ಕಾವೇರಿ ಕಿಚ್ಚು: ದಸರಾ ಹಬ್ಬದ ದಿನ ಎಲ್ಲ ರಸ್ತೆಗಳು ಬಂದ್

ವೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಅಧಿವೇಶನ ಕರೆದು ನೀರು ನಿಲ್ಲಿಸುವ ನಿರ್ಣಯ ಮಂಡಿಸದಿದ್ದರೆ. ದಸರಾ ಹಬ್ಬದ ದಿನ ಎಲ್ಲ ರಸ್ತೆಗಳ ಬಂದ್ ಚಳುವಳಿ ನಡೆಸುವುದಾಗಿ.ಕರ್ನಾಟಕ ಜಲಸಂರಕ್ಷಣಾ ಸಮಿತಿ ಎಚ್ಚರಿಕೆ ನೀಡಿದೆ.

ಕರ್ನಾಟಕ ಜಲ ಸಂರಕ್ಷಣಾ ಸಮಿತಿ ವತಿಯಿಂದ ನಡೆಯುತ್ತಿರುವ 12ನೇ ದಿನದ ಕಾವೇರಿ ನೀರಿನ ಅನ್ಯಾಯದ ಕುರಿತು ನಿರಂತರ ಧರಣಿಯನ್ನು ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಗುರುದೇವ್ ನಾರಾಯಣ ಕುಮಾರ್ ,ವೆಂಕಟಸ್ವಾಮಿ, ಕೆ ಕೆ ಮೋಹನ್, ರಾಜಪ್ಪ

ಕಿರುಗಸೂರು ಶಂಕರ್ ಮುಖಂಡರುಗಳು ಫ್ರೀಡಂ ಪಾರ್ಕ್ ನಿಂದ ವಿಧಾನಸೌಧದವರೆಗೆ ಉರುಳುಸೇವೆ ಮಾಡಿದರು. ಈ ಸಂದರ್ಭದಲ್ಲಿ ಪೊಲೀಸರು ಉರುಳುಸೇವೆಗೆ ತಡೆಯೊಡ್ಡಿದರು. ಈ ವೇಳೆ ಪೊಲೀಸರು ಮತ್ತು ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆಯಿತು. ಸಂಘಟನೆಗಳ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

ರಾಜ್ಯ ಸರ್ಕಾರಕ್ಕೆ ಕುರುಬೂರು ಎಚ್ಚರಿಕೆ: 

ಈ ಸಂದರ್ಭದಲ್ಲಿ ಮಾತನಾಡಿದ ಎಂದು ಸಮಿತಿಯ ಪ್ರಮುಖರಾದ ಕುರುಬೂರು ಶಾಂತಕುಮಾರ್, ರಾಜ್ಯ ಸರ್ಕಾರ ಜನರನ್ನು ದಿಕ್ಕು ತಪ್ಪಿಸುತ್ತಿದೆ. ಹೋರಾಟವನ್ನು ಹಗುರವಾಗಿ ಕಾಣುತ್ತಿದೆ. ಮುಖ್ಯಮಂತ್ರಿಗಳಿಗೆ ನೀರು ನಿಲ್ಲಿಸುವ ಧೈರ್ಯ ಇಲ್ಲದಿದ್ದರೆ ವಿಧಾನ ಮಂಡಲ ಅಧಿವೇಶನ ಕರೆದು ನಿರ್ಣಯ ಮಂಡಿಸಿ ಕೇಂದ್ರಕ್ಕೆ ಕಳುಹಿಸಲಿ ಎಂದರು.

ಬೆಂಗಳೂರು ನಗರದ ಎಲ್ಲಾ ಶಾಸಕರ ಮನೆ ಮುಂದೆ 15ರಂದು ಸಂಘ ಸಂಸ್ಥೆಗಳು ಬಾಯಿ ಬಡಿದುಕೊಳ್ಳುವ ಪ್ರತಿಭಟನೆ ನಡೆಸಿ ಎಚ್ಚರಿಕೆ ನೀಡಬೇಕು ಎಂದು ಕರೆ ನೀಡಿದರು.

Related posts