ಕೋವಿಡ್‌ ನಿಯಂತ್ರಣ ಕ್ರಮಗಳು ವೈಜ್ಞಾನಿಕವೇ ಹೊರತು ರಾಜಕೀಯವಲ್ಲ: ಸರ್ಕಾರ ಸ್ಪಷ್ಟನೆ

ಬೆಳಗಾವಿ: ರಾಜ್ಯದಲ್ಲಿ ಕೋವಿಡ್‌ ನಿಯಂತ್ರಣ ಕ್ರಮಗಳು ವೈಜ್ಞಾನಿಕವೇ ಹೊರತು ರಾಜಕೀಯವಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಈ ಕುರಿತಂತೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮಾಹಿತಿ ಒದಗಿಸಿದ ಆರೋಗ್ಯ ಸಚಿವ ಡಾ.ಸುಧಾಕರ್, ಕೋವಿಡ್‌ ನಿಯಂತ್ರಣಕ್ಕೆ ಕ್ರಮ ವಹಿಸಿರುವುದು ವೈಜ್ಞಾನಿಕ ಹಿನ್ನೆಲೆಯಿಂದಲೇ ಹೊರತು, ರಾಜಕೀಯ ಕಾರಣಕ್ಕಲ್ಲ. ಜೆಡಿಎಸ್‌ ನಾಯಕರಾದ ಎಚ್‌.ಡಿ.ಕುಮಾರಸ್ವಾಮಿಯವರು ಹಲವು ದಿನಗಳಿಂದ ಯಾತ್ರೆ ಮಾಡುತ್ತಿದ್ದಾರೆ. ಕಾಂಗ್ರೆಸ್‌ನ ರಾಹುಲ್‌ ಗಾಂಧಿಯುವರು ನೂರು ದಿನಕ್ಕೂ ಹೆಚ್ಚು ಕಾಲ ಯಾತ್ರೆ ಮಾಡಿದ್ದಾರೆ. ಆದರೆ ಇಷ್ಟು ದಿನಗಳಲ್ಲಿ ಕೋವಿಡ್‌ ಬಗ್ಗೆ ಸರ್ಕಾರ ಮಾತನಾಡಿಲ್ಲ ಎಂದರು.

ಚೀನಾ, ಕೊರಿಯಾ ಮೊದಲಾದ ದೇಶಗಳಲ್ಲಿ ಪ್ರಕರಣ ಹೆಚ್ಚಿರುವುದರಿಂದ ಮಾತ್ರ ಈಗ ಜನರ ಆರೋಗ್ಯ ರಕ್ಷಣೆಗಾಗಿ ಕೋವಿಡ್‌ ನಿಯಂತ್ರಣಕ್ಕೆ ಕ್ರಮ ವಹಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ಬದ್ಧ ಆಡಳಿತದಿಂದಾಗಿ ಕೋವಿಡ್‌ ನಿಯಂvvvvvvತ್ರಣಕ್ಕೆ ಬಂದಿದೆ ಎಂದರು.

ಕಾಂಗ್ರೆಸ್‌, ಜೆಡಿಎಸ್‌ನ ಯಾತ್ರೆಗಳು ಸಾಮಾನ್ಯ ರಾಜಕೀಯ ಪ್ರಚಾರವಾಗಿದೆ. ಇದು ಜನರ ಮನಸ್ಸಿನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಜೆಡಿಎಸ್‌ನ ಕುಮಾರಸ್ವಾಮಿಯವರು ಹಳೆ ಮೈಸೂರು ಪ್ರದೇಶಗಳಲ್ಲಿ ಯಾತ್ರೆ ಮಾಡುತ್ತಿದ್ದಾರೆ. ಉಳಿದೆಡೆ ಜೆಡಿಎಸ್‌ ಇಲ್ಲ ಎಂದರು.

ಕೋವಿಡ್‌ ಲಸಿಕೆಯನ್ನು ದಾಖಲೆಯ ಮಟ್ಟದಲ್ಲಿ ನೀಡಲಾಗಿದೆ. ರಾಜ್ಯದಲ್ಲಿ ಶೇ.100 ರಷ್ಟು ಲಸಿಕಾಕರಣ ಆಗಿದೆ. *ಆದರೆ ಮೂರನೇ ಡೋಸ್‌ನ ಲಸಿಕೆಯನ್ನು ಕೂಡ ಎಲ್ಲರೂ ಪಡೆಯಬೇಕು.* ಮೂಗಿಗೆ ಹಾಕುವ ಲಸಿಕೆಯಿಂದ ಮಕ್ಕಳಿಗೆ ಬಹಳ ಪ್ರಯೋಜನವಾಗಲಿದ ಎಂದರು.

Related posts