ನ.25,26ರಂದು ಬೆಂಗಳೂರಿನಲ್ಲಿ ‘ಕಂಬಳೋತ್ಸವ’ ತಯಾರಿ ಹೇಗಿದೆ ಗೊತ್ತಾ?

ಮಂಗಳೂರು: ಕರಾವಳಿಯ ಸಾಂಪ್ರದಾಯಿಕ ಕಂಬಳೋತ್ಸವದ ರಂಗು ರಾಜಧಾನಿ ಬೆಂಗಳೂರಿಗೂ ಪಸರಿಸಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 25 ಮತ್ತು 26ರಂದು “ಬೆಂಗಳೂರು ಕಂಬಳ-ನಮ್ಮ ಕಂಬಳ’ ಹೆಸರಲ್ಲಿ ಹೊಸ ಕಂಬಳ ಜಗತ್ತು ಅನಾವರಣಗೊಳ್ಳಲಿದೆ. ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್‌ ಕುಮಾರ್‌ ರೈ ನೇತೃತ್ವದಲ್ಲಿ ‘ಬೆಂಗಳೂರು ಕಂಬಳ-ನಮ್ಮ ಕಂಬಳ’ಕ್ಕೆ ಭರ್ಜರಿ ತಯಾರಿ ಸಾಗಿದ್ದು, ಈ ಸಂಬಂಧ ತುಳುನಾಡಿನಲ್ಲೂ ಕಾರ್ಯತಂತ್ರ ನಡೆಯುತ್ತಿದೆ. ಈ ಸಂಬಂಧ ಮಂಗಳೂರಿನಲ್ಲಿ ಬಾನುವಾರ ನಡೆದ ಸಭೆ ಕಂಬಳ ಕಸರತ್ತಿನ ಕೇಂದ್ರಬಿಂದುವಾಯಿತು. ಶಾಸಕ ಅಶೋಕ ರೈ ನೇತೃತ್ವದಲ್ಲಿ ಮಂಗಳೂರಿನಲ್ಲಿ ನಡೆದ ಈ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್‌ ಶೆಟ್ಟಿ , ಕಂಬಳ ಸಮಿತಿಯ ಪ್ರಮುಖರಾದ ಪಿ.ಆರ್‌. ಶೆಟ್ಟಿ, ಎರ್ಮಾಳ್‌ ರೋಹಿತ್‌ ಹೆಗ್ಡೆ, ಲೋಕೇಶ್‌, ವಿಜಯ ಕುಮಾರ್‌ ಕಂಗಿನಮನೆ, ಚಂದ್ರಹಾಸ್‌ ಸನಿಲ್‌, ಮುರಳೀಧರ್‌ ಸಹಿತ ಅನೇಕರು ಭಾಗವಹಿಸಿದ್ದರು. ಸಭೆಯ ಬಳಿಕ ಸುದ್ದಿಗಾರರಿಗೆ…