ಎರ್ನಾಕುಲಂ ಬಾಂಬ್ ಸ್ಫೋಟ; ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಕೊಚ್ಚಿ: ಎರ್ನಾಕುಲಂ ಜಿಲ್ಲೆಯಲ್ಲಿ ಸಂಭವಿಸಿರುವ ಬಾಂಬ್ ಸ್ಫೋಟದಲ್ಲಿ ಮತ್ತೊಬ್ಬ ಗಾಯಾಳು ಮೃತಪಟ್ಟಿದ್ದು ಸಾವಿನ ಸಂಖ್ಯೆ 5ಕ್ಕೆ ಏರಿದೆ. ಕೇರಳದ ಕ್ರಿಶ್ಚಿಯನ್ ಧಾರ್ಮಿಕ ಸಭೆಯಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟ ಪ್ರಕರಣ ತಲ್ಲಣ ಸೃಷ್ಟಿಸಿತ್ತು.

ಕೇರಳದ ಕಲಮಸ್ಸೆರಿಯ ಅಂತಾರಾಷ್ಟ್ರೀಯ ಧಾರ್ಮಿಕ ಕೇಂದ್ರದಲ್ಲಿ ನಡೆದ ಬಹು ಸ್ಫೋಟಗಳ ಸಂದರ್ಭದಲ್ಲಿ 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಕೆಲವರಿಗೆ ಗಂಭೀರವಾಗಿ ಗಾಯವಾಗಿತ್ತು. ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪ್ರದೀಪ್ ಎಂಬ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ.

Related posts