ಸ್ಯಾನಿಟೈಜರ್ ಹಗರಣ ಆರೋಪದಲ್ಲಿ ಯಾವುದೇ ಹುರುಳಿಲ್ಲ; ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ಸ್ಯಾನಿಟೈಜರ್ ಹಗರಣ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಪ್ರತಿಪಕ್ಷಗಳು ಮಾಡುತ್ತಿರುವ ಆರೋಪ ಹಾಗೂ ಲೋಕಾಯುಕ್ತದಲ್ಲಿ ದೂರು ಸಲ್ಲಿಕೆಯಾಗಿರುವ ಕುರಿತು ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯೆ ನೀಡಿದ ಸಚಿವ ಸುಧಾಕರ್, ವೈದ್ಯಕೀಯ ಶಿಕ್ಷಣ ಇಲಾಖೆಯು ಒಂದು ಲೀಟರ್ ಸ್ಯಾನಿಟೈಜರ್ ಕೂಡ ಖರೀದಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಆರೋಪವು ರಾಜಕೀಯ ಪ್ರೇರಿತ ನಡೆಯಾಗಿದ್ದು, ದೂರು ಕೊಟ್ಟವರ ಬಗ್ಗೆ ಮರುಕ ಹುಟ್ಟಿದೆ. ಯಾವುದೇ ರೀತಿಯ ತನಿಖೆಗಳನ್ನು ನಾನು ಸ್ವಾಗತಿಸುತ್ತೇನೆ ಎಂದರು.

ಸಚಿವ ಶ್ರೀರಾಮುಲು ಜೊತೆ ಮಾತುಕತೆ

ಈ ನಡುವೆ, ಸಚಿವ ಡಾ.ಕೆ.ಸುಧಾಕರ್ ಬೌರಿಂಗ್ ಆಸ್ಪತ್ರೆಗೆ ತೆರಳಿ, ಆರೋಗ್ಯ ಸಚಿವ ಶ್ರೀರಾಮುಲು ಅವರೊಂದಿಗೆ ಮಾತನಾಡಿದರು. ‘ಸರ್ಕಾರಿ ಆಸ್ಪತ್ರೆಗೆ ಬಂದು ದಾಖಲಾಗಿ ಇಡೀ ರಾಜ್ಯದ ಜನರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಿದ್ದೀರಿ’ ಎಂದು ಸಚಿವ ಸುಧಾಕರ್ ಅವರು ಶ್ರೀರಾಮುಲು ಅವರನ್ನು ಅಭಿನಂದಿಸಿದರು.

Related posts