ಗೃಹ ಸಚಿವ ಜಮೀರ್ ರಾಜೀನಾಮೆಗೆ ಸಿ.ಟಿ. ರವಿ ಆಗ್ರಹ

ಬೆಂಗಳೂರು: “ಭ್ರಷ್ಟಾಚಾರ ಬಿಟ್ಟು ಕಾಂಗ್ರೆಸ್ ಇಲ್ಲ, ಕಾಂಗ್ರೆಸ್ ಬಿಟ್ಟು ಭ್ರಷ್ಟಾಚಾರ ಇಲ್ಲ. ಇವೆರಡೂ ಒಂದು ನಾಣ್ಯದ ಎರಡು ಮುಖಗಳು” ಎಂಬ ಗಂಭೀರ ಆರೋಪವನ್ನು ಬಿಜೆಪಿ ಹಿರಿಯ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಮಾಡಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಸ್ಕ್ಯಾನ್ ಮಾಡುವ ಅಗತ್ಯವಿಲ್ಲ; ಕಣ್ಣಿಗೆ ಕಾಣುವಷ್ಟು ಸ್ಪಷ್ಟವಾಗಿದೆ. ಕಾಂಗ್ರೆಸ್ ಶಾಸಕರೇ ತಮ್ಮ ಸರ್ಕಾರದ ವಿರುದ್ಧ ಅಳಲು ತೋಡಿಕೊಳ್ಳುತ್ತಿದ್ದಾರೆ” ಎಂದು ಹೇಳಿದರು. ಸಿ.ಟಿ. ರವಿ ಅವರು, ಉದ್ಯಮಿಗಳು ಹಾಗೂ ಸಾಮಾನ್ಯ ನಾಗರಿಕರು ಎದುರಿಸುತ್ತಿರುವ ಲಂಚದ ಅನುಭವದ ವಿವರಗಳನ್ನೂ ಉದಾಹರಿಸಿದರು. “ಬಿಲ್ಡಿಂಗ್ ಪ್ಲಾನ್ ಮಂಜೂರಿಗೆ ಪ್ರತಿ ಅಡಿಗೆ 100 ರೂ. ಲಂಚ ನೀಡಬೇಕಾಗುತ್ತಿದೆ. ಭೂ ಬದಲಾವಣೆಗೆ ಎಕರೆಗೂ 25 ಲಕ್ಷ ರೂ. ಲಂಚ ಕೇಳಲಾಗುತ್ತಿದೆ. ಎಲ್ಲ ಇಲಾಖೆಗಳಲ್ಲಿ ಲಂಚದ ಬೇಡಿಕೆ ನಡೆಯುತ್ತಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಅನುದಾನ ಪಡೆಯಲು ಅಡ್ವಾನ್ಸ್…

ಭಾರೀ ಮಳೆಗೆ ರಾಜ್ಯದ 3 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಂಗಳೂರು: ರಾಜ್ಯದ ಹಲವೆಡೆ ಮಳೆಯ ಆರ್ಭಟ ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಅದರಲ್ಲೂ ಉತ್ತರ ಕನ್ನಡ, ಹಾಸನ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮಳೆ ತೀವ್ರಗೊಂಡಿದೆ. ಹವಾಮಾನ ಇಲಾಖೆ ಬುಧವಾರವೂ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಉಂಟಾಗುವ ತೊಂದರೆಗಳನ್ನು ಮನಗಂಡು ಈ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ಬುಧವಾರ (ಜೂನ್‌ 25) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ತುರ್ತು ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಭಾಗದ ಸಾರ್ವಜನಿಕರು ಹಾಗೂ ಪಾಲಕರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತದಿಂದ ಮನವಿ ಮಾಡಲಾಗಿದೆ.  

