ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿದ್ದ ಸಚಿವ ಡಾ. ಸುಧಾಕರ್’ಗೆ ಸೋಲು

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಈ ಬಾರಿ ಅಚ್ಚರಿಯ ಫಲಿತಾಂಶವನ್ನು ಪಡೆದುಕೊಂಡಿದೆ. ಅದರಲ್ಲೂ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿದ್ದ ಸಚಿವ ಡಾ. ಸುಧಾಕರ್ ಅವರು ಹೀನಾಯವಾಗಿ ಸೋಲುಂಡಿದ್ದಾರೆ . ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್ ಅವರ ಪ್ರಬಲ ಪೈಪೋಟಿಯಿಂದಾಗಿ ಸಚಿವ ಸುಧಾಕರ್ ಅವರು ಹಿನ್ನಡೆ ಅನುಭವಿಸುವಂತಾಯಿತು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ತಿಸಿ ಗೆಲುವು ಸಾಧಿಸಿದ್ದ ಸುಧಾಕರ್ ಅವರು ಬದಲಾದ ಪರಿಸ್ಥಿತಿಯಲ್ಲಿ ಬಿಜೆಪಿ ಸೇರಿ ಮತ್ತೆ ಕಣಕ್ಕಿಳಿದು ಜಯಗಳಿಸಿದ್ದರು. ಆದರೆ ಅವರ ಬಗ್ಗೆ ಬಿಜೆಪಿ ಕಾರ್ಯಕರ್ತರೇ ಆಕ್ಷೇಪ ವ್ಯಕ್ತಪಡಿಸುತ್ತಿದ್ದರು. ಅವರ ಸ್ವ ಕ್ಷೇತ್ರದಲ್ಲೂ ಕಾರ್ಯಕರ್ತರು ಅಸಮಾಧಾನ ಹೊರಹಾಕುತ್ತಿದ್ದರು. ಇದೀಗ ಸ್ವಪಕ್ಷೀಯರ ಸಿಟ್ಟು ಈ ಬಾರಿಯ ಚುನಾವಣೆಯಲ್ಲಿ ಪ್ರತಿಧ್ವನಿಸಿದೆ.

Related posts