದ ವಸತಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧ ನಡೆಯುತ್ತಿರುವ ಅಪಪ್ರಚಾರಗಳಿಗೆ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಪೂರ್ಣವಿರಾಮ ಇಟ್ಟಿರುವುದಾಗಿ ಹೇಳಿದರು. “ವಿಧಾನ ಪರಿಷತ್ ಚುನಾವಣೆಯ ಅಡ್ಡ ಮತದಾನದ ವಿಚಾರ ನನಗೆ ಮಾತ್ರವಲ್ಲ, ಲಕ್ಷಾಂತರ ಬಿಜೆಪಿ ಕಾರ್ಯಕರ್ತರಿಗೂ ತೀವ್ರ ನೋವು ಮತ್ತು ಆಘಾತ ಉಂಟುಮಾಡಿದೆ. ನಾನು ಭಾವನಾತ್ಮಕ ವ್ಯಕ್ತಿಯಾಗಿರುವ ಕಾರಣ ಸತ್ಯಾಸತ್ಯತೆ…
