ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದಂತೆ ರೈತರ ಆತಂಕಗಳನ್ನು ಆಲಿಸಲು ಬೈರಮಂಗಲಕ್ಕೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತೊಮ್ಮೆ ಆಹ್ವಾನ ನೀಡಿದ್ದಾರೆ. ಈ ಕುರಿತು ಅವರು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿರುವುದಲ್ಲದೆ, ಅದರ ವಿವರವನ್ನು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಸಂದೇಶದಲ್ಲಿ, ಬಿಡದಿ ಟೌನ್ಶಿಪ್ ಯೋಜನೆಯಿಂದ ಭೂಮಿ ಕಳೆದುಕೊಳ್ಳುವ ಆತಂಕದಲ್ಲಿರುವ ರೈತರ ಕಳವಳಗಳನ್ನು ನೇರವಾಗಿ ಆಲಿಸುವ ಉದ್ದೇಶದಿಂದ ಮುಖ್ಯಮಂತ್ರಿಗಳನ್ನು ಮತ್ತೊಮ್ಮೆ ಬೈರಮಂಗಲಕ್ಕೆ ಆಹ್ವಾನಿಸಿದ್ದೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಗಳಿಗೆ ಎರಡನೇ ಬಾರಿ ಪತ್ರ ಬರೆದಿರುವುದಾಗಿ ಹೇಳಿರುವ ಅವರು, “ಈ ಹಿಂದೆ ತಿಳಿಸಿದಂತೆ ಜೂನ್ 27, 2026ರಂದು ನಾನು ಬೈರಮಂಗಲದಲ್ಲಿ ರೈತರು ಹಾಗೂ ಇತರ ಬಾಧಿತ ಪಾಲುದಾರರೊಂದಿಗೆ ಸಂವಾದ ನಡೆಸಲು ಲಭ್ಯವಿರುತ್ತೇನೆ. ಮುಖ್ಯಮಂತ್ರಿಗಳು ಸಹ ಸಕಾರಾತ್ಮಕ ಮನೋಭಾವದಿಂದ ಸ್ಪಂದಿಸಿ, ಜನರ ಸಮಸ್ಯೆಗಳನ್ನು ಅವರಿರುವ ಸ್ಥಳದಲ್ಲೇ…
Category: ಪ್ರಮುಖ ಸುದ್ದಿ
‘ಗೃಹಲಕ್ಷ್ಮಿ ಯೋಜನೆ’ ಅಕ್ರಮಗಳಲ್ಲಿ ಅನುಷ್ಠಾನ ಸಮಿತಿಯ ಸದಸ್ಯರೇ ಸರದಾರರು ಎಂದ ಅಶೋಕ್
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮಗಳ ಕುರಿತಂತೆ ರಾಜ್ಯ ಸರ್ಕಾರವನ್ನು ತೆಗೆದುಕೊಂಡಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ಅಕ್ರಮದಲ್ಲಿ ಅನುಷ್ಠಾನ ಸಮಿತಿಯ ಸದಸ್ಯರೇ ಸರದಾರರು ಎಂದು ಆರೋಪಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮಗಳು ನಡೆದಿದ್ದು, ಸಾವಿರಾರು ವಂಚನೆ ಖಾತೆಗಳಿಗೆ ಕೋಟ್ಯಂತರ ರೂಪಾಯಿಗಳನ್ನು ವಿತರಿಸಲಾಗಿದೆ. ಖಾತರಿ ಅನುಷ್ಠಾನ ಸಮಿತಿಗೆ 150 ಕೋಟಿ ಖರ್ಚು ಮಾಡುವುದು ಅರ್ಥಹೀನ. ಇದರ ಜೊತೆಗೆ, ಖಾತರಿಗಳಿಗಾಗಿ ಅರ್ಜಿಗಳನ್ನು ಮರುಸಲ್ಲಿಸುವ ನಾಟಕ ಪ್ರಾರಂಭವಾಗಿದೆ. ಒಟ್ಟಾರೆಯಾಗಿ, ಕಾಂಗ್ರೆಸ್ ಖಾತರಿಗಳಲ್ಲಿ ಅವ್ಯವಸ್ಥೆ ಇದೆ ಎಂದವರು ವಾಗ್ದಾಳಿ ನಡೆಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮಗಳಾಗಿವೆ, ಸಾವಿರಾರು ಅಕ್ರಮ ಖಾತೆಗಳಿಗೆ ಕೋಟ್ಯಂತರ ರೂಪಾಯಿ ಹಣ ಪಾವತಿಸಲಾಗಿದೆ. ಗ್ಯಾರಂಟಿ ಅನುಷ್ಠಾನ ಸಮಿತಿಗೆ 150 ಕೋಟಿ ಖರ್ಚು ಮಾಡುತ್ತಿರುವುದು ನಿರರ್ಥಕ. ಇದರ ಮೇಲೆ ಗ್ಯಾರಂಟಿಗಳಿಗೆ ಮರು ಅರ್ಜಿ ಸಲ್ಲಿಸುವ ನಾಟಕ ಆರಂಭಿಸಿದೆ. ಒಟ್ಟಾರೆಯಾಗಿ ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಗೋಲ್ಮಾಲ್ ಆಗುತ್ತಿದೆ.… pic.twitter.com/jm6lj4CnU9 — R. Ashoka (@RAshokaBJP) June 25,…
ವಾಣಿಜ್ಯ ಎಲ್ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವು: ಸಿಲಿಂಡರ್ ಸರಬರಾಜು ಯಥಾಸ್ಥಿತಿ
ನವದೆಹಲಿ: ಕೈಗಾರಿಕಾ ಹಾಗೂ ವಾಣಿಜ್ಯ ಗ್ರಾಹಕರಿಗೆ ಮಹತ್ವದ ಪರಿಹಾರ ನೀಡಿರುವ ಕೇಂದ್ರ ಸರ್ಕಾರ, ದೇಶೀಯವಲ್ಲದ ಪ್ಯಾಕ್ ಮಾಡಲಾದ ಎಲ್ಪಿಜಿ (LPG) ಪೂರೈಕೆಯ ಮೇಲಿನ ಎಲ್ಲಾ ವಲಯವಾರು ನಿರ್ಬಂಧಗಳನ್ನು ತೆರವುಗೊಳಿಸಿದೆ. ಇಂಧನ ಲಭ್ಯತೆ ಸುಧಾರಿಸಿರುವ ಹಿನ್ನೆಲೆಯಲ್ಲಿ ಎಲ್ಪಿಜಿ ಸರಬರಾಜನ್ನು ಬಿಕ್ಕಟ್ಟಿನ ಪೂರ್ವ ಮಟ್ಟಕ್ಕೆ ಮರುಸ್ಥಾಪಿಸಲಾಗಿದೆ. ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಸಂದರ್ಭದಲ್ಲಿ ಕಡಿತಗೊಳಿಸಲಾಗಿದ್ದ ಬೃಹತ್ ಎಲ್ಪಿಜಿ ಸರಬರಾಜನ್ನು ಈಗ ಬಿಕ್ಕಟ್ಟಿನ ಪೂರ್ವ ಬಳಕೆಯ ಮಟ್ಟದ ಶೇ.50ರಷ್ಟು ಪುನಃಸ್ಥಾಪಿಸಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಇದರಿಂದ ವಾಣಿಜ್ಯ ಹಾಗೂ ಕೈಗಾರಿಕಾ ಬಳಕೆದಾರರಿಗೆ ಗಮನಾರ್ಹ ನೆರವು ದೊರೆಯಲಿದೆ. ಪಶ್ಚಿಮ ಏಷ್ಯಾದಲ್ಲಿ ಉಂಟಾದ ಬಿಕ್ಕಟ್ಟಿನ ವೇಳೆ ದೇಶೀಯ ಅಡುಗೆ ಅನಿಲ ಪೂರೈಕೆ ಅಡಚಣೆಯಾಗದಂತೆ ನೋಡಿಕೊಳ್ಳಲು, ಅಗತ್ಯ ಸರಕುಗಳ ಕಾಯ್ದೆಯಡಿ ಎಲ್ಪಿಜಿ ಉತ್ಪಾದನೆಗೆ ಬಳಸುವ ಸಿ3-ಸಿ4 ಹೈಡ್ರೋಕಾರ್ಬನ್ ಸ್ಟ್ರೀಮ್ಗಳನ್ನು ಸರ್ಕಾರ ಮರುನಿರ್ದೇಶಿಸಿತ್ತು. ಈಗ ಸ್ಥಳೀಯ ಉತ್ಪಾದನೆ ಹಾಗೂ ಎಲ್ಪಿಜಿ ಆಮದು ಪ್ರಮಾಣ ಹೆಚ್ಚಿರುವ ಹಿನ್ನೆಲೆಯಲ್ಲಿ ಈ…
ಲಸಿಕೆ, ಕ್ಯಾನ್ಸರ್ ಔಷಧಿಗಳಿಗೆ QR ಕೋಡ್ ಕಡ್ಡಾಯ: ಔಷಧ ಟ್ರ್ಯಾಕಿಂಗ್ ವ್ಯವಸ್ಥೆ ವಿಸ್ತರಿಸಿದ ಕೇಂದ್ರ
ನವದೆಹಲಿ: ಔಷಧಗಳ ಸುರಕ್ಷತೆ ಹೆಚ್ಚಿಸುವ ಹಾಗೂ ನಕಲಿ ಔಷಧಿಗಳ ಹಾವಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಆರೋಗ್ಯ ಸಚಿವಾಲಯವು QR ಕೋಡ್ ಆಧಾರಿತ ಔಷಧ ಟ್ರ್ಯಾಕಿಂಗ್ ವ್ಯವಸ್ಥೆಯನ್ನು ಮತ್ತಷ್ಟು ವಿಸ್ತರಿಸಿದೆ. ಇನ್ನು ಮುಂದೆ ಲಸಿಕೆಗಳು, ಆಂಟಿಮೈಕ್ರೊಬಿಯಲ್ ಔಷಧಿಗಳು, ಕ್ಯಾನ್ಸರ್ ವಿರೋಧಿ ಔಷಧಿಗಳು ಹಾಗೂ ಮಾದಕ ಮತ್ತು ಸೈಕೋಟ್ರೋಪಿಕ್ ಔಷಧಿಗಳ ಮೇಲೂ ಈ ನಿಯಮ ಅನ್ವಯವಾಗಲಿದೆ. ಈ ಸಂಬಂಧ 1945ರ ಔಷಧ ನಿಯಮಗಳಿಗೆ ತಿದ್ದುಪಡಿ ಪ್ರಕಟಿಸಿರುವ ಸಚಿವಾಲಯ, ಮೇಲ್ಕಂಡ ಔಷಧ ವರ್ಗಗಳನ್ನು ‘ಷೆಡ್ಯೂಲ್ H2’ ವ್ಯಾಪ್ತಿಗೆ ಸೇರಿಸಿದೆ. ಇದರ ಅನ್ವಯ, ಔಷಧಗಳ ಪ್ಯಾಕೇಜಿಂಗ್ ಮೇಲೆ ಬಾರ್ಕೋಡ್ ಅಥವಾ QR ಕೋಡ್ ಅಳವಡಿಸುವುದು ಕಡ್ಡಾಯವಾಗಲಿದೆ. ಹೊಸ ನಿಯಮಗಳ ಪ್ರಕಾರ, ಔಷಧ ತಯಾರಕರು ಉತ್ಪನ್ನದ ಜೆನೆರಿಕ್ ಮತ್ತು ಬ್ರಾಂಡ್ ಹೆಸರು, ತಯಾರಕ ಸಂಸ್ಥೆಯ ವಿವರ, ಬ್ಯಾಚ್ ಸಂಖ್ಯೆ, ಉತ್ಪಾದನೆ ಹಾಗೂ ಅವಧಿ ಮುಕ್ತಾಯ ದಿನಾಂಕ, ಪರವಾನಗಿ ಸಂಖ್ಯೆ ಸೇರಿದಂತೆ ಅಗತ್ಯ ಮಾಹಿತಿಯನ್ನು…
