ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ಹೊತ್ತಲ್ಲಿ ಕರೆಂಟ್ ನೀಡಿ; ರೈತರ ಮೊರೆ

ಬೆಂಗಳೂರು: ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಕೇಂದ್ರದ ರೈತರು ತಮ್ಮ ನೀರಾವರಿ ಬೆಳೆಗೆ ರಾತ್ರಿ ವೇಳೆಯಲ್ಲಿ ಕರೆಂಟ್ ನೀಡುತ್ತಿರುವದರ ವಿರುದ್ಧ ಬೇಸತ್ತು ಹಗಲಿನಲ್ಲಿ ಕರೆಂಟ್ ನೀಡಲು ಮನವಿ ಸಲ್ಲಿಸಿದ್ದಾರೆ.

ಪ್ರಸ್ತುತ ರೈತರ ಪಂಪ್ಸೆಟ್ ಗಳಿಗೆ ತಡೆರಹಿತವಾಗಿ 5 ಗಂಟೆಗಳ ಕಾಲ ರಾತ್ರಿ ವೇಳೆಯಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಆದರೆ ರಾತ್ರಿಯ ಸಮಯದಲ್ಲಿ ಬೆಳೆಗಳಿಗೆ ನೀರು ಬಿಡಲು ಆಗುತ್ತಿಲ್ಲ, ಮತ್ತು ಇತ್ತೀಚೆಗೆ ಚಿರತೆಗಳ ಕಾಟ ಹೆಚ್ಚಾಗುತ್ತಿರುವುದರಿಂದ ತೋಟಗಳ ಕಡೆ ಹೋಗಲು ಭಯಭೀತರಾಗಿದ್ದೇವೆ ಎಂದು ರೈತರು ಅಧಿಕಾರಿಗಳ ಗಮನಸೆಳೆದಿದ್ದಾರೆ.

ಹಗಲಿನಲ್ಲಿ 5 ಗಂಟೆ ನಿರಂತರ ಕರೆಂಟ್ ನೀಡಲು ಸಾಧ್ಯವಾಗದಿದ್ದರೆ, 5 ಗಂಟೆಗಳ ಕಾಲ ಕೊಡುತ್ತಿರುವ ವಿದ್ಯುತ್ತನ್ನು ಬೆಳಗ್ಗೆ 3:00 ಗಂಟೆ ಕಾಲ ರಾತ್ರಿ 2 ಗಂಟೆಗಳ ಕಾಲ ರಾತ್ರಿ ಕೊಡುವಂತೆ ಮತ್ತೆ 6:00 ಗಂಟೆ ಕೊಡುವ ಸಿಂಗಲ್ ಕರೆಂಟ್ ಕೊಡುವುದು ತೆಗೆಯುವುದು ಮಾಡುತ್ತಿದ್ದೀರಾ ಸಿಂಗಲ್ ಕರೆಂಟ್ ಅನ್ನು ನಿರಂತರವಾಗಿ ಕೊಡಬೇಕು ಎಂದು ರೈತರು ತೂಬಗೆರೆ ಬೆಸ್ಕಾಂ ಜೆ‌.ಇ ರೇಣುಕಾರಾಧ್ಯ ರವರಿಗೆ ಮನವಿ ಮಾಡಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ದೇವೇಂದ್ರ ಸ್ವಾಮಿ, ಹಾಲಿನ ಡೈರಿ ಸದಸ್ಯ ಅವಲಪ್ಪ, ಫ್ಲೋರಿಕಲ್ಚರ್ ರೈತ ಸುನಿಲ್, ಪಿಳ್ಳಿ ವೆಂಕಟೇಶ್, ಮಂಜುನಾಥ್ ಮೊದಲಾದವರು ಮನವಿ ಪತ್ರವನ್ನು ನೀಡಿದರು.

Related posts