ರಾಜ್ಯದ 19 ಪೊಲೀಸರಿಗೆ ರಾಷ್ಟ್ರಪತಿ ಪದಕ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ರಾಜ್ಯದ19 ಪೊಲೀಸರಿಗೆ ಕೇಂದ್ರ ಸರ್ಕಾರ ರಾಷ್ಟ್ರಪತಿಗಳ ಪದಕ ಘೋಷಿಸಿದೆ. ಗಣನೀಯ ಸೇವೆಯನ್ನು ಪರಿಗಣಿಸಿ ಪ್ರತೀ ವರ್ಷ ಸ್ವಾತಂತ್ರ್ಯ ದಿನದಂದು ರಾಷ್ಟ್ರಪತಿ ಪದಕಗಳನ್ನು ಕೇಂದ್ರ ಗೃಹ ಇಲಾಖೆ ಪ್ರಕಟಿಸುತ್ತದೆ. ಅದರಂತೆ ಈ ಬಾರಿ ಕರ್ನಾಟಕದ 19 ಪೊಲೀಸ್ ಅಧಿಕಾರಿಗಳಿಗೆ ಈ ಪದಕ ಪ್ರಕಟವಾಗಿದೆ. ರಾಷ್ಟ್ರಪತಿಯವರ ವಿಶಿಷ್ಟ ಸೇವಾ ಪದಕ. ಎಂ.ಚಂದ್ರಶೇಖರ್, ಆಂತರಿಕಾ ಭದ್ರತಾ ವಿಭಾಗದ ಎಡಿಜಿಪಿ. ಶ್ಲಾಘನೀಯ ಸೇವಾ ಪದಕ ಪುರಸ್ಕೃತರು: ಶ್ರೀನಾಥ್ ಎಂ ಜೋಷಿ, ಎಸ್‌ಪಿ ಲೋಕಾಯುಕ್ತ ಸಿ.ಕೆ ಬಾಬಾ, ಎಸ್‌ಪಿ ಬೆಂಗಳೂರು ಗ್ರಾಮಾಂತರ ಜಿಲ್ಲೆ  ರಾಮಗೊಂಡ ಬಿ ಬಸರಗಿ, ಎಎಸ್‌ಪಿ, ಬಳ್ಳಾರಿ ಜಿಲ್ಲೆ ಎಂ.ಡಿ. ಶರತ್​, ಎಸ್‌ಪಿ, ಸಿಐಡಿ, ಬೆಂಗಳೂರು ವಿ.ಸಿ. ಗೋಪಾಲರೆಡ್ಡಿ, ಡಿಸಿಪಿ, ಸಿಆರ್​, ಪಶ್ಚಿಮ, ಬೆಂಗಳೂರು ನಗರ ಗಿರಿ ಕೆ.ಸಿ, ಡಿವೈಎಸ್‌ಪಿ, ಚನ್ನಪಟ್ಟಣ ಉಪ-ವಿಭಾಗ, ರಾಮನಗರ ಜಿಲ್ಲೆ ಮುರಳೀಧರ್ ಪಿ, ಡಿವೈಎಸ್‌ಪಿ, ಚಿಂತಾಮಣಿ ಉಪ-ವಿಭಾಗ, ಚಿಕ್ಕಬಳ್ಳಾಪುರ ಜಿಲ್ಲೆ…