ಸತತ ಸೋಲು: ಐಪಿಎಲ್ ಸರಣಿಯಿಂದ ಹೊರಬಿದ್ದ ಚೆನ್ನೈ ಸೂಪರ್ ಕಿಂಗ್ಸ್

ಚೆನ್ನೈ: ಸತತ ಸೋಲಿನಿಂದ ಕಂಗಾಲಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಐಪಿಎಲ್ ಸರಣಿಯಿಂದ ಹೊರಬಿದ್ದಿದೆ. ಬುಧವಾರದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 4 ವಿಕೆಟ್ ಅಂತರದಲ್ಲಿ ಸೋಲು ಕಂಡ ಚೆನ್ನೈ ಸೂಪರ್ ಕಿಂಗ್ಸ್ ಪ್ಲೆ ಆಫ್ ನಿಂದ ಹೊರಗುಳಿಯುವಂತಾಯಿತು.

ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 19.2 ಓವರ್ ನಲ್ಲಿ 190 ರನ್ ಗಳಿಸಿ ಸರ್ವಪತನ ಕಂಡಿತು.

ಈ ಗೆಲುವಿನ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಗೆ ತಂಡ 19.4 ಓವರ್ ನಲ್ಲೇ 6 ವಿಕೆಟ್ ಕಳೆದುಕೊಂಡು 194 ರನ್ ಪೇರಿಸಿತು. ನಾಯಕ ಶ್ರೇಯಸ್ ಅಯ್ಯರ್ -72 ರನ್ ಹಾಗೂ ಪ್ರಭ್ ಸಿಮ್ರನ್ ಸಿಂಗ್ 54 ರನ್ ಪಂಜಾಬ್ ಕಿಂಗ್ಸ್ ತಂಡದ ಗೆಲುವಿಗೆ ಕಾರಣವಾಯಿತು. ಒಂದೇ ಓವರ್ ನಲ್ಲಿ ಹ್ಯಾಟ್ರಿಕ್ ಸಹಿತ 4 ವಿಕೆಟ್ ಪಡೆದ ಯುಜುವೇಂದ್ರ ಚಹಲ್ ಕೂಡಾ ಪಂಜಾಬ್ ತಂಡಕ್ಕೆ ಶಕ್ತಿ ತಂದುಕೊಟ್ಟರು.

ಈ ನಡುವೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ ತವರಿನಲ್ಲಿ ಸತತ 5ನೇ ಸೋಲು ಕಂಡಿದೆ. ಅಷ್ಟೇ ಅಲ್ಲ ಸತತ ಸೋಲಿನಿಂದಾಗಿ ಈ ತಂಡ ಈ ಐಪಿಎಲ್ ಸರಣಿಯಿಂದ ಹೊರಬಿದ್ದಿದೆ.

Related posts