ಬೆಂಗಳೂರು: ರಾಜ್ಯದಲ್ಲಿ ಮುಂದಿನ ಕೆಲವು ದಿನಗಳವರೆಗೆ ಮಳೆಯ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ನೈಋತ್ಯ ಮಾನ್ಸೂನ್ ಚುರುಕುಗೊಂಡ ಹಿನ್ನೆಲೆಯಲ್ಲಿ, ಜೂನ್ 16ರ ವರೆಗೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಭಾಗಗಳಲ್ಲಿ ಬಿಸಿಲು-ಮಳೆಯ ಜತೆಯ ವಾತಾವರಣ ಮುಂದುವರೆಯುವ ನಿರೀಕ್ಷೆ ಇದೆ. ಇದೇ ವೇಳೆ, ಜೂನ್ 15ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆಯ ಹಿನ್ನೆಲೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜೂನ್ 17ರಿಂದ ಮಳೆಯ ತೀವ್ರತೆ ಸ್ವಲ್ಪ ಇಳಿಮುಖವಾಗಲಿದ್ದು, ಜೂನ್ 18ರ ವರೆಗೆ ಹಗುರದಿಂದ ಮಧ್ಯಮ ಮಳೆಯಾಗಲಿದೆ. ಕರ್ನಾಟಕದ ಇತರ ಭಾಗಗಳಲ್ಲಿಯೂ, ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ವ್ಯಕ್ತವಾಗಿದ್ದು, ಕರಾವಳಿ ಭಾಗಗಳಿಗೆ ಎಚ್ಚರಿಕೆಯನ್ನು ಕೋರಲಾಗಿದೆ.
Category: ಪ್ರಮುಖ ಸುದ್ದಿ
ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬ್ರಿಟಿಷ್ ‘ಎಫ್-35 ಯುದ್ಧ ವಿಮಾನ’ ತುರ್ತು ಭೂಸ್ಪರ್ಶ
ತಿರುವನಂತಪುರಂ: ಕೇರಳದ ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ರಿಟನ್ನ ಎಫ್-35ಬಿ ಯುದ್ಧ ವಿಮಾನವೊಂದು ಶನಿವಾರ ರಾತ್ರಿ ತುರ್ತು ಭೂಸ್ಪರ್ಶ ನಡೆಸಿದೆ. ಹಿಂದೂ ಮಹಾಸಾಗರದ ಮೇಲೆ ನಿಯೋಜಿತ ಹಾರಾಟದ ವೇಳೆ ವಿಮಾನದಲ್ಲಿ ಇಂಧನದ ಅಸಮರ್ಪಕತೆ ಉಂಟಾಗಿದ್ದು, ರಾತ್ರಿ ಸುಮಾರು 9.30ಕ್ಕೆ ತುರ್ತು ಇಳಿಕೆಗಾಗಿ ಅನುಮತಿ ಕೇಳಿ ತಿರುವನಂತಪುರಂಗೆ ಇಳಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಯುದ್ಧ ವಿಮಾನವು ಯುನೈಟೆಡ್ ಕಿಂಗ್ಡಮ್ ನ “HMS Prince of Wales” ಕ್ಯಾರಿಯರ್ ಸ್ಟ್ರೈಕ್ ಗ್ರೂಪ್ನ ಭಾಗವಾಗಿದ್ದು, ಪ್ರಸ್ತುತ ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದು ಇತ್ತೀಚೆಗಷ್ಟೇ ಭಾರತೀಯ ನೌಕಾಪಡೆಯೊಂದಿಗೆ ಜಂಟಿ ಕವಾಯತಿನಲ್ಲಿ ಭಾಗವಹಿಸಿದ್ದಿತು. ಎಫ್-35 ಬಿ ಜಿಟ್ ವಿಮಾನವನು ವಿಶ್ವದ ಅತ್ಯಾಧುನಿಕ ಯುದ್ಧವಿಮಾನಗಳ ಪೈಕಿ ಒಂದು ಎಂದು ತಜ್ಞರು ಗುರುತಿಸಿದ್ದು, ಅದರ ರಹಸ್ಯ ವಿನ್ಯಾಸ, ಎಲೆಕ್ಟ್ರಾನಿಕ್ ಯುದ್ಧ ಸಾಮರ್ಥ್ಯ ಮತ್ತು ನೈಜ ಸಮಯದಲ್ಲಿ ಡೇಟಾ ಹಂಚಿಕೆ ಸಾಮರ್ಥ್ಯವು ಅಮೆರಿಕ, ಬ್ರಿಟನ್, ಇಸ್ರೇಲ್ ಮತ್ತು…
ಒಂದು ದೇಶ, ಒಂದು ಚುನಾವಣೆ’ ಮಾದರಿಯಲ್ಲೇ ‘ಶಿಕ್ಷಣದಲ್ಲೂ ಏಕರೂಪ’? ಕೇಂದ್ರ ಸರ್ಕಾರದಿಂದ ಪ್ರಕ್ರಿಯೆ ಆರಂಭ!