ವಸತಿ ಲಂಚಾವತಾರ; ಯಾವುದೇ ತನಿಖೆಗೆ ಸಿದ್ದ ಎಂದ ಜಮೀರ್

ಬೆಂಗಳೂರು: ಬಡವರಿಗೆ ಮನೆ ಹಂಚಿಕೆಯಲ್ಲಿ ಕೇಳಿಬಂದಿರುವ ಭ್ರಷ್ಟಾಚಾರ ಆರೋಪಗಳನ್ನು ತಳ್ಳಿಹಾಕಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಈ ಕುರಿತು ಸಮಗ್ರ ತನಿಖೆ ನಡೆಯಲಿ ಎಂದಿದ್ದಾರೆ. ಹಣ ಪಡೆದು ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಮಾಡಿರುವ ಆರೋಪ ರಾಜ್ಯ ರಾಜಕಾರಣದಲ್ಲಿ ಆಡಳಿತ ಪ್ರತಿಪಕ್ಷಗಳ ನಡುವೆ ಜಟಾಪಟಿಗೆ ಕಾರಣವಾಗಿದೆ. ಈ ಆರೋಪವನ್ನು ಮುಂದಿಟ್ಟು ಸರ್ಕಾರದ ವಿರುದ್ಧ ಸಮರ ಸಾರಿರುವ ಬಿಜೆಪಿ ನಾಯಕರು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಈ ನಡುವೆ ಆರೋಪಗಳನ್ನು ತಳ್ಳಿಹಾಕಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಮನೆ ಹಂಚಿಕೆ ಮಾಡಲು ಹಣ ತೆಗೆದುಕೊಳ್ಳುತ್ತಿರುವ ಬಗ್ಗೆ ಯಾವುದಾದರೂ ದಾಖಲೆ ಇದೆಯೇ? ಹಣಕ್ಕೆ ಬೇಡಿಕೆ ಇಟ್ಟವರು ಯಾರು ಎಂದು ಬಿ.ಆರ್. ಪಾಟೀಲ್ ನನಗೆ ಹೇಳಲಿ ಎಂದು ಸವಾಲು ಹಾಕಿದ್ದಾರೆ. ಲಂಚ ಪಡೆದವರ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ,…

ರಾಜ್ಯದ ಏಳು ಬಿಲ್‌ಗಳಿಗೆ ಅನುಮೋದನೆ ನೀಡುವಂತೆ ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ ಏಳು ಬಿಲ್‌ಗಳಿಗೆ ಅನುಮೋದನೆ ನೀಡುವಂತೆ ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವ್ರು ರಾಷ್ಟ್ರಪತಿಯನ್ನು ಮಂಗಳವಾರ ಭೇಟಿ ಮಾಡಿ ಚರ್ಚಿಸಿದ್ದಾರೆ. ಬಿಲ್‌ಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದು, ಅವುಗಳನ್ನು ತರಿಸಿ ಅನುಮೋದನೆ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದಾರೆ. ರಾಷ್ಟ್ರಪತಿಗಳು ಹಾಗೂ ಕೇಂದ್ರ ವಿತ್ತ ಸಚಿವರ ಭೇಟಿಯ ನಂತರ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ವಾರದ ಹಿಂದೆ 16ನೇ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನು ಭೇಟಿ ಮಾಡಿದ್ದು, ಎರಡನೇ ಹೆಚ್ಚುವರಿ ಮನವಿಯನ್ನು ಕೊಟ್ಟು, 14ನೇ ಹಣಕಾಸು ಆಯೋಗದಲ್ಲಿ 4.7% ತೆರಿಗೆ ಹಂಚಿಕೆಯಾಗಿತ್ತು. 15ನೇ ಹಣಕಾಸು ಆಯೋಗದಲ್ಲಿ 3.6% ಆಗಿದೆ. ಶೇಕಡಾ 1.1% ಕಡಿಮೆಯಾಗಿದ್ದು, ಇದು ಒಟ್ಟಾರೆ ಅನುದಾನ ಹಂಚಿಕೆಯಲ್ಲಿ ಶೇ. 23%…

