ಮಂಗಳೂರು: ಆಸ್ತಿಕರ ನಾಡು, ರಾಜ್ಯ ಕರಾವಳಿ ಇದೀಗ ಸಾಲು ಸಾಲು ವೈದ್ಧಿಕ ಕೈಂಕರ್ಯಗಳಿಗೆ ಸಾಕ್ಷಿಯಾಗುತ್ತಿವೆ. ಅದರ ನಡುವೆಯೇ ಮಂಗಳೂರಿನಲ್ಲಿ ನೆರವೇರಿದ ‘ಮಹಾಮಾಯ ರಥೋತ್ಸವ’ವು ಮಹಾ ವೈಭವವಾಗಿ ಗಮನಸೆಳೆಯಿತು. ಮಂಗಳೂರು ನಗರದ ರಥಬೀದಿಯಲ್ಲಿರುವ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ಬ್ರಹ್ಮರಥೋತ್ಸವ ಮಂಗಳವಾರ ಭಕ್ತಸಾಗರದ ನಡುವೆ ವಿಜೃಂಭಣೆಯಿಂದ ಜರಗಿತು. ಬೆಳಿಗ್ಗೆ ಮಹಾಪ್ರಾರ್ಥನೆ ಬಳಿಕ ಶ್ರೀ ದೇವರಿಗೆ ಶತ ಕಲಶಾಭಿಷೇಕ , ಗಂಗಾಭಿಷೇಕ , ಪುಳಕಾಭಿಷೇಕ , ಕನಕಾಭಿಷೇಕ ಗಳು ನಡೆದವು. ಯಜ್ಞ ಮಂಟಪದಲ್ಲಿ ನಡೆದ ಮಹಾ ಪೂರ್ಣಾಹುತಿ ಸಂದರ್ಭದಲ್ಲಿ ಧರ್ಮಿಕ ಪ್ರಮುಖರು ಯತಿಗಳು ಭಾಗಿಯಾದರು. ಸಂಜೆ ಬೆಳ್ಳಿ ಪಲ್ಲಕಿಯಲ್ಲಿ ಶ್ರೀ ದೇವರು ವಿರಾಜಮಾನರಾಗಿ ರಥಾರೋಹಣವು ಅನನ್ಯ ಮಹೋತ್ಸವವಾಗಿ ಆಸ್ತಿಕರ ಗಮನಕೇಂದ್ರೀಕರಿಸಿತು. ಭಕ್ತರು ರಥ ಎಳೆದು ಪುನೀತರಾದರು. ಶ್ರೀ ದೇವಳದ ಆಡಳಿತ ಮೊಕ್ತೇಸರರಾದ ಸಿ.ಎ.ಶ್ರೀನಿವಾಸ್ ಕಾಮತ್, ಮಾರೂರ್ ಸುಧೀರ್ ಪೈ, ಪ್ರಕಾಶ್ ಕಾಮತ್, ಅನಂತ್ ಭಟ್, ಗಣೇಶ್ ಭಟ್, ದಕ್ಷಿಣ ಕನ್ನಡ…
Tag: ಮಂಜು ನೀರೇಶ್ವಾಲ್ಯ
ಮಂಗಳೂರು ಶಾರದೋತ್ಸವ ರಥೋತ್ಸವ ಹಿಂದೆಂದಿಗಿಂತ ವಿಶೇಷ.. ಹೀಗಿತ್ತು ಕೈಂಕರ್ಯ..
ಚಿತ್ರ: ಮಂಜು ನೀರೇಶ್ವಾಲ್ಯ ಮಂಗಳೂರು: ಮಂಗಳೂರು ಶ್ರೀ ವೆಂಕಟರಮಣ ದೇವಾಲಯ ಆಚಾರ್ಯ ಮಠ ವಠಾರದ 102ನೇ ಶ್ರೀ ಶಾರದಾ ಮಹೋತ್ಸವ ಕಾರ್ಯಕ್ರಮ ಆಕ್ಟೋಬರ್ 8ರಿಂದ ಆರಂಭಗೊಂಡು 14 ರಂದು ಅತ್ಯಂತ ವೈಭವಯುತವಾಗಿ ನಡೆಯಿತು. 2 ವರ್ಷದ ಹಿಂದಷ್ಟೇ ನೂರನೇ ವರ್ಷದ ಶಾರದಾ ಮಹೋತ್ಸವವನ್ನು ಶ್ರೀ ಶಾರದಾ ಮಹೋತ್ಸವ ಸಮಿತಿ ಅತ್ಯಂತ ವೈಭವಪೂರ್ಣವಾಗಿ ನಡೆಸಿತ್ತು. ಅದೇ ರೀತಿ ಸಂಭ್ರಮದಿಂದ ಈ ಮಹೋತ್ಸವನ್ನು ಶ್ರಧ್ಧ ಭಕ್ತಿಯಿಂದ ನಡೆಸಿಕೊಂಡು ಬರಲಾಗುತ್ತಿದೆ. ಮಂಗಳೂರು ನಗರ ಹಾಗೂ ಪರವೂರಿನ ಭಕ್ತಾದಿಗಳು ಸಹಾಯ ನೀಡಿ ಕಾರ್ಯಕ್ರಮವನ್ನು ಯಶಸ್ಸಿಗೊಳಿಸುತ್ತಿದ್ದಾರೆ. ಆ.9ರಂದು ಬೆಳಗ್ಗೆ 7 ಗಂಟೆಗೆ ಪ್ರತಿಷ್ಠಾಪನೆ ವೈದಿಕ ವಿಧಿ ವಿಧಾನಗಳೊಂದಿಗೆ ಶ್ರೀ ಮಾತೆಯ ವಿಗ್ರಹ ಪ್ರತಿಷ್ಠಾಪಿಸಲಾಯಿತು . ಆ 13ವರೆಗೆ ದೀಪಾಂಲಕಾರ ಸಹಿತ ರಂಗಪೂಜೆ ನಡೆಯಿತು . ಆ13ರಂದು ಶ್ರೀ ಕಾಳಿಕಾ ದೇವಿಯ ವಿಶೇಷ ಅಲಂಕಾರ ಮಾಡಲಾಯಿತು. ಬೆಳಗ್ಗೆ 10 ಘಂಟೆಗೆ ವಿದ್ಯಾರಂಭ ಕಾರ್ಯಕ್ರಮ ನಡೆದು, ಸಾರ್ವಜನಿಕ…