ಬೆಂಗಳೂರು: ಕರ್ನಾಟಕ ಮಾಹಿತಿ ಆಯೋಗದಲ್ಲಿ ಖಾಲಿ ಇರುವ ಮೂರು ಆಯುಕ್ತರ ಹುದ್ದೆಗಳಿಗೆ ರಾಜ್ಯ ಸರ್ಕಾರ ನೇಮಕ ಮಾಡಿದೆ. ನಿವೃತ್ತ ಐಎಎಸ್ ಅಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿ ಸೋಜಾ, ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರ ವಿಶೇಷ ಕರ್ತವ್ಯಾಧಿಕಾರಿ ಡಾ. ಮಹೇಶ್ ವಾಳ್ವೇಕರ್ ಆಯೋಗದ ಬೆಂಗಳೂರು ಪೀಠಗಳಿಗೆ ಕಮೀಷನರ್ ಆಗಿ ಸರ್ಕಾರ ನೇಮಕ ಮಾಡಿದೆ. ಕಲಬುರಗಿ ಪೀಠಕ್ಕೆ ಬಿ.ವೆಂಕಟ್ ಸಿಂಗ್ ಅವರನ್ನು ಆಯುಕ್ತರನ್ನಾಗಿ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಡಾ.ರಿಚರ್ಡ್ ವಿನ್ಸೆಂಟ್ ಡಿ ಸೋಜಾ ರವರು ಭಾರತೀಯ ಆಡಳಿತ ಸೇವೆ ಅಧಿಕಾರಿಯಾಗಿ, ವಿವಿಧ ಆಡಳಿತ, ವ್ಯವಸ್ಥಾಪಕ ಮತ್ತು ತಾಂತ್ರಿಕ ಕ್ಷೇತ್ರಗಳಲ್ಲಿ ಸಾಕಷ್ಟು ಅನುಭವ ಹೊಂದಿರುವ ಡಾ.ರಿಚರ್ಡ್ ವಿನ್ಸೆಂಟ್ ಡಿ ಸೋಜಾ, ರಸ್ತೆ ಸುರಕ್ಷತೆ, ಸಾರ್ವಜನಿಕ ಕಲ್ಯಾಣ ಮತ್ತು ಸಂಪನ್ಮೂಲ ನಿರ್ವಹಣೆಯಲ್ಲಿ ಮಾಡಿರುವ ಸಾಧನೆ ಹೆಗ್ಗುರುತಾಗಿದೆ. ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಬ್ಯಾಚುಲರ್ ಆಫ್ ಎಂಜಿನಿಯರಿಂಗ್ ಪದವಿ ನಂತರ, ಮಾನವ ಸಂಪನ್ಮೂಲ…