ಆಡಿಯೋ ಬಾಂಬ್: ನೀವೇ ರಾಜೀನಾಮೆ ಕೊಡ್ತೀರಾ? ಜಮೀರ್ ಅವರ ರಾಜೀನಾಮೆ ಪಡೀತೀರಾ? ಬಿಜೆಪಿ ಪ್ರಶ್ನೆ

ಬೆಂಗಳೂರು: ಆರ್ಥಿಕವಾಗಿ ದಿವಾಳಿ ಆಗಿರುವ ಭ್ರಷ್ಟ ಸಿದ್ದರಾಮಯ್ಯ ಸರ್ಕಾರ ವಸತಿ ನಿಗಮದ ಮನೆಗಳನ್ನು ಹಣ ಕೊಟ್ಟವರಿಗೆ ಮಾತ್ರ ನೀಡಿ ಹಗಲು ದರೋಡೆ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. <blockquote class=”twitter-tweet” data-media-max-width=”560″><p lang=”kn” dir=”ltr”>ಆರ್ಥಿಕವಾಗಿ ದಿವಾಳಿ ಆಗಿರುವ ಭ್ರಷ್ಟ <a href=”https://twitter.com/siddaramaiah?ref_src=twsrc%5Etfw”>@siddaramaiah</a> ಸರ್ಕಾರ ವಸತಿ ನಿಗಮದ ಮನೆಗಳನ್ನು ಹಣ ಕೊಟ್ಟವರಿಗೆ ಮಾತ್ರ ನೀಡಿ ಹಗಲು ದರೋಡೆ ಮಾಡುತ್ತಿದೆ.<br><br>ಆಳಂದ ಶಾಸಕ <a href=”https://twitter.com/brpatilmla?ref_src=twsrc%5Etfw”>@brpatilmla</a> ಹಾಗೂ ಸಚಿವ <a href=”https://twitter.com/BZZameerAhmedK?ref_src=twsrc%5Etfw”>@BZZameerAhmedK</a> ಅವರ ಆಪ್ತ ಕಾರ್ಯದರ್ಶಿ ಸರ್ಫ ರಾಜ್ ಖಾನ್ ಮನೆಗಳನ್ನು ಹಣ ಪಡೆದು ಹಂಚಿರುವ ಬಗ್ಗೆ ದೂರವಾಣಿ ಕರೆಯಲ್ಲಿ ಮಾತನಾಡಿಕೊಂಡಿದ್ದಾರೆ.… <a href=”https://t.co/ykPrqXGQ5I”>pic.twitter.com/ykPrqXGQ5I</a></p>&mdash; BJP Karnataka (@BJP4Karnataka) <a href=”https://twitter.com/BJP4Karnataka/status/1936008554869408089?ref_src=twsrc%5Etfw”>June 20, 2025</a></blockquote> <script async src=”https://platform.twitter.com/widgets.js” charset=”utf-8″></script> ಆಳಂದ ಶಾಸಕ ಬಿ.ಆರ್.ಪಾಟೀಲ್ ಹಾಗೂ ಸಚಿವ ಸಚಿವ ಜಮೀರ್ ಅಹ್ಮದ್ ಅವರ ಆಪ್ತ ಕಾರ್ಯದರ್ಶಿ ಸರ್ಫ ರಾಜ್ ಖಾನ್ ಮನೆಗಳನ್ನು…

