ಬಂಟ್ವಾಳದ ಯುವತಿಯನ್ನು ಕತ್ತು ಸೀಳಿ ಕೊಲೆ ; ಪುತ್ತೂರು ಪೊಲೀಸ್ ಠಾಣೆ ಬಳಿಯೇ ಅಟ್ಟಹಾಸ

ಮಂಗಳೂರು: ಕರಾವಳಿಯಲ್ಲಿ ಎದೆ ಝಲ್ಲೆನಿಸುವ ಘಟನೆ ನಡೆದಿದೆ. ಪುತ್ತೂರು ಮಹಿಳಾ ಪೊಲೀಸ್ ಠಾಣೆ ಬಳಿಯೇ ಯುವತಿಯೊಬ್ಬಳನ್ನು ಕಟ್ಟು ಸೀಳಿ ಕೊಲೆ  ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಗುರುವಾರ ಹಾಡಹಗಲೇ ಈ ಘಟನೆ ನಡೆದಿದ್ದು ಮೃತಾಳನ್ನು ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ನಿವಾಸಿ ಸುಮಾರು 18 ವರ್ಷದ ಗೌರಿ ಎಂದು ಗುರುತಿಸಲಾಗಿದೆ. ಪರಿಚಿತ ವ್ಯಕ್ತಿಯೇ ಈ ಕೃತ್ಯ ನಡೆಸಿರುವುದಾಗಿ ಬೆಳಕಿಗೆ ಬಂದಿದೆ.

ಅರ್ತ್ ಮೂವರ್ ಚಾಲಕನಾಗಿ ಕೆಲಸ ಮಾಡುತ್ತಿರುವ ಪದ್ಮರಾಜ್ (23) ಎಂಬಾತ ಫ್ಯಾನ್ಸಿ ಸ್ಟೋರ್‌ನಲ್ಲಿ ಉದ್ಯೋಗದಲ್ಲಿದ್ದ ಗೌರಿಯನ್ನು ಮಾತನಾಡಿಸುವ ಸಲುವಾಗಿ ಕರೆಸಿಕೊಂಡಿದ್ದಾನೆ. ಆ ಸಂದರ್ಭದಲ್ಲಿ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಬಳಿಕ ಇಬ್ಬರೂ ಸ್ಥಳದಿಂದ ತೆರಳಿದ್ದು, ಸ್ವಲ್ಪ ಹೊತ್ತಿನ ನಂತರ ಬಂದ ಆರೋಪಿ ಚಾಕುವಿನಿಂದ ಆಕೆಯ ಕತ್ತು ಸೀಳಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಗೌರಿಯನ್ನು ಕರೆದೊಯ್ಯಲಾಯಿತಾದರೂ ಬದುಕುಳಿಯಲಿಲ್ಲ

ಈ ನಡುವೆ ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Uncategorized

Related posts