ರಸ್ತೆ ಅಪಘಾತ: ತಂದೆ ಸಾವು, ಮಗಳಿಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ಶಾಲೆಗೆ ಬಿಡಲೆಂದು ಮಗಳನ್ನು ಕರೆದೊಯ್ಯುತ್ತಿದ್ದ ತಂದೆ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ಎಪಿಎಂಸಿ ಸಮೀಪದ ರಾಷ್ಟ್ರೀಯ ಹೆದ್ದಾರಿ ಬಳಿ ಸಂಭವಿಸಿದೆ.

ಮುದ್ದನಾಯಕನ ಪಾಳ್ಯ ಗ್ರಾಮದ ವೆಂಕಟೇಶ್ (45ವರ್ಷ) ಎಂಬವರು ಸಾವನಪ್ಪಿದ್ದು, ಪುತ್ರಿ ಯಶಸ್ವಿನಿ (15ವರ್ಷ) ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಸ್ಥಳೀಯ ತಿಳಿಸಿದ್ದಾರೆ.

ಗುರುವಾರ ಬೆಳಗ್ಗೆ ಖಾಸಗಿ ಶಾಲೆಗೆ ಮಗಳನ್ನು  ಕರೆದೊಯ್ಯುತ್ತಿದ್ದಾಗ ತುಮಕೂರು ಕಡೆಯಿಂದ ಬಂದ ಲಾರಿ ಡಿಕ್ಕಿಹೊಡೆದಿದೆ. ಅಪಘಾತದಲ್ಲಿ ಲಾರಿಯ ಕೆಳಕ್ಕೆ ದ್ವಿಚಕ್ರ ವಾಹನ ಸಹಿತ, ತಂದೆ ಮಗಳು ಸಿಲುಕಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲಿಸಿದ್ದಾರೆ.

Related posts