‘ಹರಿ ಹರ ವೀರ ಮಲ್ಲು’ ಜುಲೈ 24 ರಂದು ರಿಲೀಸ್

ಚೆನ್ನೈ: ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಬಹುನಿರೀಕ್ಷಿತ ಪೌರಾಣಿಕ ಚಿತ್ರ ‘ಹರಿ ಹರ ವೀರ ಮಲ್ಲು’ ಈ ವರ್ಷ ಜುಲೈ 24 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಶನಿವಾರ ಅಧಿಕೃತವಾಗಿ ಘೋಷಿಸಿದೆ. “ಒಬ್ಬರು ಅಧಿಕಾರಕ್ಕಾಗಿ ಹೋರಾಟ. ಒಬ್ಬರು ಧರ್ಮಕ್ಕಾಗಿ ಹೋರಾಟ. ಪರಂಪರೆಯ ಘರ್ಷಣೆ ಆರಂಭವಾಗಲಿದೆ” ಎಂಬ ಘೋಷಣೆಯೊಂದಿಗೆ ಚಿತ್ರದ ಅಧಿಕೃತ ಎಕ್ಸ್ (ಹಿಂದೆ ಟ್ವಿಟರ್) ಖಾತೆಯಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಈ ಚಿತ್ರವು ಐದೂವರೆ ವರ್ಷಗಳ ಕಾಲ ಶೂಟಿಂಗ್‌ನಲ್ಲಿದ್ದು, ಮೊದಲಿನಿಂದಲೇ ಅಭಿಮಾನಿಗಳಲ್ಲಿ ಅಪಾರ ನಿರೀಕ್ಷೆ ಮೂಡಿಸಿದೆ. ಆರಂಭದಲ್ಲಿ ಜೂನ್ 12 ರಂದು ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ, ತಾಂತ್ರಿಕ ಮತ್ತು ನಿರ್ಮಾಣ ಸಂಬಂಧಿತ ಕಾರಣಗಳಿಂದಾಗಿ ಬಿಡುಗಡೆ ಮುಂದೂಡಲಾಗಿತ್ತು. ಚಿತ್ರತಂಡ ಈ ಹಿಂದೆ ಬಿಡುಗಡೆ ಮಾಡಿದ್ದ ಹೇಳಿಕೆಯಲ್ಲಿ, “ಮುಂದಿನ ದೊಡ್ಡ ಹೆಜ್ಜೆಗಳಿಗಾಗಿ ಒಂದು ಹೆಜ್ಜೆ ಹಿಂದಕ್ಕೆ ಇಡುತ್ತಿದ್ದೇವೆ. ಪವನ್ ಕಲ್ಯಾಣ್ ಗಾರೂ…

‘ಒಂದು ಭೂಮಿ, ಒಂದು ಆರೋಗ್ಯ’: ವಿಶಾಖಪಟ್ಟಣದಲ್ಲಿ ಯೋಗ ಮಹಾಸಂಭ್ರಮ

ವಿಶಾಖಪಟ್ಟಣಂ: 11ನೇ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶನಿವಾರ ಆಂಧ್ರಪ್ರದೇಶದ ವಿಶಾಖಪಟ್ಟಣಂನ ಆರ್‌ಕೆ ಬೀಚ್‌ನಲ್ಲಿ ನಡೆದ ರಾಷ್ಟ್ರೀಯ ಯೋಗ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವ ವಹಿಸಿ, ಮೂರು ಲಕ್ಷಕ್ಕೂ ಹೆಚ್ಚು ಯೋಗಾಭ್ಯಾಸಿಗಳೊಂದಿಗೆ ಸಾಮೂಹಿಕ ಯೋಗ ಶಿಸ್ತನ್ನು ಪಾಲಿಸಿದರು. Yoga isn't just an exercise. It is a way of life. Wonderful to join this year's Yoga Day celebrations in Visakhapatnam. https://t.co/ReTJ0Ju2sN — Narendra Modi (@narendramodi) June 21, 2025 ‘One Earth, One Health’ ಎಂಬ ಧ್ಯೇಯವಾಕ್ಯದೊಂದಿಗೆ ನಡೆದ ಈ ಉತ್ಸವಾತ್ಮಕ ಕಾರ್ಯಕ್ರಮವು ಯೋಗದ ‘2.0 ಯುಗ’ಕ್ಕೆ ನಾಂದಿ ಹಾಡಿದೆ ಎಂದು ಪ್ರಧಾನಿಯವರು ಹೇಳಿದ್ದಾರೆ. “ಇಂದಿನ ಯುದ್ಧಗಳು, ಅಶಾಂತಿ ಹಾಗೂ ಅಸ್ಥಿರತೆಯ ನಡುವೆ, ಯೋಗವೇ ಜಗತ್ತಿಗೆ ಶಾಂತಿಯ ದಾರಿ ತೋರಿಸುತ್ತಿದೆ. ಇದು ವಿಶ್ವದ ಆತ್ಮಶುದ್ಧಿಗೆ ಪಥದಂತಿದೆ”…