ನವದೆಹಲಿ: ‘ಒಂದು ದೇಶ, ಒಂದು ಚುನಾವಣೆ’ ತೀರ್ಮಾನ ಮೂಲಕ ದೇಶದ ಗಮನ ಸೆಳೆದಿರುವ ಕೇಂದ್ರ ಸರ್ಕಾರ ಇದೀಗ ‘ಒಂದು ದೇಶ ಏಕರೂಪದ ಶಿಕ್ಷಣ ವ್ಯವಸ್ಥೆ’ ಜಾರಿ ಬಗ್ಗೆ ಚಿಂತನೆ ನಡೆಸಿದೆ. ಈ ಸಂಬಂಧ ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ (Department of Higher Education) ಇಂದು (13.062025 ಶುಕ್ರವಾರ) ಯುಜಿಸಿ ಗೆ ಮಹತ್ವದ ನಿರ್ದೇಶನ ನೀಡಿದೆ. ದೇಶದಲ್ಲಿ ಶಿಕ್ಷಣ ವ್ಯವಸ್ಥೆ ಹದೆಗೆಟ್ಟಿದ್ದು ಕಾರ್ಪೊರೇಟ್ ಲಾಭಿಯಿಂದಾಗಿ ಶಾಲೆಗಳಲ್ಲಿ ದುಬಾರಿ ಶುಲ್ಕ ವಿಧಿಸಲಾಗುತ್ತಿದೆ. ಏಕರೂಪ ಶಿಕ್ಷಣ ಹಾಗೂ ಅಗತ್ಯ ಶಿಕ್ಷಣದ ಸಾಂವಿಧಾನಿಕ ಆಶಯಗಳಿಗೆ ಶಿಕ್ಷಣ ಸಂಸ್ಥೆಗಳು ಅಡ್ಡಿಯಾಗುತ್ತಿದ್ದು, ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ನಿಯಂತ್ರಣ ಪ್ರಾಧಿಕಾರ ಸ್ಥಾಪಿಸಬೇಕೆಂದು ಕೋರಿ ‘ಸಿಟಿಜನ್ ರೈಟ್ಸ್ ಫೌಂಡೇಷನ್ (CRF)’ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾಗೂ ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿತ್ತು. ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಕೇಂದ್ರ…
ತೇಜೋವಧೆಗೆ ಸಂಚು ರೂಪಿಸಿದವರಿಗೆ ಕಾನೂನು ಮೂಲಕವೇ ಉತ್ತರ..! ರಮೇಶ್ ಬಾಬು ಅಸ್ತ್ರ
ಬೆಂಗಳೂರು: ಸಾರ್ವಜನಿಕ ಜೀವನದಲ್ಲಿ ಸೈದ್ಧಾಂತಿಕವಾಗಿ ಎದುರಿಸಲಾಗದ ಪಲಾಯನವಾದಿಗಳು ವಾಮಮಾರ್ಗದಲ್ಲಿ ರಾಜಕೀಯ ಎದುರಾಳಿಗಳ ಮೇಲೆ ಕೆಸರು ಎರಚುವ ಪ್ರಯತ್ನ ಮಾಡುತ್ತಾರೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ರಾಜ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ. ತೇಜಸ್ ಎ ಗೌಡ ಎಂಬ ವ್ಯಕ್ತಿ ಸುಳ್ಳು ಆರೋಪಗಳನ್ನು ಮಾಡಿ ನನ್ನ ತೇಜೋವದೆ ಮಾಡುವ ದುರುದ್ದೇಶದಿಂದ ಮುಕ್ತಾಯಗೊಂಡಿರುವ ಪ್ರಕರಣಗಳ ಉಲ್ಲೇಖ ಮಾಡಿ ಮತ್ತು ನ್ಯಾಯಾಲಗಳ ಆದೇಶಕ್ಕೆ ವಿರುದ್ಧವಾಗಿ ಮಾನ್ಯ ರಾಜ್ಯಪಾಲರಿಗೆ ದೂರು ನೀಡಿ ಮಾಧ್ಯಮಗಳಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಇವರ ಪ್ರಯತ್ನದ ಹಿಂದೆ ಸುಳ್ಳು ದೂರುಗಳ ಮುಖಾಂತರ ಹಣ ಮಾಡುವ ದುರುದ್ದೇಶವೂ ಇರುವಂತಿದೆ. ಇಂತಹ ಸುಳ್ಳು ದೂರುಗಳ ಮೇಲೆ ಅನೇಕ ರೀತಿಯ ಟೀಕೆ ಟಿಪ್ಪಣಿಗಳು ವ್ಯಕ್ತವಾಗುತ್ತಿವೆ ಎಂದು ರಮೇಶ್ ಬಾಬು ಪ್ರತಿಕ್ರಿಯಿದ್ದಾರೆ. ಇವರ ದುರುದ್ದೇಶಪೂರಿತ ಮತ್ತು ಸುಳ್ಳು ಸುದ್ದಿಯ ಆರೋಪಗಳ ಮೇಲೆ ಬೆಂಗಳೂರು ನಗರದ ಹೈ ಗ್ರೌಂಡ್ಸ್ ಪೊಲೀಸ್…
