ರಾಮನಗರ ಬಳಿ ಭೀಕರ ಅಪಘಾತ; ಆರು ಮಂದಿ ದುರ್ಮರಣ

ರಾಮನಗರ: ರಾಮನಗರ ಜಿಲ್ಲೆ ಕೆಮ್ಮಾಳೆ ಗೇಟ್ ಬಳಿ ಕೆಎಸ್ಸಾರ್ಟಿಸಿ ಬಸ್ಸು ಮತ್ತು ಕ್ವಾಲಿಸ್ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಕಾರು ಅಡ್ಡಾದಿಡ್ಡಿ ಚಲಿಸಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ಬಸ್ ಸಿಬ್ಬಂದಿ ತಿಳಿಸಿದ್ದಾರೆ.

ರಾಮನಗರ ವಿಭಾಗ ಕನಕಪುರ ಘಟಕಕ್ಕೆ ಸೇರಿದ ಬಸ್ ಕನಕಪುರದಿಂದ ಹಲಗೂರಿಗೆ ಕಾರ್ಯಾಚರಣೆ ಮಾಡುತ್ತಿದ್ದ ವೇಳೆ ಸಂಜೆ ನಾಲ್ಕೂವರೆ ಗಂಟೆ ಸುಮಾರಿಗೆ ಕೆಮ್ಮಾಳೆ ಗೇಟ್ ಬಳಿ ಎದುರುಗಡೆಯಿಂದ ಬರುತ್ತಿದ್ದ ಕ್ವಾಲಿಸ್ ವಾಹನ  ಅಡ್ಡ ದಡ್ಡಿ ಯಾಗಿ ಚಲಿಸುತ್ತಿತ್ತು. ಇದನ್ನು ಗಮನಿಸಿದ ಬಸ್ ಚಾಲಕ ತನ್ನ ವಾಹನವನ್ಬು ಪಕ್ಕಕ್ಕೆ ಸರಿಸಿದರೂ ಕಾರು ನಿಯಂತ್ರಣ ತಪ್ಪಿ ಬಸ್ಸಿಗೆ ಅಪ್ಪಳಿಸಿದೆ ಎಂದು ಸಾರಿಗೆ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಅಪಘಾತದಲ್ಲಿ ಕಾರಿನಲ್ಲಿದ್ದ ಆರು ಜನರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Uncategorized

Related posts