ಹಾವೇರಿ: ಕೋವಿಡ್ 19 ಸೋಂಕಿನ ಸಂದರ್ಭದಲ್ಲಿ ಹೆಣಗಳಿಂದಲೂ ಬಿಜೆಪಿಯವರು ಲಂಚ ಪಡೆದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವ್ ತಾಲೂಕಿನ ಹುಲಗೂರು ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರಖಾನ್ ಪಠಾಣ್ ಪರ ಮತಯಾಚನೆ ಸಭೆಯಲ್ಲಿ ಸಿಎಂ ಮಾತನಾಡಿದರು. ಹಿಂದಿನ ಬಿಜೆಪಿ ಸರ್ಕಾರದ ಬಗ್ಗೆ ಕಾಟು ಟೀಕೆ ಮಾಡಿದ ಸಿದ್ದರಾಮಯ್ಯ, ಇತಿಹಾಸದಲ್ಲಿ ಸತ್ತ ಹೆಣಗಳ ವಿಚಾರದಲ್ಲೂ ಲಂಚ ಪಡೆದ ನಾಯಕರು ಯಾರಾದರೂ ಇದ್ದರೆ ಅದು ಬಸವರಾಜ ಬೊಮ್ಮಾಯಿ ಎಂದು ವಾಗ್ದಾಳಿ ನಡೆಸಿದರು. ಸತ್ತ ಹೆಣಗಳಿಂದ ಲಂಚ ಪಡೆಡಿರುವ ಬಸವರಾಜ ಬೊಮ್ಮಾಯಿ ಮಗ ಭರತ್ ಗೆಲ್ಲಬೇಕಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ಕಾಂಗ್ರೆಸ್ ಅಭ್ಯರ್ಥಿ ಪಠಾಣ್ ಅವರನ್ನು ಗೆಲ್ಲಿಸುವಂತೆ ಅವರು ಮತದಾರರಲ್ಲಿ ಮನವಿ ಮಾಡಿದರು.
Tag: ಯಾಸೀರಖಾನ್ ಪಠಾಣ್
ವಕ್ಫ್ ಆಸ್ತಿ ವಿಚಾರದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೂ ನೋಟಿಸ್ ನೀಡಲಾಗಿದೆ : ಸಿಎಂ ಸಿದ್ದರಾಮಯ್ಯ ಆರೋಪ
ಹಾವೇರಿ: ವಕ್ಫ್ ಆಸ್ತಿ ವಿಚಾರದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೂ ನೋಟಿಸ್ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಕ್ಫ್ ವಿವಾದ ಕುರಿತು ಬಿಜೆಪಿ ನಡೆಸಿರುವ ಪ್ರತಿಭಟನೆ ಬಗ್ಗೆ ಹಾವೇರಿ ಜಿಲ್ಲೆ ಶಿಗ್ಗಾವಿ ಬಳಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಬಿಜೆಪಿಯವರು ಉಪ ಚುನಾವಣೆಗೋಸ್ಕರ ರಾಜಕೀಯ ಮಾಡ್ತಿದ್ದಾರೆ ಎಂದು ಆರೋಪಿಸಿದರು. ಉಪಚುನಾವಣೆ ನಡೆಯುತ್ತಿರುವ ಶಿಗ್ಗಾಂವ್ ತಾಲೂಕಿನ ಹುಲಗೂರು ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರಖಾನ್ ಪಠಾಣ್ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ವಕ್ಫ್ ಆಸ್ತಿ ವಿಚಾರದಲ್ಲಿ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ನೋಟಿಸ್ ಕೊಟ್ಟಿದಾರೆ. ಸದಾನಂದಗೌಡ, ಶೆಟ್ಟರ್, ಬೊಮ್ಮಾಯಿ ಇದ್ದಾಗಲೂ ನೋಟಿಸ್ ಕೊಟ್ಟಿದಾರೆ ಎಂದು ಆರೋಪಿಸಿದರು. ಯಾವ ಕಾರಣಕ್ಕೂ ಕೂಡಾ ರೈತರನ್ನು ಒಕ್ಕಲೆಬ್ಬಿಸಲ್ಲ. ವಕ್ಫ್ ಬೋರ್ಡ್ನವರು ಯಾವ ಕಾರಣಕ್ಕೂ ಖಾಲಿ ಮಾಡಿಸುವುದಿಲ್ಲ ಎಂದು ಭರವಸೆ ನೀಡಿದ ಸಿಎಂ, ಕಂದಾಯ ದಾಖಲೆಗಳಲ್ಲಿ ಇರುವ ವಕ್ಫ್ ಹೆಸರುಗಳನ್ನು ರದ್ದು ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ…