ಬಾಂಗ್ಲಾದೇಶ ಚುನಾವಣೆ: ಬಿಎನ್‌ಪಿ ಗೆಲುವಿಗೆ ಮೋದಿ ಅಭಿನಂದನೆ

ನವದೆಹಲಿ: ಬಾಂಗ್ಲಾದೇಶದ ಸಂಸತ್ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ಐತಿಹಾಸಿಕ ಗೆಲುವು ಸಾಧಿಸಿದ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಹಾಗೂ ಅದರ ನಾಯಕ ತಾರಿಕ್ ರೆಹಮಾನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಮೂಲಕ ಬಾಂಗ್ಲಾದೇಶದ ಹೊಸ ರಾಜಕೀಯ ನಾಯಕತ್ವದೊಂದಿಗೆ ಕಾರ್ಯನಿರ್ವಹಿಸಲು ಭಾರತ ಸಿದ್ಧವಿರುವುದನ್ನು ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣ X ನಲ್ಲಿ ಹಂಚಿಕೊಂಡ ಸಂದೇಶದಲ್ಲಿ ಪ್ರಧಾನಿ ಮೋದಿ, ಭಾರತವು ಪ್ರಜಾಸತ್ತಾತ್ಮಕ ಮೌಲ್ಯಗಳು ಮತ್ತು ಪ್ರಾದೇಶಿಕ ಸ್ಥಿರತೆಗೆ ಬದ್ಧವಾಗಿದೆ ಎಂದು ಹೇಳಿದ್ದಾರೆ. ಈ ಜನಾದೇಶವು ತಾರಿಕ್ ರೆಹಮಾನ್ ಅವರ ನಾಯಕತ್ವದ ಮೇಲೆ ಜನರ ವಿಶ್ವಾಸವನ್ನು ತೋರಿಸುತ್ತದೆ ಎಂದು ತಿಳಿಸಿದ್ದಾರೆ. ಪ್ರಜಾಸತ್ತಾತ್ಮಕ, ಪ್ರಗತಿಶೀಲ ಮತ್ತು ಸಮಾವೇಶಾತ್ಮಕ ಬಾಂಗ್ಲಾದೇಶ ನಿರ್ಮಾಣಕ್ಕೆ ಭಾರತ ಮುಂದುವರಿದೂ ಬೆಂಬಲ ನೀಡಲಿದೆ. ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಿ, ಸಾಮಾನ್ಯ ಅಭಿವೃದ್ಧಿ ಗುರಿಗಳನ್ನು ಸಾಧಿಸಲು ಎರಡೂ ದೇಶಗಳು ಸಹಕಾರ ಮುಂದುವರಿಸಲಿವೆ ಎಂದು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ.

ಹೊಸಕೋಟೆ ಬಳಿ ಭೀಕರ ಅಪಘಾತ: ಏಳು ಮಂದಿ ದುರ್ಮರಣ

ಬೆಂಗಳೂರು: ಬೆಂಗಳೂರು ಹೊರವಲಯದ ಹೊಸಕೋಟೆ ತಾಲೂಕಿನ ಎಂ. ಸತ್ಯವರ ಗ್ರಾಮದ ಸಮೀಪ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್‌ಯುವಿ ಕಾರಿನ ನಡುವೆ ಸರಣಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ಹಾಗೂ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೈಕ್‌ಗೆ ಎಕ್ಸ್‌ಯುವಿ ಕಾರು ಮೊದಲು ಡಿಕ್ಕಿ ಹೊಡೆದಿದ್ದು, ಬಳಿಕ ನಿಯಂತ್ರಣ ತಪ್ಪಿ ಕ್ಯಾಂಟರ್‌ಗೆ ಗುದ್ದಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಮೃತರಲ್ಲಿ ಆರು ಮಂದಿ ಬೆಂಗಳೂರಿನ ಕೊತ್ತನೂರು ನಿವಾಸಿಗಳೆಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಸರ್ಕಾರದ ವಿರುದ್ಧ ತಿರುಗಿಬಿದ್ದ ಗುತ್ತಿಗೆದಾರರು; ಮಾರ್ಚ್ 5ರಂದು ಬೃಹತ್ ಹೋರಾಟ

