ಚೆನ್ನೈ: ಸತತ ಸೋಲಿನಿಂದ ಕಂಗಾಲಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಐಪಿಎಲ್ ಸರಣಿಯಿಂದ ಹೊರಬಿದ್ದಿದೆ. ಬುಧವಾರದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 4 ವಿಕೆಟ್ ಅಂತರದಲ್ಲಿ ಸೋಲು ಕಂಡ ಚೆನ್ನೈ ಸೂಪರ್ ಕಿಂಗ್ಸ್ ಪ್ಲೆ ಆಫ್ ನಿಂದ ಹೊರಗುಳಿಯುವಂತಾಯಿತು.
Hat-trick 👌
Powerful start with the bat 🔥
Captain's knock 🫡The Battle of Kings goes the @PunjabKingsIPL way again this season ❤
Scorecard ▶ https://t.co/eXWTTv7Xhd #TATAIPL | #CSKvPBKS pic.twitter.com/Yk1SOZOzip
— IndianPremierLeague (@IPL) April 30, 2025
ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 19.2 ಓವರ್ ನಲ್ಲಿ 190 ರನ್ ಗಳಿಸಿ ಸರ್ವಪತನ ಕಂಡಿತು.
ಈ ಗೆಲುವಿನ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಗೆ ತಂಡ 19.4 ಓವರ್ ನಲ್ಲೇ 6 ವಿಕೆಟ್ ಕಳೆದುಕೊಂಡು 194 ರನ್ ಪೇರಿಸಿತು. ನಾಯಕ ಶ್ರೇಯಸ್ ಅಯ್ಯರ್ -72 ರನ್ ಹಾಗೂ ಪ್ರಭ್ ಸಿಮ್ರನ್ ಸಿಂಗ್ 54 ರನ್ ಪಂಜಾಬ್ ಕಿಂಗ್ಸ್ ತಂಡದ ಗೆಲುವಿಗೆ ಕಾರಣವಾಯಿತು. ಒಂದೇ ಓವರ್ ನಲ್ಲಿ ಹ್ಯಾಟ್ರಿಕ್ ಸಹಿತ 4 ವಿಕೆಟ್ ಪಡೆದ ಯುಜುವೇಂದ್ರ ಚಹಲ್ ಕೂಡಾ ಪಂಜಾಬ್ ತಂಡಕ್ಕೆ ಶಕ್ತಿ ತಂದುಕೊಟ್ಟರು.
ಈ ನಡುವೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ ತವರಿನಲ್ಲಿ ಸತತ 5ನೇ ಸೋಲು ಕಂಡಿದೆ. ಅಷ್ಟೇ ಅಲ್ಲ ಸತತ ಸೋಲಿನಿಂದಾಗಿ ಈ ತಂಡ ಈ ಐಪಿಎಲ್ ಸರಣಿಯಿಂದ ಹೊರಬಿದ್ದಿದೆ.