KSRTC ಕಿರೀಟಕ್ಕೆ ಮತ್ತಷ್ಟು ಗರಿ.. Global Marketing Excellence ಪ್ರಶಸ್ತಿ ಪಡೆದ ಸಾರಿಗೆ ಸಂಸ್ಥೆ.. 

ಬೆಂಗಳೂರು: ಅತ್ಯುತ್ತಮ ಸಾರಿಗೆ ಸೇವೆ ಮೂಲಕ ದೇಶದಲ್ಲೇ ಗಮನಸೆಳೆದಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಸಿಕ್ಕಿದೆ. Global Marketing Excellenceಯ ಒಂದು ಪ್ರಶಸ್ತಿ ಪಡೆದ ಸಾರಿಗೆ ಸಂಸ್ಥೆಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.

ಕೆಎಸ್ಸಾರ್ಟಿಸಿ’ಗೆ National Media Conclaveನ ಎರಡು ಪ್ರಶಸ್ತಿ ಹಾಗೂ World Marketing Congressನ Global Marketing Excellence ಒಂದು ಪ್ರಶಸ್ತಿ ಲಭಿಸಿದೆ. National Media Conclave Awards 23.11.2023ರಂದು ಭುವನೇಶ್ವರದ ಕೆ.ಐ.ಐ.ಟಿ ವಿಶ್ವವಿದ್ಯಾನಿಲಯ ಸಭಾಂಗಣದಲ್ಲಿ National Media Conclave  ಆಯೋಜಿಸಿದ 07ನೇ National Media Conclave Award ಕಾರ್ಯಕ್ರಮ ಗಮನಸೆಳೆಯಿತು, ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾಹಿತಿ ಸಾರ್ವಜನಿಕ ಸಂಪರ್ಕ,ಪಂಚಾಯತ್ ರಾಜ್, ಕುಡಿಯುವ ನೀರು ಹಾಗೂ ಅರಣ್ಯ ಮತ್ತು ಪರಿಸರ ಸಚಿವ ಪ್ರದೀಪ್ ಕುಮಾರ್ ಅಮತ್, ಉನ್ನತ ಶಿಕ್ಷಣ ಹಾಗೂ ಸಹಕಾರ ಸಚಿವ ಅತನು ಸವ್ಯಸಾಚಿ ನಾಯಕ್ ಅವರು ಕೆಎಸ್ಸಾರ್ಟಿ‌ಗೆ ಪ್ರಶಸ್ತಿ ಪ್ರದಾನ ಮಾಡಿದರು,

KSRTC ನಿಗಮವು ಜಾರಿ ಮಾಡಿದ ವಿನೂತನ ವಾಹನಗಳ ಪುನಶ್ಚೇತನ ಯೋಜನೆ ಉಪಕ್ರಮ ಹಾಗೂ ಅಂಬಾರಿ ಉತ್ಸವ, ಪಲ್ಲಕ್ಕಿ ಮತ್ತು ವಿದ್ಯುತ್ ವಾಹನಗಳ ಬ್ರಾಂಡಿಂಗ್ ಉಪಕ್ರಮಕ್ಕಾಗಿ ‘Best Communication Campaign by Public Sector Organisation & Best Public Sector Organisation Implementing PR’ ಪ್ರಶಸ್ತಿಗಳನ್ನು ನೀಡಲಾಯಿತು. KSRTCಯ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಬಿ. ಜಯಕರ ಶೆಟ್ಟಿ, ಹಾಗೂ ರಾಮನಗರ ವಿಭಾಗೀಯ ನಿಯಂತ್ರಣಾಧಿಕಾರಿ ಎಂ. ಜಗದೀಶ್ ಅವರು ನಿಗಮದ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.

Global Marketing Excellence Awards:

ಮುಂಬಯಿ ಹೋಟೆಲ್ ತಾಜ್ ಲ್ಯಾಂಡ್ಸ್ ಎನ್ಡ್‌ನಲ್ಲಿ World Marketing Congress ಆಯೋಜಿಸಿದ 10ನೇ ಆವೃತ್ತಿಯ Global Marketing Excellence ಪ್ರಶಸ್ತಿ-2023 ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅಶುತೋಷ್ ಶರ್ಮ, Sales Head- Major Accounts (North & West) ADP India ಹಾಗೂ ಮಾಧುರಿ ಸಾಥೆ- Excecutive Director- Indira Group of Institutes ರವರು ನಿಗಮವು ಜಾರಿ ಮಾಡಿದ ಪ್ರತಿಷ್ಟಿತ ವಾಹನಗಳಾದ ಅಂಬಾರಿ ಉತ್ಸವ, ಪಲ್ಲಕ್ಕಿ ಮತ್ತು ವಿದ್ಯುತ್ ವಾಹನಗಳ ಬ್ರಾಂಡಿಂಗ್’ ಉಪಕ್ರಮಕ್ಕಾಗಿ Best New Brand Product or Service Launch ಪ್ರಶಸ್ತಿಯನ್ನು ಪ್ರದಾನ ಮಾಡಿದರು. KSRTC ಮಂಗಳೂರು ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ,  ಹಾಗೂ ಹಾಸನ ಪ್ರಾದೇಶಿಕ ಕಾರ್ಯಾಗಾರದ ಕಾರ್ಯ ವ್ಯವಸ್ಥಾಪಕರಾದ ಎಸ್. ಆರ್. ಸತೀಶ್ ಬಾಬು ಅವರು ನಿಗಮದ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.

Related posts