ಆಂಧ್ರ-ತೆಲಂಗಾಣ-ಕರ್ನಾಟಕ ಸಿಎಂಗಳ ಒಗ್ಗಟ್ಟಿಗೆ ಸಾಕ್ಷಿಯಾದ ‘ತುಂಗಭದ್ರಾ’
ಕೊಪ್ಪಳ: ಮುನಿರಾಬಾದ್ನ ಐತಿಹಾಸಿಕ ತುಂಗಭದ್ರಾ ಜಲಾಶಯದಲ್ಲಿ ನೂತನ 18, 19, 20 ಮತ್ತು 21ನೇ ಕ್ರಸ್ಟ್ ಗೇಟ್ಗಳನ್ನು ಗುರುವಾರ ಅದ್ಧೂರಿಯಾಗಿ ಲೋಕಾರ್ಪಣೆ ಮಾಡಲಾಯಿತು. ಈ ಮಹತ್ವದ ಕಾರ್ಯಕ್ರಮದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹಾಗೂ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಭಾಗವಹಿಸಿದರು. ಗಣ್ಯರು ಜಂಟಿಯಾಗಿ ಬಟನ್ ಒತ್ತುವ ಮೂಲಕ ನೂತನ ಗೇಟ್ಗಳ ಉದ್ಘಾಟನೆ ನೆರವೇರಿಸಿದರು. ಲೋಕಾರ್ಪಣೆ ಬಳಿಕ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಗೇಟ್ಗಳನ್ನು ವೀಕ್ಷಿಸಿ ಮಾಹಿತಿ ಪಡೆದರು. ಈ ವೇಳೆ ತುಂಗಭದ್ರಾ ಜಲಾಶಯದ ಅಧಿಕಾರಿಗಳು ನೂತನ ಕ್ರಸ್ಟ್ ಗೇಟ್ಗಳ ತಾಂತ್ರಿಕ ವೈಶಿಷ್ಟ್ಯಗಳು ಹಾಗೂ ಅವುಗಳ ಕಾರ್ಯವೈಖರಿ ಕುರಿತು ವಿವರಿಸಿದರು. ಜಲಾಶಯದ ಸುರಕ್ಷತೆ ಮತ್ತು ನೀರು ನಿರ್ವಹಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ಗೇಟ್ಗಳನ್ನು ಅಳವಡಿಸಲಾಗಿದೆ. ಇದರಿಂದ ನೀರಿನ ಹರಿವಿನ ನಿಯಂತ್ರಣ ಸುಧಾರಣೆಯಾಗಲಿದ್ದು, ಕರ್ನಾಟಕ,…
ಶತಮಾನ ಕಂಡರಿಯದ ಭೂಕಂಪ; ಸ್ಮಶಾನದಂತಾದ ವೆನೆಜುವೆಲಾ
ಕ್ಯಾರಕಾಸ್: ದಕ್ಷಿಣ ಅಮೆರಿಕಾದ ರಾಷ್ಟ್ರ ವೆನೆಜುವೆಲಾದಲ್ಲಿ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ಭಾರಿ ಆತಂಕ ಸೃಷ್ಟಿಸಿದ್ದು, ಸರ್ಕಾರ ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಿದೆ. ಶತಮಾನ ಕಂಡರಿಯದ ಈ ಭೀಕರ ಸಾವಿರಾರು ಜನರು ಸಾವನ್ನಾಪಿರುವ ಶಂಕೆ ಇದ್ದು, ಈ ಸಂಖ್ಯೆ ಲಕ್ಷ ದಾಟುವ ಆತಂಕವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್ಜಿಎಸ್) ಪ್ರಕಾರ, ಮೊದಲು 7.