ಇಸ್ರೇಲ್ ಏರ್ಸ್ಟ್ರೈಕ್ : 6 ಪರಮಾಣು ವಿಜ್ಞಾನಿಗಳೂ ಸೇರಿ 78 ಮಂದಿ ಸಾವು
ಜೆರುಸಲೆಂ: ಟೆಹ್ರಾನ್ನಲ್ಲಿ ಭೀಕರ ದಾಳೆ ನಡೆಸಿದ ಇಸ್ರೇಲ್, ಇರಾನ್ನ ಮೇಲೆ ಎಬ್ಬಿಸುವ ಹಲ್ಲೆ ಮಾಡಿದೆ. ಈ ವೈಮಾನಿಕ ದಾಳೆಯಲ್ಲಿ ಅಂತಹವರಲ್ಲದ 78 ಮಂದಿ ಬಲಿಯಾಗಿದ್ದು, 329ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಹೆಚ್ಚು ಚರ್ಚೆಗೆ ಒಳಪಟ್ಟದ್ದು ಈ ದಾಳಿಯಲ್ಲಿ ಇರಾನ್ ಪರಮಾಣು ಇಂಧನ ಸಂಸ್ಥೆಯ ಮಾಜಿ ಮುಖ್ಯಸ್ಥ ಫೆರೆಡೌನ್ ಅಬ್ಬಾಸಿ ಸೇರಿದಂತೆ 6 ಮಂದಿ ಪರಮಾಣು ವಿಜ್ಞಾನಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಇದರ ಜೊತೆಗೆ, ಇರಾನ್ನ ಪ್ರಮುಖ ಸೇನಾ ನಾಯಕ ಜನರಲ್ ಅಮೀರ್ ಅಲಿ ಹಾಜಿಜಾದೆ ಹತ್ಯೆಯಾದ್ದನ್ನು ಇರಾನ್ ಖಚಿತಪಡಿಸಿದೆ.
ಅಹ್ಮದಾಬಾದ್ ಬಳಿ ಭೀಕರ ವಿಮಾನ ಅಪಘಾತ; ಸಂಸದರೂ ಸೇರಿದಂತೆ 240ಕ್ಕೂ ಹೆಚ್ಚು ಪ್ರಯಾಣಿಕರು ಇದ್ದ ಶಂಕೆ
ಅಹಮದಾಬಾದ್: ಗುಜರಾತ್ ರಾಜ್ಯದ ಅಹಮದಾಬಾದ್ ಬಳಿ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಅಹ್ಮದಾಬಾದ್ ವಿಮಾನ ನಿಲ್ದಾಣದ ಬಳಿಯ ವಿಮಾನ ಪಾತನವಾಗಿದ್ದು, ಬೆಂಕಿ ಹಾಗೂ ದಟ್ಟ ಹೊಗೆ ನೋಡುಗರನ್ನು ಬೆಚ್ಚಿ ಬೀಳಿಸಿದೆ. ಅಹ್ಮದಾಬಾದ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ವಿಮಾನವೇ ದುರಂತಕ್ಕೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಆಗಷ್ಟೇ ಟೇಕ್ ಆಫ್ ಆದ ವಿಮಾನದಲ್ಲಿ ಸಂಸದರು ಸೇರಿದಂತೆ 240ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಅದೇ ವಿಮಾನ ಅಪಘಾತವಾಗಿದೆಯೇ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 🚨✈️ BREAKING: Passenger plane crashes near #Ahmedabad airport in Meghani Nagar. Thick smoke, fire reported. Emergency services on site. Casualties unconfirmed. More updates soon. 🙏 #PlaneCrash #AhmedabadCrash #BreakingNews#Ahmedabad #crash #airindia@LevinaNeythiri @airindia pic.twitter.com/zbyTiOOaD0 —…
