ರೈತರ ಸಂಚಾರಕ್ಕೆ ನೆರವಾಗಲು ಗೀನ್ ಪಾಸ್ ವ್ಯವಸ್ಥೆ

ಲಾಕ್ ಡೌನ್ ಸಂದರ್ಭದಲ್ಲಿ ರೈತರ ಕೃಷಿ ಚಟುವಟಿಕೆಗೂ ತೊಂದರೆಯಾಗಿದೆ. ಈ ಹಿನ್ನೆಲೆಯಲ್ಲಿ ರೈತರಿಗೆ ಅನುಕೂಲವಾಗಲು ಗೀನ್ ಪಾಸ್ ವ್ಯವಸ್ಥೆ ಮಾಡಲು ಸರ್ಕಾರ ತೀಮಾನಿಸಿದೆ.

ಮೈಸೂರು : ಲಾಕ್ ಡೌನ್ ಸಂದರ್ಭದಲ್ಲಿ ಕೃಷಿ ಚಟುವಟಿಕೆ‌ ನಿರತರಿಗೆ ಅತ್ಯವಶ್ಯಕತೆಗೆ ಅನುಗುಣವಾಗಿ ಗ್ರೀನ್ ಪಾಸ್ ವಿತರಿಸಲು ಸರ್ಕಾರ ಮುಂದಾಗಿದೆ.

ಮೈಸೂರು- ಮರಾಜನಗರ ಜಿಲ್ಲೆಗಳಲ್ಲಿ ಕೊರೊನಾ ಲಾಕ್’ಡೌನ್ ಹಿನ್ನೆಲೆಯಲ್ಲಿ ಕೃಷಿ ರೈತರ ಸ್ಥಿತಿಗತಿ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿಗಳು ಜನಪ್ರತಿನಿಧಿಗಳ ಜೊತೆ‌ಸಭೆ ನಡೆಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್, ಹಾಗೂ ಎಸ್.ಟಿ.ಸೋಮಶೇಖರ್ ರೈತರು ಕೃಷಿಯಲ್ಲಿ ತೊಡಗಲು ಅನುಕೂಲವಾಗುವ ರೀತಿ ಕರಮ್ ಕೈಗೊಳ್ಳಲು ಸೂಚಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್, ಪೆಟ್ರೋಲ್ ಬಂಕ್ ಗಳಲ್ಲಿ‌‌ ಕೃಷಿ ವಲಯದ ಟ್ತಾಕ್ಟರುಗಳಿಗೆ ಡೀಸೆಲ್ ಕೊರತೆಯಾಗಿದೆ. ಕೃಷಿ ಯಂತ್ರೋಕರಣ ದುರಸ್ತಿ ಮಾಡುವ ಮೆಕ್ಯಾನಿಕ್‍ಗಳ‌ ಓಡಾಟಕ್ಕೆ, ಅವರುಗಳು ಅಂಗಡಿ ತೆರೆಯುವುದಕ್ಕೆ ನಿರ್ಬಂಧವಿದೆ ಎಂಬ ದೂರುಗಳು ಬಂದಿವೆ.‌ ಅವುಗಳನ್ನು ಸರಿಪಡಿಸಲಾಗುವುದು ಎಂದರು.

ನಗರಗಳಲ್ಲಿ‌ ನೆಲೆಸಿ ಹಳ್ಳಿಗಳಲ್ಲಿರುವ ತಮ್ಮತಮ್ಮ ಹೊಲಗಳಿಗೆ ಹೋಗುವ ರೈತರಿಗೆ ಸಂಚಾರಕ್ಕೆ ನಿರ್ಬಂಧ ವಿಧಿಸದಂತೆ ನೋಡಿಕೊಳ್ಳಲಾಗುವುದು.‌ ಗ್ರಾಮೀಣ ಪ್ರದೇಶಗಳಿಗೆ ತೆರಳಿ ಕೃಷಿ ಯಂತ್ರೋಪಕರಣ ದುರಸ್ತಿ ಮಾಡುತ್ತೇವೆಂದು‌ ಕೆಲವು ಕಂಪನಿಗಳವರು ಮುಂದೆ‌ ಬಂದಿದ್ದಾರೆ. ಈ ಕಂಪನಿಗಳ ಪ್ರತಿನಿಧಿಗಳಿಗೆ ಗ್ರೀನ್ ಪಾಸ್ ವಿತರಿಸಲಾಗುವುದು.‌ಈ ಕಾರ್ಯವನ್ನು ಕೃಷಿ ಅಧಿಕಾರಿ, ಕೃಷಿ ಸಹಾಯಕ ನಿರ್ದೇಶಕರು ಮಾಡುತ್ತಾರೆ ಎಂದು ಭರವಸೆ ನೀಡಿದರು.

ಮೈಸೂರು – ಚಾಮರಾಜನಗರ ಜಿಲ್ಲೆಗಳಲ್ಲಿ‌ ಮುಂಗಾರು ಹಂಗಾಮು ಚಟುವಟಿಕೆಗೆ ಅಗತ್ಯವಾದ ಬಿತ್ತನೆಬೀಜ‌- ರಸಗೊಬ್ಬರ – ಕೀಟನಾಶಕಗಳಿಗೆ ಯಾವುದೃ ಕೊರತೆಯೂ ಇಲ್ಲ.‌ ರೈತರು ಆತಂಕಪಡಬೇಕಾದ ಅಗತ್ಯವಿಲ್ಲ.‌ ಈಗಾಗಲೇ ಎಲ್ಲ‌ ರೈತ ಸಂಪರ್ಕ‌ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ರೈತರಿಗೆ ಅವಶ್ಯಕವಾದ ಎಲ್ಲ‌‌ ನೆರವು ನೀಡಲು ಸನ್ನದ್ಧವಾಗಿವೆ ಎಂದು ಸ್ಪಷ್ಟಪಡಿಸಿದರು.

Related posts