ಔರಂಗಜೇಬ್ ಸಮಾಧಿ ವಿವಾದ: ನಾಗಪುರದಲ್ಲಿ ಹಿಂಸಾಚಾರ ಭುಗಿಲು

ನಾಗ್ಪುರ: ಮೊಘಲ್‌ ದೊರೆ ಔರಂಗಜೇಬ್ ಸಮಾಧಿ ವಿಚಾರ ಇದೀಗ ಮಹಾರಾಷ್ಟ್ರದ ನಾಗಪುರವನ್ನು ಪ್ರಕ್ಷುಬ್ಧಗೊಳಿಸಿದೆ. ಎರಡು ಗುಂಪುಗಳ ನಡುವೆ ಸಂಘರ್ಷ ಭುಗಿಲೆದ್ದಿದ್ದು ಘಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದೆ. ಹಿಂಸಾಚಾರದಲ್ಲಿ ಮೂವರು ಪೊಲೀಸರು ಸೇರಿ 9 ಮಂದಿ ಗಾಯಗೊಂಡಿದ್ದಾರೆ.

ಸಂಭಾಜಿನಗರ ಜಿಲ್ಲೆಯಲ್ಲಿರುವ ಔರಂಗಜೇಬ್‌ ಸಮಾಧಿ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಸೋಮವಾರ ಮಹಾರಾಷ್ಟ್ರದಲ್ಲಿ ಪ್ರತಿಭಟನೆ ನಡೆಸಿತ್ತು. ಅದರ ಬೆನ್ನಲ್ಲೆ ಕುರಾನ್‌ ಪ್ರತಿಯನ್ನು ಸುಡಲಾಗಿದೆ ಎಂಬ ವದಂತಿ ಹಬ್ಬಿದೆ. ಈ ವದಂತಿ ನಂತರ ಹಿಂಸಾಚಾರ ಭುಗಿಲೆದ್ದಿದ್ದು, ಹಲವೆಡೆ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆಗಳು ನಡೆದಿವೆ.

ಹಿಂಸಾಚಾರ ನಿಯಂತ್ರಿಸಲು ಪೊಲೀಸರು ಲಾಠಿಪ್ರಹಾರ ನಡೆಸಿದ್ದಲ್ಲದೆ, ಆಶ್ರುವಾಯುಪ್ರಯೋಗಿಸಿದ್ದಾರೆ. ಇದೀಗ ಪರಿಸ್ಥಿತಿ ಹತೋಟಿಯಲ್ಲಿದ್ದು, ನಾಗ್ಪುರದಲ್ಲಿ 144 ಸೆಕ್ಷನ್​ ಜಾರಿ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Related posts