ಯೋಗ ಜಗತ್ತಿಗೆ ಶಾಂತಿಯ ದಿಕ್ಕು ತೋರಿಸುತ್ತದೆ: ಪ್ರಧಾನಿ ಮೋದಿ

ವಿಶಾಖಪಟ್ಟಣಂ: ಯುಗಾದಿ ಯುದ್ಧ ಹಾಗೂ ಉದ್ವಿಗ್ನತೆಯಿಂದ ಹಲ್ಲು ಹಾಸಿದ ವಿಶ್ವವಾತಾವರಣದ ನಡುವೆ, ಯೋಗವೆಂಬ ಶಾಂತಿಯ ಸಂದೇಶ ಜಗತ್ತಿಗೆ ಬೆಳಕಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ 11ನೇ ಅಂತರರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ಹೇಳಿದರು. Yoga isn't just an exercise. It is a way of life. Wonderful to join this year's Yoga Day celebrations in Visakhapatnam. https://t.co/ReTJ0Ju2sN — Narendra Modi (@narendramodi) June 21, 2025 ವಿಶಾಖಪಟ್ಟಣಂನ ಆರ್‌ಕೆ ಬೀಚ್‌ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಯೋಗ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, “ಯೋಗವು ಘರ್ಷಣೆಯಿಂದ ಸಹಕಾರದತ್ತ, ಉದ್ವಿಗ್ನತೆಯಿಂದ ಪರಿಹಾರದತ್ತ ಸಾಗುವ ಮಾರ್ಗವಾಗಿದೆ. ಇದು ಮಾನವೀಯತೆಯ ಹೊಸ ಯುಗದ ಆರಂಭ – ಯೋಗ 2.0 ಗೆ ದಾರಿ ತೆರೆದಿದೆ” ಎಂದು ತಿಳಿಸಿದ್ದಾರೆ. “ಇಂದು ಜಗತ್ತಿನಲ್ಲಿ ಅಶಾಂತಿ, ಅಸ್ಥಿರತೆ ಹೆಚ್ಚುತ್ತಿದೆ. ಅಂತಹ…

ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರದ ‘ಸೈಲೋರ್’ ಪ್ರೋಮೋ ಬಿಡುಗಡೆ

ಚೆನ್ನೈ: ನಟಿ ಅನುಷ್ಕಾ ಶೆಟ್ಟಿ ಹಾಗೂ ತಮಿಳು ನಟ ವಿಕ್ರಮ್ ಪ್ರಭು ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಘಾಟಿ’ ಚಿತ್ರದ ಮೊದಲ ಹಾಡು ‘ಸೈಲೋರ್’ನ ಪ್ರೋಮೋ ಬಿಡುಗಡೆಯಾಗಿದೆ. ಇದೇ ಜುಲೈ 11ರಂದು ತೆರೆಗೆ ಬರಲಿರುವ ಈ ಆಕ್ಷನ್ ಥ್ರಿಲ್ಲರ್ ಚಿತ್ರಕ್ಕೆ ಕ್ರಿಶ್ ಜಾಗರ್ಲಮುಡಿ ನಿರ್ದೇಶನ ಮಾಡಿದ್ದು, ‘ವೇದಂ’ ನಂತರದ ಅನುಷ್ಕಾ ಮತ್ತು ಕ್ರಿಷ್ ಅವರ ಎರಡನೇ ಸಹಯೋಗ ಇದಾಗಿದೆ. ಸಾಗರ್ ನಾಗವೆಲ್ಲಿ ಸಂಗೀತ ಸಂಯೋಜನೆ ಮಾಡಿರುವ ‘ಸೈಲೋರ್’ ಎಂಬ ಲಯಬದ್ಧ ಹಾಡಿಗೆ, ನಿರ್ದೇಶಕ ಕ್ರಿಶ್ ಜಾಗರ್ಲಮುಡಿ ಸಾಹಿತ್ಯ ಬರೆದು ಲಿಪ್ಸಿಕಾ ಭಾಷ್ಯಂ, ಸಾಗರ್ ನಾಗವೆಲ್ಲಿ ಮತ್ತು ಸೋನಿ ಕೊಮಂಡೂರಿ ಹಾಡು ಹಾಡಿದ್ದಾರೆ. ಈ ಪ್ರೋಮೋ ಅಭಿಮಾನಿಗಳು ಹಾಗೂ ಚಲನಚಿತ್ರ ಪ್ರೇಮಿಗಳಲ್ಲಿ ಹೆಚ್ಚಿನ ಕುತೂಹಲಕ್ಕೆ ಕಾರಣವಾಗಿದೆ. ಯುವಿ ಕ್ರಿಯೇಷನ್ಸ್ ಬ್ಯಾನರ್‌ನಡಿಯಲ್ಲಿ ರಾಜೀವ್ ರೆಡ್ಡಿ ಮತ್ತು ಸಾಯಿ ಬಾಬು ಜಾಗರ್ಲಮುಡಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಇದು ಅನುಷ್ಕಾ ಶೆಟ್ಟಿ ಅವರ ಯುವಿ…