ಮಂಡ್ಯ: ರಾಜ್ಯ ಸರ್ಕಾರದಿಂದ ಬಾಕಿ ಬಿಲ್ ಬಿಡುಗಡೆ ಆಗದಿರುವುದನ್ನು ವಿರೋಧಿಸಿ ಗುತ್ತಿಗೆದಾರರು ಮಾರ್ಚ್ 5ರಂದು ಬೃಹತ್ ಹೋರಾಟ ನಡೆಸಲು ನಿರ್ಧರಿಸಿದ್ದಾರೆ. ಈ ಸಂಬಂಧ ಮಂಡ್ಯದ ಲೋಕೋಪಯೋಗಿ ಇಲಾಖೆ ಕಚೇರಿ ಆವರಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್. ಮಂಜುನಾಥ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಾವಿರಾರು ಕೋಟಿ ರೂಪಾಯಿ ಬಾಕಿ ಹಣ ತಕ್ಷಣ ಬಿಡುಗಡೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸುವ ತೀರ್ಮಾನ ಕೈಗೊಳ್ಳಲಾಯಿತು. ಸಭೆ ಬಳಿಕ ಮಾತನಾಡಿದ ಮಂಜುನಾಥ್, “ರಾಜ್ಯ ಮಟ್ಟದಲ್ಲಿ ಗುತ್ತಿಗೆದಾರರ ಸುಮಾರು ₹37,000 ಕೋಟಿ ಬಾಕಿ ಉಳಿದಿದೆ. ಮಂಡ್ಯ ಜಿಲ್ಲೆಯಲ್ಲಿ ಮಾತ್ರವೇ ₹950 ಕೋಟಿ ಹಣ ಬಾಕಿಯಾಗಿದೆ. ಸಾಲ ಮಾಡಿ ಕೆಲಸ ನಿರ್ವಹಿಸಿದ್ದೇವೆ. ಆದರೆ ಹಣ ಬಿಡುಗಡೆ ಆಗದ ಕಾರಣ ಬಡ್ಡಿ ಕಟ್ಟಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ” ಎಂದು ಹೇಳಿದರು. ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಸ್ಪಂದನೆ ದೊರಕಿಲ್ಲ ಎಂದು ಆರೋಪಿಸಿದ ಅವರು,…

ಸದೃಢ ರಾಷ್ಟ್ರ ನಿರ್ಮಾಣಕ್ಕೆ ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡಬೇಕು; ಡಾ.ಪಾಟೀಲ್

ದುಬೈ: ಸದೃಢ ರಾಷ್ಟ್ರ ಹಾಗೂ ನಾಡು ಕಟ್ಟಬೇಕಾದರೆ ಅಲ್ಲಿ ಆರೋಗ್ಯ ರಕ್ಷಣೆಗೆ ಹೆಚ್ಚು ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಜಾಗತಿಕ ಆರೋಗ್ಯ ಸಮುದಾಯ ಒಂದಾಗಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದರು. ದುಬೈನಲ್ಲಿ ನಡೆದ ಮೂರು ದಿನಗಳ ವಿಶ್ವ ಆರೋಗ್ಯ ಪ್ರದರ್ಶನ (WHX)ದಲ್ಲಿ ಪಾಲ್ಗೊಂಡಿದ್ದ ಸಚಿವರು, ಕರ್ನಾಟಕದಲ್ಲಿ ಆರೋಗ್ಯ ಕ್ಷೇತ್ರಕ್ಕೆ ನೀಡುತ್ತಿರುವ ಆದ್ಯತೆಗಳು ಹಾಗೂ ಕರ್ನಾಟಕದ ಗಮನಾರ್ಹ ಪ್ರಗತಿಯನ್ನು ಪ್ರಸ್ತುತಪಡಿಸಿದರು. “ಆರೋಗ್ಯ ಸವಾಲುಗಳನ್ನು ಎದುರಿಸುವಾಗ ಯಾವುದೇ ಅಡೆತಡೆಗಳು ಅಥವಾ ಗಡಿಗಳು ಇರಬಾರದು, ಆರೋಗ್ಯಕರ ಜನಸಂಖ್ಯೆ ಎಂದರೆ ಆರೋಗ್ಯಕರ ರಾಷ್ಟ್ರ ಎಂದರ್ಥ. ಮಾನವೀಯತೆಯಡಿ ನಾವು ಸೌಲಭ್ಯಗಳನ್ನು ಒದಗಿಸಬೇಕು ಎಂದು ಹೇಳಿದರು. ದುಬೈನಲ್ಲಿ ನಡೆಯುತ್ತಿರುವ ಮೂರು ದಿನಗಳ WHX 2026 ಪ್ರದರ್ಶನದಲ್ಲಿ 180 ಕ್ಕೂ ಹೆಚ್ಚು ದೇಶಗಳಿಂದ 4,800ಕ್ಕೂ ಹೆಚ್ಚು ಮಂದಿ ಭಾಗವಹಿಸುತ್ತಿದ್ದಾರೆ. ಪ್ರದರ್ಶನವು ಅತ್ಯಾಧುನಿಕ…

