ಬೆಂಗಳೂರು: ನಟ ದರ್ಶನ್ ತೂಗುದೀಪಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟನಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದರ್ಶನ್ ಆರೋಗ್ಯ ಸಮಸ್ಯೆಯನ್ನು ಪರಿಗಣಿಸಿ, ಶಸ್ತ್ರಚಿಕಿತ್ಸೆಗೆ ಅವಕಾಶ ಕೋರಿಕೆಯನ್ನು ಮನ್ನಿಸಿ ಹೈಕೋರ್ಟ್ 45 ದಿನಗಳ ಕಾಲದ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಸುಮಾರು ಐದು ತಿಂಗಳಿಂದಲೂ ಜೈಲಿನಲ್ಲಿರುವ ನಟ ದರ್ಶನ್ಗೆ ಹೈಕೋರ್ಟ್ ಆದೇಶದಿಂದ ರಿಲೀಫ್ ಸಿಕ್ಕಿದೆ. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ಈ ಆದೇಶ ನೀಡಿದ್ದು, ಜಾಮೀನು ಪಡೆದ ಬಳಿಕ ಪ್ರತಿ ವಾರವೂ ನಟ ದರ್ಶನ್ ಆಸ್ಪತ್ರೆ ದಾಖಲಾತಿ ಮತ್ತು ಚಿಕಿತ್ಸೆ ವಿವರವನ್ನು ಕೋರ್ಟ್ ಗೆ ನೀಡಬೇಕು. ಜೊತೆಗೆ ದರ್ಶನ್ ಪಾಸ್ಪೋರ್ಟನ್ನು ಕೋರ್ಟ್ ಸುಪರ್ದಿಗೆ ನೀಡಬೇಕು ಎಂದು ಸೂಚಿಸಿದೆ. ಈ ಜಾಮೀನು ಅವಧಿಯಲ್ಲಿ ಸಿನಿಮಾ ಚಿತ್ರೀಕರಣದಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ನ್ಯಾಯಪೀಠ ಷರತ್ತು ವಿಧಿಸಿದೆ.
Tag: Actor Darshan Case
ಕೊಲೆ ಪ್ರಕರಣ; ನಟ ದರ್ಶನ್ ಗ್ಯಾಂಗ್ಗೆ ಆಗಸ್ಟ್ 28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪ್, ಗೆಳತಿ ಪವಿತ್ರಾ ಗೌಡ ಸಹಿತ ಎಲ್ಲಾ ಆರೋಪಿಗಳಿಗೆ ಆಗಸ್ಟ್ 28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಬುಧವಾರ ಈ ಆದೇಶ ನೀಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಇತರ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಜಡ್ಜ್ ಮುಂದೆ ಬುಧವಾರ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾದಿಶರು ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಆಗಸ್ಟ್ 28ರವರೆಗೆ ವಿಸ್ತರಿಸಿ ಆದೇಶಿಸಿದರು.