ಕರ್ನಲ್ ಸೋಫಿಯಾ ಖುರೇಷಿ ವಿರುದ್ಧದ ಹೇಳಿ ಆರೋಪ: ವಿಜಯ್ ಶಾಗೆ ಬಿಜೆಪಿ ಸಮನ್ಸ್

ಭೋಪಾಲ್: ಕರ್ನಲ್ ಸೋಫಿಯಾ ಖುರೇಷಿ ಅವರ ಬಗ್ಗೆ ದೇಶಾದ್ಯಂತ ವಿವಾದವನ್ನು ಹುಟ್ಟುಹಾಕಿದ ಮಧ್ಯಪ್ರದೇಶದ ಬುಡಕಟ್ಟು ವ್ಯವಹಾರಗಳ ಸಚಿವ ಕುನ್ವರ್ ವಿಜಯ್ ಶಾ ಅವರಿಗೆ ರಾಜ್ಯ ಬಿಜೆಪಿ ಮುಖ್ಯಸ್ಥ ವಿ. ಡಿ. ಶರ್ಮಾ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಪಕ್ಷದ ಕಚೇರಿಗೆ ಸಚಿವರನ್ನು ಕರೆಸಿಕೊಂಡು ಆಕ್ಷೇಪಾರ್ಹ ಹೇಳಿಕೆ ಬಗ್ಗೆ ಕ್ಷಮೆಯಾಚಿಸುವಂತೆ ತಾಕೀತು ಮಾಡಿದ್ದಾರೆ.

ಇದೇ ವೇಳೆ, ತಮ್ಮ ಹೇಳಿಕೆಗಳನ್ನು ಸಂದರ್ಭದಿಂದ ಹೊರತೆಗೆದು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ ಎಂದು ಸಚಿವ ಕುನ್ವರ್ ವಿಜಯ್ ಶಾ ಸ್ಪಷ್ಟೀಕರಣ ನೀಡಿದ್ದಾರೆ.

ಕರ್ನಲ್ ಸೋಫಿಯಾ ಖುರೇಷಿ ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡಿದ್ದಾರೆ ಮತ್ತು ಅವರ ಬಗ್ಗೆ ಅವರಿಗೆ ಅಪಾರ ಗೌರವವಿದೆ ಎಂದು ಹೇಳುವ ಮೂಲಕ ಅವರು ಕ್ಷಮೆಯಾಚಿಸಿದ್ದಾರೆ.

#WATCH | Bhopal: Madhya Pradesh Minister Kunwar Vijay Shah made an objectionable remark against Colonel Sofiya Qureshi in a speech yesterday.

Clarifying his remark, he says, “…Do not see my speech in a different context. I want to tell people that my speech is not in that… pic.twitter.com/Hd7ienyKH8

— ANI (@ANI) May 13, 2025

“ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತೀಯ ಪಡೆಗಳು ತೆಗೆದುಕೊಂಡ ಕ್ರಮಗಳನ್ನು ನಾವು ಗೌರವಿಸುತ್ತೇವೆ. ನನ್ನ ಹೇಳಿಕೆಗಳನ್ನು ತಿರುಚುವವರ ಬುದ್ಧಿವಂತಿಕೆಯ ಬಗ್ಗೆ ನಾನು ಏನೂ ಹೇಳಲಾರೆ. ಕರ್ನಲ್ ಸೋಫಿಯಾ ಖುರೇಷಿ ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡಿದ್ದಾರೆ. ನಾವು ಇಬ್ಬರೂ ಸಹೋದರಿಯರನ್ನು ಗೌರವಿಸುತ್ತೇವೆ, ”ಎಂದು ಅವರು ರಾಜ್ಯ ಬಿಜೆಪಿ ಮುಖ್ಯಸ್ಥ ವಿ. ಡಿ. ಶರ್ಮಾ ಅವರೊಂದಿಗಿನ ಭೇಟಿ ನಂತರ ಪ್ರತಿಕ್ರಿಯಿಸಿದ್ದಾರೆ.

ಸೋಮವಾರ ಇಂದೋರ್ ಜಿಲ್ಲೆಯ ಮಹೋವ್‌ನಲ್ಲಿ ನಡೆದ ಸರ್ಕಾರಿ ಸಮಾರಂಭದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾ, ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಸೇಡು ತೀರಿಸಿಕೊಳ್ಳಲು ಪ್ರಧಾನಿ ಮೋದಿ ಪಾಕಿಸ್ತಾನದಲ್ಲಿರುವವರಂತೆಯೇ “ಅದೇ ಸಮುದಾಯದ ಸಹೋದರಿಯನ್ನು” ಕಳುಹಿಸಿದ್ದಾರೆ ಎಂದು ಹೇಳಿದ್ದರು. ‘ಪ್ರಧಾನಿ ಮೋದಿ ಸಮಾಜಕ್ಕಾಗಿ ಶ್ರಮಿಸುತ್ತಿದ್ದಾರೆ. ನಮ್ಮ ಹೆಣ್ಣುಮಕ್ಕಳನ್ನು (ಪಹಲ್ಗಾಮ್‌ನಲ್ಲಿ) ವಿಧವೆಯರನ್ನಾಗಿ ಮಾಡಿದವರಿಗೆ, ಅವರಿಗೆ ಪಾಠ ಕಲಿಸಲು ನಾವು ಅವರ ಸ್ವಂತ ಸಹೋದರಿಯನ್ನು ಕಳುಹಿಸಿದ್ದೇವೆ’ ಎಂದು ಷಾ ಹೇಳಿದ್ದರು. ಅವರ ಈ ಹೇಳಿಕೆ ದೇಶವ್ಯಾಪಿ ಟೀಕೆಗೆ ಗುರಿಯಾಗಿದೆ. ವಿಜಯ್ ಶಾ ಅವರ ಭಾಷಣದ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ಭಾರತೀಯ ಸೇನಾ ಅಧಿಕಾರಿಗಳನ್ನು “ಭಯೋತ್ಪಾದಕರ ಸಹೋದರಿಯರು” ಎಂದು ಕರೆಯುವ ಮೂಲಕ ಸಚಿವರು ಇಡೀ ಸಶಸ್ತ್ರ ಪಡೆಗಳನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದೆ. ಅಷ್ಟೇ ಅಲ್ಲ, ಶಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.

Related posts