ಬೆಂಗಳೂರು: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಕೊಲೆ ಘಟನೆಯನ್ನು ಬಿಜೆಪಿ ಶಾಸಕರು ಖಂಡಿಸಿದ್ದಾರೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂದು ಶಾಸಕ ಸುನಿಲ್ ಕುಮಾರ್ ಆರೋಪಿಸಿದ್ದಾರೆ. ಇದೇ ವೇಳೆ, ಹೊರಗಿನ ಶತ್ರುಗಳಿಗಿಂತ ಒಳಗಿನ ದ್ರೋಹಿಗಳು ಅಪಾಯಕಾರಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಗುಡುಗಿದ್ದಾರೆ.
ಸಾಮಾಜಿಕ ಮಾಧ್ಯಮ ‘X’ನಲ್ಲಿ ಪೋಸ್ಟ್ ಹಾಕಿರುವ ಸಿ.ಟಿ.ರವಿ, ‘ಹೊರಗಿನ ಶತ್ರುಗಳಿಗಿಂತ ಒಳಗಿನ ದ್ರೋಹಿಗಳು ಅಪಾಯಕಾರಿ. ಮೊನ್ನೆ “ಪಾಕಿಸ್ತಾನ್ ಜಿಂದಾಬಾದ್” ಎಂದವನ ಹತ್ಯೆ. ಇಂದು ಭಾರತ ಮಾತೆಗೆ ತನ್ನ ಬದುಕನ್ನು ಮುಡಿಪಿಟ್ಟವನ ಹತ್ಯೆ. ಕಾನೂನಿನ ದೃಷ್ಟಿಯಲ್ಲಿ ರಾಷ್ಟ್ರ ಭಕ್ತನೂ -ದೇಶದ್ರೋಹಿಯೂ ಸಮಾನರೇ? ಹೌದೆಂದಾದರೆ ಆ ಕಾನೂನನ್ನೇ ಬದಲಾಯಿಸಬೇಕು’ ಎಂದು ಪ್ರತಿಪಾದಿಸಿದ್ದಾರೆ.
ಹೊರಗಿನ ಶತ್ರುಗಳಿಗಿಂತ ಒಳಗಿನ ದ್ರೋಹಿಗಳು ಅಪಾಯಕಾರಿ.
ಮೊನ್ನೆ “ಪಾಕಿಸ್ತಾನ್ ಜಿಂದಾಬಾದ್” ಎಂದವನ ಹತ್ಯೆ.
ಇಂದು ಭಾರತ ಮಾತೆಗೆ ತನ್ನ ಬದುಕನ್ನು ಮುಡಿಪಿಟ್ಟವನ ಹತ್ಯೆ.
ಕಾನೂನಿನ ದೃಷ್ಟಿಯಲ್ಲಿ ರಾಷ್ಟ್ರ ಭಕ್ತನೂ -ದೇಶದ್ರೋಹಿಯೂ ಸಮಾನರೇ?
ಹೌದೆಂದಾದರೆ ಆ ಕಾನೂನನ್ನೇ ಬದಲಾಯಿಸಬೇಕು.
— C T Ravi 🇮🇳 ಸಿ ಟಿ ರವಿ (@CTRavi_BJP) May 2, 2025
ಮಂಗಳೂರಿನಲ್ಲಿ ನಡೆದಿರುವ ಹಿಂದೂ ಕಾರ್ಯಕರ್ತನ ಹತ್ಯೆಯನ್ನು ಖಂಡಿಸಿರುವ ಮಾಜಿ ಸಚಿವ ಶ್ರೀರಾಮುಲು, ಇದು ಸಿದ್ದರಾಮಯ್ಯ ಸರ್ಕಾರದ 6 ನೇ ಗ್ಯಾರಂಟಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧರ್ಮ ರಕ್ಷಣೆಯಲ್ಲಿ ತೊಡಗಿಸಿಕೊಂಡು ಹಿಂದುತ್ವಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಯಾದ ಸುದ್ದಿ ಕೇಳಿ ದುಃಖವಾಗಿದೆ ಎಂದಿರುವ ಶ್ರೀರಾಮುಲು, ಸಿದ್ದರಾಮಯ್ಯ ಸರ್ಕಾರವು ನಿದ್ದೆಯಿಂದ ಎದ್ದು ಇಂತಹ ಘಟನೆಗಳು ಮರುಕಳಿಸುವ ಮುನ್ನ ಸೂಕ್ತ ಕ್ರಮ ಜರಗಿಸಬೇಕು ಎಂದಿದ್ದಾರೆ.
ಸಿದ್ದರಾಮಯ್ಯ ಸರ್ಕಾರದ 6 ನೇ ಗ್ಯಾರಂಟಿ..
ಅದುವೇ ಹಿಂದೂ ಕಾರ್ಯಕರ್ತರ ಹತ್ಯೆ…!ಧರ್ಮ ರಕ್ಷಣೆಯಲ್ಲಿ ತೊಡಗಿಸಿಕೊಂಡು ಹಿಂದುತ್ವಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಯಾದ ಸುದ್ದಿ ಕೇಳಿ ದುಃಖವಾಗಿದೆ. 1/5#ಓಂಶಾಂತಿ pic.twitter.com/0Uf6oyfLNA
— B Sriramulu (@sriramulubjp) May 2, 2025