ದಸರಾ ವಿಶೇಷ ಬಸ್ ಸವಾರಿ.‌. KSRTC ಪ್ರಯಾಣಿಕರ ರಥಗಳಿಗೆ ಪೂಜೆ

ಬೆಂಗಳೂರು: ನಾಡಿನೆಲ್ಲೆಡೆ ದಸರಾ ಸಡಗರ ಆವರಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪಾಳಯದಲ್ಲೂ ಸಂಭ್ರಮ ಮನೆ ಮಾಡಿದೆ. ಆದರೆ ಇದು ಪೂಜಾ ಕೈಂಕರ್ಯದ ಸಡಗರವಲ್ಲ, ಸೇವಾ ತಯಾರಿಯ ಸಡಗರ.

ನಾಡಹಬ್ಬ ದಸರಾ ಪ್ರಯುಕ್ತ ನಾಡಿನ ಜನತೆಗೆ ಸಾರಿಗೆ ಸೌಲಭ್ಯ ಕಲ್ಪಿಸುವ ಸಂಬಂಧ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಎಲ್ಲಾ ವಿಭಾಗಗಳಲ್ಲಿ ದಸರಾ ವಿಶೇಷ ಕಾರ್ಯಾಚರಣೆಗೆ‌ ವಿದ್ಯುಕ್ತವಾಗಿ‌ ಬಸ್ಸುಗಳಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.

ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ದಸರಾ ವಿಶೇಷ ಕಾರ್ಯಾಚರಣೆ ಅಂಗವಾಗಿ ಅಲಂಕೃತ ವಾಹನಗಳಿಗೆ ಪೂಜೆ ಸಲ್ಲಿಸಲಾಯಿತು. ಈ ಮೂಲಕ ದಸರಾ ಕಾರ್ಯಾಚರಣೆ ಪ್ರಾರಂಭಿಸಲಾಯಿತು‌. ಚಾಲಕ‌ ನಿರ್ವಾಹಕರಿಗೆ ಸಿಹಿ ಹಂಚಿ ಶುಭ ಕೋರಲಾಯಿತು.

ಈ‌‌‌ ಸಂದರ್ಭದಲ್ಲಿ ಕೇಂದ್ರ‌ ಕಚೇರಿಯ ಹಿರಿಯ ಅಧಿಕಾರಿಗಳು, ಕೇಂದ್ರೀಯ ವಿಭಾಗದ ಅಧಿಕಾರಿಗಳು, ಕೆಂಪೇಗೌಡ ಬಸ್ ನಿಲ್ದಾಣದ‌
ಅಧಿಕಾರಿಗಳು ಮತ್ತು ಸಿಬ್ಬಂದಿ ಸಮೂಹದ ಪಾಲ್ಗೊಳ್ಳುವಿಕೆ ಗಮನಸೆಳೆಯಿತು..

Related posts