ಬೆಂಗಳೂರು: ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಅರಸೀಕೆರೆಗೆ ನೂತನ ಮೆಮು ರೈಲಿನ ಸೇವೆಯನ್ನು ಒದಗಿಸಲಾಗಿದೆ. ಈ ಮೂಲಕ ಪ್ರಯಾಣಿಕರ ಬಹುದಿನದ ಬೇಡಿಕೆಯನ್ನು ಈಡೇರಿಸಲಾಗಿದೆ ಎಂದು ಕೇಂದ್ರ ರೈವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ. ಯಲಹಂಕದಿಂದ, ಯಶವಂತಪುರ ಮಾರ್ಗವಾಗಿ ಹೊರಡುವ ಈ ಮೆಮು ರೈಲು ವಿದ್ಯಾರ್ಥಿಗಳು, ದಿನಗೂಲಿ ಕಾರ್ಮಿಕರು, ಉದ್ಯೋಗಿಗಳು, ರೈತರು, ವ್ಯಾಪಾರಿಗಳು ಸೇರಿದಂತೆ ಮುಂತಾದ ಪ್ರಯಾಣಿಕರಿಗೆ ಕೈಗೆಟುಕುವ ಮತ್ತು ವಿಶ್ವಾಸಾರ್ಹ ಪ್ರಯಾಣದ ಆಯ್ಕೆಯನ್ನು ಒದಗಿಸಲಿದೆ ಎಂದವರು ಹೇಳಿದ್ದಾರೆ. ಈ ಭಾಗದ ಪ್ರಯಾಣಿಕರು ಈ ನೂತನ ಮೆಮು ರೈಲಿನ ಸೇವೆಯನ್ನು ಸದುಪಯೋಗ ಪಡಿಸಿಕೊಳ್ಳಳ್ಳಲು ಅನುಕೂಲವಾಗಲಿದೆ ಎಂದವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Category: ಪ್ರಮುಖ ಸುದ್ದಿ
ನೇಪಾಳದಲ್ಲಿ ರಾಜಕೀಯ ಸುನಾಮಿ: ಮಾಜಿ ಪ್ರಧಾನಿ ಓಲಿ ಬಂಧನ
ಕಠ್ಮಂಡು: ನೇಪಾಳದ ರಾಜಕೀಯದಲ್ಲಿ ಭಾರೀ ಸಂಚಲನ ಉಂಟಾಗಿದ್ದು, ಹೊಸ ಸರ್ಕಾರವು ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಹಾಗೂ ಮಾಜಿ ಗೃಹ ಸಚಿವ ರಮೇಶ್ ಲೇಖಾಕ್ ಅವರನ್ನು ಜನರಲ್ ಝಡ್ ಪ್ರತಿಭಟನೆಗಳ ವೇಳೆ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಿದೆ. ಹೊಸ ಪ್ರಧಾನಿ ಬಾಲೇಂದ್ರ ಶಾ ನೇತೃತ್ವದ ಸರ್ಕಾರ ಪ್ರಮಾಣವಚನ ಸ್ವೀಕರಿಸಿದ ದಿನವೇ ನಡೆದ ಸಚಿವ ಸಂಪುಟ ಸಭೆಯಲ್ಲಿ, ಈ ಪ್ರಕರಣದ ತನಿಖೆಗೆ ರಚಿಸಲಾದ ಉನ್ನತ ಮಟ್ಟದ ಆಯೋಗದ ವರದಿಯನ್ನು ಜಾರಿಗೆ ತರಲು ನಿರ್ಧಾರ ಕೈಗೊಳ್ಳಲಾಗಿದೆ. ಆಯೋಗವು ಓಲಿ, ಲೇಖಾಕ್ ಹಾಗೂ ಮಾಜಿ ಪೊಲೀಸ್ ಮುಖ್ಯಸ್ಥ ಚಂದ್ರ ಕುಬೇರ್ ಖಪುಂಗ್ ವಿರುದ್ಧ ಕ್ರಿಮಿನಲ್ ನಿರ್ಲಕ್ಷ್ಯದ ಆರೋಪದ ಮೇಲೆ ಪ್ರಕರಣ ದಾಖಲಿಸಲು ಶಿಫಾರಸು ಮಾಡಿತ್ತು. ಈ ಹಿನ್ನೆಲೆ, ನ್ಯಾಯಾಲಯದ ಬಂಧನ ವಾರಂಟ್ ಆಧಾರದ ಮೇಲೆ ಶನಿವಾರ ಮುಂಜಾನೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಓಲಿಯನ್ನು ಭಕ್ತಪುರದ ಗುಂಡುವಿನ…
ಸುಗ್ರೀವಾಜ್ಞೆ ಮೂಲಕ KAOMA ಕಾಯ್ದೆ; ಸರ್ಕಾರಕ್ಕೆ BAF ಅಭಿನಂದನೆ
ಬೆಂಗಳೂರು: ಬಜೆಟ್ ಅಧಿವೇಶನದ ಕೊನೆಯ ದಿನ ವಿಧಾನಸಭೆಯಲ್ಲಿ ಕರ್ನಾಟಕ ಅಪಾರ್ಟ್ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಯನ್ನು ಸುಗ್ರೀವಾಜ್ಞೆಯ ಮೂಲಕ ಶೀಘ್ರದಲ್ಲಿ ಜಾರಿಗೊಳಿಸುವು ಡಿಸಿಎಂ ಡಿಕೆ ಶಿವಕುಮಾರ್ ಅವರ ಭರವಸೆಯನ್ನು ಬೆಂಗಳೂರು ಅಪಾರ್ಟ್ಮೆಂಟ್ಸ್ ಫೆಡರೇಷನ್ (BAF) ಮುಕ್ತಕಂಠದಿಂದ ಸ್ವಾಗತಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ಬಹುನಿರೀಕ್ಷಿತ ಈ ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಕಾರಣೀಭೂತರಾಗಿರುವಂತಹ ಎಲ್ಲ ಪಕ್ಷದ ನಾಯಕರು ಹಾಗೂ ಅಧಿಕಾರಿಗಳಿಗೆ ಧನ್ಯವಾದಗಳನ್ನು ತಿಳಿಸಿದೆ. “ಕರ್ನಾಟಕ ವಿಧಾನಸಭೆಯಲ್ಲಿ KAOMA ಚರ್ಚೆಯನ್ನು ಮುನ್ನೆಲೆಗೆ ತಂದಿದ್ದಕ್ಕಾಗಿ ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್, ಹಾಗೂ ಎಲ್ಲಾ ಪಕ್ಷಗಳ ನಾಯಕರಿಗೂ ನಾವು ಆಭಾರಿಯಾಗಿದ್ದೇವೆ. ಈ ಮಹತ್ವದ ಕಾಯ್ದೆಯನ್ನು ರೂಪಿಸುವಲ್ಲಿ ಕಳೆದ ಹಲವು ವರ್ಷಗಳಿಂದ ನಿರಂತರ ಪ್ರಯತ್ನಗಳನ್ನು ನಡೆಸುತ್ತಿರುವ ಮಾನ್ಯ ಮುಖ್ಯಮಂತ್ರಿಗಳಿಗೆ, ನಗರಾಭಿವೃದ್ಧಿ ಇಲಾಖೆ ಹಾಗೂ ಸಂಸದೀಯ ವ್ಯವಹಾರಗಳ ಇಲಾಖೆಯ ಅಧಿಕಾರಿಗಳಿಗೂ ನಾವು ನಮ್ಮ ಧನ್ಯವಾದಗಳನ್ನು ತಿಳಿಸಲು…
ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ; ಸಿದ್ದರಾಮಯ್ಯ
ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲದ ಕಾರಣ ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾದಿಕ್ ಪೈಲ್ವಾನ್ ಅವರು ನನಗೆ ಬಹಳ ವರ್ಷಗಳಿಂದ ಪರಿಚಯದವರು. ಮೈಸೂರಿನ ಕುಸ್ತಿ ಅಖಾಡಗಳಲ್ಲಿ ಅವರು ಪಾಲ್ಗೊಂಡಾಗ ಭೇಟಿಯಾಗುತ್ತಿದ್ದೆ. ಅವರು ಅಭ್ಯರ್ಥಿಯಾಗಬೇಕೆಂದು ಬಯಸುವುದು ತಪ್ಪೇನಿಲ್ಲ. ಗುರುವಾರ 11 ಜನ ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ. ಪಕ್ಷದ ಕೋರಿಕೆ ಮೇರೆಗೆ ಸಾದಿಕ್ ಅವರು ಚುನಾವಣೆಯಿಂದ ಹಿಂದೆ ಸರಿದಿದ್ದಾರೆ ಎಂದರು. ಶಾಸಕ ರಿಜ್ವಾನ್ ಅರ್ಷದ್, ಸಲೀಂ ಅಹ್ಮದ್, ನಜೀರ್ ಅಹ್ಮದ್ ಅವರು ದಾವಣಗೆರೆಗೆ ಭೇಟಿ ನೀಡಿದ್ದರು. ಅವರು ತಲುಪುವುದು ತಡವಾದ್ದರಿಂದ ನಾಮ ಪತ್ರ ಹಿಂಪಡೆಯುವಂತೆ ಮನವೊಲಿಸಲು ಸಾಧ್ಯವಾಗಲಿಲ್ಲ. ವಿಧಾನಪರಿಷತ್ ನಲ್ಲಿ…
ಇಂಧನ ಸುಂಕ ಕಡಿತ: ಪೆಟ್ರೋಲ್-ಡೀಸೆಲ್ ದರ ಇಳಿಕೆ
ನವದೆಹಲಿ: ಜಾಗತಿಕ ತೈಲ ಬೆಲೆ ಏರಿಕೆಯ ಪರಿಣಾಮವನ್ನು ತಗ್ಗಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 10 ರೂಪಾಯಿಗಳಷ್ಟು ಕಡಿತಗೊಳಿಸಿದೆ. ಈ ಕ್ರಮದೊಂದಿಗೆ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 3 ರೂಪಾಯಿಗೆ ಇಳಿಸಲಾಗಿದ್ದು, ಡೀಸೆಲ್ ಮೇಲಿನ ಸುಂಕವನ್ನು ಶೂನ್ಯ ಮಟ್ಟಕ್ಕೆ ತಂದಿದೆ. ಇಂಧನ ರಫ್ತು ಹಾಗೂ ವಿದೇಶಿ ವಿಮಾನಗಳಿಗೆ ಸರಬರಾಜು ಮಾಡುವ ಮೇಲಿನ ಸುಂಕಗಳಿಗೂ ವಿನಾಯಿತಿ ನೀಡಲಾಗಿದೆ. ಇದಕ್ಕೂ ಜೊತೆಗೆ, 2022ರ ಹಿಂದಿನ ಅಧಿಸೂಚನೆಯನ್ನು ರದ್ದುಪಡಿಸಿರುವ ಕೇಂದ್ರ, ಆಮದು ಮಾಡಿಕೊಳ್ಳುವ ಏರ್ ಟರ್ಬೈನ್ ಇಂಧನ (ATF) ಮೇಲಿನ ಕಸ್ಟಮ್ಸ್ ಸುಂಕಕ್ಕೂ ವಿನಾಯಿತಿ ನೀಡಿದೆ. ಇರಾನ್ ಸಂಬಂಧಿತ ಉದ್ವಿಗ್ನತೆ ಮತ್ತು ಹಾರ್ಮುಜ್ ಜಲಸಂಧಿ ಸಮಸ್ಯೆಯಿಂದ ಉಂಟಾದ ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ಬೆಲೆ ಏರಿಕೆಯ ಭೀತಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪ್ರಸ್ತುತ ಜಾಗತಿಕ ಕಚ್ಚಾ…
‘ಕಾರ’ ಚಿತ್ರದಲ್ಲಿ ಮುರುಗೇಶನ್ ಆಗಿ ಪೃಥ್ವಿ ಪಾಂಡಿಯರಾಜನ್
ಚೆನ್ನೈ: ನಟ ಧನುಷ್ ಅಭಿನಯದ ಬಹುನಿರೀಕ್ಷಿತ ‘ಕಾರ’ ಚಿತ್ರದಿಂದ ಮತ್ತೊಂದು ಪ್ರಮುಖ ಪಾತ್ರದ ಲುಕ್ ಬಹಿರಂಗವಾಗಿದೆ. ನಿರ್ದೇಶಕ ವಿಘ್ನೇಶ್ ರಾಜಾ ನಿರ್ದೇಶನದ ಈ ಆಕ್ಷನ್ ಎಂಟರ್ಟೈನರ್ನಲ್ಲಿ ಮುರುಗೇಶನ್ ಪಾತ್ರದಲ್ಲಿ ಪೃಥ್ವಿ ಪಾಂಡಿಯರಾಜನ್ ಕಾಣಿಸಿಕೊಳ್ಳಲಿದ್ದಾರೆ. ಚಿತ್ರ ನಿರ್ಮಾಣ ಸಂಸ್ಥೆ ವೆಲ್ಸ್ ಫಿಲ್ಮ್ ಇಂಟರ್ನ್ಯಾಷನಲ್ ತನ್ನ ಸಾಮಾಜಿಕ ಜಾಲತಾಣದಲ್ಲಿ ಈ ಲುಕ್ ಬಿಡುಗಡೆ ಮಾಡಿದ್ದು, “ಮುರುಗೇಶನ್ ‘ಕಾರಾ’ ಲೋಕಕ್ಕೆ ಕಾಲಿಡುತ್ತಿದ್ದಾನೆ” ಎಂದು ಘೋಷಿಸಿದೆ. #FacesOfKara ವಿಡಿಯೋ ಬಿಡುಗಡೆಗೂ ದಿನಾಂಕ ನಿಗದಿಪಡಿಸಲಾಗಿದೆ. ಇದಕ್ಕೂ ಮೊದಲು, ನಟ ಜಯರಾಮ್ ಅವರ ಮುತ್ತು ಸೆಲ್ವನ್ ಪಾತ್ರ, ಕರುಣಾಸ್ ಅವರ ಕಾಶಿ ಮಾಯನ್, ಮತ್ತು ಸೂರಜ್ ವೆಂಜರಮೂಡು ಅವರ ಭರತನ್ ಪಾತ್ರಗಳ ಲುಕ್ಗಳನ್ನು ನಿರ್ಮಾಪಕರು ಬಿಡುಗಡೆ ಮಾಡಿದ್ದರು. ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿರುವ ಮಮಿತಾ ಬೈಜು ‘ಸೆಲ್ಲಿ’ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಜೊತೆಗೆ, ನಿರ್ದೇಶಕ ಕೆ ಎಸ್ ರವಿಕುಮಾರ್ ‘ಕಂದಸಾಮಿ’ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ವರ್ಷದ ಪೊಂಗಲ್ ಸಂದರ್ಭದಲ್ಲಿ…