ಇಸ್ರೇಲಿ ದಾಳಿಯಿಂದ ಇರಾನ್ ಪರಮಾಣು ಸೌಲಭ್ಯಗಳಿಗೆ ಅಪಾಯ: IAEA ಮುಖ್ಯಸ್ಥರ ಎಚ್ಚರಿಕೆ

ವಿಶ್ವಸಂಸ್ಥೆ: ಇರಾನ್‌ನ ಪರಮಾಣು ತಾಣಗಳ ಮೇಲೆ ಇಸ್ರೇಲ್ ನಡೆಸಿದ ದಾಳಿಯು ಭವಿಷ್ಯದಲ್ಲಿ ಗಂಭೀರ ಪರಮಾಣು ಅಪಾಯಕ್ಕೆ ಕಾರಣವಾಗಬಹುದು ಎಂದು ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ (IAEA) ಮಹಾನಿರ್ದೇಶಕ ರಾಫೆಲ್ ಗ್ರೋಸಿ ಎಚ್ಚರಿಸಿದ್ದಾರೆ. ಬುಧವಾರ ನಡೆದ ಭದ್ರತಾ ಮಂಡಳಿಯ ತುರ್ತು ಸಭೆಯಲ್ಲಿ ಮಾತನಾಡಿದ ಅವರು, ದಾಳಿಯಿಂದಾಗಿ ನಟಾಂಜ್ ಹಾಗೂ ಎಸ್ಫಹಾನ್ ತಾಣಗಳಲ್ಲಿ ರಾಸಾಯನಿಕ ಮಾಲಿನ್ಯದ ಆತಂಕವಿದೆ ಎಂದರು. “ಈಗಾಗಲೇ ಸಾರ್ವಜನಿಕರಿಗೆ ಹಾನಿಯಾಗಿಲ್ಲವಾದರೂ, ಮುಂದೆ ಅಂಥ ಅಪಾಯ ಸಂಭವಿಸಬಹುದಾಗಿದೆ,” ಎಂದು ಗ್ರೋಸಿ ಎಚ್ಚರಿಸಿದರು. “ಬುಶೆಹರ್ ಮೇಲೆ ದಾಳಿ ಉಗ್ರ ಪರಿಣಾಮಕಾರಿಯಾಗಿದೆ” ಬುಶೆಹರ್‌ನ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ದಾಳಿ ಸಂಭವಿಸಿದರೆ, ಪರಿಸರಕ್ಕೆ ಅತ್ಯಧಿಕ ವಿಕಿರಣಶೀಲತೆಯ ಹರಡುವಿಕೆಯಾಗಬಹುದು ಎಂದು ಅವರು ಎಚ್ಚರಿಸಿದರು. “ಸುತ್ತಲಿನ ಪ್ರದೇಶಗಳನ್ನು ಖಾಲಿ ಮಾಡಬೇಕು, ರಕ್ಷಣಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಆಹಾರ ಪೂರೈಕೆಯನ್ನೂ ನಿಯಂತ್ರಿಸಬೇಕಾದ ಪರಿಸ್ಥಿತಿ ಉಂಟಾಗಬಹುದು,” ಎಂದು ಗ್ರೋಸಿ ಹೇಳಿದರು. ಫೋರ್ಡೋ ತಾಣದಲ್ಲಿ ಯಾವುದೇ ಹಾನಿಯ ಮಾಹಿತಿ…