‘ನರೇಗಾ ಬಚವೋ’ ಕರಾವಳಿಯಲ್ಲಿ ಕಾಂಗ್ರೆಸ್ ಪಾದಯಾತ್ರೆ: ಕೇಂದ್ರದ ವಿರುದ್ಧ ಆಕ್ರೋಶ

ಮಂಗಳೂರು: ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ)ಗೆ ತಿದ್ದುಪಡಿ ಮಾಡಿ ಹೆಸರು ಹಾಗೂ ಅನುಷ್ಠಾನ ವಿಧಾನದಲ್ಲಿ ಬದಲಾವಣೆ ತರಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ‘ನರೇಗಾ ಬಚವೋ ಸಂಗ್ರಾಮ್ ಪಾದಯಾತ್ರೆ’ ಗಮನಸೆಳೆದಿದೆ. ಸುಳ್ಯದಿಂದ ಮೂಲ್ಕಿವರೆಗೆ ನಾಲ್ಕು ದಿನಗಳ ಪಾದಯಾತ್ರೆಗೆ ಸೋಮವಾರ ಚಾಲನೆ ಸಿಕ್ಕಿತ್ತು. ನೂರಾರು ಕಾರ್ಯಕರ್ತರು ಮೊದಲ ದಿನ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ನಾಯಕರು “ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಬಡವರ ಪಾಲಿನ ವರದಾನವಾದ ಉದ್ಯೋಗ ಖಾತರಿ ಯೋಜನೆಯಲ್ಲಿ ತಿದ್ದುಪಡಿ ಮಾಡಿ ಅದರ ಮೂಲ ಉದ್ದೇಶವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ” ಎಂದು ಆರೋಪಿಸಿದರು. ಯೋಜನೆಯನ್ನು ಪುನರ್‌ಸ್ಥಾಪಿಸಬೇಕೆಂದು ಒತ್ತಾಯಿಸಿ ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಅದರ ಭಾಗವಾಗಿ ಜಿಲ್ಲೆಯಲ್ಲಿ ಪಾದಯಾತ್ರೆ ನಡೆಯುತ್ತಿದೆ ಎಂದರು. “ಕೇಂದ್ರ ಸರ್ಕಾರ ಅನುದಾನವನ್ನು ಕಡಿತ ಮಾಡಿ ರಾಜ್ಯ ಸರ್ಕಾರದ ಮೇಲೆ ಹೊರೆ…

ಬೆಂಗಳೂರು- ವಿಜಯಪುರ ವಂದೇ ಭಾರತ್, ದಿನವಹಿ ವಿಶೇಷ ರೈಲು; ಕೇಂದ್ರಕ್ಕೆ ಸಚಿವ ಎಂ.ಬಿ.ಪಾಟೀಲ್ ಮನವಿ

