ಪರಿಶಿಷ್ಟ ಸಮುದಾಯಗಳಿಗೆ ಬಿಜೆಪಿ ಸರ್ಕಾರದ ದ್ರೋಹ ಎಂದು ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಮೀಸಲಾತಿ ಹೆಚ್ಚಳ ವಿಚಾರವಾಗಿ ರಾಜ್ಯ ಬಿಜೆಪಿ ಸರ್ಕಾರ ಕರ್ನಾಟಕದ ಪರಿಶಿಷ್ಟ ಜಾತಿ ಹಾಗೂ ಪಂಗಡದ ಸಮುದಾಯಗಳಿಗೆ ಮಾಡುತ್ತಿರುವ ದ್ರೋಹವನ್ನು ಖಂಡಿಸಿ ಕಾಂಗ್ರೆಸ ಪಕ್ಷ ಶುಕ್ರವಾರ ರಾಜಭವನ ಚಲೋ ಪ್ರತಿಭಟನೆ ನಡೆಸಿತು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ಆರಂಭವಾದ ಪ್ರತಿಭಟನಾ ಯಾತ್ರೆ ಬಾಳೆಕುಂದ್ರಿ ವೃತ್ತದ ಬಳಿ ತಲುಪಿದ ನಂತರ ಪೊಲೀಸರು ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದರು. ನಂತರ ರಾಜ್ಯಪಾಲರ ಭೇಟಿಗೆ ಸಮಯಾಲಕಾಶ ಪಡೆದಿದ್ದ ಕಾಂಗ್ರೆಸ್ ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಿ ಶೋಷಿತ ಸಮುದಾಯಗಳಿಗೆ ಮೋಸ ಮಾಡಿರುವ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ಎಂಬ ಮನವಿ ಸಲ್ಲಿಸಿದರು.

Related posts