ರಾಜಕಾರಣಿಗಳ ‘ಶ್ರೀಮಂತ’ ಚಿತ್ರ ಬಿಡುಗಡೆಗೆ ಚುನಾವಣೆ ಅಡ್ಡಿ..

ಬಹುನಿರೀಕ್ಷಿತ ‘ಶ್ರೀಮಂತ’ ಚಿತ್ರ ಬಿಡುಗಡೆಯನ್ನು ಮುಂದೂಡಲಾಗಿದೆ. ಚುನಾವಣಾ ನೀತಿಸಂಹಿತೆ ಅಟ್ಟಿಯಾಗಬಹುದೆಂಬ ಆತಂಕದ ಹಿನ್ನೆಲೆಯಲ್ಲಿ ಈ ಸಿನಿಮಾ ಬಿಡುಗಡೆಯನ್ನು ಮುಂದೂಡಲಾಗಿದೆ ಎಂದು ಚಿತ್ರ ತಂಡ ತಿಳಿಸಿದೆ.

ಏಪ್ರಿಲ್ 14ರಂದು ಬಿಡುಗಡೆಯಾಗಬೇಕಿದ್ದ ಈ ಸಿನಿಮಾವನ್ನು ಚುನಾವಣೆ ಫ‌ಲಿತಾಂಶ ಬಂದ ನಂತರ ಬಿಡುಗಡೆ ಮಾಡಲು ನಿರ್ಧರಿಸಿದ್ದೇವೆ ಎಂದು ಸಿನಿಮಾ ತಂಡ ತಿಳಿಸಿದೆ. ನಿರ್ದೇಶಕ ಹಾಸನ್‌ ರಮೇಶ್‌ ಅವರು ‘ಶ್ರೀಮಂತ’ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದು, ಅವರೇ ನಿರ್ದೇಶನ ಮಾಡಿದ್ದಾರೆ.

 

ಯಾರಿವರು ‘ಶ್ರೀಮಂತ’ರು?

‘ಶ್ರೀಮಂತ’ ಸಿನಿಮಾದಲ್ಲಿ ಮಾಜಿ ಪ್ರಧಾನಿ ಹೆಚ್‌. ಡಿ ದೇವೇಗೌಡ, ಮಾಜಿ ಸಿಎಂ ಬಿ. ಎಸ್‌ ಯಡಿಯೂರಪ್ಪ, ಹಿರಿಯ ರಾಜಕಾರಣಿ ಬಸವರಾಜ ಹೊರಟ್ಟಿ ಸೇರಿದಂತೆ ಅನೇಕ ರಾಜಕಾರಣಿಗಳು ಕಾಣಿಸಿಕೊಂಡಿದ್ದಾರೆ. ಈ ಕಾರಣದಿಂದಾಗಿ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ಗುರಿಯಾಗಬಹುದೆಂಬ ಆತಂಕ ಸಿನಿಮಾ ತಂಡದ್ದು.

Related posts