ಬೆಂಗಳೂರು: ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಕೇಂದ್ರದ ಮುಂದೆ ಬೇಡಿಕೆ ಇಟ್ಟಿದ್ದಾರೆ. ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರೊಂದಿಗೆ ರಾಜ್ಯದ ರೈಲ್ವೆ ಯೋಜನೆಗಳ ಕುರಿತು ಚರ್ಚೆನಡೆಸಿದ ಸಚಿವ ಎಂ.ಬಿ.ಪಾಟೀಲ್, ರಾಜ್ಯ ರಾಜಧಾನಿಯಿಂದ ವಿಜಯಪುರಕ್ಕೆ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್ ರೈಲು, ಬೆಂಗಳೂರು-ಮುಂಬೈ ನಡುವೆ ಹೈಸ್ಪೀಡ್ ರೈಲು ಕಾರಿಡಾರ್ ಮತ್ತು ಬೆಂಗಳೂರು-ವಿಜಯಪುರ ನಡುವೆ ದಿನವಹಿ ವಿಶೇಷ ರೈಲುಗಳನ್ನು ಮಂಜೂರು ಮಾಡಬೇಕೆಂದು ಕೋರಿ ಮನವಿ ಸಲ್ಲಿಸಿದರು. ಬಾಗಲೂರಿನ ಹೈಟೆಕ್ ಹಾರ್ಡ್ ವೇರ್ ಪಾರ್ಕ್ ನಲ್ಲಿ ಜೆಟ್ ವೆರ್ಕ್ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಉತ್ಪಾದನೆಗೆ ಚಾಲನೆ ನೀಡಿದ ಬಳಿಕ ಅಲ್ಲೇ ಕೆಲಹೊತ್ತು ವೈಷ್ಣವ್ ಅವರನ್ನು ಭೇಟಿಮಾಡಿ, ಮನವಿ ಪತ್ರಗಳನ್ನು ನೀಡಿದೆ. ಸಕಾರಾತ್ಮಕವಾಗಿ ಪರಿಶೀಲಿಸುವುದಾಗಿ ರೈಲ್ವೆ ಸಚಿವರು ಭರವಸೆ ನೀಡಿದ್ದಾರೆ ಎಂದು ಎಂ.ಬಿ.ಪಾಟೀಲ್ ಮಾಹಿತಿ ಹಂಚಿಕೊಂಡಿದ್ದಾರೆ.…

‘ಬ್ಯಾನರ್ ಹಗರಣದಲ್ಲಿ ನಿಮಗೂ ಪಾಲು ಬರುತ್ತಿದೆಯೇ?’; ಸಿಎಂಗೆ ಬಿಜೆಪಿ ಪ್ರಶ್ನೆ

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಅಳವಡಿಸಲು ಉದ್ದೇಶಿಸಿರುವ ಬ್ಯಾನರ್‌ನಲ್ಲೂ ಸರ್ಕಾರ ಲೂಟಿ ಹೊಡೆಯುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ. ಗೃಹಲಕ್ಷ್ಮಿಯ ಎರಡು ತಿಂಗಳ ಹಣ ಎಗರಿಸಿ ₹5000 ಕೋಟಿ ಅಕ್ರಮ ಎಸಗಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈಗ ಅಂಗನವಾಡಿ ಕೇಂದ್ರಗಳಲ್ಲಿ ಅಳವಡಿಸಲು ಉದ್ದೇಶಿಸಿರುವ ಬ್ಯಾನರ್‌ನಲ್ಲೂ ಲೂಟಿ ಹೊಡೆಯುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಮಾರುಕಟ್ಟೆ ದರದಲ್ಲಿ ಕೇವಲ ರೂ. 350 ರಿಂದ ರೂ. 450 ಕ್ಕೆ ಲಭ್ಯವಾಗುವ ಬ್ಯಾನರ್‌ಗಳನ್ನು ಬರೋಬ್ಬರಿ ರೂ. 998 ನೀಡಿ ಮುದ್ರಿಸಿರುವುದು ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಕ್ಕೆ ಜ್ವಲಂತ ಸಾಕ್ಷಿಯಾಗಿದೆ ಎಂದಿರುವ ಬಿಜೆಪಿ, ಕನಿಷ್ಠ ಪಕ್ಷ ಒಂದು ಬ್ಯಾನರ್‌ನಲ್ಲಿ ಅದರ ನೈಜ ಮುದ್ರಣ ದರಕ್ಕಿಂತಲೂ ಹೆಚ್ಚಿನ ದರವನ್ನು ಲೂಟಿ ಮಾಡಲಾಗುತ್ತಿದೆ ಎಂದು ದೂರಿದೆ. ಸಚಿವ ಸಂಪುಟದಲ್ಲಿ ಭ್ರಷ್ಟರು ತುಂಬಿ ತುಳುಕಾಡುತ್ತಿದ್ದರೂ ನಿಮ್ಮ ಮೌನದ ಹಿಂದಿನ ಕಾರಣವೇನು? ನಿಮಗೂ ಪಾಲು ಬರುತ್ತಿದೆಯೇ?…

ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಕೃಷಿ ಮೇಳ

ಬೆಂಗಳೂರು: ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ ನಾವು ದೇಶದಲ್ಲೇ ಅಗ್ರಗಣ್ಯ ರಾಜ್ಯ ಎಂದು ರಾಜ್ಯ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು.. ಬೆಂಗಳೂರಿನ ಅರಮನೆ ಮೈದಾನದಲ್ಲಿ ಆರಂಭವಾದ ಮೂರು ದಿನಗಳ ಅಂತಾರಾಷ್ಟ್ರೀಯ ಕೃಷಿ ಮೇಳ ಹಾಗು ರಾಜ್ಯ ಮಟ್ಟದ ಕೃಷಿ ಪಂಡಿತ ಹಾಗು ಇತರ ಪ್ರಶಸ್ತಿ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೃಷಿ ಸಚಿವರು, ಕರ್ನಾಟಕದಲ್ಲಿ ರೈತರ ಸಬಲೀಕರಣ ಮತ್ತು ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ಸರ್ಕಾರ ಕೈಗೊಂಡಿರುವ ಉಪಕ್ರಮಗಳ ಮಾಹಿತಿ ನೀಡಿದರು. “ಈ ಮೇಳ ಸಾರ್ವಜನಿಕರಿಗೆ ಹೊಸ ಯೋಜನೆಗಳನ್ನು ಪರಿಚಯಿಸುವ ವೇದಿಕೆಯಾಗಲಿದೆ ಎಂದು ಅವರು ಬಣ್ಣಿಸಿದರು. “ರೈತರು ಸ್ಥಿರವಾದ ಕೃಷಿ, ಬ್ರ್ಯಾಂಡಿಂಗ್, ಮಾರುಕಟ್ಟೆ ಮತ್ತು ಸಾಲ ಸೌಲಭ್ಯಗಳನ್ನು ಪಡೆದರೆ ಕೃಷಿಯಲ್ಲಿ ಲಾಭದಾಯಕ ಆದಾಯವನ್ನು ಗಳಿಸಲು ಸಾಧ್ಯವಾಗುತ್ತದೆ,” ಎಂದು ಅವರು ಒತ್ತಿ ಹೇಳಿದರು. ರೈತರು…

ಮೈಸೂರಿನ ‘ಪರಿದೃಶ್ಯ 2026’ರಲ್ಲಿ ಅನಾವರಣವಾಗಲಿವೆ ಜಾಗತಿಕ ಕಿರುಚಿತ್ರ, ಸಾಕ್ಷ್ಯಚಿತ್ರಗಳು

ಮೈಸೂರು: ಜಗತ್ತಿನ ವಿವಿಧ ದೇಶಗಳ ಕಿರುಚಿತ್ರಗಳು ಮತ್ತು ಸಾಕ್ಷ್ಯಚಿತ್ರಗಳನ್ನು ಒಂದೇ ವೇದಿಕೆಯಲ್ಲಿ ಪರಿಚಯಿಸುವ ‘ಪರಿದೃಶ್ಯ–2026’ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ದಸರಾ ನಗರಿ ಮೈಸೂರು ಸಜ್ಜಾಗುತ್ತಿದೆ. ಫೆಬ್ರವರಿ 20ರಿಂದ 22ರವರೆಗೆ ಐತಿಹಾಸಿಕ ಮಹಾರಾಜ ಕಾಲೇಜು ಮೈದಾನದಲ್ಲಿ ಉತ್ಸವ ನಡೆಯಲಿದೆ. ಮೈಸೂರು ಸಿನಿಮಾ ಸೊಸೈಟಿ (ಎಂಸಿಎಸ್) ಆಯೋಜಿಸಿರುವ ಈ ನಾಲ್ಕನೇ ಆವೃತ್ತಿಯ ಉತ್ಸವದಲ್ಲಿ ಭಾರತ ಸೇರಿದಂತೆ 114 ದೇಶಗಳಿಂದ ಆಯ್ಕೆಯಾದ ಕಿರುಚಿತ್ರಗಳು ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ ನಡೆಯಲಿದೆ. ಪ್ರೇಕ್ಷಕರ ಹೆಚ್ಚಿನ ಭಾಗವಹಿಸುವಿಕೆಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಬಾರಿ ವಿಶಾಲ ಸ್ಥಳವನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ‘ಪರಿದೃಶ್ಯ’ ಉತ್ಸವವು ವರ್ಷದಿಂದ ವರ್ಷಕ್ಕೆ ಯಶೋಗಾಥೆ ಬರೆಯುತ್ತಿದೆ. ಮೊದಲ ಆವೃತ್ತಿಯಲ್ಲಿ 10 ದೇಶಗಳಿಂದ 150 ಚಿತ್ರಗಳು ಪ್ರದರ್ಶನಗೊಂಡಿದ್ದರೆ, ಮೂರನೇ ಆವೃತ್ತಿಯಲ್ಲಿ 109 ದೇಶಗಳಿಂದ 3,100ಕ್ಕೂ ಹೆಚ್ಚು ಚಿತ್ರಗಳು ಭಾಗವಹಿಸಿದ್ದವು. 2026ರ ಆವೃತ್ತಿಗೆ 114 ದೇಶಗಳಿಂದ 3,000ಕ್ಕೂ ಅಧಿಕ ಚಿತ್ರಗಳ ಭಾಗವಹಿಸುವಿಕೆಗೆ ಪ್ರಸ್ತಾವನೆಗಳು…

