ದಾವಣಗೆರೆ: ರೌಡಿಶೀಟರ್​ ಸಂತೋಷ್​ ಕೊಲೆ ಕೇಸ್: 10 ಮಂದಿ ಆರೋಪಿಗಳು ಕಾಕಿ ಎದುರು ಶರಣು

ದಾವಣಗೆರೆ: ರೌಡಿಶೀಟರ್​ ಸಂತೋಷ್​ ಕುಮಾರ್​ ಹತ್ಯೆ ಪ್ರಕರಣದ 10 ಮಂದಿ ಆರೋಪಿಗಳು ಹೊಳಲ್ಕೆರೆ ಠಾಣೆ ಪೊಲೀಸರ ಎದುರು ಶರಣಾಗಿದ್ದಾರೆ.

ಸೋಮವಾರ ದಾವಣಗೆರೆಯ ಸೋಮೇಶ್ವರ ಆಸ್ಪತ್ರೆ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಸಂತೋಷ್​ ಕುಮಾರ್​ನನ್ನು ಆರೋಪಿಗಳು ಹತ್ಯೆಗೈದಿದ್ದರು. ಮೃತ ಸಂತೋಷ್​ ಕುಮಾರ್ ಪತ್ನಿ ಶ್ರುತಿ ದೂರಿನ ಮೇರೆಗೆ 12 ಜನರ ವಿರುದ್ಧ ದಾವಣಗೆರೆಯ ವಿದ್ಯಾನಗರ ಠಾಣೆಯಲ್ಲಿ ಎಫ್​ಐಆರ್​​ ದಾಖಲಾಗಿದೆ.

ಈ ನಡುವೆ ಆರೋಪಿಗಳಾದ ಕಾರ್ತಿಕ್, ಚವಳಿ ಸಂತು, ನವೀನ್, ಗುಂಡಪ್ಪ, ಬಸವರಾಜ್, ಹನುಮಂತಪ್ಪ, ಗಿಡ್ಡ ವಿಜಿ, ಶಿವು, ಕಡ್ಡಿ ರಾಘು, ಪ್ರಶಾಂತ್ ಮತ್ತು ಗಣಿ ಸೇರಿದಂತೆ ಎಂಬವರು ಪೊಲೀಸರ ಎದುರು ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Related posts