ಮೀಸಲಾತಿ ಫೈಟ್; ಮತ್ತೊಮ್ಮೆ ಅಖಾಡಕ್ಕಿಳಿದ ಪಂಚಮಸಾಲಿ ಶ್ರೀ

ಧಾರವಾಡ: ಮೀಸಲಾತಿ ವಿಚಾರದಲ್ಲಿ ಪಂಚಮಸಾಲಿ ಲಿಂಗಾಯತ ಸಮುದಾಯ ಮತ್ತೆ ಹೋರಾಟದ ಅಖಾಡಕ್ಕೆ ಧುಮುಕಿದೆ. ಕೂಡಲಸಂಗಮ ಧರ್ಮ ಕ್ಷೇತ್ರದ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಪ್ರಥಮ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲೇ ಈ ಹೋರಾಟ ಆರಂಭವಾಗಿದೆ. ಈ ಹಿಂದೆಯೇ ಘೋಷಿಸಿದಂತೆ ಅಕ್ಟೊಬರ್ 8 ರಿಂದ 13 ರ ವರೆಗೆ ಈ ಮೀಸಲಾತಿ ಹೋರಾಟ ಮುಂದುವರಿಯಲಿದ್ದು, ಚಳುವಳಿ ಧಾರವಾಡದ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ವಿವಿಧ ಹಂತಗಳಲ್ಲಿ ಸತ್ಯಾಗ್ರಹ ನಡೆಯಲಿದೆ ಎಂದು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ. ಪಂಚಮಸಾಲಿ – ಗೌಡ – ಮಲೆಗೌಡ – ದೀಕ್ಷೆ ಲಿಂಗಾಯತ ರುಗಳಿಗೆ 2A ಮೀಸಲಾತಿ ಅನುಷ್ಠಾನ ಹಾಗೂ ಲಿಂಗಾಯತ ಉಪ ಸಮಾಜಗಳನ್ನು OBC ಮೀಸಲಾತಿಗೆ ಕೂಡಲೇ ಶಿಫಾರಸ್ಸು ಮಾಡುವಂತೆ , ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯಿಸಿ ಈ ಹೋರಾಟ ನಡೆಯಲಿದೆ. ಅಕ್ಟೋಬರ್ 13 ನೇ ಶುಕ್ರವಾರ 2023…