ಮೆಟ್ರೋ ದರಗಳನ್ನು ರಾಜ್ಯ ಸರ್ಕಾರ ನಿರ್ಧರಿಸುವುದಿಲ್ಲ; ಕೇಂದ್ರದತ್ತ ಬೊಟ್ಟು ಮಾಡಿದ ಸಿಎಂ

ಬೆಂಗಳೂರು: ‘ಬೆಂಗಳೂರು ಮೆಟ್ರೋ ಕೇವಲ ಒಂದು ಸಾರಿಗೆ ವ್ಯವಸ್ಥೆಯಲ್ಲ, ಅದು ನಮ್ಮ ನಗರದ ಲಕ್ಷಾಂತರ ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ಕುಟುಂಬಗಳ ಕನಸುಗಳನ್ನು ಹೊತ್ತೊಯ್ಯುವ, ಪ್ರಗತಿಯತ್ತ ಮುನ್ನಡೆಸುವ ಮತ್ತು ಈ ಎಲ್ಲರ ದೈನಂದಿನ ಜೀವನಾಡಿಯ ಸಂಕೇತವಾಗಿದೆ. ಇತ್ತೀಚಿನ ಮೆಟ್ರೋ ದರ ಪರಿಷ್ಕರಣೆಯ ನಂತರ ಪ್ರಯಾಣಿಕರಿಂದ ವ್ಯಕ್ತವಾದ ಆತಂಕ ಮತ್ತು ಬೇಸರವನ್ನು ನಾನು ಅರ್ಥೈಸಿಕೊಳ್ಳಬಲ್ಲೆ. ಜನರ ಅಹವಾಲಿಗೆ ಕಿವಿಯಾಗಬೇಕಿರುವುದು ಪ್ರತಿ ಜವಾಬ್ದಾರಿಯುತ ಸರ್ಕಾರದ ಕರ್ತವ್ಯ ಎಂದು ನಂಬಿರುವ ನಮಗೆ ನಿಮ್ಮ ಅಹವಾಲುಗಳೇ ಆದ್ಯತೆಯಾಗಿವೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೆಟ್ರೋ ರೈಲು ಟಿಕೆಟ್ ದರ ಏರಿಕೆ ಬಗ್ಗೆ ವ್ಯಾಪಕ ಅಸಮಾಧಾನ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ, ಸಾಮಾಜಿಕ ಮಾಧ್ಯಮ X ನಲ್ಲಿ ಸಿಎಂ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ಮೆಟ್ರೋ ರೈಲ್ವೇಸ್ (ಆಪರೇಷನ್ & ಮೇಂಟೆನೆನ್ಸ್) ಆಕ್ಟ್, 2002ರ ಅಡಿಯಲ್ಲಿ, ಮೆಟ್ರೋ ದರಗಳನ್ನು ರಾಜ್ಯ ಸರ್ಕಾರ ನಿರ್ಧರಿಸುವುದಿಲ್ಲ. ದರಗಳನ್ನು ಕೇಂದ್ರ ಸರ್ಕಾರದ ವಸತಿ…