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸುಮಾರು ಒಂದು ನಿಮಿಷದೊಳಗೆ 7.5 ತೀವ್ರತೆಯ ಮತ್ತೊಂದು ಪ್ರಬಲ ಭೂಕಂಪ ದಾಖಲಾಗಿದೆ. ಎರಡೂ ಭೂಕಂಪಗಳ ಕೇಂದ್ರಬಿಂದು ರಾಜಧಾನಿ ಕ್ಯಾರಕಾಸ್ನ ಪಶ್ಚಿಮಕ್ಕೆ ಸುಮಾರು 160 ಕಿಲೋಮೀಟರ್ ದೂರದಲ್ಲಿರುವ ಮೊರೊನ್ ಕರಾವಳಿ ಪ್ರದೇಶದ ಸಮೀಪ ಇತ್ತು. ಭೂಕಂಪಗಳ ಪರಿಣಾಮವಾಗಿ ಕ್ಯಾರಕಾಸ್ ಸೇರಿದಂತೆ ಹಲವು ನಗರಗಳಲ್ಲಿ ಕಟ್ಟಡಗಳಿಗೆ ಹಾನಿಯಾಗಿದ್ದು, ಕೆಲವು ಕಟ್ಟಡಗಳು ಕುಸಿದಿರುವ ವರದಿಗಳು ಬಂದಿವೆ. ಸಾಮಾಜಿಕ ಜಾಲತಾಣಗಳಲ್ಲಿ ಹಾನಿಯ ದೃಶ್ಯಗಳು ವ್ಯಾಪಕವಾಗಿ ಹರಿದಾಡುತ್ತಿವೆ. ಭೂಕಂಪಗಳು ಕೇವಲ 10 ಕಿಲೋಮೀಟರ್…
ಸೆಪ್ಟೆಂಬರ್ 18-19ರಂದು ರಾಜ್ಯ ಮಟ್ಟದ ಕಾಫಿ ಬೆಳೆಗಾರರ ಬೃಹತ್ ಸಮಾವೇಶ
ಚಿಕ್ಕಮಗಳೂರು: ಕಾಫಿ ಬೆಳೆಗಾರರ ಸಂಘ ಹಾಗೂ ಟೆಂಡರ್ ಟುಡೆ ಗ್ರೂಪ್ ಸಹಯೋಗದಲ್ಲಿ ಸೆಪ್ಟೆಂಬರ್ 18 ಮತ್ತು 19ರಂದು ಚಿಕ್ಕಮಗಳೂರಿನ ಒಕ್ಕಲಿಗರ ಸಮುದಾಯ ಭವನದಲ್ಲಿ ರಾಜ್ಯ ಮಟ್ಟದ ಕಾಫಿ ಬೆಳೆಗಾರರ ಬೃಹತ್ ತಾಂತ್ರಿಕ ಸಮಾವೇಶ ಮತ್ತು ವಿಚಾರ ಸಂಕಿರಣ ಆಯೋಜಿಸಲಾಗಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಟೆಂಡರ್ ಟುಡೆ ಗ್ರೂಪ್ ಅಧ್ಯಕ್ಷ ಶ್ರೀಹರಿ ಎನ್. ಗೌರಿಪುರ, ಸಮಾವೇಶದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭಾಗವಹಿಸಲಿದ್ದು, 80ಕ್ಕೂ ಹೆಚ್ಚು ಕಂಪನಿಗಳು ತಮ್ಮ ಉತ್ಪನ್ನಗಳು ಮತ್ತು ತಾಂತ್ರಿಕ ಆವಿಷ್ಕಾರಗಳನ್ನು ಪ್ರದರ್ಶಿಸಲಿವೆ ಎಂದು ತಿಳಿಸಿದರು. ಕಾಫಿ ಬೆಳೆಗಾರರಿಗೆ ಉಪಯುಕ್ತವಾಗುವ ನೂತನ ತಂತ್ರಜ್ಞಾನ, ಯಂತ್ರೋಪಕರಣಗಳು ಹಾಗೂ ಆಧುನಿಕ ಕೃಷಿ ವಿಧಾನಗಳ ಕುರಿತು ಪ್ರಾತ್ಯಕ್ಷಿಕೆಗಳನ್ನು ಆಯೋಜಿಸಲಾಗುವುದು. ಇತ್ತೀಚಿನ ದಿನಗಳಲ್ಲಿ ಕಾಫಿ ತೋಟಗಳಲ್ಲಿ ಎದುರಾಗುತ್ತಿರುವ ಕಾರ್ಮಿಕರ ಕೊರತೆಗೆ ಪರಿಹಾರವಾಗುವ ಯಂತ್ರೋಪಕರಣಗಳ ಪ್ರದರ್ಶನವೂ ಸಮಾವೇಶದ ಪ್ರಮುಖ ಆಕರ್ಷಣೆಯಾಗಿರಲಿದೆ ಎಂದು ಹೇಳಿದರು. ಮಡಿಕೇರಿ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಯ…
ಫೋಟೋ ತೆಗೆಯುವ ವೇಳೆ ಕಾವೇರಿ ಪಾಲಾದ ಒಂದೇ ಕುಟುಂಬದ ಐವರು
ಮಂಡ್ಯ: ಫೋಟೋ ತೆಗೆಯುವ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮುತ್ತತ್ತಿ ಸಮೀಪ ನಡೆದಿದೆ. ಮಳವಳ್ಳಿ ತಾಲ್ಲೂಕಿನ ಮುತ್ತುರಾಯ ಸ್ವಾಮಿ ದೇವಾಲಯಕ್ಕೆ ಕುಟುಂಬ ಸದಸ್ಯರು ಭೇಟಿ ನೀಡಿದ್ದರು. ದೇವಾಲಯ ದರ್ಶನದ ಬಳಿಕ ಕಾವೇರಿ ನದಿ ತೀರದಲ್ಲಿ ನಿಂತು ಫೋಟೋ ತೆಗೆಯುವ ಸಂದರ್ಭದಲ್ಲಿ ಅಜಾಗರೂಕತೆಯಿಂದ ನೀರಿನಲ್ಲಿ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ. ಮೃತರನ್ನು ಚನ್ನಪಟ್ಟಣ ಮೂಲದ ವಿಜಯಮ್ಮ, ಚೈತ್ರ, ಶ್ವೇತಾ, ಪ್ರಿಯಾಂಕ ಹಾಗೂ ಮಹೇಶ್ ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಹಾಗೂ ಸ್ಥಳೀಯ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆ ನಡೆಸಿದರು. ಬಳಿಕ ಐವರ ಮೃತದೇಹಗಳನ್ನು ನದಿಯಿಂದ ಹೊರತೆಗೆದಿದ್ದಾರೆ. ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಮುತ್ತತ್ತಿ ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನೆಯ ಕುರಿತು ತನಿಖೆ…
ಗೃಹ ಸಚಿವರಿಂದಲೇ ಸಂಚಾರ ನಿಯಮ ಉಲ್ಲಂಘನೆ..? ಟ್ರಾಫಿಕ್ ಫೈನ್ ಬಾಕಿ ಉಳಿಸಿಕೊಂಡಿದ್ದಾರೆಯೇ ಪ್ರಿಯಾಂಕ್?
