ವಿದ್ಯಾರ್ಥಿವೇತನವನ್ನು ಕಡಿತ: ಸರ್ಕಾರದ ಕ್ರಮಕ್ಕೆ ಯತ್ನಾಳ್ ಆಕ್ಷೇಪ

ಬೆಂಗಳೂರು: ವಿದ್ಯಾರ್ಥಿವೇತನವನ್ನು ಕಡಿತಗೊಳಿಸಿ ವೈದ್ಯರಾಗುವ ಕನಸು ಹೊತ್ತಿದ್ದ ಬಡ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಸರ್ಕಾರ ಆರ್ಥಿಕ ಹೊರೆಯನ್ನು ಹೊರೆಸಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸನಾಧಾನ ಹೊರಹಾಕಿದ್ದಾರೆ.

ಸಿದ್ದರಾಮಯ್ಯ ಸರ್ಕಾರದ ಈ ಕ್ರಮಕ್ಕೆ ಆಕ್ಏಪ ವ್ಯಕ್ತಪಡಿಸರುವ ಅವರು, ಈ ವಿವೇಚನಾರಹಿತವಾದ ನಿರ್ಧಾರವನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು. ಆರ್ಥಿಕವಾಗಿ ಹಿಂದುಳಿದ meritorious ವಿದ್ಯಾರ್ಥಿಗಳಿಗೆ ಸೂಕ್ತ ಪ್ರೋತ್ಸಾಹ ನೀಡಬೇಕಾದದ್ದು ಸರ್ಕಾರದ ಕರ್ತವ್ಯ.ಈ ಕೂಡಲೇ ಈ ಪರಿಷ್ಕೃತ ಆದೇಶವನ್ನು ಹಿಂಪಡೆದು, ಬಡ ಕಾರ್ಮಿಕರ ಮಕ್ಕಳಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

https://x.com/BasanagoudaBJP/status/1722190236959023442?t=z9SQqSXrqdmThM724-ZgdA&s=08

Related posts