‘ವಾಲ್ಮೀಕಿ ರಾಮಾಯಣ’; ಪೋಸ್ಟರ್ ಕುತೂಹಲ
ಮುಂಬೈ: ಮುಂಬರುವ ‘ವಾಲ್ಮೀಕಿ ರಾಮಾಯಣ’ ಚಿತ್ರದ ಮೊದಲ ಪೋಸ್ಟರ್ ಗುರುವಾರ ಅನಾವರಣಗೊಂಡಿದ್ದು, ಭಕ್ತಿ, ಶುದ್ಧತೆ ಮತ್ತು ಗೌರವದ ಮೌಲ್ಯಗಳನ್ನು ಪ್ರತಿಬಿಂಬಿಸುವ ದೃಶ್ಯಗಳು ಗಮನ ಸೆಳೆದಿವೆ. ಭಾರತೀಯರ ಪವಿತ್ರ ಮಹಾಕಾವ್ಯವನ್ನು ಆಧರಿಸಿದ ಈ ಚಿತ್ರವನ್ನು ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಅನುಭವವಾಗಿ ರೂಪಿಸಲಾಗುತ್ತಿದೆ. ಈ ಚಿತ್ರವನ್ನು ಭಾವನಾ ತಲ್ವಾರ್ ನಿರ್ದೇಶಿಸುತ್ತಿದ್ದು, ಮಹಾಕಾವ್ಯವನ್ನು ಅಧಿಕೃತತೆ ಮತ್ತು ಭಾವನಾತ್ಮಕ ಆಳದೊಂದಿಗೆ ಪ್ರಸ್ತುತಪಡಿಸುವ ಉದ್ದೇಶ ಹೊಂದಿದೆ. ಪ್ರಸಿದ್ಧ ನಿರ್ಮಾಣ ವಿನ್ಯಾಸಕ ಸಾಬು ಸಿರಿಲ್ ದೃಶ್ಯ ವಿನ್ಯಾಸದ ಜವಾಬ್ದಾರಿ ಹೊತ್ತಿದ್ದಾರೆ. ಚಿತ್ರಕಥೆಯನ್ನು ಖ್ಯಾತ ಲೇಖಕ ಆನಂದ್ ನೀಲಕಂಠನ್ ಮೂಲ ‘ವಾಲ್ಮೀಕಿ ರಾಮಾಯಣ’ ಆಧರಿಸಿ ರಚಿಸಿದ್ದಾರೆ. ಹಿರಿಯ ಛಾಯಾಗ್ರಾಹಕ ಬಿನೋದ್ ಪ್ರಧಾನ್ ತಮ್ಮ ವಿಶಿಷ್ಟ ದೃಶ್ಯ ಶೈಲಿಯನ್ನು ನೀಡಲಿದ್ದಾರೆ. ಜೊತೆಗೆ, ಆಸ್ಕರ್ ಪ್ರಶಸ್ತಿ ವಿಜೇತ ಧ್ವನಿ ವಿನ್ಯಾಸಕ ರೆಸುಲ್ ಪೂಕುಟ್ಟಿ ಧ್ವನಿ ವಿನ್ಯಾಸವನ್ನು ನೋಡಿಕೊಳ್ಳುತ್ತಿದ್ದಾರೆ. ಚಿತ್ರ ನಿರ್ಮಾಣಕ್ಕೆ ಮತ್ತಷ್ಟು ಬಲ ತುಂಬಲು, ಚಲನಚಿತ್ರ ನಿರ್ಮಾಪಕ ಮತ್ತು ವಿದ್ವಾಂಸ…
ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ
ಮುಂಬೈ: ನಟ ಸಂಜಯ್ ದತ್ ಅಭಿನಯದ ‘ಆಖ್ರಿ ಸವಾಲ್’ ಚಿತ್ರದ ಬಿಡುಗಡೆ ದಿನಾಂಕವನ್ನು ನಿರ್ಮಾಪಕರು ಘೋಷಿಸಿದ್ದಾರೆ. ಈ ಚಿತ್ರವು ಮೇ 15, 2026ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರತಂಡ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಪೋಸ್ಟರ್ ಬಿಡುಗಡೆ ಮಾಡಿ, “ಭಾರತ ಎಂದಿಗೂ ಪ್ರಶ್ನೆ ಕೇಳುವುದನ್ನು ನಿಲ್ಲಿಸಲಿಲ್ಲ… ಮೇ 15ರಂದು ಉತ್ತರ ತಿಳಿದುಕೊಳ್ಳಲು ಸಿದ್ಧರಾಗಿ” ಎಂಬ ಟ್ಯಾಗ್ಲೈನ್ ಮೂಲಕ ಕುತೂಹಲ ಹೆಚ್ಚಿಸಿದೆ. ಈ ಚಿತ್ರದಲ್ಲಿ ಅಮಿತ್ ಸಾಧ್, ನಮಾಶಿ ಚಕ್ರವರ್ತಿ, ಸಮೀರಾ ರೆಡ್ಡಿ, ತ್ರಿಧಾ ಚೌಧರಿ ಹಾಗೂ ನೀತು ಚಂದ್ರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರವನ್ನು ರಾಷ್ಟ್ರೀಯ ಪ್ರಶಸ್ತಿ ವಿಜೇತ ನಿರ್ದೇಶಕ ಅಭಿಜೀತ್ ಮೋಹನ್ ವಾರಂಗ್ ನಿರ್ದೇಶಿಸಿದ್ದಾರೆ. ‘ಪಿಕಾಸೊ’ ಚಿತ್ರಕ್ಕಾಗಿ ವಿಶೇಷ ಮೆಚ್ಚುಗೆಯನ್ನು ಪಡೆದ ಅವರು, ವಿಭಿನ್ನ ಕಥಾಹಂದರಗಳ ಮೂಲಕ ಗಮನ ಸೆಳೆದಿದ್ದಾರೆ. ‘ಆಖ್ರಿ ಸವಾಲ್’ ಚಿತ್ರವು ರಾಷ್ಟ್ರೀಯ ಸ್ವಯಂಸೇವಕ ಸಂಘದ 100 ವರ್ಷಗಳ ಪ್ರಯಾಣವನ್ನು ಆಧರಿಸಿದ ನೈಜ ಕಥೆಯನ್ನು ತೆರೆಗೆ…
1ನೇ ತರಗತಿ ಪ್ರವೇಶ ವಯೋಮಿತಿ ಸಡಿಲಿಕೆ: ಪೋಷಕರು ನಿರಾಳ
ಬೆಂಗಳೂರು: 2026–27 ಶೈಕ್ಷಣಿಕ ವರ್ಷಕ್ಕೆ 1ನೇ ತರಗತಿ ಪ್ರವೇಶದ ಕನಿಷ್ಠ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆಯನ್ನು ಕರ್ನಾಟಕ ಸರ್ಕಾರ ಘೋಷಿಸಿದೆ. ಪೋಷಕರಿಂದ ಹೆಚ್ಚುತ್ತಿರುವ ಕಳವಳದ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಆರು ವರ್ಷಗಳ ವಯೋಮಿತಿಯಲ್ಲಿ ನಮ್ಯತೆ ಕೋರಿ ವಿಶೇಷವಾಗಿ ತಾಯಂದಿರಿಂದ ಅನೇಕ ಮನವಿಗಳು ಬಂದಿದ್ದವು ಎಂದು ಹೇಳಿದರು. ಕರ್ನಾಟಕ ಶಿಕ್ಷಣ ಕಾಯ್ದೆ, 1993ರ ಅಡಿಯಲ್ಲಿ 60 ದಿನಗಳ ವಿನಾಯಿತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು. ಈ ಸಡಿಲಿಕೆ 2026–27 ಶೈಕ್ಷಣಿಕ ವರ್ಷದ ಪ್ರವೇಶಕ್ಕೆ ಅನ್ವಯವಾಗಲಿದ್ದು, ಜಾರಿಗೆ ತಾಂತ್ರಿಕ ತಿದ್ದುಪಡಿಗಳನ್ನು ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದರು. ಇನ್ನೊಂದೆಡೆ, ಎಲ್ಕೆಜಿ ಮತ್ತು ಯುಕೆಜಿ ಪ್ರವೇಶದ ಬಗ್ಗೆ ಗೊಂದಲ ಮುಂದುವರೆದಿರುವುದನ್ನು ಅವರು ಒಪ್ಪಿಕೊಂಡರು. ಈ ತರಗತಿಗಳಿಗೆ ಸ್ಪಷ್ಟ ಕಾನೂನು ಚೌಕಟ್ಟು ಇಲ್ಲದಿರುವುದರಿಂದ ಸಮಸ್ಯೆಗಳು ಎದುರಾಗುತ್ತಿವೆ. ಈ ಹಿನ್ನೆಲೆಯಲ್ಲಿ ಹೊಸ ಕಾನೂನು…
ಮತ್ತೆ ಇಳಿಕೆಯತ್ತ ಮುಖಮಾಡಿದ ತೈಲ ಮಾರುಕಟ್ಟೆ
ವಾಷಿಂಗ್ಟನ್: ಮಧ್ಯಪ್ರಾಚ್ಯ ಸಂಘರ್ಷದ ಭೀತಿ ಮತ್ತು ರಾಜತಾಂತ್ರಿಕ ಮಾತುಕತೆಗಳ ಸುಳಿವುಗಳ ನಡುವೆಯೇ ಜಾಗತಿಕ ತೈಲ ಮಾರುಕಟ್ಟೆಗಳು ತೀವ್ರ ಅಸ್ಥಿರತೆಗೆ ಒಳಗಾಗಿವೆ. ಹೂಡಿಕೆದಾರರು ಎರಡೂ ಸೂಚನೆಗಳನ್ನು ತೂಕಮಾಪನ ಮಾಡುತ್ತಿರುವ ಹಿನ್ನೆಲೆ, ಬೆಲೆಗಳು ಕ್ಷಣಿಕವಾಗಿ 100 ಡಾಲರ್ ಮೀರಿದ ಬಳಿಕ ಮತ್ತೆ ಇಳಿಕೆಯತ್ತ ಮುಖಮಾಡಿವೆ. ವಾಲ್ ಸ್ಟ್ರೀಟ್ ಜರ್ನಲ್ ವರದಿ ಪ್ರಕಾರ, ವಾಷಿಂಗ್ಟನ್ ಹಾಗೂ ಮಧ್ಯಪ್ರಾಚ್ಯದಿಂದ ಸಂಘರ್ಷದ ಸೂಚನೆಗಳು ಹೊರಹೊಮ್ಮುತ್ತಿದ್ದಂತೆ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಬಾಂಡ್ ಮಾರುಕಟ್ಟೆಯಲ್ಲಿ ಮಾರಾಟದ ಒತ್ತಡ ಹೆಚ್ಚಿ, ಷೇರು ಮಾರುಕಟ್ಟೆಗಳು ಕುಸಿದವು. ಫ್ರಂಟ್-ತಿಂಗಳ ಬ್ರೆಂಟ್ ಕಚ್ಚಾ ತೈಲವು ಶೇ.4.6ರಷ್ಟು ಏರಿಕೆಯಾಗಿ ಬ್ಯಾರೆಲ್ಗೆ $104.49 ತಲುಪಿದರೆ, ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್ ಶೇ.4.8ರಷ್ಟು ಏರಿಕೆಯಾಗಿ $92.35 ತಲುಪಿದೆ. ಇದೀಗ ಡೊನಾಲ್ಡ್ ಟ್ರಂಪ್ ಇರಾನ್ ಜೊತೆ ಶಾಂತಿ ಮಾತುಕತೆಗಳ ಬಗ್ಗೆ ಧನಾತ್ಮಕ ಸೂಚನೆ ನೀಡಿದರೂ, ಪೆಂಟಗನ್ ಮಧ್ಯಪ್ರಾಚ್ಯಕ್ಕೆ ಸೇನಾ ನಿಯೋಜನೆ ಮಾಡುತ್ತಿದೆ ಎಂಬ ವರದಿಗಳು ಮಾರುಕಟ್ಟೆ ಆತಂಕವನ್ನು ಹೆಚ್ಚಿಸಿವೆ.…