ಬೆಂಗಳೂರು: ಗೃಹಸಚಿವರಿಂದಲೇ ಸಂಚಾರ ನಿಯಮ ಉಲ್ಲಂಘನೆ..? ಟ್ರಾಫಿಕ್ ಫೈನ್ ಬಾಕಿ ಉಳಿಸಿಕೊಂಡಿದ್ದಾರೆಯೇ ಗೃಹಸಚಿವ ಪ್ರಿಯಾಂಕ ಖರ್ಗೆ? ಈ ಕುರಿತಂತೆ ಪ್ರತಿಪಕ್ಷ ಬಿಜೆಪಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಪೋಸ್ಟ್ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧಿಕೃತ ವಾಹನದ ವಿರುದ್ಧ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗಿದ್ದು, ದಂಡ ಬಾಕಿ ಉಳಿದಿದೆ ಎಂದು ಬಿಜೆಪಿ ಆರೋಪಿಸಿದೆ. ರಾಜ್ಯ ಸರ್ಕಾರವು ಜೂನ್ 21ರಿಂದ ಜುಲೈ 10ರವರೆಗೆ ಬಾಕಿ ಇರುವ ಇ-ಚಲನ್ ದಂಡಗಳ ಮೇಲೆ ಶೇ.50 ರಿಯಾಯಿತಿ ಘೋಷಿಸಿದ ಬೆನ್ನಲ್ಲೇ ಈ ವಿಚಾರ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದ ಪ್ರಿಯಾಂಕ್ ಖರ್ಗೆ ಅವರಿಗೆ ತಿರುಗೇಟು ನೀಡಿರುವ ಬಿಜೆಪಿ, “ಸಂಚಾರ ನಿಯಮ ಪಾಲನೆ ಕುರಿತು ಜಾಗೃತಿ ಮೂಡಿಸುವ ಗೃಹ ಸಚಿವರ ವಾಹನವೇ ನಿಯಮ ಉಲ್ಲಂಘಿಸಿದೆ” ಎಂದು ವ್ಯಂಗ್ಯವಾಡಿದೆ. ಬಿಜೆಪಿ ಕರ್ನಾಟಕ…
ಜಪಾನ್ನಲ್ಲಿ 7.2 ತೀವ್ರತೆಯ ಭೂಕಂಪ; ಸರಣಿ ಅವಘಡಗಳ ಆತಂಕ
ಟೋಕಿಯೊ: ಈಶಾನ್ಯ ಜಪಾನ್ನಲ್ಲಿ ಗುರುವಾರ ಬೆಳಿಗ್ಗೆ 7.2 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕನಿಷ್ಠ ನಾಲ್ವರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಭೂಕಂಪವು ಇವಾಟೆ ಪ್ರಾಂತ್ಯದ ಪೂರ್ವ ಕರಾವಳಿಯಲ್ಲಿ ಸುಮಾರು 40 ಕಿ.ಮೀ ಆಳದಲ್ಲಿ ಸಂಭವಿಸಿದೆ. ಆರಂಭದಲ್ಲಿ 6.9 ತೀವ್ರತೆ ಎಂದು ಅಂದಾಜಿಸಲಾಗಿದ್ದ ಭೂಕಂಪವನ್ನು ಬಳಿಕ 7.2ಕ್ಕೆ ಪರಿಷ್ಕರಿಸಲಾಗಿದೆ. ಅಮೋರಿ ಪ್ರಾಂತ್ಯದ ಹಶಿಕಾಮಿ ಮತ್ತು ಹಚಿನೋಹೆ ಪ್ರದೇಶಗಳಲ್ಲಿ ತೀವ್ರ ಕಂಪನ ಅನುಭವವಾಗಿದೆ. ಹೊಕ್ಕೈಡೊ, ಅಕಿತಾ, ಫುಕುಶಿಮಾ, ಮಿಯಾಗಿ, ಯಮಗಾಟಾ ಸೇರಿದಂತೆ ಹಲವು ಪ್ರದೇಶಗಳಲ್ಲೂ ಭೂಕಂಪದ ಪರಿಣಾಮ ಕಂಡುಬಂದಿದೆ. ಆದರೆ ಯಾವುದೇ ಸುನಾಮಿ ಎಚ್ಚರಿಕೆ ನೀಡಲಾಗಿಲ್ಲ. ಮುಂದಿನ ದಿನಗಳಲ್ಲಿ ಇದೇ ರೀತಿಯ ಕಂಪನಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದಿರಲು ಅಧಿಕಾರಿಗಳು ಸೂಚಿಸಿದ್ದಾರೆ. ಅಮೋರಿ, ಮಿಯಾಗಿ ಹಾಗೂ ಫುಕುಶಿಮಾ ಪ್ರದೇಶಗಳಲ್ಲಿರುವ ಪರಮಾಣು ವಿದ್ಯುತ್ ಸ್ಥಾವರಗಳಲ್ಲಿ ಯಾವುದೇ ಅಸಹಜತೆ ಕಂಡುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ, ವೆನೆಜುವೆಲಾದಲ್ಲೂ…