ಕಾಲ್ತುಳಿತ ದುರಂತ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಬಿಜೆಪಿ ಆಗ್ರಹ
ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಸಂತ್ರಸ್ತರಿಗೆ ನ್ಯಾಯ ಒದಗಿಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಿಸುವಂತೆ ಪ್ರತಿಪಕ್ಷ ನಾಯಕ ಆರ್.ಅಶೋಕ ಕೋರಿದ್ದಾರೆ. ಈ ಕುರಿತು ಅವರು ಆಯೋಗದ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಆರ್ಸಿಬಿ ಗೆಲುವಿನ ಸಂಭ್ರಮಾಚರಣೆಯ ದಿನದಂದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11 ಯುವಜನರು ಮೃತಪಟ್ಟಿದ್ದಾರೆ. 75 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಜನರ ಸುರಕ್ಷತೆಯ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ ಹಾಗೂ ಈ ಕಾರ್ಯಕ್ರಮವನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂಬುದು ಕಂಡುಬಂದಿದೆ ಎಂದು ಆರ್.ಅಶೋಕ ಪತ್ರದಲ್ಲಿ ದೂರಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ 35 ಸಾವಿರ ಜನರು ಹೋಗಬಹುದು. ಆದರೆ ಉಚಿತ ಪಾಸ್ ಹಾಗೂ ತಪ್ಪಾದ ಘೋಷಣೆ/ಪ್ರಕಟಣೆಗಳಿಂದಾಗಿ ಅತ್ಯಧಿಕ ಸಂಖ್ಯೆಯಲ್ಲಿ ಜನರು ಬಂದು ಕ್ರೀಡಾಂಗಣಕ್ಕೆ ನುಗ್ಗಿದ್ದಾರೆ. ಇಂತಹ ಬೃಹತ್ ಕಾರ್ಯಕ್ರಮದಲ್ಲಿ ಪೊಲೀಸ್ ಹಾಗೂ ಭದ್ರತಾ ಸಿಬ್ಬಂದಿಯ ಕೊರತೆ ಕೂಡ ಇತ್ತು. ಆಂಬ್ಯುಲೆನ್ಸ್, ಪ್ರಾಥಮಿಕ ಚಿಕಿತ್ಸಾ…
‘Honeymoon murder case’: ಸೋನಮ್ ಸಹಿತ ನಾಲ್ವರು ಆರೋಪಿಗಳು 8 ದಿನ ಪೊಲೀಸ್ ಕಸ್ಟಡಿಗೆ
ಶಿಲ್ಲಾಂಗ್: ಮೇಘಾಲಯದ ಹನಿಮೂನ್ ಕೊಲೆ ಪ್ರಕರಣದ ಐವರು ಆರೋಪಿಗಳನ್ನು, ಮೃತನ ಪತ್ನಿ ಸೋನಮ್ ರಘುವಂಶಿ ಸೇರಿದಂತೆ ಮೇಘಾಲಯ ನ್ಯಾಯಾಲಯವು ಬುಧವಾರ ಎಂಟು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಭಾರಿ ಭದ್ರತಾ ವ್ಯವಸ್ಥೆಗಳ ನಡುವೆ, ಸೋನಮ್ ಅವರ ಪತಿ ರಾಜಾ ರಘುವಂಶಿ ಅವರ ಶವ ಪತ್ತೆಯಾಗಿ 10 ದಿನಗಳ ನಂತರ, ಬುಧವಾರ ಶಿಲ್ಲಾಂಗ್ನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಮುಂದೆ ಸಂಚಲನ ಮೂಡಿಸಿದ ಆರೋಪಿಗಳನ್ನು ಹಾಜರುಪಡಿಸಲಾಯಿತು. ವಿವಿಧ ವೈದ್ಯಕೀಯ ಮತ್ತು ಕಾನೂನು ವಿಧಿವಿಧಾನಗಳು ಪೂರ್ಣಗೊಂಡ ನಂತರ, ಪ್ರಕರಣದ ಹೆಚ್ಚಿನ ವಿಚಾರಣೆ ಮತ್ತು ತನಿಖೆಗಾಗಿ ಆರೋಪಿಗಳನ್ನು ಎಂಟು ದಿನಗಳ ಕಸ್ಟಡಿಗೆ ನೀಡುವಂತೆ ಕೋರಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಂಗಳವಾರ ರಾತ್ರಿ ಪ್ರಮುಖ ಆರೋಪಿ ಸೋನಮ್ (24)ಳನ್ನು ಶಿಲ್ಲಾಂಗ್ಗೆ ಕರೆತರಲಾಯಿತು. ಪ್ರಕರಣದ ಇತರ ನಾಲ್ವರು ಆರೋಪಿಗಳಾದ ರಾಜ್ ಸಿಂಗ್ ಕುಶ್ವಾಹ (21), ಆಕೆಯ ಪ್ರಿಯಕರ ಮತ್ತು ಮಾಸ್ಟರ್ಮೈಂಡ್, ಆನಂದ್ ಸಿಂಗ್…
ಬಳ್ಳಾರಿ–ಚಿಕ್ಕಜಾಜೂರು ರೈಲ್ವೆ ಮಾರ್ಗ ದ್ವಿಪಥೀಕರಣ; ಪ್ರಧಾನಿಗೆ ಸೋಮಣ್ಣ ಅಭಿನಂದನೆ
ನವದೆಹಲಿ: ಬಳ್ಳಾರಿ–ಚಿಕ್ಕಜಾಜೂರು ರೈಲ್ವೆ ಮಾರ್ಗದ ದ್ವಿಪಥೀಕರಣಕ್ಕೆ ಕೇಂದ್ರ ಸಂಪುಟ ಅನುಮತಿ ಅನುಮತಿ ನೀಡಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಜಲ ಶಕ್ತಿ ಹಾಗೂ ರಾಜ್ಯ ರೈಲ್ವೆ ಖಾತೆ ಸಚಿವ ಬಿ ಸೋಮಣ್ಣ, ಬುಧವಾರ ನಡೆದ ಸಚಿವ ಸಂಪುಟದಲ್ಲಿ ಬಳ್ಳಾರಿ–ಚಿಕ್ಕಜಾಜೂರು ನಡುವಿನ 185 ಕಿ.ಮೀ ಉದ್ದದ ರೈಲ್ವೆ ಮಾರ್ಗದ ದ್ವಿಪಥೀಕರಣಕ್ಕೆ ಅನುಮತಿ ನೀಡಿ, 3,340 ಕೋಟಿ ರೂ.ಗಳ ಅನುದಾನ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು. ಈ ಮಹತ್ವದ ನಿರ್ಧಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿಹಾಗೂ ಮಾನ್ಯ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ಸೋಮಣ್ಣ ಕೃತಜ್ಞತೆ ಸಲ್ಲಿಸಿದ್ದಾರೆ. ಈ ರೈಲ್ವೆ ಮಾರ್ಗದ ದ್ವಿಪಥೀಕರಣದಿಂದ ಹೊಸಪೇಟೆ – ಬಳ್ಳಾರಿ ಕೈಗಾರಿಕಾ ಪ್ರದೇಶ, ಬಳ್ಳಾರಿ – ಚಿತ್ರದುರ್ಗ ಗಣಿಗಾರಿಕೆ ಪ್ರದೇಶ ಹಾಗೂ ಮಂಗಳೂರು ಬಂದರು ಮತ್ತು ಹೈದರಾಬಾದ್ ಪ್ರದೇಶಗಳ ನಡುವೆ ನೇರ ಸಂಪರ್ಕ, ಪ್ರವಾಸೋದ್ಯಮ, ಸರಕು ಸಾಗಣೆ ಸೇರಿದಂತೆ ಸಾರಿಗೆ…
ಭಾರೀ ಮಳೆ ಹಿನ್ನೆಲೆ: ಕರವಾಳಿ, ಮಲೆನಾಡು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ
ಮಂಗಳೂರು: ಕರಾವಳಿ ಮಲೆನಾಡಿನಲ್ಲಿ ಮುಂಗಾರು ಬಿರುಸುಗೊಂಡಿದ್ದು, ಭಾರೀ ಮಳೆಯಿಂದಾಗಿ ಜನಜೀವನ ಏರುಪೇರಾಗಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಕರವಾಳಿ, ಮಲೆನಾಡು ಜಿಲ್ಲೆಗಳಲ್ಲಿ ಗುರುವಾರ ರಜೆ ಘೋಷಿಸಲಾಗಿದೆ. ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುರುವಾರ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿನ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.