ಆರ್‌ಸಿಬಿ ಗೆಲ್ಲುತ್ತಿದ್ದಂತೆಯೇ ವಿಜಯ್ ಮಲ್ಯ ಪ್ರತ್ಯಕ್ಷ..!

ನವದೆಹಲಿ: ಸಾಲ ಮಾಡಿ ಬ್ಯಾಂಕುಗಳಿಗೆ ವಂಚಿಸಿ ವಿದೇಶದಲ್ಲಿ ಅಡಗಿರುವ ಮದ್ಯ ದೊರೆ ವಿಜಯ್ ಮಲ್ಯ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. 18 ವರ್ಷಗಳ ನಂತರ ಆರ್‌ಸಿಬಿ ಅಂತಿಮವಾಗಿ ಐಪಿಎಲ್ ಚಾಂಪಿಯನ್ ಆಗಿದೆ. 2025 ರ ಟೂರ್ನಮೆಂಟ್‌ನಾದ್ಯಂತ ಅದ್ಭುತ ಅಭಿಯಾನ ಎಂದವರು ಬಣ್ಣಿಸಿದ್ದಾರೆ.

ಐಪಿಎಲ್ ಚಾಂಪಿಯನ್ ಆಗಿ ಆರ್‌ಸಿಬಿ ಬಿಂಬಿಸುತ್ತಿದ್ದಂತೆಯೇ, ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಹಾಕಿರುವ ಉದ್ಯಮಿ ವಿಜಯ್ ಮಲ್ಯ, ‘ಅತ್ಯುತ್ತಮ ತರಬೇತಿ ಮತ್ತು ಸಹಾಯಕ ಸಿಬ್ಬಂದಿಯೊಂದಿಗೆ ಧೈರ್ಯದಿಂದ ಆಡುತ್ತಿರುವ ಉತ್ತಮ ಸಮತೋಲನ ತಂಡ. ಅಭಿನಂದನೆಗಳು! ಈ ಸಲಾ ಕಪ್ ನಮ್ದೇ !!’ ಎಂದು ಸಂತಸ ಹಂಚಿಕೊಂಡಿದ್ದಾರೆ.

‘ನಾನು ಆರ್‌ಸಿಬಿಯನ್ನು ಸ್ಥಾಪಿಸಿದಾಗ ಐಪಿಎಲ್ ಟ್ರೋಫಿ ಬೆಂಗಳೂರಿಗೆ ಬರಬೇಕು ಎಂಬುದು ನನ್ನ ಕನಸಾಗಿತ್ತು. ಯುವಕನಾಗಿದ್ದಾಗ ದಂತಕಥೆಯ ಕಿಂಗ್ ಕೊಹ್ಲಿಯನ್ನು ಆಯ್ಕೆ ಮಾಡುವ ಸೌಭಾಗ್ಯ ನನಗಿತ್ತು ಮತ್ತು ಅವರು 18 ವರ್ಷಗಳ ಕಾಲ ಆರ್‌ಸಿಬಿಯೊಂದಿಗೆ ಇದ್ದಾರೆ ಎಂಬುದು ಗಮನಾರ್ಹ. ಆರ್‌ಸಿಬಿ ಇತಿಹಾಸದ ಅಳಿಸಲಾಗದ ಭಾಗವಾಗಿ ಉಳಿದಿರುವ ಕ್ರಿಸ್ ಗೇಲ್ ಮತ್ತು ಮಿಸ್ಟರ್ 360 ಎಬಿ ಡಿವಿಲ್ಲರ್ಸ್ ಅವರನ್ನು ಆಯ್ಕೆ ಮಾಡುವ ಗೌರವವೂ ನನಗಿತ್ತು. ಅಂತಿಮವಾಗಿ, ಐಪಿಎಲ್ ಟ್ರೋಫಿ ಬೆಂಗಳೂರಿಗೆ ಆಗಮಿಸುತ್ತದೆ. ನನ್ನ ಕನಸನ್ನು ನನಸಾಗಿಸಿದ ಎಲ್ಲರಿಗೂ ಅಭಿನಂದನೆಗಳು’ ಎಂದು ಅವರು ಬರೆದುಕೊಂಡಿದ್ದಾರೆ.

Related posts