ಕಾವೇರಿ, ಮಹದಾಯಿ ಕಾರ್ಯತಂತ್ರ; ಬುಧವಾರ ಸರ್ವಪಕ್ಷ ಸಭೆ

ಬೆಂಗಳೂರು: ಮಹದಾಯಿ, ಕಾವೇರಿ ನದಿ ನೀರು ಹಂಚಿಕೆ ಕುರಿತು ಬುಧವಾರ ಸರ್ವಪಕ್ಷಗಳ ಸಭೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಬೆಂಗಳೂರಿನಲ್ಲಿ ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆಗಸ್ಟ್ 23ರಂದು ಬೆಳಗ್ಗೆ 11 ಗಂಟೆಗೆ ಸರ್ವಪಕ್ಷಗಳ ಸಭೆ ನಡೆಯಲಿದೆ ಎಂದು ತಿಳಿಸಿದರು. ಈ ಸಭೆಗೆ ಸಿಎಂ ಅವರೇ ದಿನಾಂಕ ನಿಗದಿ ಮಾಡಿದ್ದು, ಸಭೆಯಲ್ಲಿ ಅನೇಕ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ. ಈ ಸಭೆಗೆ ಎಲ್ಲ ಸಂಸದರನ್ನು ಆಹ್ವಾನಿಸಲಾಗಿದೆ ಎಂದು ತಿಳಸಿದರು.

Related posts