KSRTC ಬಸ್ಸಿಗೆ ಬೆಂಕಿ ಹಚ್ಚಿ ಪುಂಡಾಟ; ಮಹಾರಾಷ್ಟ್ರ-ಕರ್ನಾಟಕ ನಡುವೆ ಬಸ್ ಸಂಚಾರ ತಾತ್ಕಾಲಿಕ ಸ್ಥಗಿತ

ಬೆಳಗಾವಿ: ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಕರಾಳ ದಿನ ಆಚರಿಸಲು ಎಂಇಎಸ್ (MES) ಸಂಘಟನೆ ತಯಾರಿ ನಡೆಸಿರುವಂತೆಯೇ, ಮಹಾರಾಷ್ಟ್ರದಲ್ಲಿ ಕರ್ನಾಟಕ ಸರ್ಕಾರಿ ಬಸ್ಸಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪುಂಡಾಟ ಪ್ರದರ್ಶಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ನಡೆಯುತ್ತಿದ್ದು, ಉಸ್ಮಾನಾಬಾದ್​ ಜಿಲ್ಲೆಯ ಉಮರಗಾ ಸಮೀಪದ ತುರೋರಿ ಗ್ರಾಮದಲ್ಲಿ ಸೋಮವಾರ ಕಿಡಿಗೇಡಿಗಳು KSRTC ಬಸ್‌ಗೆ ಬೆಂಕಿ ಹಚ್ಚಿದ್ದಾರೆ.

ಬೀದರ್‌ ಜಿಲ್ಲೆ ಭಾಲ್ಕಿಯಿಂದ ಪುಣೆಗೆ ತೆರಳುತ್ತಿದ್ದ ಬಸ್​ಗೆ ಬೆಂಕಿ ಹಚ್ಚಲಾಗಿದ್ದು ಬಸ್‌ನಲ್ಲಿದ್ದ 48 ಜನರು ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ನಂತರ ಸೋಮವಾರ ರಾತ್ರಿಯಿಂದ ಕರ್ನಾಟಕ-ಮಹಾರಾಷ್ಟ್ರ ಮಧ್ಯೆ‌ ಬಸ್ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು KSRTC ಮೂಲಗಳು ತಿಳಿಸಿವೆ.

Related posts